ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸಿದ್ಧತೆ ನಡೆಸಿದ್ದು, ನೂತನ ಸಚಿವರ ಪಟ್ಟಿ ಇಂದು ಅಥವಾ ನಾಳೆ ಪ್ರಕಟವಾಗುವ ಸಾಧ್ಯತೆ ಇದೆ. ಇದೇ ವೇಳೆ, ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ನಿರೀಕ್ಷೆಯೂ ಇದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸಲ್ಲಿಸಿರುವ ಪ್ರತ್ಯೇಕ ಪಟ್ಟಿಗಳ ಕುರಿತು ಕಾಂಗ್ರೆಸ್ ಹೈಕಮಾಂಡ್ ಸೋಮವಾರ ಬೆಳಗ್ಗೆ ಮಹತ್ವದ ಸಭೆ ನಡೆಸಿದೆ ಎನ್ನಲಾಗಿದೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂತಿಮ ಪಟ್ಟಿಗೆ ಅನುಮೋದನೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೈಕಮಾಂಡ್ ಸಿದ್ಧಪಡಿಸಿರುವ ಸಂಭಾವ್ಯ ಸಚಿವರ ಪಟ್ಟಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕೈ ಸೇರಿದೆ ಎನ್ನಲಾಗುತ್ತಿದ್ದು, ಅಧಿಕೃತ ಘೋಷಣೆಗೆ ರಾಜಕೀಯ ವಲಯ ಕಾತರದಿಂದ ಕಾಯುತ್ತಿದೆ.
ಇದೇ ವೇಳೆ, ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರಿಗೆ ವಿಧಾನಸಭೆ ಸ್ಪೀಕರ್ ಸ್ಥಾನ ನೀಡುವ ಸಾಧ್ಯತೆಗಳಿವೆ ಎಂಬ ಮಾತುಗಳೂ ಕೇಳಿಬರುತ್ತಿವೆ.
ಜೂನ್ 3ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ 13 ಮಂದಿ ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಮೂಲಕ ಇನ್ನಷ್ಟು ಶಾಸಕರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.
ಸಂಭಾವ್ಯ ಸಚಿವರ ಪಟ್ಟಿ
- ಚೆಲುವರಾಯಸ್ವಾಮಿ
- ಬಾಲಕೃಷ್ಣ
- ಜಮೀರ್ ಅಹ್ಮದ್ ಖಾನ್
- ಲಕ್ಷ್ಮಣ ಸವದಿ
- ಗಾಯತ್ರಿ ಶಾಂತೇಗೌಡ
- ಮಧು ಬಂಗಾರಪ್ಪ
- ಅಜಯ್ ಸಿಂಗ್
- ಶಿವರಾಜ್ ತಂಗಡಗಿ
- ರುದ್ರಪ್ಪ ಲಮಾಣಿ
- ರಘುಮೂರ್ತಿ
- ರಿಜ್ವಾನ್ ಅರ್ಷದ್
- ಶಿವಲಿಂಗೇಗೌಡ
- ಪುಟ್ಟರಂಗಶೆಟ್ಟಿ
- ಸಂತೋಷ್ ಲಾಡ್
- ವಿಜಯಾನಂದ ಕಾಶಪ್ಪನವರ್
ಸಂಭಾವ್ಯ ವಿಧಾನಸಭೆ ಹುದ್ದೆಗಳು
- ಜಿ.ಎಸ್. ಪಾಟೀಲ್ – ಸ್ಪೀಕರ್
- ಪೊನ್ನಣ್ಣ – ಉಪಸಭಾಧ್ಯಕ್ಷ (ಡೆಪ್ಯುಟಿ ಸ್ಪೀಕರ್)

