Home Blog

ಪುಟ್ಟರಾಜ ಗವಾಯಿಗಳ ಮಠದ ಆಡಳಿತ ತನಿಖೆಯಾಗಲಿ: ಅನಿಲ ಮೆಣಸಿನಕಾಯಿ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕದ ಹೆಮ್ಮೆಯ ಆಧ್ಯಾತ್ಮಿಕ ಹಾಗೂ ಸಂಗೀತ ಪರಂಪರೆಯ ಪ್ರತೀಕವಾಗಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮ ಹಾಗೂ ಪುಟ್ಟರಾಜ ಗವಾಯಿಗಳ ಮಠದ ಆಡಳಿತ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮೂಡಿರುವ ಅನುಮಾನಗಳನ್ನು ನಿವಾರಿಸಲು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಅನಿಲ ಮೆಣಸಿನಕಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಡವರು, ಅನಾಥರು ಹಾಗೂ ವಿಶೇಷವಾಗಿ ದೃಷ್ಟಿಹೀನರಿಗೆ ಉಚಿತ ಶಿಕ್ಷಣ, ವಸತಿ ಮತ್ತು ಸಂಗೀತ ಶಿಕ್ಷಣ ನೀಡುವ ಮೂಲಕ ಮಠವು ಸಮಾಜಕ್ಕೆ ಅಪಾರ ಸೇವೆ ಸಲ್ಲಿಸಿದೆ. ಇಂತಹ ಪವಿತ್ರ ಸಂಸ್ಥೆಯ ಘನತೆ ಮತ್ತು ಭಕ್ತರ ನಂಬಿಕೆಗೆ ಯಾವುದೇ ಧಕ್ಕೆಯಾಗಬಾರದು ಎಂದು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಠದ ಆಡಳಿತ, ಆರ್ಥಿಕ ವ್ಯವಹಾರಗಳು ಹಾಗೂ ಆಸ್ತಿಗಳ ನಿರ್ವಹಣೆ ಕುರಿತಂತೆ ವಿವಿಧ ರೀತಿಯ ಚರ್ಚೆಗಳು ಮತ್ತು ಅನುಮಾನಗಳು ವ್ಯಕ್ತವಾಗುತ್ತಿದ್ದು, ಇದರಿಂದ ಭಕ್ತರಲ್ಲಿ ಆತಂಕ ಮೂಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮಠದ ಆಡಳಿತ, ಆರ್ಥಿಕ ವ್ಯವಹಾರಗಳು ಹಾಗೂ ಆಸ್ತಿ ನಿರ್ವಹಣೆ ಕುರಿತು ಸಮಗ್ರ ತನಿಖೆ ನಡೆಸಬೇಕು. ಅಗತ್ಯವಿದ್ದಲ್ಲಿ ಸಂಬಂಧಿತ ತನಿಖಾ ಸಂಸ್ಥೆಗಳ ಮೂಲಕ ಪರಿಶೀಲನೆ ನಡೆಸಿ, ಸತ್ಯಾಂಶವನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಒತ್ತಾಯಿಸಿದ್ದಾರೆ.

ಮಠದ ಮೂಲ ಉದ್ದೇಶಗಳಾದ ಶಿಕ್ಷಣ, ಅನ್ನದಾಸೋಹ, ಸಂಗೀತ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಜೊತೆಗೆ ಮಠದ ಗೌರವ, ಪರಂಪರೆ ಹಾಗೂ ಭಕ್ತರ ನಂಬಿಕೆಯನ್ನು ಉಳಿಸುವ ಪಾರದರ್ಶಕ ಆಡಳಿತ ವ್ಯವಸ್ಥೆ ಜಾರಿಯಾಗಬೇಕು ಎಂದು ತಿಳಿಸಿದ್ದಾರೆ.

ತಪ್ಪುಗಳು ಕಂಡುಬಂದರೆ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯಾವುದೇ ಅಕ್ರಮ ಕಂಡುಬರದಿದ್ದರೆ ಸಾರ್ವಜನಿಕರಲ್ಲಿ ಸ್ಪಷ್ಟತೆ ಮೂಡಿಸುವ ಅಧಿಕೃತ ವರದಿಯನ್ನು ಪ್ರಕಟಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಇದು ಯಾವುದೇ ವ್ಯಕ್ತಿ ಅಥವಾ ಸಮುದಾಯದ ವಿರುದ್ಧದ ಆರೋಪವಲ್ಲ. ಪುಟ್ಟರಾಜ ಗವಾಯಿಗಳ ಆದರ್ಶ, ಮಠದ ಪಾವಿತ್ರ್ಯ ಮತ್ತು ಲಕ್ಷಾಂತರ ಭಕ್ತರ ನಂಬಿಕೆಯನ್ನು ಉಳಿಸುವ ಉದ್ದೇಶದಿಂದ ಪಾರದರ್ಶಕ ತನಿಖೆಗೆ ಆಗ್ರಹಿಸುತ್ತಿದ್ದೇವೆ.”

– ಅನಿಲ ಮೆಣಸಿನಕಾಯಿ

ವೀರೇಶ್ವರ ಪುಣ್ಯಾಶ್ರಮದ ಅವ್ಯವಹಾರ ಆರೋಪ: ಸಮಗ್ರ ತನಿಖೆಗೆ ಹಿಂದೂ ಸಂಘಟನೆಗಳ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ನಾಡಿನ ಹೆಮ್ಮೆಯ ಆಧ್ಯಾತ್ಮಿಕ ಹಾಗೂ ಸಂಗೀತ ಪರಂಪರೆಯ ಪ್ರತೀಕವಾಗಿರುವ ವೀರೇಶ್ವರ ಪುಣ್ಯಾಶ್ರಮದಲ್ಲಿ ಕಳೆದ ಕೆಲವು ವರ್ಷಗಳಿಂದ ನಡೆದಿರುವುದಾಗಿ ಆರೋಪಿಸಲಾಗುತ್ತಿರುವ ಆಡಳಿತಾತ್ಮಕ ಹಾಗೂ ಹಣಕಾಸು ಅವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಆಶ್ರಮವನ್ನು ಸರ್ಕಾರದ ವಶಕ್ಕೆ ಪಡೆದು ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಆಗ್ರಹಿಸಿ ಹಿಂದೂ ಸಂಘಟನೆಗಳ ಹೋರಾಟಗಾರ ರಾಜು ಖಾನಪ್ಪನವರ ನೇತೃತ್ವದಲ್ಲಿ ಸೋಮವಾರ ನೂರಾರು ಕಾರ್ಯಕರ್ತರು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.

ನಾಡಿನ ಹೆಮ್ಮೆಯ ಆಧ್ಯಾತ್ಮಿಕ ಹಾಗೂ ಸಂಗೀತ ಪರಂಪರೆಯ ಪ್ರತೀಕವಾಗಿರುವ ವೀರೇಶ್ವರ ಪುಣ್ಯಾಶ್ರಮದಲ್ಲಿ ಕಳೆದ ಕೆಲವು ವರ್ಷಗಳಿಂದ ನಡೆದಿರುವುದಾಗಿ ಆರೋಪಿಸಲಾಗುತ್ತಿರುವ ಆಡಳಿತಾತ್ಮಕ ಹಾಗೂ ಹಣಕಾಸು ಅವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಆಶ್ರಮವನ್ನು ಸರ್ಕಾರದ ವಶಕ್ಕೆ ಪಡೆದು ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಆಗ್ರಹಿಸಿ ಹಿಂದೂ ಸಂಘಟನೆಗಳ ಹೋರಾಟಗಾರ ರಾಜು ಖಾನಪ್ಪನವರ ನೇತೃತ್ವದಲ್ಲಿ ಸೋಮವಾರ ನೂರಾರು ಕಾರ್ಯಕರ್ತರು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ರಾಜು ಖಾನಪ್ಪನವರ, ಲಿಂ. ಪಂಚಾಕ್ಷರ ಗವಾಯಿಗಳು ಹಾಗೂ ಲಿಂ. ಪಂ. ಪುಟ್ಟರಾಜ ಕವಿ ಗವಾಯಿಗಳು ಕಟ್ಟಿ ಬೆಳೆಸಿದ ವೀರೇಶ್ವರ ಪುಣ್ಯಾಶ್ರಮವು ಸಾವಿರಾರು ಅಂಧ ಹಾಗೂ ಅನಾಥ ಮಕ್ಕಳಿಗೆ ಶಿಕ್ಷಣ, ಸಂಗೀತ ಮತ್ತು ಆಶ್ರಯ ನೀಡುವ ಮೂಲಕ ಅಪಾರ ಸೇವೆ ಸಲ್ಲಿಸಿದೆ. ಇಂತಹ ಪವಿತ್ರ ಸಂಸ್ಥೆಯಲ್ಲಿ ನಡೆಯುತ್ತಿರುವುದಾಗಿ ಹೇಳಲಾಗುತ್ತಿರುವ ಬೆಳವಣಿಗೆಗಳು ಭಕ್ತರಲ್ಲಿ ಆತಂಕ ಮೂಡಿಸಿವೆ ಎಂದು ಹೇಳಿದರು.

ಆಶ್ರಮಕ್ಕೆ ನಾಡಿನ ಮೂಲೆಮೂಲೆಗಳಿಂದ ಭಕ್ತರು ಹಣ, ದವಸ-ಧಾನ್ಯ ಹಾಗೂ ಇತರೆ ದೇಣಿಗೆಗಳನ್ನು ನೀಡುತ್ತಿದ್ದಾರೆ. ಆದರೆ ಈ ಸಂಪನ್ಮೂಲಗಳ ಬಳಕೆ ಕುರಿತು ಪಾರದರ್ಶಕತೆ ಇರಬೇಕೆಂಬುದು ಭಕ್ತರ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಆಶ್ರಮದ ಆಡಳಿತ, ಹಣಕಾಸು ವ್ಯವಹಾರಗಳು ಹಾಗೂ ಆಸ್ತಿ ನಿರ್ವಹಣೆ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಆಶ್ರಮಕ್ಕೆ ಸಂಬಂಧವಿಲ್ಲದ ವ್ಯಕ್ತಿಗಳು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಈ ಕುರಿತು ಸರ್ಕಾರ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ರಥದ ಗಾಲಿಗಳ ಮೇಲೆ ದೇಣಿಗೆದಾರರ ಹೆಸರನ್ನು ಕೆತ್ತಿಸಿರುವ ವಿಚಾರವೂ ಭಕ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದು, ಅದನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ಆಶ್ರಮದಲ್ಲಿ ಉಂಟಾಗಿರುವ ಗೊಂದಲ ನಿವಾರಣೆಗೆ ಸರ್ಕಾರ ತಕ್ಷಣ ಆಡಳಿತಾಧಿಕಾರಿಯನ್ನು ನೇಮಿಸಿ, ಆಶ್ರಮದ ಮೂಲ ಉದ್ದೇಶಗಳಾದ ಶಿಕ್ಷಣ, ಸಂಗೀತ ಸೇವೆ ಹಾಗೂ ಅನ್ನದಾಸೋಹಕ್ಕೆ ಯಾವುದೇ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ವಿಷಯವನ್ನು ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಹೇಶ ರೋಖಡೆ, ಅರುಣ್ ಬಾವಿ, ಶಿವಯೋಗಿ ಹಿರೇಮಠ, ಮಹಾಬಲೇಶ್ವರ ಶೆಟ್ಟರ್, ಪಿ.ಎಸ್. ಕಾಳೆ, ಸತೀಶ್ ಕುಂಬಾರ, ಅಶೋಕ್ ಬಜಂತ್ರಿ, ವೆಂಕಟೇಶ್ ದೊಡ್ಡಮನಿ, ಕುಮಾರ್ ನಡಗೇರಿ, ಕುಮಾರ ಮಿಟ್ಟಿಮಠ, ಈರಪ್ಪ ಹೆಬಸೂರು, ಈರಣ್ಣ ಪೂಜಾರ, ಭರತ ಲದ್ದಿ, ಸಿದ್ದಪ್ಪ ಯಳವತ್ತಿ, ಪ್ರವೀಣ್ ಕರಬಷ್ಟಿ, ಬಸನಗೌಡ ಪೊಲೀಸ್ ಪಾಟೀಲ್, ಹುಲುಗಪ್ಪ ವಾಲ್ಮೀಕಿ, ಸದಾನಂದ್ ಸಿಂಗ್ ಗುರ್ಲಸೂರ್, ಈರಣ್ಣ ಗಾಣಿಗೇರ, ದತ್ತು ವಿಠ್ಠಲಕರ, ಸಂಜು ಚಟ್ಟಿ, ವಿಶಾಲ್ ಗೋಕಾವಿ ಹಾಗೂ ವಿಶ್ವನಾಥ್ ಸಿರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ವೀರೇಶ್ವರ ಪುಣ್ಯಾಶ್ರಮದ ಬಗ್ಗೆ ನಮಗೆ ಅಪಾರ ಗೌರವವಿದೆ. ನಮ್ಮ ಹೋರಾಟ ಆಶ್ರಮದ ವಿರುದ್ಧವಲ್ಲ, ಆಶ್ರಮದಲ್ಲಿ ನಡೆಯುತ್ತಿರುವುದಾಗಿ ಆರೋಪಿಸಲಾಗುತ್ತಿರುವ ಅಧಿಕಾರ ದುರ್ಬಳಕೆ ಹಾಗೂ ಅನಧಿಕೃತ ಹಸ್ತಕ್ಷೇಪದ ವಿರುದ್ಧವಾಗಿದೆ.”

– ರಾಜು ಖಾನಪ್ಪನವರ, ಹಿಂದೂ ಸಂಘಟನೆಗಳ ಹೋರಾಟಗಾರ

“ವೀರೇಶ್ವರ ಪುಣ್ಯಾಶ್ರಮದಲ್ಲಿ ನಡೆದಿರುವ ಎಲ್ಲ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಯಬೇಕು. ಆಶ್ರಮದಲ್ಲಿ ಉಂಟಾಗಿರುವ ಗೊಂದಲವನ್ನು ಹಿರಿಯ ಯತಿಗಳು ಮಧ್ಯಪ್ರವೇಶಿಸಿ ಶಾಂತಿಯುತವಾಗಿ ಬಗೆಹರಿಸಬೇಕು.”

– ಮಗಚ ಡಾ. ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ, ಕದಾಂಪೂರ

ಮಳೆ ಕೊರತೆಯಿಂದ ರೈತರ ಸಂಕಷ್ಟ: ಶಿರಹಟ್ಟಿ ಬರಪೀಡಿತ ಘೋಷಣೆಗೆ ಬಿಜೆಪಿ ಆಗ್ರಹ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸಮರ್ಪಕ ಮಳೆಯ ಕೊರತೆಯಿಂದ ಬಿತ್ತನೆ ಮಾಡಿದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಶಿರಹಟ್ಟಿ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಬಿಜೆಪಿ ಮುಖಂಡರಾದ ಶಿವಪ್ರಕಾಶ ಮಹಾಜನಶೆಟ್ಟರ ಹಾಗೂ ವಿಶ್ವನಾಥ ಕಪ್ಪತ್ತನವರ ಆಗ್ರಹಿಸಿದರು.

ಸಮರ್ಪಕ ಮಳೆಯ ಕೊರತೆಯಿಂದ ಬಿತ್ತನೆ ಮಾಡಿದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಶಿರಹಟ್ಟಿ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಬಿಜೆಪಿ ಮುಖಂಡರಾದ ಶಿವಪ್ರಕಾಶ ಮಹಾಜನಶೆಟ್ಟರ ಹಾಗೂ ವಿಶ್ವನಾಥ ಕಪ್ಪತ್ತನವರ ಆಗ್ರಹಿಸಿದರು.

ಸೋಮವಾರ ಪಟ್ಟಣದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಸುಮಾರು 30ರಿಂದ 35 ಸಾವಿರ ಹೆಕ್ಟೇರ್ ಮಳೆಯಾಶ್ರಿತ ಪ್ರದೇಶದಲ್ಲಿ ಈಗಾಗಲೇ ಬಹುತೇಕ ರೈತರು ಬಿತ್ತನೆ ಪೂರ್ಣಗೊಳಿಸಿದ್ದಾರೆ. ಆದರೆ ಕಳೆದ ಒಂದು ತಿಂಗಳಿಂದ ಸಮರ್ಪಕ ಮಳೆಯಾಗದ ಕಾರಣ ಬೆಳೆ ಉಳಿಯುವ ಬಗ್ಗೆ ರೈತರು ಆತಂಕದಲ್ಲಿದ್ದಾರೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಕೂಡ ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ಅವರು ತಿಳಿಸಿದರು.

ರೈತರಿಗೆ ಎಫ್‌ಐಡಿ ಆಧಾರದಲ್ಲಿ ಮಾತ್ರ ಗೊಬ್ಬರ ವಿತರಿಸುತ್ತಿರುವುದರಿಂದ ಅನೇಕ ತೊಂದರೆಗಳು ಉಂಟಾಗುತ್ತಿವೆ. ಬಿತ್ತನೆಗೆ ಅನುಗುಣವಾಗಿ ಸಮರ್ಪಕ ಗೊಬ್ಬರ ಪೂರೈಕೆ ಮಾಡಬೇಕು. ಕೃಷಿ ಇಲಾಖೆಯ ಅಧಿಕಾರಿಗಳು ಬೆಳೆ ವಿಮೆ ಕುರಿತು ರೈತರಿಗೆ ಸಮರ್ಪಕ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಪಂ ಮಾಜಿ ಸದಸ್ಯ ಎಂ.ಎಸ್. ದೊಡ್ಡಗೌಡರ, ತಿಪ್ಪಣ್ಣ ಕೊಂಚಿಗೇರಿ, ಸಂದೀಪ ಕಪ್ಪತ್ತನವರ, ನಿಂಬಣ್ಣ ಮಡಿವಾಳರ, ರಮೇಶ ಭರಮಗೌಡ್ರ, ಚನ್ನವೀರಪ್ಪ ಹೂಗಾರ, ಮಹೇಶ ಮತ್ತೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಮೆ ಕಟ್ಟಿದ ರೈತರಿಗೆ ಪರಿಹಾರವೇ ಮರೀಚಿಕೆ..!

0

ವಿಜಯಸಾಕ್ಷಿ ಸುದ್ದಿ, ಡಂಬಳ: ಗದಗ ಜಿಲ್ಲೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮೆ ಮಾಡಿಸಿದ ಸಾವಿರಾರು ರೈತರಿಗೆ ಮಧ್ಯಂತರ ಪರಿಹಾರ ದೊರೆಯದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅರ್ಹರಾಗಿದ್ದರೂ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪರಿಹಾರ ನೀಡದಿರುವುದು ಸರ್ಕಾರ ಹಾಗೂ ವಿಮಾ ಕಂಪನಿಗಳ ನಿರ್ಲಕ್ಷ್ಯ ಎಂದು ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘ ಆರೋಪಿಸಿದೆ.

ಗದಗ ಜಿಲ್ಲೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮೆ ಮಾಡಿಸಿದ ಸಾವಿರಾರು ರೈತರಿಗೆ ಮಧ್ಯಂತರ ಪರಿಹಾರ ದೊರೆಯದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅರ್ಹರಾಗಿದ್ದರೂ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪರಿಹಾರ ನೀಡದಿರುವುದು ಸರ್ಕಾರ ಹಾಗೂ ವಿಮಾ ಕಂಪನಿಗಳ ನಿರ್ಲಕ್ಷ್ಯ ಎಂದು ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘ ಆರೋಪಿಸಿದೆ.

ಜಿಲ್ಲೆಯಲ್ಲಿ ಒಟ್ಟು 52,013 ರೈತರು ಬೆಳೆವಿಮೆ ಮಾಡಿಸಿದ್ದು, ಕಳೆದ ವರ್ಷ ವಾಡಿಕೆಗಿಂತ ಅಧಿಕ ಮಳೆಯಾಗಿ ಬೆಳೆ ನಷ್ಟ ಅನುಭವಿಸಿದ್ದಾರೆ. ನಿಯಮಾನುಸಾರ ಟೋಲ್‌ಫ್ರೀ ಸಂಖ್ಯೆಗೆ ದೂರು ಸಲ್ಲಿಸಿದ ರೈತರಿಗೆ ವಿಮಾ ಕಂಪನಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮಧ್ಯಂತರ ಪರಿಹಾರ ನೀಡಬೇಕಾಗಿತ್ತು.

ಸಂಘದ ಪ್ರಕಾರ, 38,177 ರೈತರು ಟೋಲ್‌ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿದ್ದರು. ಇವರಲ್ಲಿ ಮೊದಲ ಹಂತದಲ್ಲಿ 9,687 ರೈತರಿಗೆ ಹಾಗೂ ಎರಡನೇ ಹಂತದಲ್ಲಿ 3,020 ರೈತರಿಗೆ ಮಾತ್ರ ಪರಿಹಾರ ಜಮೆಯಾಗಿದ್ದು, ಒಟ್ಟು 12,707 ರೈತರಿಗೆ ಮಾತ್ರ ಮಧ್ಯಂತರ ಪರಿಹಾರ ದೊರೆತಿದೆ.

ಇನ್ನೂ 22,356 ರೈತರು ಅರ್ಹರಾಗಿದ್ದರೂ ಪರಿಹಾರದಿಂದ ವಂಚಿತರಾಗಿದ್ದಾರೆ. ಅಲ್ಲದೆ 3,114 ರೈತರ ಜಮೀನುಗಳನ್ನು ಸಮರ್ಪಕ ಪರಿಶೀಲನೆ ನಡೆಸದೇ ‘ಪಾಳು ಭೂಮಿ’ ಎಂದು ನಮೂದಿಸಿ ಪರಿಹಾರವನ್ನು ತಿರಸ್ಕರಿಸಲಾಗಿದೆ ಎಂದು ಆರೋಪಿಸಲಾಗಿದೆ.

ವಿಮೆ ಸಮೀಕ್ಷೆ ವೇಳೆ ಅಧಿಕಾರಿಗಳು ಪ್ರತಿ ಜಮೀನಿನ ಸಮರ್ಪಕ ಪರಿಶೀಲನೆ ನಡೆಸದೆ, ಒಂದೇ ಸರ್ವೇ ನಂಬರ್ ಆಧರಿಸಿ ವರದಿ ಸಲ್ಲಿಸಿದ್ದರಿಂದ ಬೆಳೆ ಬೆಳೆದಿದ್ದ ಜಮೀನುಗಳನ್ನೂ ಪಾಳು ಎಂದು ದಾಖಲಿಸಿ ನೈಜ ರೈತರಿಗೆ ಅನ್ಯಾಯ ಮಾಡಲಾಗಿದೆ ಎಂದು ರೈತರು ದೂರಿದ್ದಾರೆ.

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಾದ ಒಣ ಮೆಣಸಿನಕಾಯಿ ಹಾಗೂ ಗೋವಿನ ಜೋಳ ಬೆಳೆದ ರೈತರಿಗೆ ಪೂರ್ಣ ಪ್ರಮಾಣದ ವಿಮಾ ಪರಿಹಾರ ಇನ್ನೂ ದೊರೆತಿಲ್ಲ. ಅಗತ್ಯ ದಾಖಲೆಗಳನ್ನು ಸಕಾಲಕ್ಕೆ ಸಲ್ಲಿಸಿದ್ದರೂ ವಿಮಾ ಕಂಪನಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವರ್ಷದ ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆಗೆ ಹಣವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದು, ಕಳೆದ ಸಾಲಿನ ಬೆಳೆವಿಮೆ ಪರಿಹಾರ ಸಿಕ್ಕಿದ್ದರೆ ಅದು ಆಸರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸಂಸದರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಅರ್ಹ ರೈತರಿಗೆ ಶೀಘ್ರದಲ್ಲೇ ಬೆಳೆವಿಮೆ ಪರಿಹಾರ ಒದಗಿಸಬೇಕು ಎಂದು ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪಗೌಡ್ರ ಕರಮುಡಿ ಆಗ್ರಹಿಸಿದ್ದಾರೆ.

“ಅರ್ಹ ರೈತರಿಗೆ ಬೆಳೆವಿಮೆ ಪರಿಹಾರ ನೀಡದಿರುವುದು ಅನ್ನದಾತರ ಮೇಲಿನ ಅನ್ಯಾಯ. ಸರ್ಕಾರ ಹಾಗೂ ವಿಮಾ ಕಂಪನಿ ಕೂಡಲೇ ಬಾಕಿ ಇರುವ ಮಧ್ಯಂತರ ಪರಿಹಾರ ಬಿಡುಗಡೆ ಮಾಡಬೇಕು.”

ಯಲ್ಲಪ್ಪಗೌಡ್ರ ಕರಮುಡಿ, ಜಿಲ್ಲಾಧ್ಯಕ್ಷರು, ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘ

ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ತಲುಪಿಸಿ: ಡಾ. ಸಂತೋಷ ಹುಯಿಲಗೋಳ

0

ವಿಜಯಸಾಕ್ಷಿ ಸುದ್ದಿ, ಗದಗ: ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ತಲುಪಿಸುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ವಿಶೇಷ ಪೋಲಿಯೋ ಲಸಿಕಾ ಅಭಿಯಾನಕ್ಕೆ ಗದಗ ಭಾವಸಾರ ವ್ಹಿಜನ್ ಇಂಡಿಯಾ ಸಂಘಟನೆ ಸಹಕಾರ ನೀಡುವ ಮೂಲಕ ಸಾಮಾಜಿಕ ಬದ್ಧತೆಯನ್ನು ಮೆರೆಯಿತು.

ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ತಲುಪಿಸುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ವಿಶೇಷ ಪೋಲಿಯೋ ಲಸಿಕಾ ಅಭಿಯಾನಕ್ಕೆ ಗದಗ ಭಾವಸಾರ ವ್ಹಿಜನ್ ಇಂಡಿಯಾ ಸಂಘಟನೆ ಸಹಕಾರ ನೀಡುವ ಮೂಲಕ ಸಾಮಾಜಿಕ ಬದ್ಧತೆಯನ್ನು ಮೆರೆಯಿತು.

ಗದಗ 1ನೇ ವೃತ್ತದ 213ನೇ ಅಂಗನವಾಡಿ ಕೇಂದ್ರದ 13ನೇ ಬೂತ್ ವತಿಯಿಂದ ನಗರದ ಡಾ. ಹುಯಿಲಗೋಳ ಸಿಟಿ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಡಾ. ಸಂತೋಷ ಹುಯಿಲಗೋಳ ಹಾಗೂ ಶ್ರೀಮತಿ ರೂಪಾ ಹುಯಿಲಗೋಳ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಡಾ. ಸಂತೋಷ ಹುಯಿಲಗೋಳ, ಪೋಲಿಯೋ ರೋಗವು ಮಕ್ಕಳನ್ನು ಶಾಶ್ವತ ಅಂಗವೈಕಲ್ಯಕ್ಕೆ ತಳ್ಳುವ ಅಪಾಯಕಾರಿ ಕಾಯಿಲೆಯಾಗಿದ್ದು, ಲಸಿಕೆಯಿಂದ ಮಾತ್ರ ಅದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯ. ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ, ಪ್ರತಿಯೊಬ್ಬ ಪೋಷಕರು ತಮ್ಮ ಜವಾಬ್ದಾರಿಯನ್ನು ಅರಿತು ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು ಎಂದು ಹೇಳಿದರು.

ಗದಗ ಭಾವಸಾರ ವ್ಹಿಜನ್ ಇಂಡಿಯಾ ಅಧ್ಯಕ್ಷ ಶ್ರೀಪಾದ ವೈಕುಂಠೆ ಮಾತನಾಡಿ, ಸಂಘಟನೆಯು ಆರಂಭದಿಂದಲೂ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳಿಗೆ ಬೆಂಬಲ ನೀಡುತ್ತ ಬಂದಿದೆ. ಮಕ್ಕಳ ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ಪೋಲಿಯೋ ಲಸಿಕಾ ಅಭಿಯಾನಕ್ಕೂ ಸಂಪೂರ್ಣ ಸಹಕಾರ ನೀಡಲಾಗಿದ್ದು, ಸರ್ಕಾರದ ಆರೋಗ್ಯ ಕಾರ್ಯಕ್ರಮಗಳು ಯಶಸ್ವಿಯಾಗಲು ಸ್ವಯಂಸೇವಾ ಸಂಘಟನೆಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂದು ತಿಳಿಸಿದರು.

ಕಾರ್ಯದರ್ಶಿ ಸುಧಾ ವೈಕುಂಠೆ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಮರಿಯಮ್ಮ ಕಡೂರ, ಪವನಕುಮಾರ, ವೀರಣ್ಣ ಬೆಳಮಕರ, ರಾಜೇಂದ್ರ ತ್ರಿಮಲ್ಲೆ, ರಾಜೇಶ್ವರಿ ಸಣ್ಣಕ್ಕಿ, ವಿಜಯಾ ನವಲೆ, ಮಂಜುಳಾ ಜಾಧವ, ಡಾ. ದತ್ತಾತ್ರೇಯ ವೈಕುಂಠೆ, ಲಕ್ಷ್ಮೀ ಬೆಳಮಕರ, ಕಾವ್ಯಾ ದೊಡ್ಡಮನಿ, ರಾಘವೇಂದ್ರ ನವಲೆ, ಮಲ್ಲಮ್ಮ ಪಲ್ಲೇದ ಹಾಗೂ ಮಮತಾಜ್ ಧಾರವಾಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.

170 ಮಕ್ಕಳಿಗೆ ಲಸಿಕೆ

ನಗರದ ವೀರರಾಣಿ ಕಿತ್ತೂರ ಚೆನ್ನಮ್ಮ ಸರ್ಕಲ್ ಹಾಗೂ ಹುಯಿಲಗೋಳ ಆಸ್ಪತ್ರೆ ಸುತ್ತಮುತ್ತಲಿನ ಹಿಂದುಳಿದ ಪ್ರದೇಶಗಳ ಐದು ವರ್ಷದೊಳಗಿನ ಸುಮಾರು 170 ಮಕ್ಕಳಿಗೆ ಭಾನುವಾರ ಸಂಜೆಯವರೆಗೆ ಪೋಲಿಯೋ ಲಸಿಕೆ ನೀಡಲಾಯಿತು. ಆರೋಗ್ಯ ಸಿಬ್ಬಂದಿ ಹಾಗೂ ಸ್ವಯಂಸೇವಕರ ಸಹಕಾರದಿಂದ ಅಭಿಯಾನ ಯಶಸ್ವಿಯಾಗಿ ನಡೆಯಿತು.

“ಪೋಲಿಯೋವನ್ನು ತಡೆಗಟ್ಟಲು ಲಸಿಕೆಯೇ ಅತ್ಯಂತ ಪರಿಣಾಮಕಾರಿ ಅಸ್ತ್ರ. ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು.”

                               ಡಾ. ಸಂತೋಷ ಹುಯಿಲಗೋಳ

ಎಸ್‌.ಎಸ್‌.ಕೆ. ತರುಣ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಇತ್ತೀಚೆಗೆ ನಡೆದ ಎಸ್‌.ಎಸ್‌.ಕೆ. ತರುಣ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇತ್ತೀಚೆಗೆ ನಡೆದ ಎಸ್‌.ಎಸ್‌.ಕೆ. ತರುಣ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಂಘದ ಅಧ್ಯಕ್ಷರಾಗಿ ಶ್ರೀರಾಮ ಸುರೇಂದ್ರಸಾ ಹಬೀಬ, ಉಪಾಧ್ಯಕ್ಷರಾಗಿ ನಾರಾಯಣಸಾ ರಾಮಚಂದ್ರಸಾ ಕಬಾಡಿ, ಗೌರವ ಕಾರ್ಯದರ್ಶಿಯಾಗಿ ಸುರೇಶ ಸೋಮನಾಥಸಾ ಮೇರವಾಡೆ, ಸಹಕಾರ್ಯದರ್ಶಿಯಾಗಿ ಪರಶುರಾಮ ಹನಮಂತಸಾ ಸೋಳಂಕಿ, ಖಜಾಂಚಿಯಾಗಿ ಸತ್ಯನಾರಾಯಣ ಫಕ್ಕೀರಸಾ ಮೇರವಾಡೆ, ಲೆಕ್ಕ ಪರಿಶೋಧಕರಾಗಿ ನರಸಿಂಗಸಾ ವೆಂಕೂಸಾ ಮೇರವಾಡೆ ಹಾಗೂ ವ್ಯಾಯಾಮಶಾಲೆ ಚೇರ್ಮನ್ ಆಗಿ ವಿನಾಯಕ ಶಂಕರಸಾ ಹಾದಿಮನಿ ಅವರನ್ನು ಆಯ್ಕೆ ಮಾಡಲಾಯಿತು.

ನೂತನವಾಗಿ ಆಯ್ಕೆಯಾದ ಎಲ್ಲ ಪದಾಧಿಕಾರಿಗಳನ್ನು ಪಂಚ ಟ್ರಸ್ಟ್ ಕಮಿಟಿ, ಎಸ್‌.ಎಸ್‌.ಕೆ. ತರುಣ ಸಂಘ, ಮಹಿಳಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಮಾಜದ ಮುಖಂಡರು ಮತ್ತು ಸಮಾಜಬಾಂಧವರು ಅಭಿನಂದಿಸಿ, ಶುಭ ಹಾರೈಸಿದರು.

ಸಂಸ್ಕಾರಯುತ ಶಿಕ್ಷಣದಿಂದಲೇ ಉತ್ತಮ ಸಮಾಜ ನಿರ್ಮಾಣ: ವೈ.ಎನ್. ಗೌಡರ

0

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಸಮಾಜದಲ್ಲಿರುವ ಮೂಢನಂಬಿಕೆ ಮತ್ತು ಕಂದಾಚಾರಗಳನ್ನು ಹೋಗಲಾಡಿಸಲು ಶಿಕ್ಷಣವೇ ಪ್ರಮುಖ ಸಾಧನವಾಗಿದೆ. ಪಾಲಕರು ಮಕ್ಕಳಿಗೆ ಕೇವಲ ಅಂಕಗಳ ಶಿಕ್ಷಣವಲ್ಲ, ಸಂಸ್ಕಾರ ಮತ್ತು ಬದುಕು ಕಟ್ಟಿಕೊಡುವ ಶಿಕ್ಷಣ ನೀಡಬೇಕು ಎಂದು ರಾಜ್ಯ ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ವೈ.ಎನ್. ಗೌಡರ ಹೇಳಿದರು.

ಸಮಾಜದಲ್ಲಿರುವ ಮೂಢನಂಬಿಕೆ ಮತ್ತು ಕಂದಾಚಾರಗಳನ್ನು ಹೋಗಲಾಡಿಸಲು ಶಿಕ್ಷಣವೇ ಪ್ರಮುಖ ಸಾಧನವಾಗಿದೆ. ಪಾಲಕರು ಮಕ್ಕಳಿಗೆ ಕೇವಲ ಅಂಕಗಳ ಶಿಕ್ಷಣವಲ್ಲ, ಸಂಸ್ಕಾರ ಮತ್ತು ಬದುಕು ಕಟ್ಟಿಕೊಡುವ ಶಿಕ್ಷಣ ನೀಡಬೇಕು ಎಂದು ರಾಜ್ಯ ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ವೈ.ಎನ್. ಗೌಡರ ಹೇಳಿದರು.

ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆ ಆಶ್ರಯದಲ್ಲಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಜವಾಬ್ದಾರಿಯುತ ವ್ಯಕ್ತಿಗಳಾಗಿ ಬೆಳೆಯುವಲ್ಲಿ ಪಾಲಕರ ಪಾತ್ರ ಮಹತ್ವದ್ದಾಗಿದೆ. ಜಾತಿ-ವರ್ಗ ಭೇದರಹಿತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕು. ಮಕ್ಕಳ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಶಿಕ್ಷಣ ನೀಡಬೇಕು. ಒತ್ತಾಯದ ಶಿಕ್ಷಣ ಮಕ್ಕಳಿಗೆ ಹೊರೆಯಾಗಬಾರದು ಎಂದು ಅವರು ಹೇಳಿದರು.

ಪತ್ರಕರ್ತ ಸಿ.ಕೆ. ಗಣಪ್ಪನವರ ಮಾತನಾಡಿ, ವೈಚಾರಿಕತೆ ಬೆಳೆಯಲು ಶಿಕ್ಷಣ ಅಗತ್ಯ. ವಿಜ್ಞಾನ ಯುಗದಲ್ಲಿಯೂ ಅಜ್ಞಾನ ಮತ್ತು ಮೂಢನಂಬಿಕೆಗಳು ಸಮಾಜದಲ್ಲಿ ಉಳಿದಿದ್ದು, ಅವುಗಳನ್ನು ತೊಲಗಿಸಲು ನಿರಂತರ ಜಾಗೃತಿ ಕಾರ್ಯಕ್ರಮಗಳು ನಡೆಯಬೇಕು ಎಂದರು.

ಪ್ರೊ. ಸತೀಶ ಪಾಸಿ, ನಿವೃತ್ತ ಶಿಕ್ಷಕ ಎಚ್.ಡಿ. ಪೂಜಾರ ಹಾಗೂ ರಂಗನಾಥ ನಾಯಕ ಮಾತನಾಡಿ, ಮಾನವ ಬಂಧುತ್ವ ವೇದಿಕೆ ರಾಜ್ಯಾದ್ಯಂತ ಮೂಢನಂಬಿಕೆ ನಿರ್ಮೂಲನೆ ಜತೆಗೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಮಾಡುತ್ತಿದೆ. ಸಮಾಜದಲ್ಲಿ ಸಮಾನತೆ ನೆಲೆಸಬೇಕಾದರೆ ಜಾಗೃತಿ ಅತ್ಯಗತ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವೇದಿಕೆ ಅಧ್ಯಕ್ಷ ಸುರೇಶ ನಾಯಕ, ವಾಲ್ಮೀಕಿ ನಾಯಕ ಸಮಾಜದ ಮಾಜಿ ಅಧ್ಯಕ್ಷ ಮೈಲಾರಪ್ಪ ಕಲಕೇರಿ, ಡಿ.ಜಿ. ಪೂಜಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೇಘರಾಜ ನಾಯಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ನಾಯಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿಕೊಟ್ಟರು.

ಡಿಎಸ್‌ಎಸ್‌ ಸಂಚಾಲಕರಾಗಿ ಸುರೇಶ ನಂದೆಣ್ಣವರ ನೇಮಕ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ)ಯ ಲಕ್ಷ್ಮೇಶ್ವರ ತಾಲೂಕು ಸಂಚಾಲಕರಾಗಿ ಸುರೇಶ ನಂದೆಣ್ಣವರ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ)ಯ ಲಕ್ಷ್ಮೇಶ್ವರ ತಾಲೂಕು ಸಂಚಾಲಕರಾಗಿ ಸುರೇಶ ನಂದೆಣ್ಣವರ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಸಂಘಟನಾ ಸಂಚಾಲಕ ಎಸ್.ಎನ್. ಬಳ್ಳಾರಿ ಹಾಗೂ ಗದಗ ಜಿಲ್ಲಾ ಸಂಚಾಲಕ ದುರ್ಗಪ್ಪ ಎಲ್.ಎಚ್. ಅವರು ಭಾನುವಾರ ನೇಮಕಾತಿ ಆದೇಶ ನೀಡಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪ್ರೊ. ಬಿ. ಕೃಷ್ಣಪ್ಪ ಅವರ ತತ್ತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಶೋಷಿತ ಸಮುದಾಯಗಳ ಏಳಿಗೆ, ಸಾಮಾಜಿಕ ನ್ಯಾಯ ಮತ್ತು ಸಂಘಟನೆಯ ಬಲವರ್ಧನೆಗೆ ಶ್ರಮಿಸುವಂತೆ ಸೂಚಿಸಿದರು.

ಸಂಘಟನೆಯ ತಾಲೂಕು ಪದಾಧಿಕಾರಿಗಳನ್ನೂ ನೇಮಕ ಮಾಡಲಾಯಿತು. ಕೋಟೆಪ್ಪ ವರ್ದಿ, ನಾಗರಾಜ ದೊಡ್ಡಮನಿ, ಗುಡ್ಡಪ್ಪ ಮತ್ತೂರು, ಮಂಜುನಾಥ ಸೀತಮ್ಮನವರ, ಶಿವಾನಂದ ಮಾದರ, ಮಲ್ಲಿಕಾರ್ಜುನ ಪೂಜಾರ ಹಾಗೂ ಬಸವರಾಜ ಗೋದಿ ಅವರನ್ನು ಸಂಘಟನಾ ಸಂಚಾಲಕರಾಗಿ ನೇಮಕ ಮಾಡಲಾಯಿತು. ಗೋಣೆಪ್ಪ ಹರಿಜನ ಅವರನ್ನು ಖಜಾಂಚಿಯಾಗಿ ಹಾಗೂ ಹನಮಂತಪ್ಪ ಮಾದರ, ಬಸವರಾಜ ಹೆಚ್., ಶಿವಾನಂದ ತಳಗೇರಿ ಮತ್ತು ಶಿವಾನಂದ ಕಡೆಮನಿ ಅವರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

ನೂತನ ಪದಾಧಿಕಾರಿಗಳು ಸಂಘಟನೆಯ ಆಶಯಗಳಿಗೆ ಅನುಗುಣವಾಗಿ ಸಮಾಜಮುಖಿ ಕಾರ್ಯಗಳನ್ನು ಕೈಗೊಂಡು ಶೋಷಿತ ಸಮುದಾಯಗಳ ಹಕ್ಕುಗಳ ರಕ್ಷಣೆ ಹಾಗೂ ಸಂಘಟನೆಯ ವಿಸ್ತರಣೆಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ದುರ್ಗಪ್ಪ ಎಲ್.ಎಚ್., ಗಾಳೆಪ್ಪ ಎಚ್. ಹರಿಜನ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದುತ್ವ ಧಾರ್ಮಿಕ ಆಚರಣೆಯಲ್ಲ, ಜೀವನ ಮೌಲ್ಯಗಳ ದರ್ಶನ: ಗೋಪಿ ಜಿ

ವಿಜಯಸಾಕ್ಷಿ ಸುದ್ದಿ, ಗದಗ: ಹಿಂದುತ್ವವು ಕೇವಲ ಧಾರ್ಮಿಕ ಆಚರಣೆಗಳಿಗೆ ಸೀಮಿತವಾದ ಪರಿಕಲ್ಪನೆಯಲ್ಲ, ಅದು ಸಹೋದರತ್ವ, ಸಹಬಾಳ್ವೆ, ಶಾಂತಿ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ಜೀವನದರ್ಶನವಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಗೋಪಿ ಜಿ ಹೇಳಿದರು.

ಹಿಂದುತ್ವವು ಕೇವಲ ಧಾರ್ಮಿಕ ಆಚರಣೆಗಳಿಗೆ ಸೀಮಿತವಾದ ಪರಿಕಲ್ಪನೆಯಲ್ಲ, ಅದು ಸಹೋದರತ್ವ, ಸಹಬಾಳ್ವೆ, ಶಾಂತಿ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ಜೀವನದರ್ಶನವಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಗೋಪಿ ಜಿ ಹೇಳಿದರು.

ನಗರದ ಸೇವಾ ಚೇತನ ಸಭಾಂಗಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗದಗ ಜಿಲ್ಲಾ ಘಟಕವು ‘100 ವರ್ಷಗಳ ಸಂಘಯಾತ್ರೆ’ ಅಂಗವಾಗಿ ಆಯೋಜಿಸಿದ್ದ ಪ್ರಮುಖ ನಾಗರಿಕರ ಗೋಷ್ಠಿಯಲ್ಲಿ ಅವರು ಮಾತನಾಡಿದರು.

“ವಸುದೈವ ಕುಟುಂಬಕಂ” ಹಾಗೂ “ಸರ್ವೇ ಭವಂತು ಸುಖಿನಃ” ಎಂಬ ಭಾರತೀಯ ತತ್ವಗಳು ವಿಶ್ವಶಾಂತಿ, ಸಹಬಾಳ್ವೆ ಮತ್ತು ಮಾನವೀಯತೆಯ ಸಂದೇಶವನ್ನು ಸಾರುತ್ತವೆ ಎಂದು ಅವರು ತಿಳಿಸಿದರು.

ಸಂಘ ಪ್ರತಿಪಾದಿಸುತ್ತಿರುವ ‘ಪಂಚಪರಿವರ್ತನೆ’ ಪರಿಕಲ್ಪನೆಯಡಿ ಪರಿಸರ ಸಂರಕ್ಷಣೆ, ಕುಟುಂಬ ಪ್ರಬೋಧನ, ಸಾಮಾಜಿಕ ಸಾಮರಸ್ಯ, ಸ್ವದೇಶಿ ಮನೋಭಾವ ಹಾಗೂ ನಾಗರಿಕ ಕರ್ತವ್ಯಗಳ ಪಾಲನೆಗೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು.

ಭಾರತೀಯ ಕುಟುಂಬ ವ್ಯವಸ್ಥೆ, ಭಾಷೆ, ಸಂಸ್ಕೃತಿ ಮತ್ತು ಸಾರ್ವಜನಿಕ ಆಸ್ತಿಗಳ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರೂ ಜವಾಬ್ದಾರಿಯುತ ಮನೋಭಾವ ಬೆಳೆಸಿಕೊಳ್ಳಬೇಕು. ಜಾತಿ ವೈಮನಸ್ಸು ಮತ್ತು ವಿಭಜನೆಗೆ ಅವಕಾಶ ನೀಡದೆ ಪರಸ್ಪರ ಗೌರವ, ಸಹಕಾರ ಹಾಗೂ ಸಾಮರಸ್ಯದ ಮನೋಭಾವ ಬೆಳೆಸಿದಾಗ ಮಾತ್ರ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಸಂಘಚಾಲಕ ಮಾರುತಿ ಕಟ್ಟಿಮನಿ ಉಪಸ್ಥಿತರಿದ್ದರು. ರವಿ ಬಡಿಗೇರ ಸ್ವಾಗತಿಸಿದರು. ಡಾ. ಉಮೇಶ ಹಾದಿ ನಿರೂಪಿಸಿದರು. ಬಸವರಾಜ ಪಟ್ಟಣಶೆಟ್ಟಿ ವಂದಿಸಿದರು. ಗಣ್ಯರು, ಚಿಂತಕರು, ಸ್ವಯಂಸೇವಕರು ಹಾಗೂ ಭಗಿನಿಯರು ಪಾಲ್ಗೊಂಡಿದ್ದರು.

“ಹಿಂದುತ್ವವು ಧಾರ್ಮಿಕ ಆಚರಣೆಗೆ ಸೀಮಿತವಾದ ವಿಚಾರವಲ್ಲ; ಸಹೋದರತ್ವ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಜೀವನ ದರ್ಶನ.”

                                            **— ಗೋಪಿ ಜಿ, ಕರ್ನಾಟಕ ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ, ರಾಷ್ಟ್ರೀಯ ಸ್ವಯಂಸೇವಕ ಸಂಘ**

ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೆ ವಿಶೇಷ ಹೆಜ್ಜೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರಸಭೆಯ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕೆಲಸಗಾರರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಗರಸಭೆ ಆವರಣದಲ್ಲಿ ಆಯೋಜಿಸಲಾಯಿತು.

ಗದಗ-ಬೆಟಗೇರಿ ನಗರಸಭೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರಸಭೆಯ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕೆಲಸಗಾರರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಗರಸಭೆ ಆವರಣದಲ್ಲಿ ಆಯೋಜಿಸಲಾಯಿತು.

ಶಿಬಿರದಲ್ಲಿ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಮೆದುಳು ಆರೋಗ್ಯ ಹಾಗೂ ಹೃದಯ ಸಂಬಂಧಿತ ಕಾಯಿಲೆಗಳ ತಪಾಸಣೆಯನ್ನು ನುರಿತ ವೈದ್ಯರು ನಡೆಸಿ ಅಗತ್ಯ ಆರೋಗ್ಯ ಸಲಹೆಗಳನ್ನು ನೀಡಿದರು. ಸ್ವಚ್ಛತಾ ಕಾರ್ಯದಲ್ಲಿ ನಿರಂತರ ತೊಡಗಿರುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಗೋಪಾಲ್, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಆನಂದ ಬದಿ, ಕಂದಾಯ ಅಧಿಕಾರಿ ಮಹೇಶ್ ಹಡಪದ, ಜಿಲ್ಲಾ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಹೇಮೇಶ್ ಯಟ್ಟಿ, ಆರೋಗ್ಯ ಇಲಾಖೆಯ ಸಿಬ್ಬಂದಿ, ಕಮ್ಯುನಿಟಿ ಮೊಬೈಲೈಜರ್‌ಗಳು, ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕೆಲಸಗಾರರು ಉಪಸ್ಥಿತರಿದ್ದರು.

“ನಗರದ ಸ್ವಚ್ಛತೆಯ ಹೊಣೆ ಹೊತ್ತಿರುವ ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೂ ನಗರಸಭೆ ಸಮಾನ ಆದ್ಯತೆ ನೀಡುತ್ತಿದೆ. ಇಂತಹ ಆರೋಗ್ಯ ತಪಾಸಣಾ ಶಿಬಿರಗಳು ಅವರ ಆರೋಗ್ಯ ಕಾಪಾಡಲು ಸಹಕಾರಿಯಾಗಲಿವೆ.”

ರಾಜಾರಾಮ ಪವಾರ್, ಪೌರಾಯುಕ್ತರು, ಗದಗ-ಬೆಟಗೇರಿ ನಗರಸಭೆ