Home Blog

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಣ ನಿರಂತರ ಹರಿಯುವಂತಹ ಪ್ರವಾಹವಾಗಿದೆ. ವಿದ್ಯಾರ್ಥಿಗಳು ನೂತನ ಆವಿಷ್ಕಾರಗಳನ್ನು ತಮ್ಮ ಶೈಕ್ಷಣಿಕ ಅಧ್ಯಯನದಲ್ಲಿ ಅಳವಡಿಸಿಕೊಳ್ಳುವ ಮೂಲಕ ವೈಜ್ಞಾನಿಕ ಮನೋಭಾವನೆ, ಚಿಂತನೆಗಳನ್ನು ಬೆಳೆಸಿಕೊಳ್ಳಬೇಕೆಂದು ಗದುಗಿನ ಯುವ ಧುರೀಣ, ಶಿಕ್ಷಣ ಪ್ರೇಮಿ ಆಂಜನೇಯ ಕಟಗಿ ಹೇಳಿದರು.

ಅವರು ಶುಕ್ರವಾರ ಗದಗ ತಾಲೂಕಿನ ಸೊರಟೂರ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಬಿ.ಜಿ. ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನದಿಂದ ಎಸ್‌ಎಸ್‌ಎಲ್‌ಸಿಯಲ್ಲಿ ಮೊದಲ 5 ಸ್ಥಾನ ಪಡೆದುಕೊಂಡ ಗದಗ ತಾಲೂಕಿನ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು

ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿ ವಿದ್ಯಾರ್ಥಿಗಳಿಗೆ ನೆರವಾಗುತ್ತಿದೆ. ಅದರೊಟ್ಟಿಗೆ ಬಿ.ಜಿ. ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನವೂ ಸಹ ಪ್ರತಿಭಾನ್ವಿತರಿಗೆ ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿರುವದು ಅಭಿನಂದನೀಯ ಎಂದರು.

ಮುಖ್ಯ ಅತಿಥಿ ಡಾ. ಶರಣಬಸವ ಚೌಕಿಮಠ ಮಾತನಾಡಿ, ಗ್ರಾಮೀಣ ಪ್ರದೇಶದ ಅದರಲ್ಲೂ ವಿಶೇಷವಾಗಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿ ಉತ್ತಮ ಫಲಿತಾಂಶ ಪಡೆದುಕೊಂಡ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮೂಲಕ ನಗದು ಪುರಸ್ಕಾರದ ಚೆಕ್, ಪ್ರಮಾಣ ಪತ್ರ, ಕಾಲೇಜ್ ಬ್ಯಾಗ್ ನೀಡಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸುತ್ತಿರುವ ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ ಕಾರ್ಯ ಎಂದು ಬಣ್ಣಿಸಿದರು.

ಪ್ರತಿಭಾನ್ವಿತರಾದ ರಕ್ಷಿತಾ ಪರವಾನಗಿ, ರುಕೀಜಾ ಮುಲ್ಲಾ, ನಂದಿತಾ ಕನ್ಯಾಳ, ಪಲ್ಲವಿ ಕರಿಗಾರ, ಚೈತ್ರಾ ತೋಪಿನ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅಧ್ಯಕ್ಷತೆಯನ್ನು ಎಂ.ಎಸ್. ಮಕಾನದಾರ ವಹಿಸಿದ್ದರು. ವೇದಿಕೆಯ ಮೇಲೆ ಪ್ರತಿಷ್ಠಾನದ ಅಧ್ಯಕ್ಷ ಶಿವಕುಮಾರ ಎಚ್.ಪಾಟೀಲ, ಕಾರ್ಯದರ್ಶಿ ಸುಭಾಸಚಂದ್ರ ಬೆಟ್ಟದೂರ, ಶಿವಾನಂದ ಕತ್ತಿ, ಗಂಗಾಧರ ಮೇಲಗಿರಿ, ಮಹಾದೇವಪ್ಪ ಮಾದಣ್ಣವರ, ವಿನೋದ ಭಾಂಡಗೆ, ಭಾರತಿ ಪಾಟೀಲ, ನೇಹಾ, ಸುಧಾರಾಣಿ ಉಪಸ್ಥಿತರಿದ್ದರು.

ಪಿ.ಜಿ. ನಾಯಕ ಸ್ವಾಗತಿಸಿದರು, ಬಸಪ್ಪ ನೆರ್ತಿ ನಿರೂಪಿಸಿದರು. ಎನ್.ಎಚ್. ದೊಡ್ಡಗೌಡ್ರ ವಂದಿಸಿದರು.

ಯಲಿಶಿರೂರ: ಗದಗ ತಾಲೂಕಿನ ಯಲಿಶಿರೂರ ಗ್ರಾಮದ ದಂಡವ್ವ ನಾಗಪ್ಪ ಯಲಿ ಸರ್ಕಾರಿ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ರಂಜಿತಾ ಪಾಟೀಲ, ಗಾಯತ್ರಿ ಹುಲಕೋಟಿ, ಮೇಘಾ ವಗ್ಗರ, ಯಲ್ಲಪ್ಪ ಹುಲಕೋಟಿ, ನಾಗಲಕ್ಷ್ಮೀ ಜಂಗಮಠ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಅಧ್ಯಕ್ಷತೆಯನ್ನು ಆರ್.ಎಸ್. ಜಲರಡ್ಡಿ ವಹಿಸಿದ್ದರು. ವೇದಿಕೆಯ ಮೇಲೆ ಡಾ. ಶರಣಬಸವ ಚೌಕಿಮಠ, ಪ್ರತಿಷ್ಠಾನದ ಅಧ್ಯಕ್ಷ ಶಿವಕುಮಾರ ಎಚ್.ಪಾಟೀಲ, ಕಾರ್ಯದರ್ಶಿ ಸುಭಾಸಚಂದ್ರ ಬೆಟ್ಟದೂರ, ಕೃಷ್ಣಾ ಈರಡ್ಡಿ, ಸೋಮಶೇಖರ ಯರಡ್ಡಿ, ಶಿವಾನಂದ ಕತ್ತಿ, ಜಿ.ಎಂ. ಫಿರಂಗಿ, ಭಾರತಿ ಪಾಟೀಲ, ನೇಹಾ, ಸುಧಾರಾಣಿ, ಶಹಬಾಜ್, ಗ್ರಾಮದ ಹಿರಿಯರಾದ ಹೊನ್ನಪ್ಪನವರ ಉಪಸ್ಥಿತರಿದ್ದರು. ಸೃಷ್ಟಿ ಶಿರಹಟ್ಟಿ ಪ್ರಾರ್ಥಿಸಿದರು, ಜಗದೀಶ ದಿನ್ನಿ ಸ್ವಾಗತಿಸಿದರು, ಜೆ.ಚಂದ್ರಶೇಖರ ನಿರೂಪಿಸಿದರು. ಎಸ್.ಕೆ. ಹಿರೇಮಠ ವಂದಿಸಿದರು.

ಶಿರುಂಜ ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ಶಫಿ ನದಾಫ್, ಭೀಮಪ್ಪ ಹಿತ್ತಲಮನಿ, ಸುಮಾ ಕಂಬಳಿ, ಈಶ್ವರಯ್ಯ ಹಿರೇಮಠ, ಸೃಷ್ಠಿ ಗೌಳೇರ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅಧ್ಯಕ್ಷತೆಯನ್ನು ಪಾರ್ವತಿ ವಸ್ತ್ರದ ವಹಿಸಿದ್ದರು. ರವಿರಾಜ ಪವಾರ ಸ್ವಾಗತಿಸಿದರು, ದಿಲೀಪ ಜಮಾದಾರ ನಿರೂಪಿಸಿದರು. ಎಂ.ಎ. ಹಿರೇಮಠ ವಂದಿಸಿದರು.

ಜುಲೈ 10ರಂದು `ಶ್ರೀ ಗುರು ರೇವಣಸಿದ್ಧೇಶ್ವರ ಸದ್ಭಾವನಾ ಸಿರಿ’ ಪ್ರಶಸ್ತಿ ಪ್ರದಾನ ಸಮಾರಂಭ

ವಿಜಯಸಾಕ್ಷಿ ಸುದ್ದಿ, ಕಡೇನಂದಿಹಳ್ಳಿ: ಕಡೇನಂದಿಹಳ್ಳಿ ಶ್ರೀ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದ ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳವರ ದ್ವಾದಶ ಪಟ್ಟಾಧಿಕಾರ ವರ್ಧಂತಿ ವರ್ಷಾಚರಣೆ ಪ್ರಯುಕ್ತ ‘ಶ್ರೀ ಗುರು ರೇವಣಸಿದ್ಧೇಶ್ವರ ಸದ್ಭಾವನಾ ಸಿರಿ ಪ್ರಶಸ್ತಿ’ ಪ್ರದಾನ ಹಾಗೂ ಗುರು ಪೂರ್ಣಿಮಾ ಧರ್ಮ ಸಮಾರಂಭ ಜುಲೈ 10ರಂದು ಸಂಜೆ 4.30ಕ್ಕೆ ಜರುಗಲಿದೆ.

ಪ್ರಶಸ್ತಿ ಪ್ರದಾನ ಮಾಡಲು ಶಿವಮೊಗ್ಗ ಸಂಸದರಾದ ಬಿ.ವೈ. ರಾಘವೇಂದ್ರ ಹಾಗೂ ಹಿರೇಕೆರೂರ ಶಾಸಕರಾದ ಯು.ಬಿ. ಬಣಕಾರ ಆಗಮಿಸುವರು. ಮುಖ್ಯ ಅತಿಥಿಗಳಾಗಿ ಕಡೇನಂದಿಹಳ್ಳಿ ಶ್ರೀ ಹೋಳಿಹಂಪೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಬಸವರಾಜಪ್ಪ ಚನ್ನಳ್ಳೇರ ಹಾಗೂ ಗ್ರಾ.ಪಂ ಅಧ್ಯಕ್ಷ ಲಿಂಗರಾಜ ಚನ್ನಳ್ಳಿ ಭಾಗವಹಿಸುವರು.

ದುಗ್ಲಿ-ಕಡೇನಂದಿಹಳ್ಳಿ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು, ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯ ಸ್ವಾಮಿಗಳು, ಕನ್ನೂರು-ಸಿಂಧನೂರು ಸೋಮನಾಥ ಶಿವಾಚಾರ್ಯ ಸ್ವಾಮಿಗಳು, ಕಾರ್ಜುವಳ್ಳಿ ಸದಾಶಿವ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸುವರು.

ರಾಜಕೀಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಬಿ.ಹೆಚ್. ಬನ್ನಿಕೋಡ, ಅಂಬಾರಗೊಪ್ಪದ ಮಾಜಿ ಪ್ರಧಾನರಾದ ಎನ್.ಶೇಖರಪ್ಪ, ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಿಕಾರಿಪುರದ ಕೊಂಟೋಜಿರಾವ್ ಆರ್.ಬಿಸಲಹಳ್ಳಿ ಜೀವರಾಜ ಛತ್ರದ, ಕಲಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಿಕಾರಿಪುರದ ಡಾ. ಈಶ್ವರ್‌ರಾವ್ ಎ., ಕುಡುಪಲಿಯ ರಮ್ಯಾ ವಾಗೀಶ ಹಿರೇಮಠ, ಕ್ರೀಡಾ ಕ್ಷೇತ್ರದ ಬನ್ನಿಹಟ್ಟಿಯ ಮಂಜುಳಾ ಲಮಾಣಿ, ಶಿಕಾರಿಪುರದ ಅಂಕಿತ, ಆರಕ್ಷಕ ಕ್ಷೇತ್ರದ ಹಿರೇಕೆರೂರು ವೃತ್ತ ನಿರೀಕ್ಷಕ ಬಸವರಾಜ ಪಿ.ಎಸ್., ಶಿಕಾರಿಪುರದ ಆರಕ್ಷಕ ಶಂಕರಗೌಡ ಎನ್.ಹೆಚ್ ಹಾಗೂ ಪರಿಸರ ಸಂರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಿಕಾರಿಪುರದ ಪರೋಕಾರಂ ಕುಟುಂಬ ಮತ್ತು ಬೆಲವಂತನಕೊಪ್ಪದ ವನ್ಯಜೀವಿ ಸಂರಕ್ಷಕ ಅರುಣ್ ಕುಮಾರ್ ಜಿ.ಎನ್ ಇವರಿಗೆ ಶ್ರೀ ಗುರು ರೇವಣಸಿದ್ಧೇಶ್ವರ ಸದ್ಭಾವನಾ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇದೇ ಸಂದರ್ಭದಲ್ಲಿ ಹೊಸನಗರದ ಮಂಜುನಾಥ ಭಟ್, ಶಿಕಾರಿಪುರದ ಟಿ.ಎಸ್. ದೇವೇಂದ್ರಪ್ಪ, ಬೆಂಗಳೂರಿನ ಅರುಣಕುಮಾರ್ ಎಂ., ಶಿವಲಿಂಗಯ್ಯ ಅಲ್ಲಯ್ಯನವರಮಠ, ವೀಣಾ ಹಿರೇಮಠ, ಅಂಕಿತ ಮತ್ತು ವೇ. ಗುರುಶಾಂತಯ್ಯ ಕಲ್ಯಾಣಮಠ ಇವರಿಗೆ ಗೌರವ ಗುರುರಕ್ಷೆ ನೀಡಲಾಗುವುದು ಎಂದು ಶ್ರೀ ಗುರು ರೇವಣಸಿದ್ದೇಶ್ವರ ಜನಕಲ್ಯಾಣ ಟ್ರಸ್ಟಿನ ಪ್ರಕಟಣೆ ತಿಳಿಸಿದೆ.

ಭತ್ತದ ಗದ್ದೆಗೆ ನುಗ್ಗಿದ KSRTC ಬಸ್: ಅಪಾಯದಿಂದ ಪಾರಾದ 35 ಪ್ರಯಾಣಿಕರು!

ಮಂಡ್ಯ: KSRTC ಬಸ್ಸೊಂದು ಭತ್ತದ ಗದ್ದೆಗೆ ನುಗ್ಗಿದ ಪರಿಣಾಮ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲ್ಲೂಕಿನ ಶಿವಳ್ಳಿ- ಹಾಡ್ಯ ನಡುವೆ ಜರುಗಿದೆ.

ಮಂಡ್ಯದಿಂದ ಪಾಂಡವಪುರಕ್ಕೆ ತೆರಳುತ್ತಿದ್ದ ವೇಳೆ, ಎದುರಿನಿಂದ ಬರುತ್ತಿದ್ದ ಮತ್ತೊಂದು ವಾಹನಕ್ಕೆ ಜಾಗ ಬಿಡುವ ಪ್ರಯತ್ನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ನುಗ್ಗಿ ಪಲ್ಟಿಯಾಗಿದೆ.

ಬಸ್‌ನಲ್ಲಿ 35 ಪ್ರಯಾಣಿಕರು ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎಲ್ಲರನ್ನು ಸ್ಥಳೀಯರ ನೆರವಿನಿಂದ ಆಂಬುಲೆನ್ಸ್ ಮತ್ತು ಖಾಸಗಿ ವಾಹನಗಳ ಮೂಲಕ ಮಂಡ್ಯ ಜಿಲ್ಲಾಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ. ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದ ಕೆಲವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಶಿವಳ್ಳಿ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅಧ್ಯಕ್ಷತೆಯಲ್ಲಿ ಶನಿವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮೀ, ಅನ್ನ ಭಾಗ್ಯ, ಗೃಹ ಜ್ಯೋತಿ ಮತ್ತು ಯುವ ನಿಧಿ ಕಾರ್ಯಕ್ರಮಗಳ ಕುರಿತು ಇಲಾಖೆ ಅಧಿಕಾರಿಗಳು ಪ್ರಗತಿ ವರದಿ ಸಲ್ಲಿಸಿದರು. ಪ್ರಾಧಿಕಾರದ ಸದಸ್ಯರು ಚರ್ಚಿಸಿ, ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಜಿಲ್ಲಾ ಪ್ರಾಧಿಕಾರದ ಉಪಾಧ್ಯಕ್ಷರು, ಸದಸ್ಯರು, ಪಂಚ ಗ್ಯಾರಂಟಿ ಯೋಜನೆಗಳ ಅಧಿಕಾರಿಗಳು ವೇದಿಕೆಯಲ್ಲಿದ್ದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ ಸ್ವಾಗತಿಸಿ, ಸಭೆ ನಿರ್ವಹಿಸಿದರು.

ಕಲಿಕೆಯ ಅವಧಿಯಲ್ಲಿ ಉತ್ತಮ ಜ್ಞಾನ ಹೊಂದಿ

ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳೇ ನಮ್ಮ ದೇಶದ ಭವ್ಯ ಭವಿಷ್ಯವಾಗಿದ್ದಾರೆ. ಓದುವ ಹಂತದಲ್ಲಿ ಉತ್ತಮವಾಗಿ ಅಧ್ಯಯನ ಮಾಡಿ ಜೀವನದಲ್ಲಿ ಯಶಸ್ಸು ನಿಮ್ಮದಾಗಿಸಿಕೊಳ್ಳಿ ಎಂದು ರಾಜ್ಯದ ಕಾನೂನು, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಕರೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶನಿವಾರ ಮಲ್ಲಸಮುದ್ರದ ಮೊರಾರ್ಜಿ ದೇಸಾಯಿ ವಸತಿಯುತ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗುದು ಬಹುಮಾನ ವಿತರಿಸಿ ಸಚಿವರು ಮಾತನಾಡಿದರು.

ಭಾರತದ ಭವ್ಯ ಭವಿಷ್ಯ ನಿರ್ಮಾಣದಲ್ಲಿ ಇಂದಿನ ಯುವ ಪೀಳಿಗೆ, ವಿದ್ಯಾರ್ಥಿಗಳ ಪಾತ್ರ ಅಪಾರವಿದೆ. ಕಲಿಯುವ ಅವಧಿಯನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಜ್ಞಾನ ಹೊಂದಿ. ಮೊರಾರ್ಜಿ ದೇಸಾಯಿಯವರು ಇಂದಿನ ಬಾಂಬೆ ರಾಜ್ಯದ ಮುಖ್ಯಮಂತ್ರಿಗಳಾಗಿ, ಆರ್ಥಿಕ ಸಚಿವರಾಗಿ ಅಲ್ಲದೆ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದಾರೆ. ತಮ್ಮ ಆಡಳಿತ ಅವಧಿಯಲ್ಲಿ ಅನೇಕ ಮಹತ್ವದ ನಿರ್ಣಯಗಳನ್ನು ಕೈಗೊಳ್ಳುವ ಮೂಲಕ ಸುಭದ್ರ ರಾಷ್ಟ್ರಕ್ಕಾಗಿ ಕಾರ್ಯನಿರ್ವಹಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ನಿರಂತರವಾಗಿ ಪ್ರಾಮಾಣಿಕ ಪ್ರಯತ್ನ ಇದ್ದಲ್ಲಿ ಯಶಸ್ಸು ನಿಮ್ಮದಾಗಲಿದೆ. ಶೇ. 85ಕ್ಕಿಂತ ಅಧಿಕ ಫಲಿತಾಂಶ ಪಡೆಯುವದು ಸಣ್ಣ ಮಾತಲ್ಲ. ಎಲ್ಲರೂ ಉತ್ತಮ ಸಾಧನೆಗೈದಿದ್ದೀರಿ ಎಂದರಲ್ಲದೆ, ಇದಕ್ಕೆ ಕಾರಣರಾದ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗಳಿಗೆ ಅಭಿನಂದನೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಉತ್ತಮ ಫಲಿತಾಂಶಕ್ಕೆ ಕಾರಣರಾದ ಮಲ್ಲಸಮುದ್ರ ಪದವಿಪೂರ್ವ ಕಾಲೇಜಿನ ಬೋಧಕ ಸಿಬ್ಬಂದಿಗಳನ್ನು ಸಚಿವರು ಸನ್ಮಾನಿಸಿದರು. ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ರವಿ ಗುಂಜೀಕರ, ಸಿದ್ದು ಪಾಟೀಲ ಸೇರಿದಂತೆ ಕಾಲೇಜಿನ ಪ್ರಾಚಾರ್ಯರು, ಅಸುಂಡಿ ಗ್ರಾ.ಪಂ ಅಧ್ಯಕ್ಷರು, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

“2024-25ನೇ ಸಾಲಿನಲ್ಲಿ ಮಲ್ಲಸಮುದ್ರ ಶಾಲೆಯಲ್ಲಿ 80 ವಿದ್ಯಾರ್ಥಿಗಳ ಪೈಕಿ 43 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆಯುವ ಮೂಲಕ ಸರ್ಕಾರದ 10 ಸಾವಿರ ರೂ ನಗದು ಬಹುಮಾನಕ್ಕೆ ಭಾಜನರಾಗಿದ್ದೀರಿ. ಅಲ್ಲದೆ, ಶೇ. 100ರಷ್ಟು ಫಲಿತಾಂಶ ಪಡೆದಿದ್ದು ಅಭಿನಂದನೀಯ. ರಾಜ್ಯದ ಕ್ರೈಸ್ ಸಂಸ್ಥೆಯಯಡಿ 78 ಕಾಲೇಜುಗಳಿದ್ದು, ಮಲ್ಲಸಮುದ್ರದ ಕಾಲೇಜು ರಾಜ್ಯದಲ್ಲಿಯೇ 3ನೇ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯ. ಮುಂದಿನ ವರ್ಷ ಇಲ್ಲಿ ಕಲಿಯುವ ಎಲ್ಲ ಮಕ್ಕಳು ಸಹ ಡಿಸ್ಟಿಂಕ್ಷನ್ ಪಡೆದು ಉತ್ತೀರ್ಣರಾಗಬೇಕು. ಈ ನಿಟ್ಟಿನಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ ಕಾರ್ಯನಿರ್ವಹಿಸುವಂತಾಗಲಿ”

– ಎಚ್.ಕೆ. ಪಾಟೀಲ.

ಜಿಲ್ಲಾ ಉಸ್ತುವಾರಿ ಸಚಿವರು.

ವೈದ್ಯರ ಕರ್ತವ್ಯನಿಷ್ಠೆ ಶ್ರೇಷ್ಠವಾಗಿದೆ

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಸ್ತುತ ಸಮಾಜದಲ್ಲಿ ವೈದ್ಯಕೀಯ ಸೇವೆ ಬಹಳ ಮುಖ್ಯ. ವೈದ್ಯಕೀಯ ಸೇವೆ ನೀಡುವಲ್ಲಿ ವೈದ್ಯರು ಪ್ರಮುಖ ಪಾತ್ರ ವಹಿಸುತ್ತಾರೆ. ಒಂದು ಪ್ರಾಣ ಉಳಿಸುವಲ್ಲಿ ವೈದ್ಯರು ತೋರುವ ಕರ್ತವ್ಯನಿಷ್ಠೆ ಬಹಳ ಮುಖ್ಯವಾದದ್ದು ಎಂದು ಮಹಿಳಾ ವೈದ್ಯಕೀಯ ಸಂಘದ ಅಧ್ಯಕ್ಷರಾದ ಸೋನಿಯಾ ಕರೂರ ಹೇಳಿದರು.

ಅವರು ನವಜ್ಯೋತಿ ವ್ಯಸನಮುಕ್ತಿ ಕೇಂದ್ರದಲ್ಲಿ ನಡೆದ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದರು.

ಸಮಯದ ಹಂಗಿಲ್ಲದೆ ರೋಗಿಯೊಬ್ಬನ ಆರೈಕೆ ಮಾಡುವ ವೈದ್ಯರ ಸೇವೆ, ತ್ಯಾಗ, ಸಮಯ ಪ್ರಜ್ಞೆ ಸಮಾಜಕ್ಕೆ ಬಹಳ ಅವಶ್ಯವಾಗಿದೆ. ನಾನೂ ಕೂಡ ವೈದ್ಯಕೀಯ ವೃತ್ತಿಯಲ್ಲಿದ್ದು, ಈ ವೃತ್ತಿಯ ಎಲ್ಲಾ ಮಜಲುಗಳನ್ನು ಕಂಡು ಈ ವೃತ್ತಿಯಲ್ಲಿರುವವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಹೆಮ್ಮೆ ಇದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಸವರಾಜ ಬೇವಿನಮರದ ಮಾತನಾಡಿ, ಎಷ್ಟೋ ಜನರು ಇವತ್ತು ವೈದರಿಂದ ಮರುಜೀವ ಪಡೆದು ಬದುಕಿದ್ದರೆ. ಅಂತಹ ವೈದರ ಸೇವೆಯನ್ನು ಸಮಾಜ ನೆನಪಿಡಬೇಕು ಎಂದು ಹೇಳಿದರು.

ಭಾಗ್ಯಲಕ್ಷ್ಮೀ ನವಲಗುಂದ್ ಸ್ವಾಗತಿಸಿದರು. ಶಿವಾನಂದ ಹಡಗಲಿ ನಿರೂಪಿಸಿದರು. ಶ್ವೇತಾ ಕೋಲೇಕರ್ ವಂದಿಸಿದರು. ಸಂಸ್ಥೆಯ ಸಿಬ್ಬಂದಿ ಹಾಗೂ ಚಿಕಿತ್ಸಾರ್ಥಿಗಳು ಹಾಜರಿದ್ದರು.

ಮಲ್ಲಸಮುದ್ರ ರಸ್ತೆ ನಿರ್ಮಾಣ ರಾಜ್ಯಕ್ಕೆ ಮಾದರಿಯಾಗಲಿ

ವಿಜಯಸಾಕ್ಷಿ ಸುದ್ದಿ, ಗದಗ: ಮಲ್ಲಸಮುದ್ರದ ಪೊಲೀಸ್ ಮೀಸಲು ಮೈದಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯು ಗುಣಮಟ್ಟದಲ್ಲಿ ರಾಜ್ಯಕ್ಕೆ ಮಾದರಿಯಾಗುವಂತೆ ನಿರ್ಮಿಸಬೇಕು ಎಂದು ರಾಜ್ಯದ ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಅವರು ಶನಿವಾರ ಪೊಲೀಸ್ ಇಲಾಖೆ ಆಯೋಜಿಸಿದ್ದ ಗದಗಿನ ಮಲ್ಲಸಮುದ್ರದ ಪೊಲೀಸ್ ಮೀಸಲು ಕಚೇರಿ ಮೈದಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಗದಗ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ `ಥರ್ಡ್ ಐ’ ಯೋಜನೆ ಜಾರಿಗೊಳಿಸುವ ಮೂಲಕ ಜಿಲ್ಲಾದ್ಯಂತ ಕಾನೂನು ಪಾಲನೆಗೆ ಸಹಕಾರಿಯಾಗಿದೆ. ಸಾರ್ವಜನಿಕರು ನಿಯಮ ಪಾಲನೆಯೊಂದಿಗೆ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. ವಿವಿಧ ಅಪರಾಧ ಪ್ರಕರಣಗಳನ್ನು ಭೇದಿಸಲೂ ಪೊಲೀಸರಿಗೆ ಸಹಕಾರಿಯಾಗಿದೆ. ಆ ಮೂಲಕ ಪ್ರಕರಣಗಳ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇಂದು ಪೊಲೀಸ್ ಇಲಾಖೆಗೆ ಎರಡು ವಾಹನಗಳನ್ನು ಹಸ್ತಾಂತರಿಸಲಾಗಿದೆ. ಒಂದು ವಾಹನವನ್ನು ರಾಜ್ಯ ಖನಿಜ ಅಭಿವೃದ್ಧಿ ನಿಗಮದಿಂದ ಹಾಗೂ ಇನ್ನೊಂದನ್ನು ವಿ.ಪ ಸದಸ್ಯ ಎಸ್.ವಿ. ಸಂಕನೂರರ ಪ್ರದೇಶಾಭಿವೃದ್ಧಿ ಅನುದಾನದಿಂದ ಒದಗಿಸಿರುವುದು ಇಲಾಖೆಗೆ ಸಹಕಾರಿಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿದ್ದ ಅಡೆತಡೆಗಳನ್ನು ನಿವಾರಿಸಿದ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿಗೆ ಸಚಿವರು ಪೊಲೀಸ್ ಇಲಾಖೆಯಿಂದ ಅಭಿನಂದನಾ ಪತ್ರ ನೀಡಿ ಗೌರವಿಸಿದರು. ರಸ್ತೆ ನಿರ್ಮಾಣಕ್ಕೆ ಸಹಕಾರ ನೀಡಿದ ಗಣ್ಯರಿಗೆ ಗೌರವ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಉಪಸ್ಥಿತರಿದ್ದರು.

ಜಿಲ್ಲಾ ಪೊಲೀಸ್ ಪರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿ, 1.6 ಕಿಲೋಮೀಟರ್ ರಸ್ತೆ ನಿರ್ಮಾಣಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಒಂದು ಕೋಟಿ ರೂ, ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 50 ಲಕ್ಷ ರೂ ನೀಡುವ ಮೂಲಕ ರಸ್ತೆ ನಿರ್ಮಾಣಕ್ಕೆ ಸಚಿವ ಎಚ್.ಕೆ. ಪಾಟೀಲ್ ಅನುದಾನ ಒದಗಿಸಿದ್ದಾರೆ ಎಂದರು.

ಶಾಲಾ ಸಂಸತ್ತು ರಚನೆ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ. 1ರಲ್ಲಿ 2025/26ನೇ ಸಾಲಿನ ಶಾಲಾ ಸಂಸತ್ತು ರಚನೆ ಮಾಡಲಾಯಿತು.

ಪ್ರಧಾನ ಮಂತ್ರಿಯಾಗಿ ಮಹ್ಮದಾದಿಲ್ ಮಾಣಿಕಬಾಯಿ, ಉಪಪ್ರಧಾನ ಮಂತ್ರಿಯಾಗಿ ಮನೋಜ ಸಿದ್ದನಗೌಡರ, ಶಿಕ್ಷಣ ಮಂತ್ರಿ ಜ್ಯೋತಿ ಸಂಶಿ, ಪ್ರವಾಸ ಮತ್ತು ಕಾನೂನು ಮಂತ್ರಿ ಹರೀಶ ಜಾಧಾವ, ಬಿಸಿ ಊಟ ಮಂತ್ರಿ ಅಭಯ ಗಾಯಕವಾಡ, ನೀರಾವರಿ ಮಂತ್ರಿ ಪ್ರದೀಪ ಬಸಿಡೋಣಿ, ಸಂಸ್ಕೃತಿಕ ಮಂತ್ರಿ ತಮನ್‌ತಾಜ್ ಖಲೀಪನವರ, ಪ್ರರ್ಥನಾ ಮಂತ್ರಿ ಅಮಿತ ಅಳಗವಾಡಿ, ಕ್ರೀಡಾ ಮಂತ್ರಿ ಮಹ್ಮದ ಹನೀಫ್ ಎಳವತ್ತಿ, ಅರಣ್ಯ ಮಂತ್ರಿ ಪೂಜಾ ಮಡೆಪ್ಪನವರ, ಆರೋಗ್ಯ ಮಂತ್ರಿ ಅಮೃತಾ ಕರಿಗಾರ, ಸ್ವಚ್ಛತಾ ಮಂತ್ರಿಯಾಗಿ ತೈಸಿನ ದುರ್ಗಿಗುಡಿ ಆಯ್ಕೆಯಾದರು.

ಶಾಲಾ ಪ್ರಧಾನ ಗುರು ಪಿ.ಬಿ.

ಸಚಿವ ಎಚ್.ಕೆ. ಪಾಟೀಲರಿಂದ ರಾಮೇಶ್ವರ ದೇವಸ್ಥಾನ ವೀಕ್ಷಣೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಸೋಮೇಶ್ವರ ರಸ್ತೆಯಲ್ಲಿರುವ ಐತಿಹಾಸಿಕ ರಾಮೇಶ್ವರ ದೇವಸ್ಥಾನಕ್ಕೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ಶನಿವಾರ ಭೇಟಿ ನೀಡಿ ವೀಕ್ಷಿಸಿದರು.

ಗದಗ ನಗರ ಸೇರಿದಂತೆ ಜಿಲ್ಲೆಯಲ್ಲಿ ಅನೇಕ ಐತಿಹಾಸಿಕ, ಮಹತ್ವದ ದೇವಸ್ಥಾನಗಳಿವೆ. ಅವುಗಳ ಜೀರ್ಣೋದ್ಧಾರ ಮಾಡುವ ಮೂಲಕ ಯುವಪೀಳಿಗೆಗೆ ಇತಿಹಾಸದ ಪರಿಚಯ ಮಾಡಿಸಬೇಕಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ರಾಮೇಶ್ವರ ದೇವಸ್ಥಾನದ ಇತಿಹಾಸ ಸೇರಿದಂತೆ ಎಲ್ಲ ವಿಷಯಗಳ ಕುರಿತು ತಿಳಿಸಿಕೊಡುವ ಪ್ರಯತ್ನಗಳಾಗಬೇಕಿದೆ. ಸರ್ಕಾರದಿಂದ ಜೀರ್ಣೋದ್ಧಾರ ಕೈಗೊಳ್ಳುವ ಮೂಲಕ ಮೂಲ ದೇವಸ್ಥಾನದ ರಚನೆಗೆ ತೊಂದರೆಯಾಗದಂತೆ ಮಾಡಲು ಪ್ರಯತ್ನ ಸಾಗಿದೆ. ದೇವಸ್ಥಾನ ಪ್ರದೇಶದ ಸಾರ್ವಜನಿಕರು ಸೂಕ್ತ ಸಹಕಾರ ನೀಡಬೇಕು ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಪ್ರಭು ಬುರಬುರೆ, ಸಿದ್ದು ಪಾಟೀಲ, ಎಸ್.ಎನ್. ಬಳ್ಳಾರಿ, ರವಿ ಮೂಲಿಮನಿ, ಫಾರೂಕ್ ಹುಬ್ಬಳ್ಳಿ, ಅ.ದ. ಕಟ್ಟಿಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕರವೇ ಮಹಿಳಾ ಅಧ್ಯಕ್ಷರ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾಧ್ಯಕ್ಷರಾದ ಹನಮಂತಪ್ಪ ಎಚ್.ಅಬ್ಬಿಗೇರಿಯವರು ಲಲಿತಾ ಉ.ಜಾಧವ ಇವರ ನಾಡು, ನುಡಿ, ನೆಲ, ಜಲ, ಹೋರಾಟವನ್ನು ಮೆಚ್ಚಿ ಇವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಗದಗ ತಾಲೂಕಿನ ಕದಡಿ ಗ್ರಾಮ ಘಟಕದ ಮಹಿಳಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶಿಸಿದ್ದಾರೆ.

error: Content is protected !!