Home Blog

ದೇವಿಯರ ಜಾತ್ರೆ ಸಂಭ್ರಮ, ಸೌಹಾರ್ದದ ಹಬ್ಬ

0

ವಿಜಯಸಾಕ್ಷಿ ಸುದ್ದಿ, ಗದಗ: ಜಾತ್ರೆಗಳು ಪರಸ್ಪರ ಪ್ರೀತಿ, ಸೌಹಾರ್ದತೆ ಹಾಗೂ ಏಕತೆಯನ್ನು ಬೆಸೆಯುವ ಹಬ್ಬಗಳಾಗಿದ್ದು, ವಿಶೇಷವಾಗಿ ಗ್ರಾಮ ದೇವತೆಗಳ ಜಾತ್ರೆಗಳು ಸಡಗರ–ಸಂಭ್ರಮದ ಪ್ರತೀಕವಾಗಿವೆ. ಸದ್ಗುಣಗಳ ಬೆಳವಣಿಗೆ ಹಾಗೂ ದುರ್ಗುಣಗಳ ಅವನತಿಯೇ ಜಾತ್ರೆಗಳ ಪ್ರಮುಖ ಉದ್ದೇಶವಾಗಿದ್ದು, ಭಕ್ತರು ಜಾತ್ರೆಯ ನಿಜವಾದ ಮೌಲ್ಯಗಳನ್ನು ಅರಿತು ಭಾಗವಹಿಸಬೇಕು ಎಂದು ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದ ಒಕ್ಕಲಗೇರಿ ಓಣಿಯ ಉಸುಗಿನಕಟ್ಟಿ ಬಳಿ ಗದಗ-ಬೆಟಗೇರಿ ಗ್ರಾಮ ದೇವತೆಗಳಾದ ಶ್ರೀ ದ್ಯಾಮವ್ವ ಹಾಗೂ ಶ್ರೀ ದುರುಗಮ್ಮ ದೇವಿಯರ ಹರಿ ಜಾತ್ರೋತ್ಸವದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಗ್ರಾಮಗಳ ರಕ್ಷಣೆ, ಕಳ್ಳಕಾಕರ ಹಾವಳಿ ತಡೆ ಹಾಗೂ ರೋಗ-ರುಜಿನಗಳಿಂದ ಜನರನ್ನು ರಕ್ಷಿಸುವ ಉದ್ದೇಶದಿಂದ ಹಿಂದಿನ ಕಾಲದಲ್ಲಿ ಜಾತ್ರೆಗಳು ಆರಂಭಗೊಂಡಿದ್ದವು. ಆಧುನಿಕ ಕಾಲಘಟ್ಟದಲ್ಲಿ ಅವುಗಳಿಗೆ ವೈಚಾರಿಕ ಹಾಗೂ ವೈಜ್ಞಾನಿಕ ದೃಷ್ಟಿಕೋನ ದೊರೆತಿದ್ದು, ಜಾತ್ರೆಗಳು ಹೊಸ ಸ್ವರೂಪ ಪಡೆದುಕೊಂಡಿವೆ ಎಂದರು.

ಹಿಂದೆ ಗ್ರಾಮ ದೇವತೆಗಳನ್ನು ವಿವಿಧ ಕುತಂತ್ರ ವಿದ್ಯೆಗಳ ಮೂಲಕ ಉಗ್ರ ಸ್ವರೂಪಕ್ಕೆ ತರುವ ಆಚರಣೆಗಳಿದ್ದವು. ಮಧುರೈ ಮೀನಾಕ್ಷಿ ಹಾಗೂ ಕೊಲ್ಲೂರು ಮೂಕಾಂಬಿಕೆ ದೇವಿಯರು ಉಗ್ರ ಸ್ವರೂಪದಲ್ಲಿದ್ದ ಸಂದರ್ಭದಲ್ಲಿ ಶ್ರೀ ಶಂಕರಾಚಾರ್ಯರು ಭಕ್ತಿ ಹಾಗೂ ಜ್ಞಾನದ ಮೂಲಕ ದೇವಿಯರನ್ನು ಸಮಾಧಾನಗೊಳಿಸಿ ಭಕ್ತರನ್ನು ಭಯಮುಕ್ತರನ್ನಾಗಿಸಿದ ಸಂಗತಿಗಳು ಹಲವು ಗ್ರಂಥಗಳಲ್ಲಿ ಉಲ್ಲೇಖವಾಗಿವೆ ಎಂದು ಹೇಳಿದರು.

ಜಾತ್ರೆಗಳು ಭಕ್ತಿ, ಸಡಗರ, ಸಂಭ್ರಮದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸುವ ವೇದಿಕೆಗಳಾಗಿವೆ. ಎಲ್ಲರ ಒಗ್ಗೂಡುವಿಕೆ ಹಾಗೂ ಒಕ್ಕಟ್ಟೇ ಜಾತ್ರೆಗಳ ಯಶಸ್ಸಿಗೆ ಪ್ರಮುಖ ಕಾರಣ. ಆದ್ದರಿಂದ ಸದ್ಭಕ್ತರು ಜಾತ್ರೆಗಳ ಹಿಂದಿರುವ ಮಹತ್ವವನ್ನು ಅರಿತು ಅದರಂತೆ ನಡೆದುಕೊಳ್ಳಬೇಕು ಎಂದರು.

ಬದುಕಿನಲ್ಲಿ ದೇವಾಲಯ ಸಂಸ್ಕೃತಿ ಹಾಗೂ ಮಠದ ಸಂಸ್ಕೃತಿ ಎಂಬ ಎರಡು ಪ್ರಮುಖ ಪರಂಪರೆಗಳಿವೆ. ದೇವಾಲಯ ಸಂಸ್ಕೃತಿಯಲ್ಲಿ ನಮಗೆ ಇಷ್ಟವಾದ ದೇವರನ್ನು ಪ್ರತಿಷ್ಠಾಪಿಸಿ ಆರಾಧಿಸುತ್ತೇವೆ. ಮಠದ ಸಂಸ್ಕೃತಿಯಲ್ಲಿ ಮಠಾಧೀಶರ ಜ್ಞಾನ ಹಾಗೂ ಅವರು ನಡೆಸಿಕೊಂಡು ಬರುವ ಪರಂಪರೆಗೆ ಅನುಗುಣವಾಗಿ ನಡೆಯುತ್ತೇವೆ. ಈ ಎರಡೂ ಸಂಸ್ಕೃತಿಗಳು ಬದುಕನ್ನು ಸುಧಾರಿಸಿ ಉನ್ನತಿಗೆ ಕೊಂಡೊಯ್ಯುವ ಮಾರ್ಗಗಳಾಗಿವೆ ಎಂದು ಶ್ರೀಗಳು ವಿವರಿಸಿದರು.

ಜಾತ್ರಾ ಸಮಿತಿ ಕಾರ್ಯಾಧ್ಯಕ್ಷ ಫಕ್ಕೀರಪ್ಪ ಹೆಬಸೂರ ಮಾತನಾಡಿ, ಸುಮಾರು ಎಂಟು ದಿನಗಳ ಕಾಲ ನಡೆಯುವ ಹರಿ ಜಾತ್ರೆಯಲ್ಲಿ ಸದ್ಭಕ್ತರ ಸಹಭಾಗಿತ್ವ, ಮಹಿಳೆಯರ ಸಮರ್ಪಣೆ ಹಾಗೂ ಒಗ್ಗಟ್ಟು ವಿಶೇಷವಾಗಿದೆ. ಮುಂದಿನ ದಿನಗಳಲ್ಲಿ ಜಾತ್ರೆಯನ್ನು ಮತ್ತಷ್ಟು ವಿಜೃಂಭಣೆಯಿಂದ ನಡೆಸಲು ಎಲ್ಲರ ಸಹಕಾರ ಅಗತ್ಯ ಎಂದರು.

ಶ್ರೀ ಫಕ್ಕೀರೇಶ್ವರ ಮಹಾಸ್ವಾಮಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲೆಕ್ಕ ಪರಿಶೋಧಕ ಶಂಕ್ರಪ್ಪ ಕನೋಜ, ಐ.ಎಸ್. ಪೂಜಾರ, ವಸಂತ ಪಡಗದ, ಕೃಷ್ಣಾಪುರ, ಅಬ್ದುಲ್ ಮುನಾಫ ಮುಲ್ಲಾ, ನಗರಸಭಾ ಸದಸ್ಯ ಮಹಾಂತೇಶ ನಲವಡಿ ಸೇರಿದಂತೆ ಹಲವು ಗಣ್ಯರು ಮಾತನಾಡಿ, ಶ್ರೀ ದ್ಯಾಮವ್ವ ಹಾಗೂ ಶ್ರೀ ದುರುಗಮ್ಮ ದೇವಿಯರ ಹರಿ ಜಾತ್ರೋತ್ಸವದಿಂದ ಗದುಗಿನ ಕೀರ್ತಿ ಹೆಚ್ಚಿದೆ. ಈ ಭಾಗದ ಒಗ್ಗಟ್ಟು ಪ್ರೇರಣಾದಾಯಕವಾಗಿದ್ದು, ರಚನಾತ್ಮಕ ಕಾರ್ಯಗಳಿಗೆ ದಾನಿಗಳು ಸಹಕಾರ ನೀಡುವ ಸಂದೇಶವನ್ನು ಜಾತ್ರೆ ಸಾರುತ್ತಿದೆ. ಇಂತಹ ಚಟುವಟಿಕೆಗಳು ನಿರಂತರವಾಗಿ ನಡೆದರೆ ಯುವ ಪೀಳಿಗೆಗೆ ಸೂಕ್ತ ಮಾರ್ಗದರ್ಶನ ದೊರೆಯಲಿದೆ ಎಂದರು.

ಗದಗ ಆಧ್ಯಾತ್ಮ ವಿದ್ಯಾಶ್ರಮದ ಶ್ರೀ ನೀಲಮ್ಮತಾಯಿ ಅಸುಂಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಟ್ರಸ್ಟ್ ಕಮಿಟಿ ಅಧ್ಯಕ್ಷ ಕೊಟ್ರಪ್ಪ ಕಮತರ ಅಧ್ಯಕ್ಷತೆ ವಹಿಸಿದ್ದರು.

ಪ್ರೀತಿ ವಿಶ್ವನಾಥಯ್ಯ ಶಿವಪ್ಪಯ್ಯನಮಠ, ಎಚ್.ಕೆ. ಮುಲ್ಲಾ, ಎಫ್.ವಿ. ಮರಿಗೌಡ್ರ, ಚಿದಾನಂದ ಕ್ಷತ್ರಿಯ, ವಿನೋದ ಮರಬದ, ಪ್ರಭು ಕಲಬಂಡಿ, ಬಸವರಾಜ ಗೂಳಪ್ಪ ಹೆರಕಲ್, ಸಂತೋಷ ಕಬಾಡಿ, ಶಂಕರ ಶಿದ್ದಿಂಗ, ಸೀತಾರಾಮ ಕದಾಂಪೂರ, ರಾಮಣ್ಣ ಬರಬಣ್ಣವರ, ಅಶ್ವಿನಿ ಅಭಿಷೇಕ ಕುಂದಗೋಳ, ಅಭಿಷೇಕ ಕುಂದಗೋಳ, ವಿರುಪಾಕ್ಷಪ್ಪ ಅಕ್ಕಿ, ಈಶ್ವರಪ್ಪ ಖ್ಯಾಡದ, ಮುತ್ತು ರೋಣದ, ಶೈಲಾ ತುಪ್ಪದ, ಶಿವಾನಂದ ಹೂಗಾರ, ನವೀನ ನಾಲ್ವಾಡ ಸೇರಿದಂತೆ ಹಲವಾರು ಗಣ್ಯರು, ದಾನಿಗಳು, ಯುವಕರು ಹಾಗೂ ಹಿರಿಯರು ಉಪಸ್ಥಿತರಿದ್ದರು.

ವಾಣಿ ಅಸುಂಡಿ ಸ್ವಾಗತಿಸಿದರು. ಬಾಹುಬಲಿ ಜೈನರ ನಿರೂಪಿಸಿದರು. ನಂತರ ಶಂಕ್ರಣ್ಣ ಸಂಕಣ್ಣವರ ನೇತೃತ್ವದ ಅರುಣೋದಯ ಕಲಾತಂಡದಿಂದ ಜೋಗತಿ ನೃತ್ಯ ಪ್ರದರ್ಶನ ನಡೆಯಿತು.

ಜಾತ್ರೆಯ ಸಂಭ್ರಮ ಕೇವಲ ಆಚರಣೆಗೆ ಸೀಮಿತವಾಗದೆ, ನಮ್ಮೊಳಗಿನ ಸದ್ಗುಣಗಳನ್ನು ಬೆಳೆಸುವ ಹಾಗೂ ದುರ್ಗುಣಗಳನ್ನು ದೂರ ಮಾಡುವ ಸಂಕಲ್ಪವಾಗಬೇಕು. ಎಲ್ಲರ ಒಗ್ಗಟ್ಟು, ಪ್ರೀತಿ ಮತ್ತು ಸೌಹಾರ್ದತೆಯೇ ಜಾತ್ರೆಯ ನಿಜವಾದ ಯಶಸ್ಸು.

— ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ

ಸೌಹಾರ್ದತೆಯೊಂದಿಗೆ ಈದ್ ಮಿಲಾದ್ ಆಚರಿಸಿ: ಸಿಪಿಐ ವಿಕಾಸ್ ಲಮಾಣಿ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯ ವಾತಾವರಣದಲ್ಲಿ ಆಚರಿಸಬೇಕು. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಎಲ್ಲ ಸಮುದಾಯಗಳ ಜನರು ಪರಸ್ಪರ ಗೌರವ ಹಾಗೂ ಸಹಕಾರದೊಂದಿಗೆ ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು ಎಂದು ಸಿಪಿಐ ವಿಕಾಸ್ ಲಮಾಣಿ ಹೇಳಿದರು.

ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.

ಡಿವೈಎಸ್‌ಪಿ ಮಲ್ಲೇಶ್ ನಾಯ್ಕ್ ದೊಡ್ಮನಿ ಮಾತನಾಡಿ, ಪಟ್ಟಣದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರ ಜವಾಬ್ದಾರಿಯೂ ಆಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಕೂಡಲೇ ಪೊಲೀಸರ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು.

ಈದ್ ಮಿಲಾದ್ ಕುರಿತು ಮಾತನಾಡಿದ ಸಂಪಾದಕ ಎಂ. ಶಿವಮೂರ್ತಿ, ಪ್ರವಾದಿ ಮೊಹಮ್ಮದ್ ಅವರ ಜೀವನ ಹಾಗೂ ಸಂದೇಶಗಳು ಸಮಾಜಕ್ಕೆ ಶಾಂತಿ, ಸಹೋದರತೆ ಮತ್ತು ಮಾನವೀಯ ಮೌಲ್ಯಗಳನ್ನು ಸಾರುತ್ತವೆ. ಎಲ್ಲರೂ ಪರಸ್ಪರ ಪ್ರೀತಿ, ಗೌರವ ಹಾಗೂ ಸೌಹಾರ್ದತೆಯಿಂದ ಬದುಕುವ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸಲು ಸಹಕರಿಸಬೇಕು ಎಂದರು.

ಸಭೆಯಲ್ಲಿ ಪಿಎಸ್‌ಐ ನಾಗರತ್ನಮ್ಮ, ಕ್ರೈಂ ಪಿಎಸ್‌ಐ ಉಮಾಪತಿ ನಾಯ್ಕ, ಪುರಸಭೆ ಸದಸ್ಯರಾದ ತೆಲಿಗಿ ನೆಲ್ಲು ಇಸ್ಮಾಯಿಲ್ ಸಾಹೇಬ್, ಜೋಗಿ ಹನುಮಂತಪ್ಪ, ಕೆಜಿಎನ್ ಅಲ್ಲಾಭಕ್ಷಿ, ರಾಜೇಶ್ ಬ್ಯಾಡಗಿ, ದೀಪಕ್ ಕಠಾರಿ, ಸಿಖಂದರ್, ಗ್ಯಾರಂಟಿ ತಾಲೂಕು ಅಧ್ಯಕ್ಷ ಸೊನ್ನದ ಗುರು ಬಸವರಾಜ್, ತತ್ತಿ ಕಾಸಿಂ ಸಾಹೇಬ್, ಯಮನೂರು ಸಾಬ್, ದಾದಾಪೀರ್, ಎಣ್ಣೆ ಬಾಷಾ, ಬುಡೆನ್ ಸಾಬ್ ಅರಳಿಹಳ್ಳಿ, ಕರೀಂ ಸಾಬ್ ಬಲಹುಣಿಸಿ, ಬಾಬು ಪೇಂಟರ್, ಬ್ರೆಡ್ ನಜೀರ್ ಸಾಬ್, ವರದಿಗಾರ ಸರ್ದಾರ್ ಯಮನೂರಪ್ಪ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಹಾಗೂ ಯುವಕರು ಉಪಸ್ಥಿತರಿದ್ದರು.

ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಕುರಿತು ಚರ್ಚಿಸಿದರು. ಸಭೆ ಸೌಹಾರ್ದತೆ, ಸಹಬಾಳ್ವೆ ಹಾಗೂ ಶಾಂತಿಯ ಸಂದೇಶ ಸಾರುವ ಮೂಲಕ ಗಮನ ಸೆಳೆಯಿತು.

ಯುವ ಛಾಯಾಗ್ರಾಹಕ ನಾಗರಾಜ ಸೂರಣಗಿಗೆ ‘ಕೆಪಿಎ ಛಾಯಾಭೂಷಣ’ ಪ್ರಶಸ್ತಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಯುವ ಛಾಯಾಗ್ರಾಹಕ ಹಾಗೂ ಕಲಾವಿದ ನಾಗರಾಜ ಟಿ. ಸೂರಣಗಿ ಅವರು ಛಾಯಾಗ್ರಹಣ ಕ್ಷೇತ್ರ ಹಾಗೂ ಛಾಯಾಗ್ರಾಹಕರ ಸಂಘಟನೆಗಳಲ್ಲಿ ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಗುರುತಿಸಿ, ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘದ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ‘ಕೆಪಿಎ ಛಾಯಾಭೂಷಣ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬುಧವಾರ ಆಯೋಜಿಸಿದ್ದ 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮದಲ್ಲಿ ನಾಗರಾಜ ಸೂರಣಗಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ನಾಗರಾಜ ಸೂರಣಗಿ ಅವರು ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಗದಗ ಜಿಲ್ಲೆಯ ಛಾಯಾಗ್ರಾಹಕರು ಹಾಗೂ ಜಿಲ್ಲಾ ಮತ್ತು ತಾಲೂಕು ಛಾಯಾಗ್ರಾಹಕರ ಸಂಘದ ಪದಾಧಿಕಾರಿಗಳು, ಸದಸ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

15 ವರ್ಷಗಳ ಬಳಿಕ ವಿಶ್ವ ಬ್ಯಾಡ್ಮಿಂಟನ್‌ನಲ್ಲಿ ಭಾರತದ ಮಹಿಳಾ ಡಬಲ್ಸ್‌ಗೆ ಪದಕ; ತ್ರಿಶಾ–ಗಾಯತ್ರಿ ಐತಿಹಾಸಿಕ ಸಾಧನೆ!

0

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ತ್ರಿಶಾ ಜಾಲಿ–ಗಾಯತ್ರಿ ಗೋಪಿಚಂದ್ ಜೋಡಿ ಇತಿಹಾಸ ಬರೆದಿದೆ.

2026ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಮಹಿಳಾ ಡಬಲ್ಸ್ ವಿಭಾಗದಲ್ಲಿ ಸೆಮಿಫೈನಲ್‌ವರೆಗೆ ಮುನ್ನಡೆದ ಭಾರತೀಯ ಜೋಡಿ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

ನವದೆಹಲಿ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ವಿಶ್ವದ ನಂ.1 ಹಾಗೂ ಹಾಲಿ ಚಾಂಪಿಯನ್ ಚೀನಾದ ಲಿಯು ಶೆಂಗ್‌ಶು–ಟಾನ್ ನಿಂಗ್ ಜೋಡಿಯನ್ನು ಎದುರಿಸಿದ ತ್ರಿಶಾ–ಗಾಯತ್ರಿ, ಆರಂಭದಲ್ಲೇ ಭರ್ಜರಿ ಆಟ ಪ್ರದರ್ಶಿಸಿತು.

ಮೊದಲ ಗೇಮ್‌ನಲ್ಲಿ ಭಾರತೀಯ ಜೋಡಿ ಚೀನಾದ ಅಗ್ರ ಶ್ರೇಯಾಂಕದ ಆಟಗಾರ್ತಿಯರಿಗೆ ಪ್ರಬಲ ಪೈಪೋಟಿ ನೀಡಿ 21-18 ಅಂತರದಲ್ಲಿ ಗೆಲುವು ಸಾಧಿಸಿತು. ಈ ಮೂಲಕ ಫೈನಲ್ ಪ್ರವೇಶದ ಭರವಸೆ ಮೂಡಿಸಿತು. ಆದರೆ ನಂತರ ಚೀನಾದ ಜೋಡಿ ತಮ್ಮ ಅನುಭವ ಹಾಗೂ ಆಕ್ರಮಣಕಾರಿ ಆಟದ ಮೂಲಕ ಪಂದ್ಯಕ್ಕೆ ಮರಳಿತು.

ಎರಡನೇ ಗೇಮ್‌ನಲ್ಲಿ ಲಿಯು ಶೆಂಗ್‌ಶು–ಟಾನ್ ನಿಂಗ್ 21-13 ಅಂತರದಲ್ಲಿ ಗೆದ್ದು ಪಂದ್ಯವನ್ನು ಸಮಬಲಗೊಳಿಸಿತು. ನಿರ್ಣಾಯಕ ಮೂರನೇ ಗೇಮ್‌ನಲ್ಲಿ ಚೀನಾದ ಜೋಡಿ ಸಂಪೂರ್ಣ ಹಿಡಿತ ಸಾಧಿಸಿ 21-8ರಲ್ಲಿ ಗೆಲುವು ದಾಖಲಿಸಿತು. 70 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಪಂದ್ಯದಲ್ಲಿ ಚೀನಾದ ಜೋಡಿ 21-18, 13-21, 8-21 ಅಂತರದಲ್ಲಿ ಗೆದ್ದು ಫೈನಲ್‌ಗೆ ಪ್ರವೇಶಿಸಿತು.

15 ವರ್ಷಗಳ ಬಳಿಕ ಭಾರತಕ್ಕೆ ಮಹಿಳಾ ಡಬಲ್ಸ್ ಪದಕ:

ಸೆಮಿಫೈನಲ್‌ನಲ್ಲಿ ಸೋತರೂ ತ್ರಿಶಾ ಜಾಲಿ–ಗಾಯತ್ರಿ ಗೋಪಿಚಂದ್ ಜೋಡಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದೆ. ವಿಶ್ವ ಚಾಂಪಿಯನ್‌ಶಿಪ್ ಮಹಿಳಾ ಡಬಲ್ಸ್‌ನಲ್ಲಿ ಭಾರತಕ್ಕೆ 15 ವರ್ಷಗಳ ಬಳಿಕ ಪದಕ ದೊರೆತಿದೆ.

ಇದಕ್ಕೂ ಮೊದಲು ಜ್ವಾಲಾ ಗುಟ್ಟಾ ಮತ್ತು ಅಶ್ವಿನಿ ಪೊನ್ನಪ್ಪ ಜೋಡಿ 2011ರಲ್ಲಿ ಕಂಚಿನ ಪದಕ ಗೆದ್ದಿತ್ತು. ಇದೀಗ ತ್ರಿಶಾ–ಗಾಯತ್ರಿ ಆ ಸಾಧನೆಯನ್ನು ಪುನರಾವರ್ತಿಸಿ ಭಾರತದ ಮಹಿಳಾ ಡಬಲ್ಸ್‌ಗೆ ಮತ್ತೊಂದು ವಿಶ್ವ ಮಟ್ಟದ ಪದಕ ತಂದುಕೊಟ್ಟಿದ್ದಾರೆ.

ಕ್ವಾರ್ಟರ್‌ಫೈನಲ್‌ನಲ್ಲಿ ಬಿಗ್ ಗೆಲುವು:

ತ್ರಿಶಾ–ಗಾಯತ್ರಿ ಜೋಡಿಯ ವಿಶ್ವ ಚಾಂಪಿಯನ್‌ಶಿಪ್ ಅಭಿಯಾನವೂ ಗಮನಾರ್ಹವಾಗಿತ್ತು. ಕ್ವಾರ್ಟರ್‌ಫೈನಲ್‌ನಲ್ಲಿ ನಾಲ್ಕನೇ ಶ್ರೇಯಾಂಕದ ಚೀನಾದ ಜಿಯಾ ಯಿ ಫ್ಯಾನ್–ಜಾಂಗ್ ಶು ಕ್ಸಿಯಾನ್ ಜೋಡಿಯನ್ನು ಎದುರಿಸಿದ ಭಾರತೀಯ ಆಟಗಾರ್ತಿಯರು ಮೊದಲ ಗೇಮ್‌ನಲ್ಲಿ 16-21ರಲ್ಲಿ ಸೋತರೂ, ನಂತರದ ಎರಡು ಗೇಮ್‌ಗಳಲ್ಲಿ 21-15, 21-13 ಅಂತರದಲ್ಲಿ ಗೆದ್ದು ಸೆಮಿಫೈನಲ್‌ಗೆ ಪ್ರವೇಶಿಸಿದ್ದರು. ಈ ಗೆಲುವಿನೊಂದಿಗೆ ಭಾರತಕ್ಕೆ ಪದಕ ಖಚಿತಪಡಿಸಿದ್ದರು.

ಇದಕ್ಕೂ ಮುನ್ನ ಜಪಾನ್‌ನ ಏಳನೇ ಶ್ರೇಯಾಂಕದ ರಿನ್ ಇವಾನಾಗಾ–ಕೀ ನಕಾನಿಶಿ ಜೋಡಿಯನ್ನು 21-16, 21-12 ಅಂತರದಲ್ಲಿ ಮಣಿಸಿ ಕ್ವಾರ್ಟರ್‌ಫೈನಲ್ ತಲುಪಿದ್ದರು.

ಸೆಮಿಫೈನಲ್‌ನಲ್ಲಿ ಫೈನಲ್‌ಗೇರಲು ಸಾಧ್ಯವಾಗದಿದ್ದರೂ, ವಿಶ್ವದ ಅಗ್ರ ಜೋಡಿಗೆ ಮೊದಲ ಗೇಮ್‌ನಲ್ಲೇ ಸೋಲುಣಿಸಿ ಗಮನ ಸೆಳೆದ ತ್ರಿಶಾ–ಗಾಯತ್ರಿ, ಅಂತಿಮವಾಗಿ ಐತಿಹಾಸಿಕ ಕಂಚಿನ ಪದಕದೊಂದಿಗೆ ವಿಶ್ವ ಚಾಂಪಿಯನ್‌ಶಿಪ್ ಅಭಿಯಾನ ಮುಗಿಸಿದ್ದಾರೆ.

ಶಿಸ್ತು, ಪರಿಶ್ರಮದಿಂದ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ: ಡಾ. ಅಪ್ಪಣ್ಣ ಹಂಜೆ

0

ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾಲಯವೆಂದರೆ ಕೇವಲ ಪಾಠ ಕಲಿಸುವ ಕೇಂದ್ರವಲ್ಲ; ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ಪ್ರತಿಭಾ ಅನಾವರಣ ಹಾಗೂ ಭವಿಷ್ಯ ನಿರ್ಮಾಣಕ್ಕೆ ದಾರಿದೀಪವಾಗಿರುವ ಜ್ಞಾನದೇಗುಲ. ವಿದ್ಯಾರ್ಥಿಗಳು ಮತ್ತು ವಿದ್ಯಾಲಯದ ನಡುವಿನ ಆತ್ಮೀಯ ಹಾಗೂ ವಿಶ್ವಾಸಪೂರ್ಣ ಸಂಬಂಧವು ಶೈಕ್ಷಣಿಕ ಪ್ರಗತಿಯ ಜೊತೆಗೆ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಪ್ರಾಂಶುಪಾಲ ಡಾ. ಅಪ್ಪಣ್ಣ ಹಂಜೆ ಹೇಳಿದರು.

ಹುಲಕೋಟಿಯ ಶ್ರೀ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2026–27ನೇ ಸಾಲಿನಲ್ಲಿ ಪ್ರವೇಶ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ದಿಕ್ಸೂಚಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಅವರ ಪ್ರತಿಭೆ ಹಾಗೂ ಆಸಕ್ತಿಗಳನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡುವುದು ವಿದ್ಯಾಲಯದ ಪ್ರಮುಖ ಜವಾಬ್ದಾರಿಯಾಗಿದೆ ಎಂದರು.

ಕಾರ್ಯಕ್ರಮದ ಸಂಘಟಕ ಹಾಗೂ ಸಾಂಸ್ಕೃತಿಕ ವಿಭಾಗದ ಸಂಯೋಜಕ ರಮೇಶ ಹುಲಕುಂದ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಲಯವನ್ನು ತಮ್ಮದೇ ಕುಟುಂಬವೆಂದು ಭಾವಿಸಿ ಶಿಸ್ತು, ಸಮಯಪಾಲನೆ, ಉತ್ತಮ ನಡತೆ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು ಎಂದರು.

ಕುಮಾರಿ ಪ್ರಜ್ಞಾ ವರ್ಣೇಕರ ಪ್ರಾರ್ಥಿಸಿದರು. ಕಲಾ ವಿಭಾಗದ ಮುಖ್ಯಸ್ಥೆ ಮಹಾನಂದ ಹಿರೇಮಠ ಸ್ವಾಗತಿಸಿದರು. ಐಕ್ಯುಎಸಿ ಸಹ ಸಂಯೋಜಕ ಡಾ. ಮಂಜುನಾಥ ತ್ಯಾಲಗಡಿ, ಉದ್ಯೋಗ ಮಾಹಿತಿ ಕೋಶದ ಸಂಯೋಜಕ ಡಾ. ಶ್ರೀಶವಿಠ್ಠಲ ಡಿ., ಎನ್‌ಎಸ್‌ಎಸ್ ಘಟಕದ ಸಂಯೋಜಕ ವಿಜಯಕುಮಾರ ಎಸ್., ಹೊಸ ದಿಗಂತ ಕಾರ್ಯಕ್ರಮದ ಸಂಯೋಜಕ ಹುಸೇನಭಾಷಾ, ಶಿಸ್ತು ಸಮಿತಿ ಸಂಯೋಜಕ ಮಹಾಂತೇಶ ಹಾಗೂ ರೆಡ್‌ಕ್ರಾಸ್ ಸಂಯೋಜಕ ಭೀಮೇಶ ಕಾಲೇಜಿನ ವಿವಿಧ ಶೈಕ್ಷಣಿಕ ಹಾಗೂ ಸಹಪಠ್ಯ ಘಟಕಗಳ ಕುರಿತು ಪರಿಚಯಿಸಿದರು.

ಆಂತರಿಕ ಪರೀಕ್ಷಾ ವಿಭಾಗದ ಸಂಯೋಜಕ ಮನೋಜಕುಮಾರ ಜೋತಾವರ ವಂದಿಸಿದರು. ರೋವರ್ಸ್–ರೇಂಜರ್ಸ್ ಸಂಯೋಜಕಿ ಸಾವಿತ್ರಿ ಟಿ. ಕಾರ್ಯಕ್ರಮ ನಿರ್ವಹಿಸಿದರು.

ಮಾದಕ ವಸ್ತುಗಳ ದಾಸರಾಗಬೇಡಿ: ಡಾ. ಎಚ್.ವಿ. ಡಂಬಳ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಮಾದಕ ವಸ್ತು ಸೇವನೆ ನಾಗರಿಕ ಸಮಾಜದ ದುರಂತವಾಗಿದ್ದು, ನಾಡಿನ ಆಸ್ತಿ ಎಂದು ಕರೆಯಲ್ಪಡುವ ಯುವಕರೇ ಇದರ ಕರಾಳ ಛಾಯೆಗೆ ಹೆಚ್ಚು ಸಿಲುಕುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಾದಕ ವಸ್ತುಗಳ ಸೇವನೆ ಒಂದು ರೀತಿಯ ಮಾನಸಿಕ ದಾಸ್ಯವಾಗಿದ್ದು, ವಿದ್ಯಾರ್ಥಿಗಳು ಇದರ ಆಕರ್ಷಣೆಗೆ ಒಳಗಾಗಬಾರದು ಎಂದು ಸೋನಿಯಾ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಎಚ್.ವಿ. ಡಂಬಳ ಹೇಳಿದರು.

ಸಂಗೊಳ್ಳಿ ರಾಯಣ್ಣ ನಗರದ ಸೋನಿಯಾ ಪದವಿ ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪದ ವತಿಯಿಂದ ‘ಮಾದಕ ವಸ್ತು ದುರ್ಬಳಕೆ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ’ ಕುರಿತು ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಅಪಾರ ಶಕ್ತಿಯಿದ್ದು, ದೇಶದ ಸಮಗ್ರ ಚಿತ್ರಣವನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಒಮ್ಮೆ ಮಾದಕ ವಸ್ತುಗಳ ಆಕರ್ಷಣೆಗೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಜವಾಬ್ದಾರಿಯಿಂದ ಬಳಸಬೇಕು. ಆರೋಗ್ಯಕ್ಕೆ ಆದ್ಯತೆ ನೀಡಿ, ನೆರೆಹೊರೆಯವರಲ್ಲಿಯೂ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ಮಾದಕ ವಸ್ತುಗಳ ದುರ್ಬಳಕೆ ಭಾರತ ಮಾತ್ರವಲ್ಲದೆ ಜಗತ್ತಿನಾದ್ಯಂತ ದೊಡ್ಡ ಸಮಸ್ಯೆಯಾಗಿದೆ. ಇದರ ಹಿಂದೆ ದೊಡ್ಡ ಮಾಫಿಯಾ ಕಾರ್ಯನಿರ್ವಹಿಸುತ್ತಿದೆ. ಯುವಶಕ್ತಿ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದರ ಕುರಿತು ಆತ್ಮಾವಲೋಕನ ಅಗತ್ಯ. ವಿದ್ಯಾರ್ಥಿಗಳು ಯಾವುದೇ ಆಕರ್ಷಣೆ ಅಥವಾ ಒತ್ತಡಕ್ಕೆ ಒಳಗಾಗಿ ಮಾದಕ ವಸ್ತುಗಳ ದಾಸರಾಗಬಾರದು ಎಂದರು.

ಧಾರವಾಡದ ಡಿಮಾನ್ಸ್‌ನ ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತ ಪ್ರಶಾಂತ ಪಾಟೀಲ ಉಪನ್ಯಾಸ ನೀಡಿ, ಮಾದಕ ವಸ್ತುಗಳ ದುರಭ್ಯಾಸವು ದಾರಿತಪ್ಪಿದ ವರ್ತನೆಯಾಗಿದೆ. ಅರೆಕ್ಷಣದ ಥ್ರಿಲ್ ಹಾಗೂ ಸಹವಾಸದೋಷದಿಂದ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆಗೆ ಬಲಿಯಾದರೆ ಅನೇಕ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಆರೋಗ್ಯಪೂರ್ಣ ಜೀವನ ನಡೆಸಬೇಕು ಎಂದರು.

ಪ್ರಾಚಾರ್ಯ ಡಾ. ಪ್ರಕಾಶ ಜೋಗಿನ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆಯ ದುರಭ್ಯಾಸಕ್ಕೆ ಬಲಿಯಾಗದೆ ಆತ್ಮಸಾಕ್ಷಿಗನುಗುಣವಾಗಿ ಆರೋಗ್ಯಕರ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ಪ್ರೊ. ಶಾಂಭವಿ ನರಗುಂದ ಪ್ರಾರ್ಥಿಸಿದರು. ಪ್ರೊ. ಮಲ್ಲಪ್ಪ ಭೈರಪ್ಪನವರ ಸ್ವಾಗತಿಸಿದರು. ಕ.ವಿ.ವ. ಸಂಘದ ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡಿನ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಗಂಗಾಧರ ಮರಳಿಹಳ್ಳಿ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರೊ. ಯಾಸ್ಮಿನ್ ಬೀಳಗಿ ವಂದಿಸಿದರು. ಪ್ರೊ. ಲಕ್ಷ್ಮೀ ಕುರಿ ನಿರೂಪಿಸಿದರು. ಡಾ. ಎಚ್.ವಿ. ಡಂಬಳ ಸೇರಿದಂತೆ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಕಲ್ಪ ಶಾಲೆಯಲ್ಲಿ ರಾಖಿ ತಯಾರಿಕೆ ಸ್ಪರ್ಧೆ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಕಲ್ಪ ಶಿಕ್ಷಣ ಸಂಸ್ಥೆ(ರಿ.)ಯ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹಾಗೂ ಸಹೋದರ–ಸಹೋದರಿಯರ ಬಾಂಧವ್ಯದ ಮಹತ್ವವನ್ನು ಬೆಳೆಸುವ ಉದ್ದೇಶದಿಂದ ರಾಖಿ ತಯಾರಿಕೆ ಸ್ಪರ್ಧೆ ಆಯೋಜಿಸಲಾಗಿತ್ತು.

ಶಾಲೆಯ 3ರಿಂದ 8ನೇ ತರಗತಿಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿ ವಿವಿಧ ವಿನ್ಯಾಸಗಳ ರಾಖಿಗಳನ್ನು ತಯಾರಿಸಿದರು. ರಾಖಿ ಕೇವಲ ಕೈಗೆ ಕಟ್ಟುವ ದಾರವಲ್ಲ, ಅದು ಪರಸ್ಪರ ಪ್ರೀತಿ, ರಕ್ಷಣೆ, ಗೌರವ ಹಾಗೂ ವಿಶ್ವಾಸದ ಸಂಕೇತ ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಕಲ್ಪ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಎಸ್.ವಿ. ಹುಬ್ಬಳ್ಳಿ ವಹಿಸಿದ್ದರು. ಮಾರ್ಗದರ್ಶಕಿ ಎಸ್.ಎನ್. ಹುಬ್ಬಳ್ಳಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಶಿಕ್ಷಕಿ ಪುಷ್ಪಾ ಪಿ. ಮೇಗೇರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶೋಭಾ ತದೇವಾಡಿ ಕಾರ್ಯಕ್ರಮದ ಮೇಲ್ವಿಚಾರಣೆ ವಹಿಸಿದ್ದರು.

ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಯೋಗ ಡಿಪ್ಲೋಮಾ ಫಲಿತಾಂಶ ಪ್ರಕಟ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಸಂಯೋಜನೆಯಲ್ಲಿ ಎಸ್.ವೈ.ಬಿ.ಎಂ.ಎಸ್. ಯೋಗ ಪಾಠಶಾಲೆಯ ಬಸವ ಯೋಗ ಮಹಾವಿದ್ಯಾಲಯದಲ್ಲಿ ಕಳೆದ ಮಾರ್ಚ್–ಏಪ್ರಿಲ್‌ನಲ್ಲಿ ನಡೆದ ಸ್ನಾತಕೋತ್ತರ ಯೋಗ ಡಿಪ್ಲೋಮಾ ಅಧ್ಯಯನ (ಪಿ.ಜಿ. ಡಿಪ್ಲೋಮಾ ಇನ್ ಯೋಗ ಸ್ಟಡೀಸ್) 2025–26ನೇ ಸಾಲಿನ ಮೊದಲ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.

ಪರೀಕ್ಷೆ ಬರೆದ ಬಸವ ಯೋಗ ಮಹಾವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.100ರಷ್ಟು ಫಲಿತಾಂಶ ದಾಖಲಿಸಿದ್ದಾರೆ.

ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಮಹಾವಿದ್ಯಾಲಯದ ಆಡಳಿತ ಮಂಡಳಿ ಹಾಗೂ ಬೋಧಕ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆಯಲ್ಲಿ ಖಯುಮ ನವಲೂರ ಹೆಚ್ಚಿನ ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದರೆ, ಬಾಬು ಛಲವಾದಿ ದ್ವಿತೀಯ ಹಾಗೂ ರೇಷ್ಮಾ ಹಡಪದ ತೃತೀಯ ಸ್ಥಾನ ಪಡೆದು ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ.

ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳು ಮತ್ತು ಬೋಧಕ-ಸಿಬ್ಬಂದಿಗೆ ಬಸವ ಯೋಗ ಮಹಾವಿದ್ಯಾಲಯದ ಮಹಾಪೋಷಕರಾದ ಪೂಜ್ಯ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಚೇರಮನ್ ಪ್ರೊ. ಎಸ್.ವಿ. ಸಂಕನೂರ, ಆಡಳಿತಾಧಿಕಾರಿ ಪ್ರೊ. ಎಸ್.ಎಸ್. ಪಟ್ಟಣಶೆಟ್ಟಿ, ಪ್ರಾಚಾರ್ಯ ಕೆ.ಎಸ್. ಪ್ಲೇದ ಹಾಗೂ ಸಂಸ್ಥೆಯ ಅಭಿಮಾನಿ ಯೋಗ ಬಂಧುಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.

“ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಉತ್ತಮ ಫಲಿತಾಂಶ ನೀಡಿರುವುದು ಮಹಾವಿದ್ಯಾಲಯಕ್ಕೆ ಹೆಮ್ಮೆಯ ಸಂಗತಿ. ಯೋಗ ಶಿಕ್ಷಣದ ಮೂಲಕ ವಿದ್ಯಾರ್ಥಿಗಳು ಶಿಸ್ತು, ಆರೋಗ್ಯ ಹಾಗೂ ಉತ್ತಮ ಜೀವನಮೌಲ್ಯಗಳನ್ನು ರೂಢಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಲಿ.”

— ಕೆ.ಎಸ್. ಪ್ಲೇದ, ಪ್ರಾಚಾರ್ಯರು, ಬಸವ ಯೋಗ ಮಹಾವಿದ್ಯಾಲಯ, ಗದಗ

ಸ್ವಾತಂತ್ರ್ಯ ಹೋರಾಟಕ್ಕೆ ಗದಗ ಜಿಲ್ಲೆಯ ಕೊಡುಗೆ ಅಪಾರ: ರಾಜೇಶ್ವರಿ ಬಡ್ನಿ

0

ವಿಜಯಸಾಕ್ಷಿ ಸುದ್ದಿ, ಗದಗ: ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಗದಗ ಪ್ರಮುಖ ಕೇಂದ್ರವಾಗಿ ರೂಪುಗೊಂಡಿತ್ತು. ಮಹಾತ್ಮ ಗಾಂಧೀಜಿ, ಲೋಕಮಾನ್ಯ ತಿಲಕರು ಹಾಗೂ ಜವಾಹರಲಾಲ್ ನೆಹರು ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಗದಗಕ್ಕೆ ಭೇಟಿ ನೀಡುವ ಮೂಲಕ ಸ್ವಾತಂತ್ರ್ಯದ ಕಿಚ್ಚನ್ನು ಮತ್ತಷ್ಟು ಹೆಚ್ಚಿಸಿದ್ದರು. ಜಿಲ್ಲೆಯ ಸಾಮಾನ್ಯ ಜನರೂ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮದೇ ಆದ ಕೊಡುಗೆ ನೀಡಿರುವುದು ಮಹತ್ವದ ಸಂಗತಿ ಎಂದು ಸಾಮಾಜಿಕ ಕಾರ್ಯಕರ್ತೆ ರಾಜೇಶ್ವರಿ ಬಡ್ನಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತ್ಯಾಗ ಹಾಗೂ ಬಲಿದಾನಗಳ ಹಿನ್ನೆಲೆಯಲ್ಲಿ ದೊರೆತ ಸ್ವಾತಂತ್ರ್ಯವನ್ನು ಸದುಪಯೋಗಪಡಿಸಿಕೊಂಡು ದೇಶದ ಏಳ್ಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.

ಮಾಜಿ ಸಚಿವ ಎಸ್.ಎಸ್. ಪಾಟೀಲ ಮಾತನಾಡಿ, ಸ್ವಾತಂತ್ರ್ಯ ಚಳವಳಿಗೆ ರೋಣ ಭಾಗದ ಜನರು ಹೆಚ್ಚಿನ ಕೊಡುಗೆ ನೀಡಿದ್ದಾರೆ. ಪ್ರಬಲ ಮಾಧ್ಯಮಗಳಿಲ್ಲದ ಆ ಕಾಲದಲ್ಲಿ ಗಾಂಧೀಜಿಯವರ ಒಂದು ಕರೆ ದೇಶದ ಜನರನ್ನು ಜಾಗೃತಗೊಳಿಸುವ ಶಕ್ತಿ ಹೊಂದಿತ್ತು. ಸ್ವಾತಂತ್ರ್ಯ ಚಳವಳಿ, ಕರ್ನಾಟಕ ಏಕೀಕರಣ ಚಳವಳಿ ಹಾಗೂ ಹೈದರಾಬಾದ್ ವಿಮೋಚನಾ ಚಳವಳಿಯ ಮಹತ್ವ, ಸಂಕಷ್ಟ ಮತ್ತು ನೋವುಗಳನ್ನು ಇಂದಿನ ಪೀಳಿಗೆಗೆ ತಿಳಿಸುವ ಕಾರ್ಯವಾಗಬೇಕು ಎಂದರು.

ಮುಖ್ಯ ಅತಿಥಿ ರುದ್ರಣ್ಣ ಗುಳಗುಳಿ ಮಾತನಾಡಿ, ಸಮಾಜದ ಎಲ್ಲ ವರ್ಗಗಳ ಜನರು ಒಗ್ಗಟ್ಟಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರು. ಮೈಲಾರ ಮಹಾದೇವರ ಅಪ್ರತಿಮ ಹೋರಾಟಗಳು ಬ್ರಿಟಿಷರ ನಿದ್ದೆಗೆಡಿಸಿದ್ದವು. ಇಂತಹ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಹೋರಾಟದ ಕಥನಗಳು ಮುಂದಿನ ಪೀಳಿಗೆಗೆ ತಲುಪಬೇಕು ಎಂದರು.

ಬಸವರಾಜ ಬಿಂಗಿ ಮಾತನಾಡಿ, ಇಂದಿನ ಯುವಜನಾಂಗದಲ್ಲಿ ದೇಶಾಭಿಮಾನದ ಭಾವನೆ ಕ್ಷೀಣಿಸುತ್ತಿರುವುದು ಆತಂಕಕಾರಿ ಬೆಳವಣಿಗೆ. ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಹೋರಾಟದ ಇತಿಹಾಸ ಹಾಗೂ ಹೋರಾಟಗಾರರ ತ್ಯಾಗದ ಕಥನಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವುದು ಇಂದಿನ ಅಗತ್ಯವಾಗಿದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯ ಚಳವಳಿಯಲ್ಲಿ ಸಾಮಾನ್ಯ ಜನರು ಹಾಗೂ ಮಹಿಳೆಯರು ತಮ್ಮದೇ ಆದ ಮಹತ್ವದ ಕೊಡುಗೆ ನೀಡಿದ್ದಾರೆ. ಹೋರಾಟಗಾರರಿಗೆ ಅನ್ನ, ಆಶ್ರಯ ನೀಡುವ ಮೂಲಕ ದೇಶಪ್ರೇಮ ಮೆರೆದಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪರ ಚಳವಳಿಗಳು ನಿರಂತರವಾಗಿರಬೇಕು. ಕಾಲಕ್ಕೆ ತಕ್ಕಂತೆ ಸಮಾಜದಲ್ಲಿ ಉಂಟಾಗುವ ಅಸಮಾನತೆಗಳನ್ನು ಪ್ರಶ್ನಿಸುವ ಮನೋಭಾವವನ್ನು ಯುವಕರು ಬೆಳೆಸಿಕೊಳ್ಳಬೇಕು. ಚಲನಶೀಲ ಸಮಾಜಕ್ಕೆ ಇದು ಅತ್ಯಂತ ಅಗತ್ಯವಾಗಿದೆ ಎಂದರು.

ಷಣ್ಮುಖಪ್ಪ ಬಡ್ನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಹುಲ ಗಿಡ್ನಂದಿ ನಿರೂಪಿಸಿದರು. ಕಿಶೋರಬಾಬು ನಾಗರಕಟ್ಟಿ ಸ್ವಾಗತಿಸಿದರು. ಸತೀಶಕುಮಾರ ಚನ್ನಪ್ಪಗೌಡರ ವಂದಿಸಿದರು.

ಕಾರ್ಯಕ್ರಮದಲ್ಲಿ ಸುಧಾ ಬಳ್ಳಿ, ರತ್ನಾ ಪುರಂತರ, ಪ್ರೇಮಾ ಬಡ್ನಿ, ಶೈಲಜಾ ಗಿಡ್ನಂದಿ, ಮಲ್ಲಿಕಾರ್ಜುನ ನಿಂಗೋಜಿ, ಗಂಗಾಧರ ಹಕಾರಿ, ಎಚ್.ಎನ್. ಕಾಳೆ, ಬಿ.ಬಿ. ಹೊಳಗುಂದಿ, ಶರಣಪ್ಪ ಹೊಸಂಗಡಿ, ರವಿ ದೇವರಡ್ಡಿ, ಸಾಕ್ಷಿ ದೇವರಡ್ಡಿ, ಕೆ.ಎಸ್. ಗುಗ್ಗರಿ, ಎಂ.ಎಫ್. ಡೋಣಿ, ಪ್ರ.ತೋ. ನಾರಾಯಣಪೂರ, ಪ್ರವೀಣಕುಮಾರ ಬಾವಿ, ಅಶೋಕ ಹಾದಿ, ಎಸ್.ಡಿ. ಗಾಂಜಿ, ಮುಕ್ತಾ ಉಡುಪಿ, ಡಾ. ಜಿ.ಬಿ. ಪಾಟೀಲ, ಎಸ್.ಎಲ್. ಕುಲಕರ್ಣಿ, ಕೆ.ಜೆ. ಮುಲ್ಲಾ, ಚಂದ್ರಕಲಾ ಇಟಗಿಮಠ, ಪುಷ್ಪಾ ನಿಡಗುಂದಿ, ಜೆ.ಎ. ಪಾಟೀಲ, ಅನ್ನದಾನಿ ಹಿರೇಮಠ, ಮಂಜುಳಾ ವೆಂಕಟೇಶಯ್ಯ, ಯು.ಎಸ್. ಕಣವಿ, ರಾಜೇಂದ್ರ ಗಡಾದ, ರೇವಯ್ಯ ಹಿರೇಮಠ, ವಿ.ಎಸ್. ದಲಾಲಿ, ರವೀಂದ್ರ ಜೋಶಿ, ಎಸ್.ಯು. ಸಜ್ಜನಶೆಟ್ಟರ, ಸಿ.ಎಂ. ಮಾರನಬಸರಿ, ಷಡಕ್ಷರಿ ಮೆಣಸಿನಕಾಯಿ, ರಾಮಕೃಷ್ಣ ಪವಾರ, ಪರಶುರಾಮ ಖಟವಟೆ, ವೈ.ಎಸ್. ಪಾಟೀಲ, ಮಹದೇವ ಕುಲಕರ್ಣಿ, ಕಿರಣ ಗುಗ್ಗರಿ, ಶಿವಶಂಕರ ಗದ್ದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಸ್ವಾತಂತ್ರ್ಯ ಚಳವಳಿಯಲ್ಲಿ ಸಾಮಾನ್ಯ ಜನರು ಹಾಗೂ ಮಹಿಳೆಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅನ್ನ, ಆಶ್ರಯ ನೀಡುವ ಮೂಲಕ ದೇಶಪ್ರೇಮ ಮೆರೆದಿದ್ದಾರೆ. ಇಂದಿನ ಯುವಕರು ಸಮಾಜದಲ್ಲಿನ ಅಸಮಾನತೆಗಳನ್ನು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಚಲನಶೀಲ ಸಮಾಜಕ್ಕೆ ಇಂತಹ ಮನೋಭಾವ ಅತ್ಯಂತ ಅಗತ್ಯ.”

— ವಿವೇಕಾನಂದಗೌಡ ಪಾಟೀಲ, ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

0

ವಿಜಯಸಾಕ್ಷಿ ಸುದ್ದಿ, ಗದಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಿರಹಟ್ಟಿ ಹಾಗೂ ಮುಂಡರಗಿ ಮಂಡಲಗಳ ವತಿಯಿಂದ ಗದಗ ಜಿಲ್ಲಾ ಅಧಿಕಾರಿಗಳ ಕಚೇರಿ ಎದುರು ಬೃಹತ್ ಧರಣಿ ಹಾಗೂ ಪ್ರತಿಭಟನೆ ನಡೆಯಿತು.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿರುವ ಬಿ.ನಾಗೇಂದ್ರ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಹಗರಣದಲ್ಲಿ ಆರೋಪಿಯಾಗಿದ್ದು, ನೈತಿಕ ಹೊಣೆ ಹೊತ್ತು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷರಾದ ಸುನೀಲ ಮಹಾಂತಶೇಟ್ಟರ, ಕುಮಾರಸ್ವಾಮಿ ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಕ್ಕಿರೇಶ ರಟ್ಟಿಹಳ್ಳಿ, ಲಿಂಗರಾಜ ಪಾಟೀಲ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗಂಗಾಧರ ಮೆಣಸಿನಕಾಯಿ, ಬಸವರಾಜ ಬಿಳಿಮಗ್ಗದ, ಪ್ರಶಾಂತ್ ಕುಮಾರ್ ಗುಡದಪ್ಪನವರ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಎಂ.ಎಸ್. ಕರೀಗೌಡ್ರ, ಹೆಮಗಿರಿಶ ಹಾವಿನಾಳ, ಅಜ್ಜಪ್ಪ ಲಿಂಬಿಕಾಯಿ, ನಾಗರಾಜ ಲಕ್ಕುಂಡಿ, ಅನಿಲ ಮುಳಗುಂದ, ಮಾಂತೇಶ ಅಡರಕಟ್ಟಿ, ಶರಣಪ್ಪ ಬಾರಕೇರ್, ನಿಂಗಪ್ಪ ಬನ್ನಿ, ಬಸವರಾಜ ಚಕ್ರಸಾಲಿ, ಅಶೋಕ ಶಿರಹಟ್ಟಿ, ಕೊಟ್ರೇಶಪ್ಪ ಅಂಗಡಿ, ರವೀಂದ್ರ ಗೌಡ ಪಾಟೀಲ್, ಸಂಜೀವ್ ದಾಸಾಯಿ, ವಿರೇಶ ಸಾಸಲವಾಡ, ವಿಜಯಕುಮಾರ್ ಕುಂಬಾರ್, ಪ್ರವೀಣ ಬೊಂಬಲೆ, ಶಿವಕುಮಾರ್ ಗೌಡನಾಯ್ಕರ, ಮೈಲಾರಪ್ಪ ಕಲ್ಕೇರಿ, ಬಸವರಾಜ ಚಿಗಣ್ಣವರ್, ಶಿವಕುಮಾರ್ ಕುರಿ, ನಾಗರಾಜ ಹೊಸೂರ್, ಪವಿತ್ರ ಕಲ್ಕುಟಗರ, ನಾಗೇಶ್ ಹುಬ್ಬಳ್ಳಿ, ಪವನ್ ಮೇಟಿ, ಕವಿತಾ ಉಳ್ಳಾಗಡ್ಡಿ, ಜ್ಯೋತಿ ಹಾನಗಲ್, ಪವನ್ ಲ್ಯಾಂಡ್ವೇ, ಪರಶುರಾಮ್ ಕರಡಿ ಕೊಳ್ಳ, ಸಿದ್ದು ದೇಸಾಯಿ, ದೇವಪ್ಪ ಇಟಗಿ, ಶಿವರಾಜ್ ರಾವಣಕಿ, ದ್ಯಾಮಣ್ಣ ತಳವಾರ, ರಾಮಣ್ಣ ಕಂಬಳಿ, ಅಕ್ಬರಸಾಬ್ ಯಾದಗಿರಿ, ಚೆನ್ನವೀರಗೌಡ ತೆಗ್ಗಿನಮನಿ, ವೀರೇಶ ತಂಗೋಡು, ಮಂಜುನಾಥ ಸಂಕಿನದಾಸರ್, ದೇವರಾಜ ಮೇಟಿ, ಡಿ.ವೈ. ಹುನಗುಂದ, ನೀಲಪ್ಪ ಹತ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.