“ಉಚಿತ ವಿದ್ಯುತ್ ಘೋಷಿಸಿ ಬಿಲ್ ಏಕೆ?”
ಬೆಟಗೇರಿಗೆ ತುರ್ತು ಸಾರಿಗೆ ಪೊಲೀಸ್ ಠಾಣೆ ಅಗತ್ಯ
ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಹವಳದ ನೇಮಕ
“ಹದಗೆಟ್ಟ ರಸ್ತೆಗೆ ಜೀವ ತುಂಬಲು ಶಾಸಕರ ಒತ್ತಾಯ”
ಎಫ್ಐಡಿ ಇಲ್ಲದೆ ಗೊಬ್ಬರ ಇಲ್ಲ!
“ರಸಗೊಬ್ಬರ ಕೊರತೆಯ ಆತಂಕ ಇರುವುದರಿಂದ ರೈತರು ಮಿತ ಬಳಕೆಯತ್ತ ಗಮನ ಹರಿಸಬೇಕು.”ಎಸ್.ಎಫ್. ತಹಸೀಲ್ದಾರ್, ಸಹಾಯಕ ನಿರ್ದೇಶಕರು
ರೈತನ ಕಣ್ಣೀರಿಗೆ ಸರ್ಕಾರ ಸ್ಪಂದಿಸಲಿ
ಹಿಂದೂ ಸಮಾವೇಶ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ
“ಶರಣರ ಸಮಾನತೆಯ ಚಳುವಳಿಯನ್ನು ಸನಾತನ ಶಕ್ತಿಗಳು ಅಂದು ದಮನಿಸಿದ್ದವು. ಅದೇ ಶಕ್ತಿಗಳು ಇಂದು ಬಿಜೆಪಿ ಮತ್ತು ಸಂಘ ಪರಿವಾರದ ರೂಪದಲ್ಲಿ ಸಮಾಜದಲ್ಲಿ ಅಸಮಾನತೆಯನ್ನು ಜೀವಂತವಾಗಿಡಲು ಪ್ರಯತ್ನಿಸುತ್ತಿವೆ.”ಯು. ಬಸವರಾಜ್, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ
“ಸೌಹಾರ್ದತೆಯ ನೆಲವಾದ ಗದಗದಲ್ಲಿ ಕೋಮುವಾದಿ ಸಮಾವೇಶವನ್ನು ಜನರು ಒಗ್ಗಟ್ಟಿನಿಂದ ವಿರೋಧಿಸಿ ವಿಫಲಗೊಳಿಸಬೇಕು.”ಬಾಲು ರಾಠೋಡ, ಜಿಲ್ಲಾ ಕಾರ್ಯದರ್ಶಿ“ಬೆಲೆ ಏರಿಕೆ, ನಿರುದ್ಯೋಗ, ಹಣದುಬ್ಬರದ ವಿರುದ್ಧ ಜನರ ಅಸಮಾಧಾನವನ್ನು ಮರೆಮಾಚಲು ಧರ್ಮದ ಹೆಸರಿನಲ್ಲಿ ವಿಭಜನಕಾರಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.”ಎಂ.ಎಸ್. ಹಡಪದ, ಜಿಲ್ಲಾ ಸಮಿತಿ ಸದಸ್ಯ
ಕರ್ನಾಟಕದಾದ್ಯಂತ ಮೇ 29 ರವರೆಗೆ ಭಾರೀ ಮಳೆ! ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಕರ್ನಾಟಕದಲ್ಲಿ ಮೇ 29ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ಘೋಷಿಸಲಾಗಿದೆ.
ರಾಜ್ಯದಲ್ಲಿ ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಕೊಪ್ಪಳ ಮತ್ತು ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಬೆಂಗಳೂರು ನಗರಕ್ಕೆ ಸಹ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಈ ಮಧ್ಯೆ, ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ ಭಾರಿ ಗಾಳಿ ಸಹಿತ ಮಳೆಯಿಂದ ಕೃಷಿ ಹಾನಿ ಸಂಭವಿಸಿದೆ. ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರ ಪ್ರಕಾರ, ಒಟ್ಟು 166.4 ಹೆಕ್ಟೇರ್ ಬೆಳೆ ನಾಶವಾಗಿದೆ. ಇದರಲ್ಲಿ ಬಹುಪಾಲು ಬಾಳೆ ಮತ್ತು ವೀಳ್ಯದೆಲೆ ಸೇರಿದಂತೆ ತೋಟಗಾರಿಕಾ ಬೆಳೆಗಳು ಹಾನಿಗೊಳಗಾಗಿವೆ. ಜೊತೆಗೆ ಕಬ್ಬು ಬೆಳೆಗೂ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸುರಕ್ಷಿತವಾಗಿರಲು ಇಲಾಖೆ ಸೂಚಿಸಿದೆ.
ಕಾಂಗ್ರೆಸ್ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ; ಬಿ.ವೈ. ವಿಜಯೇಂದ್ರ ವಾಗ್ದಾಳಿ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಹೆಚ್ಚಾಗಿದೆ ಎಂದು ಅವರು ಆರೋಪಿಸಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣದಲ್ಲಿ ಮುಳುಗಿದೆ. ಆಳಂದ ಗಲಭೆ ಪ್ರಕರಣವನ್ನು ಕೈಬಿಟ್ಟಿರುವ ನಿರ್ಧಾರವೂ ವೋಟ್ ಬ್ಯಾಂಕ್ ರಾಜಕಾರಣದ ಭಾಗ ಎಂದು ಆರೋಪಿಸಿದ್ದಾರೆ.
ಆನೇಕಲ್ನಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್ ಸರ್ಕಾರ ರೈತರ ಹಿತಾಸಕ್ತಿಯನ್ನು ಕಡೆಗಣಿಸಿದೆ. ಫಲವತ್ತಾದ ಜಮೀನನ್ನು ಪಡೆದು ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದೆ” ಎಂದು ದೂರಿದ್ದಾರೆ. ವಿಮಾನ ನಿಲ್ದಾಣ ಸಮೀಪ ಸಾಕಷ್ಟು ಜಾಗ ಇದ್ದರೂ ರೈತರ ಭೂಮಿಯನ್ನು ಆಯ್ಕೆ ಮಾಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ರಾಜ್ಯಸಭಾ ಚುನಾವಣೆ ಮತ್ತು ಎಚ್.ಡಿ. ದೇವೇಗೌಡ ಅವರ ಮರು ಆಯ್ಕೆ ವಿಚಾರದಲ್ಲಿ ಬಿಜೆಪಿಯ ವಿರೋಧ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಅಂತಿಮ ನಿರ್ಧಾರವನ್ನು ಕೇಂದ್ರ ನಾಯಕರು ಕೈಗೊಳ್ಳುತ್ತಾರೆ ಎಂದಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ವಿಚಾರಕ್ಕೂ ಪ್ರತಿಕ್ರಿಯಿಸಿದ ವಿಜಯೇಂದ್ರ, ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆಗೆ ರಾಜ್ಯ ಸರ್ಕಾರ ತೆರಿಗೆ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ವಿಷಯದಲ್ಲಿ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ತಿರುಗೇಟು ನೀಡಿದ್ದಾರೆ.
ಚಿನ್ಮುಲಾದ್ರಿ ಪರ್ವತದಲ್ಲಿ ಅಕ್ರಮ ಗಣಿಗಾರಿಕೆ: ನರಕದಂತಾದ ಗ್ರಾಮಸ್ಥರ ಬದುಕು!
ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಅಕ್ರಮ ಮಣ್ಣು ಸಾಗಾಟದಿಂದ ಗ್ರಾಮಸ್ಥರ ಜೀವನ ಅಸ್ತವ್ಯಸ್ತವಾಗಿರುವ ಘಟನೆ ವರದಿಯಾಗಿದೆ.
ಹಗಲು–ರಾತ್ರಿ ನಿರಂತರವಾಗಿ ಟ್ರ್ಯಾಕ್ಟರ್ಗಳಲ್ಲಿ ಮಣ್ಣು ಸಾಗಿಸಲಾಗುತ್ತಿದ್ದು, ಧೂಳು ಹಾಗೂ ಶಬ್ದದಿಂದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಚಿನ್ಮುಲಾದ್ರಿ ಪರ್ವತ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಗಣಿಗಾರಿಕೆಯಿಂದ ಪ್ರತಿದಿನ ನೂರಾರು ಟ್ರ್ಯಾಕ್ಟರ್ಗಳು ಸಂಚರಿಸುತ್ತಿದ್ದು, ಗ್ರಾಮದೊಳಗೆ ಧೂಳು ಮನೆಮಾಡಿದೆ. ಇದರಿಂದ ಮನೆಗಳಲ್ಲಿ ಊಟ, ನಿದ್ರೆ ಮಾಡಲು ಕೂಡ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
ಗ್ರಾಮಸ್ಥರು ಟ್ರ್ಯಾಕ್ಟರ್ಗಳ ಸಂಚಾರಕ್ಕೆ ಅಡ್ಡಿ ಹಾಕಲು ಯತ್ನಿಸಿದಾಗ ಚಾಲಕರು ಜಗಳಕ್ಕೆ ಇಳಿದು, “ರಸ್ತೆ ತೆರಿಗೆ ಕಟ್ಟುತ್ತೇವೆ” ಎಂದು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಹಲವಾರು ಬಾರಿ ವಾಗ್ವಾದ ಹಾಗೂ ಗಲಾಟೆಗಳು ನಡೆದಿವೆ.
ಟ್ರ್ಯಾಕ್ಟರ್ಗಳಲ್ಲಿ ಮಣ್ಣು ಸಾಗಿಸುವ ವೇಳೆ ಶಬ್ದ ಹೆಚ್ಚಿಸಲು ಟೇಪ್ ರೆಕಾರ್ಡರ್ಗಳನ್ನು ಬಳಸಲಾಗುತ್ತಿದ್ದು, ಇದರಿಂದ ಧೂಳು ಮನೆಗಳಿಗೆ ನುಗ್ಗಿ ಮಕ್ಕಳು ಹಾಗೂ ಹಿರಿಯರು ಆರೋಗ್ಯ ಸಮಸ್ಯೆಗೆ ಒಳಗಾಗುವ ಭೀತಿ ಎದುರಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಅಕ್ರಮ ಮಣ್ಣು ಗಣಿಗಾರಿಕೆ ಕುರಿತು ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

