22.8 C
Gadag
Saturday, December 9, 2023
Home Blog

ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಹಾಲನ್ನು ಸೇವಿಸಬಹುದೇ? ಇಲ್ಲಿದೆ ಉತ್ತರ

0

ಹಾರತಜ್ಞರ ಪ್ರಕಾರ ದಿನದ ಮೊದಲ ಆಹಾರವಾಗಿ ಸೇವಿಸಲು ಲಿಂಬೆ ಬೆರೆಸಿದ ನೀರು ಅಥವಾ ಸೇಬಿನ ಶಿರ್ಕಾ ಬೆರೆಸಿದ ನೀರು ಅಥವಾ ಎಳನೀರು ಕುಡಿಯುವುದು ಅತ್ಯುತ್ತಮ ಆಯ್ಕೆಗಳಾಗಿವೆ. ನಂತರ ಸೇವಿಸುವ ಆಹಾರಗಳಿಗೆ ನೀವು ಹಾಲನ್ನು ಬೆರೆಸಿ ಸೇವಿಸಬಹುದು. ಏಕೆಂದರೆ ಲಿಂಬೆನೀರು ಅಥವಾ ಎಳನೀರು ದೇಹದ ಕಲ್ಮಶಗಳನ್ನು ನಿವಾರಿಸಲು ಮತ್ತು ದೇಹಕ್ಕೆ ಅಗತ್ಯವಿರುವ ನೀರಿನ ಅಂಶವನ್ನು ನೀಡಲು ಸಮರ್ಥವಾಗಿವೆ.

ಹಾಲು ಈ ಕಾರ್ಯಗಳನ್ನು ನಿರ್ವಹಿಸಲಾರದು.ತಜ್ಞರು ಸಲಹೆ ನೀಡುವ ಪ್ರಕಾರ ದಿನದ ಮೊದಲ ಆಹಾರವಾಗಿ ದೇಹವನ್ನು ಕಲ್ಮಶರಹಿತವಾಗಿಸಲು ಸಹಕರಿಸುವ ದ್ರವಾಹಾರವನ್ನು ಸೇವಿಸಬೇಕು ಹಾಗೂ ಈ ಕಾರ್ಯವನ್ನು ನಿರ್ವಹಿಸಲು ಸುಮಾರು ಮುಕ್ಕಾಲು ಘಂಟೆಯಾದರೂ ಹಾಗೇ ಬಿಡಬೇಕು. ಲಿಂಬೆನೀರಿನ ಬದಲಿಗೆ ಮಜ್ಜಿಗೆ ಅಥವಾ ಛಾಂಛ್ ಸುಲಭ ದ್ರವಾಹಾರಗಳಾಗಿವೆ. ಇವುಗಳನ್ನು ಜೀರ್ಣಿಸಿಕೊಳ್ಳಲು ಜೀರ್ಣಾಂಗಗಳಿಗೆ ಸುಲಭವಾಗುತ್ತದೆ.

ಖಾಲಿಹೊಟ್ಟೆಯಲ್ಲಿ ಹಾಲು ಪ್ರಥಮ ಆಹಾರವಾಗಿ ಸೇವಿಸುವುದು ಯಾರಿಗೂ ತರವಲ್ಲ. ಇದು ನಿಮ್ಮ ದೇಹ ಪ್ರಕೃತಿಯನ್ನು ಅವಲಂಬಿಸಿರುತ್ತದೆ. ಒಂದು ವೇಳೆ ನೀವು ವಾತ ಪ್ರಕೃತಿಯ ವ್ಯಕ್ತಿಯಾಗಿದ್ದರೆ (ವಾಯು) ಅಥವಾ ಕಫ ಪ್ರಕೃತಿಯವರಾಗಿದ್ದರೆ (ನೀರು) ಎಂದಿಗೂ ನೀವು ಖಾಲಿಹೊಟ್ಟೆಯಲ್ಲಿ ಹಾಲನ್ನು ಸೇವಿಸಬಾರದು. ಯಾರಿಗೆ ಕೆಮ್ಮು ಮತ್ತು ಶೀತ, ಫ್ಲೂ ಮೊದಲಾದ ತೊಂದರೆಗಳು ಸುಲಭವಾಗಿ ಎದುರಾಗುತ್ತವೆಯೋ ಆ ವ್ಯಕ್ತಿಗಳೂ ಬೆಳಿಗ್ಗಿನ ಅಹಾರವಾಗಿ ಹಾಲನ್ನು ಸೇವಿಸಬಾರದು.

ಅತಿಯಾದ ಆಮ್ಲೀಯತೆಯ ಗುಣವಿರುವ ವ್ಯಕ್ತಿಗಳು ತಣ್ಣನೆಯ ಹಾಲನ್ನು ಸೇವಿಸಬಹುದು. ಹಾಲಿನಲ್ಲಿರುವ ಕ್ಯಾಲ್ಸಿಯಂ ಆಮ್ಲದೊಂದಿಗೆ ಬೆರೆತು ಉಪ್ಪಾಗಿಸುವ ಕಾರಣ ಅಲ್ಪ ಮಟ್ಟದ ಆಮ್ಲೀಯತೆಯನ್ನು ಗುಣಪಡಿಸಲು ನೆರವಾಗುತ್ತದೆ. ವಾತ ಪ್ರಕೃತಿಯ ವ್ಯಕ್ತಿಗಳು ದಿನದ ಇತರ ಹೊತ್ತಿನಲ್ಲಿ ಬೆಲ್ಲದೊಂದಿಗೆ ಹಾಲನ್ನು ಸೇವಿಸಿದರೆ ಹೆಚ್ಚಿನ ಪ್ರಯೋಜನಗಳನ್ನು ಪಡೆಯುತ್ತಾರೆ.

* ಬರೆಯ ನೀರು, ಉಗುರು ಬೆಚ್ಚಗಿದ್ದರೆ ಸಾಕು. ಅತಿ ತಣ್ಣಗೂ ಇರಬಾರದು, ಅತಿ ಬಿಸಿಯೂ ಇರಬಾರದು. ಸುಮಾರು ಎರಡು ಲೋಟ

* ಎಳನೀರು. ಒಂದು ಮಧ್ಯಮ ಗಾತ್ರದ ಎಳನೀರು. ಈಗ ತಾನೇ ಕೆತ್ತಿದ ಎಳನೀರಿನಿಂದ ಸಂಗ್ರಹಿಸಿದ ನೀರು

* ಒಂದು ಲೋಟ ನೀರಿಗೆ ಒಂದು ದೊಡ್ಡ ಚಮಚ ಸೇಬಿನ ಶಿರ್ಕಾ(apple cidar vinegar) ಬೆರೆಸಿದ ನೀರು

* ಒಂದು ಟೀ ಬ್ಯಾಗ್ ಹಸಿರು ಟೀ ಕುದಿಸಿದ ನೀರನ್ನು ತಣಿಸಿ ಕುಡಿಯುವುದು

* ಒಂದು ಲೋಟ ನೀರಿಗೆ ದೊಡ್ಡದಾದರೆ ಅರ್ಧ, ಚಿಕ್ಕದಾದರೆ ಒಂದು ಲಿಂಬೆಯ ರಸ ಬೆರೆಸಿದ ನಿರು

* ಈ ನೀರಿಗೆ ಒಂದು ಚಿಕ್ಕ ಚಮಚ ಜೇನನ್ನು ಬೆರೆಸಿಯೂ ಸೇವಿಸಬಹುದು

* ಆಮ್ಲೀಯತೆಯ ತೊಂದರೆ ಇರುವ ವ್ಯಕ್ತಿಗಳು ಕೊಂಚ ಹಸಿಶುಂಠಿ ಕುದಿಸಿ ತಣಿಸಿದ ನೀರನ್ನು ಕುಡಿಯಬಹುದು

* ಹೊಟ್ಟೆಯಲ್ಲಿ ಗುಡುಗುಡು, ಉರಿ, ಕರುಳಿನ ಹುಣ್ಣು ಇರುವ ವ್ಯಕ್ತಿಗಳು ಒಂದು ಚಿಕ್ಕ ಚಮಚ ಲೋಳೆಸರ (ಆಲೋವೆರಾ) ತಿರುಳನ್ನು ಬೆರೆಸಿದ ನೀರನ್ನು ಕುಡಿಯಬಹುದು.

ಹಿರಿಯ ನಟಿ ಲೀಲಾವತಿ ನಿಧನಕ್ಕೆ ಸಚಿವ ಶರಣ್ ಪ್ರಕಾಶ್ ಪಾಟೀಲ್ ಕಂಬನಿ

0

ಬೆಂಗಳೂರು, ಡಿ,08- ಅನಾರೋಗ್ಯದಿಂದ ಬಳಲುತ್ತಿದ್ದ ದಕ್ಷಿಣ ಭಾರತದ ಹೆಸರಾಂತ ಚಿತ್ರ ನಟಿ ಲೀಲಾವತಿ ಅವರ ನಿಧನಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ಆರ್ ಪಾಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು ೬೦೦ ಚಿತ್ರಗಳಲ್ಲಿ ನಟಿಸಿದ್ದ ಅವರ ನಿಧನದಿಂದ ಕನ್ನಡ ಮಾತ್ರವಲ್ಲದೆ, ಭಾರತದ ಚಿತ್ರರಂಗಕ್ಕೂ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದಿದ್ದಾರೆ. ಹಿರಿಯ ನಟಿಯನ್ನು ಉಳಿಸಿಕೊಳ್ಳುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ವತಿಯಿಂದಲೇ ಚಿಕಿತ್ಸೆ ಕೊಡಿಸುವುದಾಗಿ ಹೇಳಿದ್ದರು. ಆದರೆ, ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಈಡೇರಲಿಲ್ಲ ಎಂದು ವಿಷಾದಿಸಿದ್ದಾರೆ.

ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

0

ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಅವರ ಅಂತಿಮ ದರ್ಶನದ ವಿಚಾರವಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ವಿಚಾರವಾಗಿ ನೆಲಮಂಗಲ ಡಿವೈಎಸ್ ಪಿ ಪುರುಷೋತ್ತಮ ಅವರು ಮಾಧ್ಯಮಗಳ ಜೊತೆ ಮಾತನಾಡಿ, ನಾಳೆ  ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.

ನಾಳೆ ನೆಲಮಂಗಲದ ಆಂಬೇಡ್ಕರ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.  ದಯವಿಟ್ಟು ಸಾರ್ವಜನಿಕರು ಸಹಕರಿಸಿ. ಎಲ್ಲರಿಗೂ ಅವರ ಅಂತಿಮ ದರ್ಶನ ಸಿಗುವಂತೆ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ. ನೆಲಮಂಗಲ ಪೊಲೀಸರು ಹಾಗೂ ತಹಶಿಲ್ದಾರ್  ಅರುಂಧತಿ ನೇತೃತ್ವದಲ್ಲಿ ಮೈದಾನದಲ್ಲಿ ತಯಾರಿ ಮಾಡಲಾಗುತ್ತಿದೆ.

ನಿಮ್ಮ ಮನಸ್ಥಿತಿ ಏನು ಅನ್ನೋದು ನನಗೆ ಗೊತ್ತಿದೆ: HDK ವಿರುದ್ಧ ಸಿಎಂ ಇಬ್ರಾಹಿಂ ಕಿಡಿ

0

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಬಿಜೆಪಿಯವರಿಗೆ ಬಕೆಟ್ ಹಿಡಿಯಲು ಹೋಗಿದ್ದಾರೆ. ಬಿಜೆಪಿ ಮೈತ್ರಿಯಿಂದ ಅಶೋಕ್, ಯಡಿಯೂರಪ್ಪ ಮಗನ ಹಿಂದೆ ನೀವು ಓಡಾಡ್ಬೇಕು ಅಷ್ಟೇ ಎಂದು ಸಿಎಂ ಇಬ್ರಾಹಿಂ ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ಕರೆದು ಮಾತನಾಡಿದ ಸಿಎಂ ಇಬ್ರಾಹಿಂ, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿಯವರೇ ಮೊದಲು ನಿಮ್ಮ ಆರೋಗ್ಯ ನೋಡಿಕೊಳ್ಳಿ. ನೀವು ಕೇಶವ ಕೃಪದಲ್ಲಿ ಬಾಳಲಾರಿರಿ. ನೀವು ಏನು, ನಿಮ್ಮ ಮನಸ್ಥಿತಿ ಏನು ಅನ್ನೋದು ನನಗೆ ಗೊತ್ತಿದೆ. ಮತ್ತೆ ನೀವು ಇಲ್ಲಿಗೇ ಬರಬೇಕು, ಬೇರೆ ವಿಧಿಯಿಲ್ಲ ಎಂದು ಕಾಲೆಳೆದಿದ್ದಾರೆ.

ದೇವೇಗೌಡರಿಗೆ ವಯಸ್ಸಾಗಿದೆ, ಸ್ವಯಂ ನಿರ್ಧಾರ ತೆಗೆದುಕೊಳ್ಳಲಾರರು. ಐವರು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಜನವರಿ ನಂತರ ಒಂದು ಅಂತಿಮ ತೀರ್ಮಾನ ತಿಳಿಸುತ್ತೇವೆ. ದೇವೆಗೌಡರು, ಕುಮಾರಸ್ವಾಮಿಯವರ ಆರೋಗ್ಯದ ದೃಷ್ಠಿಯಿಂದ ನಾನು ಕೆಲಸ ನಿಧಾನಕ್ಕೆ ಮಾಡುತ್ತಿದ್ದೇನೆ. ಅವರಿಗೆ ಟೆನ್ಷನ್ ಕೊಡಬಾರದು ಅಂತ ಕೆಲಸ ನಿಧಾನ ಮಾಡಿದ್ದೇನೆ ಎಂದರು.

ನಟಿ ಲೀಲಾವತಿ ನಿಧನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

0

ಬೆಂಗಳೂರು: ಕನ್ನಡ ಚಿತ್ರರಂಗದ ಕಲಾ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಲೀಲಾವತಿಯವರು ನಿಧನರಾಗಿರುವ ಸುದ್ದಿ ಕೇಳಿ ಮುನಸ್ಸಿಗೆ ದುಖವಾಯಿತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.ಲೀಲಾವತಿ ಅವರ ಅಗಲಿಕೆಯಿಂದ ಕನ್ನಡ ನಾಡು ಹಾಗೂ ಕಲಾರಂಗ ಒಬ್ಬ ಮನೆಯ ಹಿರಿಯರನ್ನು ಕಳೆದುಕೊಂಡು ಬಡವಾದಂತಾಗಿದೆ.

ಕನ್ನಡ ಚಿತ್ರರಂಗದ ಮೇರು ನಟರಾದ ಡಾ. ರಾಜಕುಮಾರ್ ಸೇರಿದಂತೆ ಎಲ್ಲ ದಿಗ್ಗಜ ನಟರೊಂದಿಗೆ ವಿಭಿನ್ನ ಪಾತ್ರಗಳನ್ನು ಮಾಡಿ ಎಲ್ಲರ ಮನೆ ಮಾತಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ತಾಯಿಯ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ‌ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

ಪಿಡಿಓಗಳ ಬೆಂಬಲಕ್ಕೆ ನಿಂತ ಮಾಜಿ ಶಾಸಕ ಅಮೃತ ದೇಸಾಯಿ

0

ಧಾರವಾಡ: ಆರ್‌ಟಿಐ ಕಾರ್ಯಕರ್ತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮ ಪಂಚಾಯ್ತಿ ಪಿಡಿಓ ನಾಗರಾಜ ಗಿಣಿವಾಲದ ಅವರಿಗಾದ ಅನ್ಯಾಯ ಬೇರೆ ಯಾವೊಬ್ಬ ಪಿಡಿಓಗೂ ಆಗಬಾರದು ಹಾಗೂ ಪಿಡಿಓಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಪಿಡಿಓಗಳು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇಂದು ನಡೆದ ಪಿಡಿಓಗಳ ಪ್ರತಿಭಟನೆಗೆ ಮಾಜಿ ಶಾಸಕ ಅಮೃತ ದೇಸಾಯಿ ಬೆಂಬಲ ಸೂಚಿಸಿದರು.ರಾಜ್ಯದಲ್ಲಿ ಪಿಡಿಓಗಳು ಬಂದ ಮೇಲೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಯಾರೋ ಒಬ್ಬ ತಪ್ಪು ಮಾಡಿದರೆ ಅದು ಎಲ್ಲ ಪಿಡಿಓಗಳ ಮೇಲೆ ಬರುವುದು ತರವಲ್ಲ. ಕಾನೂನಿನಲ್ಲಿ ಕೆಲವೊಂದಿಷ್ಟು ತಿದ್ದುಪಡಿಗಳಾಗಬೇಕಿದೆ.

ಈ ಪ್ರತಿಭಟನೆಯನ್ನು ಬೆಳಗಾವಿ ಸುವರ್ಣಸೌಧಕ್ಕೆ ಶಿಫ್ಟ್ ಮಾಡಿದರೆ ನಾನೂ ಬರುತ್ತೇನೆ ಎಂದರು. ಕೆಲವೊಂದಿಷ್ಟು ಆರ್‌ಟಿಐ ಕಾರ್ಯಕರ್ತರು ವೈಯಕ್ತಿಕವಾಗಿ ಪಿಡಿಓಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಯಾವ ಪಿಡಿಓಗಳೂ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು. ನಿಮ್ಮ ಹಿಂದೆ ಸಂಘಟನೆ ಇದೆ. ನಾವೂ ಇದ್ದೇವೆ ಎಂದು ಧೈರ್ಯ ಹೇಳಿದರು.

ಹಿರಿಯ ನಟಿ ಲೀಲಾವತಿ ನಿಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಂಬನಿ

0

ಬೆಂಗಳೂರು: ಕನ್ನಡ ಚಿತ್ರರಂಗದ ಶ್ರೇಷ್ಟ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು.

ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆಗುರುತುಗಳು ಮೂಡುವಂತೆ ಮಾಡಿದವರು ಅವರು. ಅಮ್ಮ, ಅಕ್ಕ, ಅತ್ತೆ ಸೇರಿ ಅನೇಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿ ನಟಿಸುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಭಕ್ತ ಕುಂಬಾರ, ವೀರ ಕೇಸರಿ, ಭಾಗ್ಯದೇವತೆ, ಸೋತು ಗೆದ್ದವಳು, ನಂದಾದೀಪ,

ವಿಧಿ ವಿಲಾಸ, ಸಂತ ತುಕಾರಾಂ, ರಣಧೀರ ಕಂಠೀರವ ಸೇರಿ ಅವರು ನಟಿಸಿದ್ದ ಅನೇಕ ಚಿತ್ರಗಳು ಕನ್ನಡಿಗರ ಮನೆ ಮನಗಳನ್ನು ತುಂಬಿರುತ್ತವೆ ಎಂದಿರುವ ಅವರು; ಲೀಲಾವತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಶೋಕ ವ್ಯಕ್ತಪಡಿಸಿದ್ದಾರೆ.

ಹೊಸ ವರ್ಷಕ್ಕೆ ಈ ಬಾರಿ ನೋ ಕಂಡೀಷನ್: ತುಷಾರ್ ಗಿರಿನಾಥ್

0

ಬೆಂಗಳೂರು:- ಹೊಸ ವರ್ಷಕ್ಕೆ ಈ ಬಾರಿ ಯಾವುದೇ ಕಂಡೀಷನ್ ಇಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಾರಿ ಹೊಸ ವರ್ಷಕ್ಕೆ ಯಾವದೇ ಕಂಡೀಷನ್ ಇಲ್ಲ. ಕಳೆದ ಬಾರಿಯೂ ಯಾವದೇ ಕಂಡೀಷನ್ ಇರಲಿಲ್ಲ.

ಈ ಬಾರಿಯೂ ಯಾವದೇ ನಿರ್ಬಂಧ ಇರೋದಿಲ್ಲ. 2022 ರಲ್ಲಿ ಕೋವಿಡ್ ಕಾರಣದಿಂದ ನಿರ್ಬಂಧ ಹಾಕಲಾಗಿತ್ತು. ಈ ಬಾರಿಯೂ ಎಲ್ಲಾ ನಿರ್ಬಂಧಗಳು ಸಡಿಲಿಕೆ ಮಾಡುತ್ತೇವೆ. ಸುರಕ್ಷತೆಗೆ ಬಗ್ಗೆ ಪೊಲೀಸ್ ಅಧಿಕಾರಿಗಳು ಗಮನ ಹರಿಸುತ್ತಾರೆ. ಹೊಸ ವರ್ಷ ಸಂಭ್ರಮಾಚರಣೆ ನಿರ್ಬಂಧಗಳನ್ನ ಪೊಲೀಸ್ ಕಮಿಷನರ್ ತಿಳಿಸುತ್ತಾರೆ. ಹೊಸ ವರ್ಷಕ್ಕೆ ಬಿಬಿಎಂಪಿ ಯಿಂದ ಕಂಡೀಷನ್ ಇಲ್ಲ ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಹೇಳಿಕೆ ನೀಡಿದ್ದಾರೆ.

Breaking news: ಹಿರಿಯ ಕಲಾವಿದೆ ಲೀಲಾವತಿ ನಿಧನ

0

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು.

ಇಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ. ಲೀಲಾವತಿ ಅವರು ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಆರೋಗ್ಯ ಯೋಗ ಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು.

ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೈದು: ಪತಿ ಆತ್ಮಹತ್ಯೆ

0

ಹುಬ್ಬಳ್ಳಿ: ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೈದು ಪತಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಹಳೆಹುಬ್ಬಳ್ಳಿಯ ಇಸ್ಲಾಂಪುರದಲ್ಲಿ ನಡೆದಿದೆ.

ಸಾಹಿಸ್ತಾ ಬೇಪಾರಿ (25) ಕೊಲೆಯಾದ ಮಹಿಳೆ, ಪತಿ ಮಲ್ಲಿಕ್ ಬೇಪಾರಿ(28) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ‘ಹಳೇಹುಬ್ಬಳ್ಳಿ ನಿವಾಸಿಯಾಗಿದ್ದ ಸಾಹಿಸ್ತಾ ಅವರನ್ನು ಐದಾರು ವರ್ಷಗಳ ಹಿಂದೆ ಬೈಲಹೊಂಗಲ ವ್ಯಕ್ತಿಯೊಬ್ಬರ ಜೊತೆ ಮದುವೆ ಮಾಡಿಕೊಡಲಾಗಿತ್ತು. ಕೆಲ ತಿಂಗಳ ಹಿಂದೆ ಪತಿ ಮೃತಪಟ್ಟಿದ್ದರು.

ಇಬ್ಬರು ಮಕ್ಕಳ ಜೊತೆ ಅವರು ತವರಿಗೆ ಬಂದು ವಾಸಿಸುತ್ತಿದ್ದರು. ಕುಟುಂಬದವರು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಲ್ಲಿಕ್ ಬೇಪಾರಿ ಜೊತೆ ಎರಡನೇ ಮದುವೆ ಮಾಡಿಸಿದ್ದರು. ಪತಿ ಸರಿಯಾಗಿ ಕೆಲಸಕ್ಕೆ ಹೋಗುತ್ತಿಲ್ಲ ಎಂದು ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು.

ಶುಕ್ರವಾರ ಬೆಳಿಗ್ಗೆ ಅದೇ ವಿಷಯಕ್ಕೆ ಮತ್ತೆ ಜಗಳವಾಗಿದ್ದು, ಮಲ್ಲಿಕ್ ಕೋಪದಿಂದ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.