ಮತದಾರರ ಪಟ್ಟಿ ಪರಿಷ್ಕರಣೆಗೆ ಚುರುಕು
ಇಂಧನ ದರ ಏರಿಕೆ, ವಿದ್ಯಾರ್ಥಿಗಳ ಸಂಕಷ್ಟಕ್ಕೆ ಮೋದಿ ಸರ್ಕಾರವೇ ಕಾರಣ: ಹುಡೇದ್ ಗುರು ಬಸವರಾಜ್
“ಬೆಲೆ ಏರಿಕೆ ಮತ್ತು ಶಿಕ್ಷಣ ಹಗರಣಗಳಿಂದ ಜನರು ಕಂಗೆಟ್ಟಿದ್ದಾರೆ; ಕೇಂದ್ರ ಸರ್ಕಾರ ಜನರ ಧ್ವನಿಗೆ ಸ್ಪಂದಿಸಬೇಕು.”ಹುಡೇದ್ ಗುರು ಬಸವರಾಜ್
ಪ್ರತಿ ಮನುಷ್ಯನಲ್ಲಿ ಗಾಂಧೀಜಿ–ಅಂಬೇಡ್ಕರ್ ಪ್ರಜ್ಞೆ ಅಗತ್ಯ: ಎ.ಎಸ್. ಮಕಾನದಾರ
ಬಿರುಗಾಳಿ ಅಬ್ಬರಕ್ಕೆ ಮರ ಉರುಳಿ ಬಸ್ ಜಖಂ!
ಗರ್ಭಿಣಿಯರಿಗೆ ಮುಖ್ಯ ಸೂಚನೆ: ಮೂತ್ರ ಸೋಂಕು ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬೇಡಿ!
ಗರ್ಭಾವಸ್ಥೆ ಮಹಿಳೆಯ ಜೀವನದ ಅತ್ಯಂತ ವಿಶೇಷ ಹಂತವಾಗಿದ್ದರೂ, ಈ ಸಮಯದಲ್ಲಿ ದೇಹದಲ್ಲಿ ಹಲವಾರು ಹಾರ್ಮೋನಲ್ ಹಾಗೂ ಶಾರೀರಿಕ ಬದಲಾವಣೆಗಳು ಸಂಭವಿಸುತ್ತವೆ. ಇದರಲ್ಲಿ ಯೂರಿನರಿ ಟ್ರ್ಯಾಕ್ಟ್ ಇನ್ಫೆಕ್ಷನ್ ಕೂಡ ಪ್ರಮುಖ ಆರೋಗ್ಯ ಸಮಸ್ಯೆಯಾಗಿ ಕಾಣಿಸಿಕೊಳ್ಳುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಸರ್ ಗಂಗಾರಾಮ್ ಆಸ್ಪತ್ರೆಯ ತಜ್ಞೆ ಡಾ. ಆಭಾ ಮಜುಂದಾರ್ ಅವರ ಪ್ರಕಾರ, ಗರ್ಭಾವಸ್ಥೆಯಲ್ಲಿ ಪ್ರೊಜೆಸ್ಟೆರೋನ್ ಹಾರ್ಮೋನ್ ಪ್ರಮಾಣ ಹೆಚ್ಚಾಗುವುದರಿಂದ ಯೂರಿನರಿ ಸಿಸ್ಟಂ ಸಡಿಲಗೊಳ್ಳುತ್ತದೆ. ಇದರಿಂದ ಮೂತ್ರವು ಸಂಪೂರ್ಣವಾಗಿ ಹೊರಬರದೇ ಉಳಿಯುವ ಸಾಧ್ಯತೆ ಹೆಚ್ಚಾಗುತ್ತದೆ. ಜೊತೆಗೆ ಗರ್ಭಾಶಯದ ಗಾತ್ರ ಹೆಚ್ಚಾದಂತೆ ಮೂತ್ರ ಮಾರ್ಗದ ಮೇಲೆ ಒತ್ತಡ ಉಂಟಾಗಿ ಮೂತ್ರದ ಹರಿವು ನಿಧಾನಗೊಳ್ಳುತ್ತದೆ.
ಅದರ ಜೊತೆಗೆ ಗರ್ಭಿಣಿಯರ ಮೂತ್ರದಲ್ಲಿ ಸಕ್ಕರೆ ಮತ್ತು ಅಮಿನೋ ಆಮ್ಲಗಳ ಪ್ರಮಾಣ ಸ್ವಲ್ಪ ಹೆಚ್ಚಾಗುವುದರಿಂದ ಬ್ಯಾಕ್ಟೀರಿಯಾ ಬೆಳೆಯಲು ಅನುಕೂಲವಾಗುತ್ತದೆ. ಇದರಿಂದ ಯೂರಿನ್ ಇನ್ಫೆಕ್ಷನ್ ಅಪಾಯ ಹೆಚ್ಚುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.
ಯೂರಿನ್ ಇನ್ಫೆಕ್ಷನ್ ಲಕ್ಷಣಗಳು:
- ಮೂತ್ರ ವಿಸರ್ಜನೆ ವೇಳೆ ಉರಿ ಅಥವಾ ನೋವು
- ಪದೇಪದೇ ಮೂತ್ರ ಬರುವುದು
- ಹೊಟ್ಟೆ ಕೆಳಭಾಗ ಮತ್ತು ಬೆನ್ನು ನೋವು
- ಗಾಢ ಹಳದಿ ಬಣ್ಣದ ಮೂತ್ರ
- ದುರ್ವಾಸನೆ
- ಕೆಲವೊಮ್ಮೆ ಜ್ವರ ಅಥವಾ ನಡುಕ
ಮುನ್ನೆಚ್ಚರಿಕೆ ಕ್ರಮಗಳು:
- ಹೆಚ್ಚು ನೀರು ಕುಡಿಯುವುದು
- ನೀರಿನಾಂಶ ಹೆಚ್ಚಿರುವ ಹಣ್ಣುಗಳ ಸೇವನೆ
- ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವುದು
- ಸಕ್ಕರೆ ಹಾಗೂ ಸಿಹಿ ಪದಾರ್ಥಗಳ ಸೇವನೆ ಕಡಿಮೆ ಮಾಡುವುದು
- ಮೂತ್ರವನ್ನು ತಡೆಹಿಡಿಯಬಾರದು
- ಹತ್ತಿಯ ಬಟ್ಟೆ ಧರಿಸುವುದು
ತಜ್ಞರ ಪ್ರಕಾರ, ಗರ್ಭಾವಸ್ಥೆಯಲ್ಲಿ ಯೂರಿನ್ ಇನ್ಫೆಕ್ಷನ್ ಲಕ್ಷಣಗಳು ಕಂಡುಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಮುಖ್ಯ.
ಪಾಲಕರ ಆಚಾರ-ವಿಚಾರವೇ ಮಕ್ಕಳಿಗೆ ಆದರ್ಶ: ಮಂಜುನಾಥ ಅಕ್ಕಸಾಲಿ
ತ್ಯಾಗ, ಸಮರ್ಪಣೆ- ಮಾನವೀಯತೆಯ ಸಂದೇಶವೇ ಬಕ್ರೀದ್
ಖಾಸಗಿ ಶಾಲೆಗಳಿಗೆ ಸರ್ಕಾರಿ ಶಾಲೆಯ ಟಕ್ಕರ್!
“ಗ್ರಾಮದ ಸಮುದಾಯ ಮತ್ತು ಶಿಕ್ಷಕರ ಸಹಕಾರದಿಂದ ಮಕ್ಕಳನ್ನು ಸರ್ಕಾರಿ ಶಾಲೆಯತ್ತ ಆಕರ್ಷಿಸಲು ಈ ಯೋಜನೆ ರೂಪಿಸಲಾಗಿದೆ. ಹೊಸದಾಗಿ ದಾಖಲಾಗುವ ವಿದ್ಯಾರ್ಥಿಗಳಿಗೆ ₹1000 ಠೇವಣಿ, ಶಾಲಾ ಬ್ಯಾಗ್, ಟೈ-ಬೆಲ್ಟ್, ಟೀ-ಶರ್ಟ್ ಹಾಗೂ ಮಗ್ಗಿ ಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತದೆ.”ಗಿರೀಶ ಕೊಡಬಾಳ, ಮುಖ್ಯೋಪಾಧ್ಯಾಯರು“ಶಾಲೆಯಲ್ಲಿ ಹೊಸದಾಗಿ ದಾಖಲಾಗುವ ವಿದ್ಯಾರ್ಥಿಗಳಿಗೆ ₹1000 ಠೇವಣಿ ಹಾಗೂ ಉಚಿತ ಶೈಕ್ಷಣಿಕ ಸಾಮಗ್ರಿ ನೀಡುತ್ತಿರುವುದು ಶಿಕ್ಷಣ ಮತ್ತು ದಾಖಲಾತಿ ಹೆಚ್ಚಿಸಲು ಮಾದರಿಯಾದ ಕಾರ್ಯಕ್ರಮ. ಸರ್ಕಾರಿ ಶಾಲೆಗಳ ಉಳಿವಿಗೆ ಶಿಕ್ಷಕರ ಇಚ್ಛಾಶಕ್ತಿ ಮತ್ತು ಸಮುದಾಯದ ಸಹಕಾರವೇ ದೊಡ್ಡ ಬಲ.”ಆರ್.ಎಸ್. ಬುರಡಿ, ಉಪನಿರ್ದೇಶಕರು
ಸ್ವಾರ್ಥದ ಯುಗದಲ್ಲಿ ತ್ಯಾಗದ ಸಂದೇಶ ಹೊತ್ತ ಬಕ್ರೀದ್

“ರಾಜೀನಾಮೆ ನೀಡಬೇಡಿ”!ಸಿಎಂ ಸಿದ್ದರಾಮಯ್ಯಗೆ ವಾಟಾಳ್ ನಾಗರಾಜ್ ಮನವಿ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ರಾಜೀನಾಮೆ ನೀಡಬಾರದೆಂದು ವಿನಂತಿಸಿದ್ದಾರೆ.
ವಿಧಾನಸೌಧದಲ್ಲಿ ಸಿಎಂ ಅವರನ್ನು ಭೇಟಿ ಮಾಡಿದ ವಾಟಾಳ್ ನಾಗರಾಜ್, “ಯಾವ ಕಾರಣಕ್ಕೂ ನೀವು ರಾಜೀನಾಮೆ ನೀಡಬಾರದು, ನೀವು ಅಧಿಕಾರದಲ್ಲಿದ್ದದ್ದು ಸಂತೋಷ ತಂದಿದೆ” ಎಂದು ಹೇಳಿ ಮನವಿ ಮಾಡಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ನಗುತ್ತಲೇ ಪ್ರತಿಕ್ರಿಯೆ ನೀಡಿ ಮುಂದೆ ಸಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿವೆ. ಈ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಹಲವು ಸುತ್ತಿನ ಸಭೆಗಳನ್ನು ನಡೆಸಿತ್ತು. ಬಳಿಕ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿತ್ತು.
ಆದರೆ ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ಹರಡುತ್ತಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ. ಈ ನಡುವೆ ಅವರ ಆಪ್ತರು ಹಾಗೂ ಬೆಂಬಲಿಗರು ಸಭೆಗಳನ್ನು ನಡೆಸುತ್ತಿರುವುದು ಗಮನ ಸೆಳೆದಿದೆ.
ಈ ರಾಜಕೀಯ ಬೆಳವಣಿಗೆಗಳ ಮಧ್ಯೆ ವಾಟಾಳ್ ನಾಗರಾಜ್ ಅವರ ಭೇಟಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಕಾಂಗ್ರೆಸ್ನಲ್ಲಿ ಗೊಂದಲ ಉಂಟಾಗುತ್ತದೆ ಎಂದು ಅವರು ಈ ಹಿಂದೆ ಹೇಳಿದ್ದನ್ನು ಮತ್ತೆ ಒತ್ತಿಹೇಳಿದ್ದಾರೆ.

