Home Blog

ಚಾಮರಾಜನಗರ: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

ಚಾಮರಾಜನಗರ: ಮಹಿಳೆಯರ ಒಳ ಉಡುಪುಗಳನ್ನು ಕದ್ದು ವಿಕೃತಿ ಮೆರೆಯುತ್ತಿದ್ದ ಕಾಮುಕನನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಮೃತ್‌ ಬಿನ್ ಮಹೇಶ್ (24) ಬಂಧಿತ ಆರೋಪಿ. ಆರೋಪಿಯು ಮಹಿಳೆಯಂತೆ ಬಟ್ಟೆ ಧರಿಸಿ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಹೌಸಿಂಗ್ ಬೋರ್ಡ್ ಕಾಲೊನಿ, ಇಂದಿರಾನಗರ ಮತ್ತು ಕರಿನಂಜನಪುರ ಬಡಾವಣೆಗಳಲ್ಲಿ ಮಧ್ಯರಾತ್ರಿ ವೇಳೆ ಮನೆಯ ಮುಂಭಾಗದಲ್ಲಿ ಒಗೆದು ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ. ಈ ಬಗ್ಗೆ  ಬಂದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದರು.

ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದೇವೆ. ಈ ವಿಶೇಷ ತಂಡದ ಪತ್ತೆ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕ ಮುತ್ತುರಾಜು.ಎಂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ನೀವು ಈ ಕೆಲಸಗಳನ್ನು ಮಾಡೋ ಮುನ್ನ ನೂರು ಬಾರಿ ಯೋಚಿಸಿ, ಪಶ್ಚಾತಾಪ ಪಡ್ತೀರಾ ಎಚ್ಚರ!

0

ಜೀವನದಲ್ಲಿ ಯಶಸ್ಸು ಸಾಧಿಸಲು ಎಚ್ಚರಿಕೆಯಿಂದ ನಡೆದುಕೊಳ್ಳುವುದು ಬಹಳ ಮುಖ್ಯ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ.

ಅವರ ಪ್ರಕಾರ, ಯಶಸ್ವಿ ಜೀವನವನ್ನು ನಡೆಸಲು ನಾವು ಮಾಡುವ ಪ್ರತಿಯೊಂದು ಕೆಲಸದ ಬಗ್ಗೆ ನೂರು ಬಾರಿ ಯೋಚಿಸಿ, ಸಾವಿರ ಬಾರಿ ಪರಿಶೀಲಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಆತುರದಲ್ಲಿ ಅಥವಾ ಯೋಚಿಸದೇ ಮಾಡಿದ ಯಾವುದೇ ಕ್ರಮವು ನಮ್ಮ ಭವಿಷ್ಯವನ್ನು ಹಾಳು ಮಾಡಬಹುದು.

ಮಾತನಾಡುವ ಮೊದಲು ಯೋಚಿಸಬೇಕು: ಒಮ್ಮೆ ಮಾತನಾಡಿದ ಮಾತು ಹಿಂದಕ್ಕೆ ಪಡೆಯಲಾಗುವುದಿಲ್ಲ. ಯೋಚಿಸದೆ ಹೇಳಿದ ಮಾತುಗಳಿಂದ ಇತರರಿಗೆ ನೋವು ಉಂಟಾಗಬಹುದು ಮತ್ತು ಸಂಬಂಧಗಳಿಗೆ ಹಾನಿಯಾಗಬಹುದು. ಆದ್ದರಿಂದ ಮಾತನಾಡುವ ಮೊದಲು ನೂರು ಬಾರಿ ಯೋಚಿಸುವುದು ಅಗತ್ಯ ಎಂದು ಚಾಣಕ್ಯರು ಸೂಚಿಸಿದ್ದಾರೆ.

ಕೆಟ್ಟ ಸಹವಾಸದಿಂದ ದೂರವಿರಬೇಕು: ನಮ್ಮ ಜೊತೆಯಲ್ಲಿರುವವರು ನಮ್ಮ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಾರೆ. ಕೆಟ್ಟ ಸಹವಾಸವು ದಾರಿ ತಪ್ಪಿಸಬಹುದು, ಭವಿಷ್ಯವನ್ನು ಹಾಳು ಮಾಡಬಹುದು. ಸ್ನೇಹಿತರು, ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗ ಜಾಗರೂಕರಾಗಿರುವುದು ಅತ್ಯಾವಶ್ಯಕ.

ನಿರ್ಧಾರ ತೆಗೆದುಕೊಳ್ಳುವ ಮುನ್ನ ಯೋಚಿಸಿ: ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳುವುದು ತುಂಬಾ ಮುಖ್ಯ. ಪರಿಶೀಲನೆ ಇಲ್ಲದೆ, ಕುಲಂಕುಷವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಆತುರದ ನಿರ್ಧಾರಗಳು ಕೆಟ್ಟ ಪರಿಣಾಮಗಳನ್ನು ಉಂಟುಮಾಡಬಹುದು.

ಕೋಪದಲ್ಲಿ ನಿರ್ಧಾರಗಳೇ ಬಾರದಿವೆ: ಕೋಪ ಬಂದಾಗ ಯೋಚನಾ ಶಕ್ತಿ ಕಡಿಮೆಯಾಗುತ್ತದೆ. ಆ ಸಮಯದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ತಪ್ಪು ಹೋಗುವ ಸಾಧ್ಯತೆ ಹೆಚ್ಚು. ಆದ್ದರಿಂದ, ಕೋಪ ಕಡಿಮೆಯಾದ ಬಳಿಕವೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.

ಯೋಜನೆಗಳನ್ನು ಹಂಚಿಕೊಳ್ಳಬೇಡಿ: ಉತ್ಸಾಹ ಅಥವಾ ಆತುರದಲ್ಲಿ ನಿಮ್ಮ ಗುರಿ ಮತ್ತು ಯೋಜನೆಗಳನ್ನು ಎಲ್ಲರೊಂದಿಗೆ ಹಂಚಬಾರದು. ಇದರಿಂದ ಭವಿಷ್ಯದಲ್ಲಿ ಅಡೆತಡೆ ಉಂಟಾಗಬಹುದು ಮತ್ತು ಗುರಿ ಸಾಧಿಸಲು ತೊಂದರೆ ಎದುರಿಸಬಹುದು.

ಆಚಾರ್ಯ ಚಾಣಕ್ಯರ ಸಂದೇಶ ಸ್ಪಷ್ಟ: ಯಶಸ್ಸಿನ ರಹಸ್ಯ ಎಚ್ಚರಿಕೆಯಿಂದ, ಯೋಚನೆಯಿಂದ, ಮತ್ತು ತಾಳ್ಮೆಯಿಂದ ನಡೆದುಕೊಳ್ಳುವುದು. ಪ್ರತಿಯೊಂದು ಮಾತು, ನಿರ್ಧಾರ ಮತ್ತು ಸಹವಾಸ ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ.

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

0

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 7 ಲಕ್ಷ ರೂ. ದಂಡ ವಿಧಿಸಿ ಮಂಡ್ಯದ ಹೆಚ್ಚುವರಿ ಸೆಷನ್ಸ್ ಮತ್ತು 2ನೇ ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿದೆ.

ಮಂಡ್ಯ ನಗರದ ತಾವರಗೆರೆ ಬಡಾವಣೆಯ ನಿವಾಸಿ ವಾಯಿದ್ ಇಕ್ಬಾಲ್ ಪುತ್ರ ಅಖೀಬ್ ಆಲಂ ಉರ್ಫ್ ಶೇಖ್ ಅಖೀಬ್ ಆಲಂ ಶಿಕ್ಷೆಗೆ ಗುರಿಯಾದ ಆರೋಪಿ.

ಆರೋಪಿ ಬಾಲಕಿ ಶಾಲೆಗೆ ಹೋಗುವಾಗ ಮತ್ತು ಮರಳುವಾಗ ಅವಳನ್ನು ಹಿಂಬಾಲಿಸಿ, ಸ್ನೇಹ ಬೆಳೆಸಿ, ಪ್ರೀತಿಸುತ್ತಿದ್ದೇನೆ ಎಂದು ಹೇಳಿ ಬೆದರಿಕೆ ಹಾಕುತ್ತಿದ್ದನು. “ನನ್ನನ್ನು ಪ್ರೀತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಒತ್ತಾಯಿಸುತ್ತಿದ್ದನು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

2023ರ ಜನವರಿ 27ರಂದು ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಶ್ರೀರಂಗಪಟ್ಟಣ ತಾಲೂಕಿನ ಕರಿಘಟ್ಟ ಬೆಟ್ಟದ ದೇವಸ್ಥಾನದ ಹಿಂಭಾಗಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದನು.

ಈ ಘಟನೆ ಬಳಿಕ ಮನನೊಂದ ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿ ಗರ್ಭಿಣಿಯಾಗಿದ್ದುದೂ ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಮಂಡ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ಎಚ್. ಆನಂದಕುಮಾರ್ ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಬಿ. ದಿಲೀಪ್ ಕುಮಾರ್ ಅವರು ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣದಲ್ಲಿ ಅಭಿಯೋಜಕ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಹೆಬ್ಬಕವಾಡಿ ನಾಗರಾಜು ವಾದ ಮಂಡಿಸಿದರು.

ಏಪ್ರಿಲ್ 11ರಂದು ಸಿಎಂ ಸಿದ್ದರಾಮಯ್ಯ ಬೀದರ್–ಕಲಬುರಗಿ ಪ್ರವಾಸ

ಬೀದರ್/ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 11ರಂದು ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೀದರ್‌ನಲ್ಲಿ ನಡೆಯಲಿರುವ 40ನೇ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಬೀದರ್‌ನಿಂದ ಕಲಬುರಗಿಗೆ ಪ್ರಯಾಣಿಸಲಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನೂತನವಾಗಿ ನಿರ್ಮಿಸಿರುವ ಭೋಜಲಿಂಗೇಶ್ವರ ದೇವಸ್ಥಾನವನ್ನು ಅವರು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ಸಂಜೆ 5 ಗಂಟೆಗೆ ಕೋಡಿ ಮಹಾಸಿದ್ದೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ.

ದಿನದ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ ಬಳಿಕ, ಅವರು ರಾತ್ರಿ ಕಲಬುರಗಿಯಿಂದ ಬೆಂಗಳೂರಿಗೆ ಮರಳಲಿದ್ದಾರೆ.

ರಾಜಧಾನಿಯಲ್ಲಿ ಮತ್ತೆ ಆತಂಕ: ದೆಹಲಿ ವಿಧಾನಸಭೆಗೆ ಬಾಂಬ್ ಬೆದರಿಕೆ!

ನವದೆಹಲಿ: ದೆಹಲಿ ವಿಧಾನಸಭೆಯನ್ನು ಸ್ಫೋಟಿಸುವುದಾಗಿ ಇಮೇಲ್ ಮೂಲಕ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ. ಇದಕ್ಕೂ ಮುನ್ನ ಬಜೆಟ್ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿಯೂ ಇದೇ ರೀತಿಯ ಬೆದರಿಕೆ ಸಂದೇಶ ಬಂದಿತ್ತು. ಇಂದು ಬೆಳಗ್ಗೆ 8:14ರ ಸುಮಾರಿಗೆ ವಿಧಾನಸಭೆಗೆ ಸಂಬಂಧಿಸಿದ ಹಲವು ಸರ್ಕಾರಿ ಇಮೇಲ್ ಖಾತೆಗಳಿಗೆ ಈ ಬೆದರಿಕೆ ಸಂದೇಶ ರವಾನಿಸಲಾಗಿದೆ.

ಈ ಇಮೇಲ್‌ನಲ್ಲಿ ಯಾವುದೇ ಸಮಯದಲ್ಲಾದರೂ ವಿಧಾನಸಭೆ, ಸಚಿವಾಲಯ, ಕೆಲವು ಶಾಲೆಗಳು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಸ್ಫೋಟ ಸಂಭವಿಸಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಆದರೆ ಸ್ಫೋಟಕಗಳ ಸ್ವರೂಪ, ನಿಖರ ಸಮಯ ಅಥವಾ ಸ್ಥಳಗಳ ಕುರಿತು ಯಾವುದೇ ಸ್ಪಷ್ಟ ಮಾಹಿತಿ ನೀಡಲಾಗಿಲ್ಲ.

ಮಾಹಿತಿ ಲಭಿಸಿದ ತಕ್ಷಣ ದೆಹಲಿ ಪೊಲೀಸರು ತುರ್ತು ಕ್ರಮ ಕೈಗೊಂಡು, ಬಾಂಬ್ ನಿಷ್ಕ್ರೀಯ ದಳದೊಂದಿಗೆ ವಿಧಾನಸಭೆ, ಸಚಿವಾಲಯ, ಶಾಲೆಗಳು ಹಾಗೂ ಮೆಟ್ರೋ ನಿಲ್ದಾಣಗಳಲ್ಲಿ ಸಮಗ್ರ ತಪಾಸಣೆ ನಡೆಸಿದ್ದಾರೆ. ಈ ಘಟನೆ ಹಿನ್ನೆಲೆ ದೆಹಲಿಯ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಅನರ್ಹ BPL ಕಾರ್ಡ್ ರದ್ದು ಮಾಡಿ APL ಕಾರ್ಡ್ ನೀಡಲಾಗುತ್ತದೆ: ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಸುಮಾರು 14 ಲಕ್ಷ ಮಂದಿ ಎಪಿಎಲ್ ವರ್ಗಕ್ಕೆ ಸೇರಬೇಕಾದವರು ಬಿಪಿಎಲ್ ಕಾರ್ಡ್ ಹೊಂದಿರುವುದು ಪತ್ತೆಯಾಗಿದ್ದು, ಇಂತಹ ಕಾರ್ಡ್‌ಗಳನ್ನು ಹಂತ ಹಂತವಾಗಿ ರದ್ದುಪಡಿಸಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಅನಧಿಕೃತ ಬಿಪಿಎಲ್ ಕಾರ್ಡ್‌ಗಳಿವೆ ಎಂಬ ವರದಿ ನೀಡಿರುವ ಹಿನ್ನೆಲೆ ಪ್ರತಿಕ್ರಿಯಿಸಿದರು.

ನಿಯಮಗಳನ್ನು ಮೀರಿ ಎಪಿಎಲ್ ವರ್ಗದವರು ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದು ಗಮನಕ್ಕೆ ಬಂದಿದೆ. ಸುಮಾರು 7 ಲಕ್ಷ ಕಾರ್ಡ್‌ಗಳು ಈ ರೀತಿಯಾಗಿ ಮಾಡಿಸಿಕೊಂಡಿದ್ದಾರೆ ಎಂಬ ವರದಿ ಇದ್ದು, ಒಟ್ಟು ಸುಮಾರು 14 ಲಕ್ಷ ಮಂದಿ ಎಪಿಎಲ್‌ಗೆ ಸೇರಬೇಕಾದರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಅವುಗಳನ್ನು ಪರಿಷ್ಕರಣೆ ಮಾಡಲಾಗುತ್ತಿದ್ದು, ಹಂತ ಹಂತವಾಗಿ ರದ್ದುಪಡಿಸಲಾಗುತ್ತದೆ ಎಂದರು.

ನಿಜವಾಗಿಯೂ ಬಿಪಿಎಲ್ ಕಾರ್ಡ್‌ಗೆ ಅರ್ಹರಾದವರ ಹೆಸರನ್ನು ಯಾವುದೇ ಕಾರಣಕ್ಕೂ ತೆಗೆದುಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಯಾರಾದರೂ ಅರ್ಹರಾಗಿದ್ದರೂ ಅವರ ಹೆಸರು ತೆಗೆದುಹಾಕಲ್ಪಟ್ಟಿದ್ದರೆ, ತಹಶೀಲ್ದಾರ್‌ ಅವರಿಗೆ ಅರ್ಜಿ ಸಲ್ಲಿಸಿದರೆ ಮರುಪರಿಶೀಲನೆ ಮಾಡಿ ಕಾರ್ಡ್ ನೀಡಲಾಗುತ್ತದೆ ಎಂದರು.

ಇನ್ನೂ ಎಪಿಎಲ್ ಕಾರ್ಡ್ ಹೊಂದಿರುವವರ ಮೇಲೆ ಸದ್ಯ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ. ಆದರೆ ಬಿಪಿಎಲ್ ಕಾರ್ಡ್ ಹೊಂದಿರುವವರಲ್ಲಿ ಅನರ್ಹರು ಕಂಡುಬಂದರೆ, ಅವರನ್ನು ಎಪಿಎಲ್ ವರ್ಗಕ್ಕೆ ವರ್ಗಾಯಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

0

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಲಹಂಕ ನ್ಯೂಟೌನ್‌ನಲ್ಲಿ ನಡೆದಿದೆ. ಅಭಿಷೇಕ್ (23) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು, ಆತ್ಮಹತ್ಯೆಗೂ ಮುನ್ನ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನನ್ನ ಜೊತೆ ಇದ್ದವಳು, ಅವಳಿಗೀಗ ಏನಾಯಿತೆಂದು ನನಗೆ ತಿಳಿಯುತ್ತಿಲ್ಲ. ನನ್ನ ಜೀವನ ಪ್ರೀತಿಯಿಂದಲೇ ತುಂಬಿ ತುಳುಕುತ್ತಿತ್ತು. ಈಗ ಆ ಪ್ರೀತಿಯೇ ಅಂತ್ಯವಾಗಿದೆ. ಆದ್ದರಿಂದ ನಾನು ನನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ. ಎಲ್ಲರಿಗೂ ಹೇಳುತ್ತಿದ್ದೇನೆ ದಯವಿಟ್ಟು ಯಾರನ್ನೂ ಪ್ರೀತಿಸಬೇಡಿ.

ಈಗಿನ ಕಾಲದಲ್ಲಿ ಎಲ್ಲರೂ ವಂಚಕರೇ. ನನ್ನ ಎಲ್ಲಾ ಸ್ನೇಹಿತರಿಗೆ ಗುಡ್ ಬೈ. ಆ ಪ್ರೀತಿಯ ಕಾರಣದಿಂದ ನಿಮಗೆಲ್ಲರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ. ಎಲ್ಲರೂ ನನ್ನನ್ನು ಪ್ರೀತಿಸುವುದರ ಜೊತೆಗೆ ನನ್ನೊಂದಿಗೆ ಸಂತೋಷವಾಗಿದ್ದರು. ಆದರೆ ನಾನು ನಿಮಗ್ಯಾರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ. ನನ್ನನ್ನು ಕ್ಷಮಿಸಿ ಎಂದು ಬರೆದುಕೊಂಡಿದ್ದಾನೆ. ಸದ್ಯ ಘಟನೆ ಸಂಬಂಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪರ್ಫೆಕ್ಟ್ ಸ್ಕೋರ್‌ನಿಂದ ರಾಜ್ಯವೇ ಶಾಕ್: ದಕ್ಷಿಣ ಕನ್ನಡದ ದಿಶಾ 600ಕ್ಕೆ 600 ಅಂಕ ಪಡೆದು ಟಾಪರ್

ಮಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆ, ಎಲ್ಲರ ಗಮನ ಸೆಳೆದ ಸಾಧನೆ ದಕ್ಷಿಣ ಕನ್ನಡದಲ್ಲಿ ದಾಖಲಾಗಿದೆ. ದಿಶಾ ಎಂಬ ವಿದ್ಯಾರ್ಥಿನಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಪಡೆದು ಅಚ್ಚರಿ ಮೂಡಿಸಿದ್ದಾಳೆ.

ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯಾದ ದಿಶಾ, ಯಾವುದೇ ವಿಷಯದಲ್ಲೂ ಒಂದೇ ಒಂದು ಅಂಕವೂ ಕಳೆದುಕೊಳ್ಳದೆ ಪರ್ಫೆಕ್ಟ್ ಸಾಧನೆ ಮಾಡಿದ್ದಾಳೆ. ಈ ಸಾಧನೆ ಕಾಲೇಜಿನಲ್ಲಿ ಸಂಭ್ರಮದ ವಾತಾವರಣವನ್ನು ಸೃಷ್ಟಿಸಿದ್ದು, ಶಿಕ್ಷಕರು ಮತ್ತು ಸಹಪಾಠಿಗಳಿಂದ ಭರ್ಜರಿ ಪ್ರಶಂಸೆಗೆ ಪಾತ್ರವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಶಿಕ್ಷಣ ಕ್ಷೇತ್ರದಲ್ಲಿ ತನ್ನ ಮೇಲುಗೈ ತೋರಿಸಿದ್ದು, ದಿಶಾ ಸಾಧನೆ ರಾಜ್ಯದ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಕಠಿಣ ಪರಿಶ್ರಮ ಮತ್ತು ನಿರಂತರ ಅಭ್ಯಾಸದಿಂದ ಈ ಯಶಸ್ಸು ಸಾಧ್ಯವಾಗಿದೆ.

ಈ ಸಾಧನೆ ಮುಂದಿನ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, “ಟಾಪ್ ಮಾಡೋದು ಅಸಾಧ್ಯ ಅಲ್ಲ” ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

BREAKING: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟ! ರಿಸಲ್ಟ್ ಹೀಗೆ ಚೆಕ್ ಮಾಡಿ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಆನ್‌ಲೈನ್‌ನಲ್ಲಿ ಪ್ರಕಟವಾಗಿದೆ. ಬಳಿಕ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ karresults.nic.in ಮೂಲಕ ಪರಿಶೀಲಿಸಬಹುದು. ಸರ್ವರ್ ಸಮಸ್ಯೆ ಎದುರಾದಲ್ಲಿ ಡಿಜಿಲಾಕರ್ ಮೂಲಕವೂ ಫಲಿತಾಂಶ ವೀಕ್ಷಿಸಲು ಅವಕಾಶ ಇದೆ.

ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯದಾದ್ಯಂತ 1,217 ಕೇಂದ್ರಗಳಲ್ಲಿ ನಡೆಯಿತು. ಒಟ್ಟು 5,174 ಕಾಲೇಜುಗಳ ಸುಮಾರು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಇದಲ್ಲದೆ, ವಿಜ್ಞಾನ ವಿಭಾಗದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ವೆಬ್‌ಸೈಟ್‌ಗೆ ತೆರಳಿ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ‘Submit’ ಬಟನ್ ಒತ್ತಿದರೆ ಅಂಕಪಟ್ಟಿ ಪರದೆ ಮೇಲೆ ಕಾಣಿಸುತ್ತದೆ.

ಇನ್ನು ಕರ್ನಾಟಕ ಒನ್ ಮೊಬೈಲ್ ಆಪ್‌ನಲ್ಲಿಯೂ ಫಲಿತಾಂಶ ಲಭ್ಯವಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ SMS ಮೂಲಕವೂ ಮಾಹಿತಿ ರವಾನೆಯಾಗುತ್ತದೆ.

ಈ ಬಾರಿ ಮೊದಲ ಬಾರಿಗೆ ಡಿಜಿಲಾಕರ್ ಪ್ಲಾಟ್‌ಫಾರ್ಮ್‌ನಲ್ಲಿಯೂ ಫಲಿತಾಂಶ ಲಭ್ಯವಾಗಿದ್ದು, ವಿದ್ಯಾರ್ಥಿಗಳು ಅಲ್ಲಿ ಕೂಡ ಅಂಕಪಟ್ಟಿಯನ್ನು ವೀಕ್ಷಿಸಬಹುದು.

ಗುವಾಹಟಿಯಲ್ಲಿ ಭರ್ಜರಿ ಕದನ: ಬೆಂಗಳೂರು vs RR ಮುಖಾಮುಖಿ – RCB ಪ್ಲೇಯಿಂಗ್ 11​ನಲ್ಲಿ ಒಂದು ಬದಲಾವಣೆ

0

ಐಪಿಎಲ್ 2026ರ 16ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬಲಿಷ್ಠ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲಿದೆ. ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ತನ್ನ ಗೆಲುವಿನ ಸರಣಿಯನ್ನು ಮುಂದುವರಿಸಲು ಉತ್ಸುಕವಾಗಿದೆ.

ಆರ್‌ಸಿಬಿ ತಂಡದ ಪ್ರಮುಖ ಶಕ್ತಿ ಅದರ ಬ್ಯಾಟಿಂಗ್ ವಿಭಾಗ. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಸ್ಫೋಟಕ ಆರಂಭ ತಂಡಕ್ಕೆ ಭರ್ಜರಿ ಬಲ ನೀಡುತ್ತಿದೆ. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ದೇವದತ್ ಪಡಿಕ್ಕಲ್ ಕಳೆದ ಎರಡು ಪಂದ್ಯಗಳಲ್ಲಿ ಅರ್ಧಶತಕ ಸಿಡಿಸಿ ಗಮನ ಸೆಳೆದಿದ್ದಾರೆ.

ನಾಯಕ ರಜತ್ ಪಾಟಿದಾರ್ ಮತ್ತು ಟಿಮ್ ಡೇವಿಡ್ ಅವರ ಅಬ್ಬರ ಎದುರಾಳಿ ಬೌಲರ್‌ಗಳಿಗೆ ದೊಡ್ಡ ಸವಾಲಾಗಿದೆ. ನಂತರದ ಕ್ರಮದಲ್ಲಿ ಕೃನಾಲ್ ಪಾಂಡ್ಯ, ಜಿತೇಶ್ ಶರ್ಮಾ ಮತ್ತು ರೊಮಾರಿಯೋ ಶೆಫರ್ಡ್ ಇದ್ದು, ತಂಡದ ಬ್ಯಾಟಿಂಗ್ ಇನ್ನಷ್ಟು ಬಲಿಷ್ಠವಾಗಿದೆ. ಹೀಗಾಗಿ ಬ್ಯಾಟಿಂಗ್ ಕ್ರಮದಲ್ಲಿ ಬದಲಾವಣೆ ಸಾಧ್ಯತೆ ಕಡಿಮೆ.

ಕಳೆದ ಎರಡು ಪಂದ್ಯಗಳಲ್ಲಿ ಆಡದ ಜೋಶ್ ಹೇಝಲ್‌ವುಡ್ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಅವರು ಆಡಿದರೆ ಜೇಕಬ್ ಡಫಿ ಹೊರಗುಳಿಯಬಹುದು. ಹೀಗಾಗಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ.

ಪ್ಲೇಯಿಂಗ್ ಇಲೆವೆನ್

ಫಿಲ್ ಸಾಲ್ಟ್ (ವಿಕೆಟ್ ಕೀಪರ್)
ವಿರಾಟ್ ಕೊಹ್ಲಿ
ದೇವದತ್ ಪಡಿಕ್ಕಲ್
ರಜತ್ ಪಾಟಿದಾರ್ (ನಾಯಕ)
ಜಿತೇಶ್ ಶರ್ಮಾ
ಟಿಮ್ ಡೇವಿಡ್
ರೊಮಾರಿಯೋ ಶೆಫರ್ಡ್
ಕೃನಾಲ್ ಪಾಂಡ್ಯ
ಭುವನೇಶ್ವರ್ ಕುಮಾರ್
ಅಭಿನಂದನ್ ಸಿಂಗ್
ಜೋಶ್ ಹೇಝಲ್‌ವುಡ್
ಸುಯಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್)

ಉಭಯ ತಂಡಗಳ ಮುಖಾಮುಖಿ

ಈವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು 34 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ 17 ಪಂದ್ಯಗಳಲ್ಲಿ ಗೆದ್ದಿದ್ದು, ರಾಜಸ್ಥಾನ್ 14 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಉಳಿದ 3 ಪಂದ್ಯಗಳು ರದ್ದಾಗಿವೆ.

ಕಳೆದ ಐದು ಮುಖಾಮುಖಿಗಳಲ್ಲಿ ಆರ್‌ಸಿಬಿ 3ರಲ್ಲಿ ಗೆದ್ದಿದ್ದರೆ, ರಾಜಸ್ಥಾನ್ 2ರಲ್ಲಿ ಜಯ ಸಾಧಿಸಿದೆ. ಈಗ ಎರಡೂ ತಂಡಗಳು 35ನೇ ಬಾರಿ ಮುಖಾಮುಖಿಯಾಗಲು ಸಜ್ಜಾಗಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).

error: Content is protected !!