Home Blog

ಚಾಕೊಲೇಟ್ ಕೊಡುವುದಾಗಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್

0

ಮಂಡ್ಯ: ಚಾಕೋಲೆಟ್​​ ಕೊಡಿಸುವುದಾಗಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ವೆಸಗಿರುವಂತಹ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ಪ್ರವೀಣ್ (21) ನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿ ಕುಟುಂಬ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು,

ಅದೇ ಫ್ಯಾಕ್ಟರಿಯಲ್ಲಿ ಆರೋಪಿ ಪ್ರವೀಣ್ ಕೂಡ ಕೆಲಸ ಮಾಡುತ್ತಿದ್ದ. ಸದ್ಯ BNS 65(2), 4,5(i), 5(m), 6 ಹಾಗೂ ಪೋಕ್ಸೋ ಅಡಿ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್’ಗೆ ಹಿಂಬಂದಿಯಿಂದ ಟ್ಯಾಂಕರ್ ಲಾರಿ ಡಿಕ್ಕಿ: ಸವಾರ ಸಾವು

0

ಬೀದರ್​: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಚಲಿಸುತ್ತಿದ್ದ ಬೈಕ್ಗೆ ಹಿಂಬಂದಿಯಿಂದ ಬಂದು ಟ್ಯಾಂಕರ್ ಲಾರಿ ಗುದ್ದಿದ ಪರಿಣಾಮ ಸ್ಥಳದಲ್ಲೇ ಓರ್ವ ಬೈಕ್ ಸವಾರ ಮೃತಪಟ್ಟಿದ್ದು ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಬಸವಕಲ್ಯಾಣ ತಾಲೂಕಿನ ತಡೋಳ ಗ್ರಾಮದ ಘಾಳೆಪ್ಪ ಖರ್ಗೆ (40) ಘಟನೆಯಲ್ಲಿ ಮೃತಪಟ್ಟಿದ್ದು, ವಿಶ್ವನಾಥ್ ಅಶೋಕ ಖರ್ಗೆ ಎನ್ನುವವರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುವನ್ನು ಹುಮನಾಬಾದನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದೆ.

ಇನ್ನೂ ಸಂಚಾರಿ ಠಾಣೆ ಪಿಎಸ್ಐ ಸಿದ್ದೇಶ್ವರ ನೇತೃತ್ವದ ಪೊಲೀಸರ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ಬೆಂಗಳೂರು-ಮೈಸೂರು ದಶಪಥದಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

0

ರಾಮನಗರ: ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯಲ್ಲಿ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದುರ್ಮರಣಕ್ಕೀಡಾಗಿರುವ ದುರಂತ ಘಟನೆ ರಾಮನಗರ ತಾಲೂಕಿನ ಜಯಪುರ ಗೇಟ್ ಸಮೀಪ ನಡೆದಿದೆ.

ಕೆಆರ್ ಪೇಟೆ ಮೂಲದ ಮುತ್ತುರಾಜು (55), ತಮ್ಮನಗೌಡ (27), ಸಂಜು (28) ಹಾಗೂ ಚಾಲಕ ಸಚಿನ್ (27) ಮೃತ ದುರ್ದೈವಿಗಳು. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು, ಚಾಲಕನಿಗೆ ನಿದ್ರೆ ಬಂದು ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೇ ಅಲ್ಲಿ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾಹನದ ಅವಶೇಷಗಳನ್ನು ಕ್ರೇನ್ ಮೂಲಕ ಸ್ಥಳದಿಂದ ತೆರವುಗೊಳಿಸಲಾಯಿತು.

ಡ್ಯಾನ್ಸ್ ಮಾಡುವ ವೇಳೆ ಹೃದಯಾಘಾತ: ಸೇಲ್ಸ್ ಎಕ್ಸಿಕ್ಯೂಟಿವ್ ಸ್ಥಳದಲ್ಲೇ ಸಾವು!

ಬೆಂಗಳೂರು: ಬೆಂಗಳೂರಿನ ರೆಸಾರ್ಟ್‌ನಲ್ಲಿ ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದಾಗ ಹೃದಯಾಘಾತವಾಗಿ ರಾಯಚೂರು ಮೂಲದ ಸೇಲ್ಸ್ ಎಕ್ಸಿಕ್ಯೂಟಿವ್ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಬಸವರಾಜ್ (46) ಎಂಬವರು ಲಿಂಗಸುಗೂರು ತಾಲೂಕಿನ ಸರ್ಜಾಪುರ ಗ್ರಾಮದವರು.

ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ರಾತ್ರಿ ಸ್ನೇಹಿತರ ಜೊತೆ ರೆಸಾರ್ಟ್‌ಗೆ ತೆರಳಿದ್ದ ಅವರು, ನೃತ್ಯವಾಡುತ್ತಿದ್ದಾಗ ಏಕಾಏಕಿ ನೆಲಕ್ಕೆ ಕುಸಿದು ಬಿದ್ದರು.

ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೃದಯಾಘಾತದಿಂದ ಬಸವರಾಜ್ ಕೊನೆಯುಸಿರೆಳೆದಿದ್ದಾರೆ. ಸದ್ಯ ಬಸವರಾಜ್ ಮೃತದೇಹವನ್ನು ಬೆಂಗಳೂರಿನಿಂದ ಲಿಂಗಸುಗೂರಿನ ಸರ್ಜಾಪುರಕ್ಕೆ ರವಾನಿಸಲಾಗಿದೆ.

ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಕಳ್ಳ: ಕಂಬಕ್ಕೆ ಕಟ್ಟಿ ಧರ್ಮದೇಟು ಕೊಟ್ರು

0

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಗಂಜಾಮ್‌ನಲ್ಲಿ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಖದೀಮನನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಧರ್ಮಧೇಟು ಕೊಟ್ಟಿರುವ ಘಟನೆನಡೆದಿದೆ. ನಾಗಮಂಗಲ ಮೂಲದ 45 ವರ್ಷದ ಈ ವ್ಯಕ್ತಿ,

ಭಿಕ್ಷೆ ಬೇಡುವ ನೆಪದಲ್ಲಿ ಕಳೆದ ಕೆಲವು ದಿನಗಳಿಂದ ಗಂಜಾಮ್ ಪ್ರದೇಶದಲ್ಲಿ ಸುತ್ತಾಡುತ್ತಿದ್ದನು. ನೆನ್ನೆ ರಾತ್ರಿ ಮನೆಯೊಂದರಲ್ಲಿ ನುಗ್ಗಿ ಮೊಬೈಲ್ ಕದ್ದಿದ್ದ ಈತ, ಇಂದು ಮತ್ತೊಂದು ಮನೆಯೊಳಗೆ ನುಗ್ಗಲು ಯತ್ನಿಸಿದ ವೇಳೆ ಸಿಕ್ಕಿಬಿದ್ದಿದ್ದಾನೆ. ಸಿಕ್ಕಿಬಿದ್ದ ಕಳ್ಳನಿಗೆ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಧರ್ಮದೇಟು ಕೊಟ್ಟಿದ್ದಾರೆ.

ಎರಡು ದಿನಗಳ ಹಿಂದೇಷ್ಟೆ ಗ್ರಾಮದಲ್ಲಿ ಮನೆಯೊಂದ ರಲ್ಲಿ ಈ ಕಳ್ಳತನ ನಡೆದಿತ್ತು ಆರೋಪಿ ಕಳ್ಳನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು: ನದಿಯಲ್ಲಿ ಈಜಲು ಹೋದ ಮೂವರು ಯುವಕರು ನಾಪತ್ತೆ..!

ರಾಯಚೂರು: ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋದ ಮೂವರು ಯುವಕರು ನಾಪತ್ತೆಯಾಗಿರುವ ದುರ್ಘಟನೆ ನಡೆದಿದೆ. ಹಾಸನ ಜಿಲ್ಲೆಯ ಮೂಲದ ಅಜಿತ್ (20), ಸಚಿನ್ (20) ಮತ್ತು ಪ್ರಮೋದ್ (19) ಎಂಬ ಯುವಕರೇ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಯುವಕರು ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ ಬಳಿಕ ನದಿಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಅವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ಪಡೆದ ಮಂತ್ರಾಲಯದ ಪೊಲೀಸರು ಹಾಗೂ ಸ್ಥಳೀಯ ಈಜುಗಾರರ ತಂಡ ಶೋಧ ಕಾರ್ಯಚರಣೆ ಆರಂಭಿಸಿದ್ದು, ಇದೀಗ ನದಿಯಲ್ಲಿ ಹುಡುಕಾಟ ಮುಂದುವರಿದಿದೆ. ನದಿಯ ನೀರಿನ ತೀವ್ರ ಪ್ರವಾಹ ಶೋಧ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಮೋಕಿಂಗ್’ನಿಂದ ತುಟಿ ಕಪ್ಪಾಗಿದೆಯೇ? ಹಾಗಿದ್ರೆ ಇಲ್ಲಿದೆ ನೋಡಿ ಸೂಪರ್ ಮನೆಮದ್ದು!

0

ತುಟಿಗಳ ಆರೋಗ್ಯ ನಿಮ್ಮ ಮುಖದ ಆಕರ್ಷಣೆಗೆ ಪ್ರಮುಖ ಅಂಶ. ಆದರೆ ಧೂಮಪಾನ ಮಾಡುವುದರಿಂದ ತುಟಿಗಳು ಕಪ್ಪಾಗುವುದು ಸಾಮಾನ್ಯವಾದ ಸಮಸ್ಯೆಯಾಗಿದೆ. ನಿಕೋಟಿನ್ ಮತ್ತು ಹೊಗೆಯಿಂದ ಹೊರಹೊಮ್ಮುವ ಶಾಖದ ಪರಿಣಾಮ, ತುಟಿಗಳ ಸುತ್ತಮುತ್ತಲಿನ ಚರ್ಮದ ಮೆಲನಿನ್ ಪ್ರಮಾಣ ಹೆಚ್ಚಾಗಿ ಬಣ್ಣ ಕತ್ತಲಾಗುತ್ತದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ.

ಆದರೆ ಇದಕ್ಕೆ ಮನೆಮದ್ದುಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು. ಇಲ್ಲಿವೆ ಕೆಲವು ನೈಸರ್ಗಿಕ ಮಾರ್ಗಗಳು:

ಜೇನುತುಪ್ಪ: ಬ್ಯಾಕ್ಟೀರಿಯಾ ವಿರೋಧಿ ಗುಣ ಹೊಂದಿದ್ದು, ತುಟಿಗಳಿಗೆ ಬಣ್ಣವನ್ನು ಹಿಂತಿರುಗಿಸುತ್ತದೆ.

ತೆಂಗಿನ ಎಣ್ಣೆ: ತೇವಾಂಶ ಪೂರೈಸಿ, ಕಪ್ಪಾಗದಂತೆ ತಡೆಯುತ್ತದೆ.

ಅಲೋವೆರಾ: ಚರ್ಮದ ಮೃದುವುತನವನ್ನು ಹೆಚ್ಚಿಸಿ, ಕಪ್ಪು ಬಣ್ಣ ನಿವಾರಣೆ.

ಸೌತೆಕಾಯಿ ಪೇಸ್ಟ್: ಸಿಲಿಕಾ ಸಂಯುಕ್ತಗಳು ತುಟಿಗಳ ವರ್ಣವನ್ನು ಸುಧಾರಿಸುತ್ತವೆ.

ಗ್ರೀನ್ ಟೀ: ಆ್ಯಂಟಿಆಕ್ಸಿಡೆಂಟ್ ಹೊಂದಿದ್ದು, ಹಾನಿಗೊಂಡ ಕೋಶಗಳ ಪುನರ್ ನಿರ್ಮಾಣಕ್ಕೆ ಸಹಾಯ.

ದೈನಂದಿನ ಜೀವನದಲ್ಲಿ ಈ ಸರಳ ಮನೆಮದ್ದುಗಳನ್ನು ಬಳಸುವುದರಿಂದ, ಧೂಮಪಾನದ ಪರಿಣಾಮವಾಗಿ ಕಪ್ಪಾಗಿರುವ ತುಟಿಗಳಿಗೆ ನೈಸರ್ಗಿಕವಾದ ಪರಿಹಾರ ದೊರೆಯಬಹುದು ಎಂದು ತಜ್ಞರು ಸಲಹೆ ನೀಡುತ್ತಿದ್ದಾರೆ.

ಬಹುಭಾಷಾ ನಟ ಕೋಟ ಶ್ರೀನಿವಾಸ ರಾವ್ ನಿಧನ!

ಹೈದರಾಬಾದ್: 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಖ್ಯಾತ ನಟ ಕೋಟ ಶ್ರೀನಿವಾಸ ರಾವ್ (83) ಇಂದು ಬೆಳಗಿನ ಜಾವ 4 ಗಂಟೆಗೆ ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

ಚಿತ್ರರಂಗದಲ್ಲಿ ಬಹುಮುಖ ಪ್ರತಿಭೆಯನ್ನು ಮೆರೆದಿದ್ದ ಕೋಟ ಶ್ರೀನಿವಾಸ ರಾವ್, ತೆಲುಗು, ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ಖಳನಾಯಕ, ಪೋಷಕ ನಟ ಹಾಗೂ ಹಾಸ್ಯಪಾತ್ರಗಳಲ್ಲಿ ಕಾಣಿಸಿಕೊಂಡು ಪ್ರೇಕ್ಷಕರ ಮನಗೆದ್ದಿದ್ದರು.

ಹಿರಿಯ ನಟನ ನಿಧನದಿಂದ ಇಡೀ ಚಿತ್ರರಂಗದಲ್ಲಿ ಶೋಕದ ಛಾಯೆ ಮೂಡಿದೆ. ಮೂಲಗಳ ಪ್ರಕಾರ, ಪುತ್ರನ ನಿಧನದ ನಂತರ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ರಂಗಭೂಮಿಯಿಂದ ಬಂದ ಈ ಕಲಾವಿದ ತಮ್ಮ ವಿಶಿಷ್ಟ ಅಭಿನಯ ಶೈಲಿಯಿಂದ ಸಿನಿಪ್ರೇಮಿಗಳ ಮನಗೆದ್ದಿದ್ದರು. ಖ್ಯಾತ ನಟ ಮೋಹನ್ ಬಾಬು ಅವರೊಂದಿಗೆ ಮಾತ್ರವೇ ಅವರು ಸುಮಾರು 60 ಚಿತ್ರಗಳಲ್ಲಿ ಅಭಿನಯಿಸಿದ್ದರು.

ಲೋಕ ಆದಾಲತ್‌ನಲ್ಲಿ 1474 ಪ್ರಕರಣಗಳ ಇತ್ಯರ್ಥ

0

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಪಟ್ಟಣದ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಆದಾಲತ್‌ನಲ್ಲಿ ಒಟ್ಟು 1830 ಪ್ರಕರಣಗಳ ಪೈಕಿ 1474 ಪ್ರಕರಣಗಳನ್ನು ಉಭಯ ನ್ಯಾಯಾಧೀಶರಾದ ಆರ್.ಉಷಾರಾಣಿ ಮತ್ತು ಎಸ್.ಪಿ. ಮನುಶರ್ಮ ನೇತೃತ್ವದಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.

ರಸ್ತೆ ಅಪಘಾತ, ಚೆಕ್ ಬೌನ್ಸ್, ಬ್ಯಾಂಕ್ ಸಾಲ ವಸೂಲಿ, ಜಮೀನು ವಿವಾದ, ಕೌಟುಂಬಿಕ ದೌರ್ಜನ್ಯ, ಕ್ರಿಮಿನಲ್ ಪ್ರಕರಣ, ಮೋಟಾರು ವಾಹನ, ಸಹಕಾರಿ ಬ್ಯಾಂಕುಗಳು, ನಿವೇಶನ ಮಾರಾಟ ಸೇರಿದಂತೆ ಬಾಕಿ ಇದ್ದ ಇನ್ನಿತರ ಪ್ರಕರಣಗಳನ್ನು ಲೋಕ್ ಆದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಒಟ್ಟು 840 ಪ್ರಕರಣಗಳ ಪೈಕಿ 670 ಪ್ರಕಣಗಳನ್ನು ರಾಜೀ ಸಂಧಾನ ಮೂಲಕ ಇತ್ಯರ್ಥ ಪಡಿಸಿದರೆ, ಕೆಲವನ್ನು ಪರಿಹಾರದ ರೂಪದಲ್ಲಿ ಇತ್ಯರ್ಥಪಡಿಸಲಾಯಿತು. ಕಿರಿಯ ಸಿವಿಲ್ ನ್ಯಾಯಾಲಯದಲ್ಲಿ 990 ಪ್ರಕರಣಗಳ ಪೈಕಿ 804 ಪ್ರಕಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡರೆ ಇನ್ನು ಕೆಲವು ಪರಿಹಾರದ ರೂಪದಲ್ಲಿ ಇತ್ಯರ್ಥಗೊಂಡವು.

ವಕೀಲರ ಸಂಘದ ಅಧ್ಯಕ್ಷ ಟಿ. ವೆಂಕಟೇಶ್, ಉಪಾಧ್ಯಕ್ಷ ಮಂಜುನಾಥ್ ಎಸ್.ಬಾಗಳಿ, ಕಾರ್ಯದರ್ಶಿ ಎಂ. ಮಲ್ಲಪ್ಪ, ಕೆ. ಸಣ್ಣನಿಂಗನಗೌಡ, ಸರ್ಕಾರಿ ಅಭಿಯೋಜಕಿ ಮೀನಾಕ್ಷಿ ಎನ್, ನಿರ್ಮಲ, ಹಿರಿಯ ವಕೀಲರಾದ ಕೃಷ್ಣಮೂರ್ತಿ, ಮತ್ತಿಹಳ್ಳಿ ಅಜ್ಜಣ್ಣ, ರಾಮ್‌ಭಟ್, ಎಸ್. ರುದ್ರಮನಿ, ಬಿ. ಗೋಣಿಬಸಪ್ಪ, ಬಿ. ಹಾಲೇಶ್, ಕೆ.ಎಂ. ಚಂದ್ರಮೌಳಿ, ಆನಂದ ಬಂಡ್ರಿ, ಎಸ್.ಜಿ. ತಿಪ್ಪೇಸ್ವಾಮಿ,ಸೇರಿದಂತೆ ನ್ಯಾಯಾಲಯದ ಸಿಬ್ಬಂದಿಗಳಿದ್ದರು.

ಗ್ರಂಥಗಳು ಬಾಳಿನ ದಾರಿದೀಪ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಗ್ರಂಥಗಳು ನಮ್ಮ ಬಾಳಿನ ದಾರಿದೀಪಗಳು. ಗ್ರಂಥಾಲಯದ ಉಪಯೋಗ ಮಾಡುವುದರಿಂದ ನಮ್ಮ ಜ್ಞಾನ ವೃದ್ಧಿಯಾಗುತ್ತದೆ. ಮನೆಮನೆಗಳಲ್ಲಿಯೂ ಒಂದು ಪುಟ್ಟ ಗ್ರಂಥಾಲಯವಿದ್ದರೆ ಅದು ನಮ್ಮ ಜ್ಞಾನದ ಸಾಂಸ್ಕೃತಿಕ ಪರಂಪರೆಯನ್ನು ಸೂಚಿಸುತ್ತದೆ ಎಂದು ಅಬ್ಬಿಗೆರೆ ಪಿಕೆಪಿಎಸ್ ಅಧ್ಯಕ್ಷ ಗುರುನಾಥ ಅವರೆಡ್ಡಿ ಹೇಳಿದರು.

ಸಮೀಪದ ಅಬ್ಬಿಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ, ಅರಿವು ಕೇಂದ್ರ ಹಾಗೂ ಬಸವರಾಜ ತಳವಾರ ಅಭಿಮಾನಿ ಬಳಗದ ಸಂಯುಕ್ತ ಆಶ್ರಯದಲ್ಲಿ ವಾಲ್ಮಿಕಿ ಸಮಾಜದ ಅಧ್ಯಕ್ಷರಾದ ಬಸವರಾಜ ತಳವಾರ ಇವರ ಜನ್ಮದಿನದ ನಿಮಿತ್ತ ಅಬ್ಬಿಗೇರಿಯ ಅರಿವು ಕೇಂದ್ರದಲ್ಲಿ ನಡೆದ ಪುಸ್ತಕ ದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಂಥಾಲಯಗಳು ಸಂಶೋಧನೆ ಮತ್ತು ವೈಯಕ್ತಿಕ ಅಭಿವೃದ್ಧಿಗೆ ಸಹಾಯಕವಾಗುತ್ತವೆ. ಜನ್ಮ ದಿನಾಚರಣೆಗಳನ್ನು ಹೇಗೆ ಅರ್ಥಪೂರ್ಣವಾಗಿ ಆಚರಿಸಬೇಕೆಂಬುದನ್ನು ಗ್ಯಾರಂಟಿ ಸಮಿತಿ ಸದಸ್ಯ ಬಸವರಾಜ ತಳವಾರ ಅವರು ಅರಿವು ಕೇಂದ್ರಕ್ಕೆ ಗ್ರಂಥ ದಾನ ಮಾಡುವ ಮೂಲಕ ತೋರಿಸಿದ್ದಾರೆ. ಇದು ಎಲ್ಲರಿಗೂ ಮಾದರಿ ಎಂದು ಅಭಿಪ್ರಾಯಪಟ್ಟರು.

ಗ್ರಾ.ಪಂ. ಅಧ್ಯಕ್ಷೆ ಲಲಿತಾ ರಾಠೋಡ, ಬಸವರಾಜ ಪಲ್ಲೇದ, ಸುರೇಶ ಬಸವರಡ್ಡೇರ, ಅಂದಪ್ಪ ವೀರಾಪೂರ, ಮಂಜು ಪಸಾರದ, ಎಂ. ಲೋಹಿತ್, ಮಹದೇವಪ್ಪ ಕಂಬಳಿ, ಜಗದೀಶ ಅವರೆಡ್ಡಿ, ದುರುಗೇಶ ಬಂಡಿವಡ್ಡರರ, ಆನಂದ ಹಿರೇಮನಿ, ಮಲ್ಲಯ್ಯ ಮಠಪತಿ, ಸಚಿನ್ ಪಾಟೀಲ, ಶಿವಪುತ್ರಪ್ಪ ಕೆಂಗಾರ, ರೇಖಾ ಅವರೆಡ್ಡಿ, ರೇಖಾ ವೀರಾಪೂರ, ಅಕ್ಕಮ್ಮ ಡೊಳ್ಳಿನ, ರತ್ನಕ್ಕ ಮಾಳಶೆಟ್ಟಿ, ಚನ್ನಮ್ಮ ತಳವಾರ, ಸಿ.ಆರ್.ಸಿ ಶರಣಪ್ಪ ಮೂಲಿಮನಿ, ವೀರೇಶ ಶಿದ್ನೆಕೊಪ್ಪ, ವಿಜಯಕುಮಾರ ಇಟಗಿ, ಪರಶುರಾಮ ಹಡಪದ ಮುಂತಾದವದ್ದರು. ಆರ್.ಡಿ. ರಂಗಣ್ಣವರ ಸ್ವಾಗತಿಸಿದರು. ಡಿ.ಎಚ್. ಪರಂಗಿ ನಿರೂಪಿಸಿದರು.

error: Content is protected !!