Home Blog

ಯಾದಗಿರಿಯಲ್ಲಿ RSS ಪಥಸಂಚಲನ ಎಫೆಕ್ಟ್: ಇಬ್ಬರು ಸರ್ಕಾರಿ ಶಿಕ್ಷಕರಿಗೆ ಅಮಾನತು ಬಿಸಿ, ದೂರು ಬೆನ್ನಲ್ಲೇ ಶಿಕ್ಷಣ ಇಲಾಖೆ ಕ್ರಮ

0

ಯಾದಗಿರಿ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಸರ್ಕಾರಿ ಶಿಕ್ಷಕರ ವಿರುದ್ಧ ಯಾದಗಿರಿ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಹುಣಸಗಿ ತಾಲೂಕಿನ ಅಣ್ಣಾಸಾಹೇಬ ದೇಶಮುಖ ಹಾಗೂ ಗುರುರಾಜ ಜೋಶಿ ಅವರನ್ನು ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಇಬ್ಬರೂ ಸುಮಾರು ಎಂಟು ತಿಂಗಳ ಹಿಂದೆ ನಡೆದಿದ್ದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಈ ಕುರಿತು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಜುಮ್ಮಣ್ಣ ಗುಡಿಮನಿ ಅವರು ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದ್ದರು. ದೂರು ಪರಿಶೀಲನೆ ಬಳಿಕ ಇಲಾಖೆ ಅಮಾನತು ಆದೇಶ ಹೊರಡಿಸಿದೆ.

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ ವಿಚಾರ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಸರ್ಕಾರಿ ಸೇವೆಯಲ್ಲಿರುವವರು ಸಂಘಟನೆಯ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿಲುವು ಈಗಾಗಲೇ ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ, ಯಾದಗಿರಿಯಲ್ಲಿ ಇಬ್ಬರು ಶಿಕ್ಷಕರ ಅಮಾನತು ಕ್ರಮ ಇದೀಗ ರಾಜ್ಯ ರಾಜಕೀಯದಲ್ಲೂ ಚರ್ಚೆಗೆ ಕಾರಣವಾಗಿದೆ.

ಎಂಟು ತಿಂಗಳ ಹಿಂದೆ ನಡೆದಿದ್ದ ಪಥಸಂಚಲನದ ವಿಚಾರದಲ್ಲಿ ಇದೀಗ ಕ್ರಮ ಕೈಗೊಂಡಿರುವುದು ಗಮನ ಸೆಳೆದಿದ್ದು, ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ನೌಕರರ ವಿರುದ್ಧವೂ ಇದೇ ರೀತಿಯ ಕ್ರಮ ಜರುಗಲಿದೆಯೇ ಎಂಬ ಪ್ರಶ್ನೆ ಮೂಡಿದೆ.

ಟಿ20 ಕ್ರಿಕೆಟ್ʼನಲ್ಲಿ ಕೀರನ್ ಪೊಲ್ಲಾರ್ಡ್ ಹೊಸ ದಾಖಲೆ: ಜೋಸ್ ಬಟ್ಲರ್ ಹಿಂದಿಕ್ಕಿ ಮತ್ತೊಮ್ಮೆ ನಂಬರ್ 1 ಸ್ಥಾನಕ್ಕೇರಿದ ‘ಪವರ್ ಹಿಟ್ಟರ್’

0

ಸೈಂಟ್ ಲೂಸಿಯಾ: ವೆಸ್ಟ್ ಇಂಡೀಸ್‌ನ ಮಾಜಿ ಆಲ್ರೌಂಡರ್ ಕೀರನ್ ಪೊಲ್ಲಾರ್ಡ್ ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಮತ್ತೆ ತಮ್ಮ ಹೆಸರಿಗೆ ಬರೆದುಕೊಂಡಿರುವ ಪೊಲ್ಲಾರ್ಡ್, ಇಂಗ್ಲೆಂಡ್‌ನ ಜೋಸ್ ಬಟ್ಲರ್ ಅವರನ್ನು ಹಿಂದಿಕ್ಕಿ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ.

ಸೈಂಟ್ ಲೂಸಿಯಾ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಟ್ರಿನ್‌ಬಾಗೋ ನೈಟ್ ರೈಡರ್ಸ್ ಪರ ಕಣಕ್ಕಿಳಿದ 39 ವರ್ಷದ ಕೀರನ್ ಪೊಲ್ಲಾರ್ಡ್ ಕೇವಲ 26 ಎಸೆತಗಳಲ್ಲಿ ಸ್ಫೋಟಕ 65 ರನ್‌ಗಳ ಇನಿಂಗ್ಸ್ ಆಡಿದರು. ಈ ಭರ್ಜರಿ ಬ್ಯಾಟಿಂಗ್ ಪ್ರದರ್ಶನದೊಂದಿಗೆ ಅವರು ಜೋಸ್ ಬಟ್ಲರ್ ಅವರ 14,890 ರನ್‌ಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಪೊಲ್ಲಾರ್ಡ್ ಇದೀಗ 749 ಟಿ20 ಪಂದ್ಯಗಳ 666 ಇನಿಂಗ್ಸ್‌ಗಳಲ್ಲಿ ಒಟ್ಟು 14,921 ರನ್ ಗಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಗಳಿಸಿದ ಬ್ಯಾಟರ್ ಆಗಿ ಮತ್ತೊಮ್ಮೆ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಅಂದಹಾಗೆ, ಈ ವರ್ಷದ ಆರಂಭದಲ್ಲೇ ಕೀರನ್ ಪೊಲ್ಲಾರ್ಡ್ ‘ಯೂನಿವರ್ಸಲ್ ಬಾಸ್’ ಖ್ಯಾತಿಯ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದ್ದ ಗರಿಷ್ಠ ಟಿ20 ರನ್‌ಗಳ ದಾಖಲೆಯನ್ನು ಮುರಿದಿದ್ದರು. ಆದರೆ 2026ರ ಆಗಸ್ಟ್‌ನಲ್ಲಿ ಇಂಗ್ಲೆಂಡ್‌ನ ಮಾಜಿ ನಾಯಕ ಜೋಸ್ ಬಟ್ಲರ್, ದಿ ಹಂಡ್ರೆಡ್ ಟೂರ್ನಿಯಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಆಡುತ್ತಾ ಪೊಲ್ಲಾರ್ಡ್ ಅವರನ್ನು ಹಿಂದಿಕ್ಕಿದ್ದರು.

ಇದೀಗ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಪೊಲ್ಲಾರ್ಡ್, ಮತ್ತೆ ಬಟ್ಲರ್ ಅವರನ್ನು ಹಿಂದಿಕ್ಕಿ ಟಿ20 ಕ್ರಿಕೆಟ್‌ನ ನಂಬರ್ ಒನ್ ರನ್ ಸ್ಕೋರರ್ ಆಗಿದ್ದಾರೆ.

ಜೋಸ್ ಬಟ್ಲರ್ ಅವರ ದಾಖಲೆಯನ್ನು ಮುರಿಯಲು ಪೊಲ್ಲಾರ್ಡ್ ಅವರಿಗೆ ಕೇವಲ 35 ರನ್‌ಗಳ ಅಗತ್ಯವಿತ್ತು. ಆದರೆ ಅವರು 26 ಎಸೆತಗಳಲ್ಲೇ 65 ರನ್ ಸಿಡಿಸುವ ಮೂಲಕ ಈ ಗುರಿಯನ್ನು ಸುಲಭವಾಗಿ ದಾಟಿದ್ದಾರೆ.

15 ಸಾವಿರ ರನ್‌ಗಳ ವಿಶ್ವದಾಖಲೆಯತ್ತ ಪೊಲ್ಲಾರ್ಡ್

ಇದೀಗ ಕೀರನ್ ಪೊಲ್ಲಾರ್ಡ್ ಟಿ20 ಕ್ರಿಕೆಟ್‌ನಲ್ಲಿ 15,000 ರನ್‌ಗಳ ಗಡಿ ತಲುಪುವ ಸನಿಹದಲ್ಲಿದ್ದಾರೆ. ಈ ಐತಿಹಾಸಿಕ ಮೈಲಿಗಲ್ಲು ತಲುಪಲು ಅವರಿಗೆ ಇನ್ನು ಕೇವಲ 79 ರನ್‌ಗಳ ಅಗತ್ಯವಿದೆ.

ಶುಕ್ರವಾರ ಇದೇ ಮೈದಾನದಲ್ಲಿ ಬಾರ್ಬಡೋಸ್ ಟ್ರಿಡೆಂಟ್ಸ್ ವಿರುದ್ಧ ಟ್ರಿನ್‌ಬಾಗೋ ನೈಟ್ ರೈಡರ್ಸ್ ಪರ ಪೊಲ್ಲಾರ್ಡ್ ಕಣಕ್ಕಿಳಿಯಲಿದ್ದಾರೆ. ಈ ಪಂದ್ಯದಲ್ಲಿ 79 ರನ್ ಗಳಿಸಿದರೆ, ಟಿ20 ಕ್ರಿಕೆಟ್ ಇತಿಹಾಸದಲ್ಲಿ 15,000 ರನ್ ಪೂರೈಸಿದ ಮೊದಲ ಬ್ಯಾಟರ್ ಎಂಬ ಅಪರೂಪದ ವಿಶ್ವದಾಖಲೆಯನ್ನು ಪೊಲ್ಲಾರ್ಡ್ ತಮ್ಮ ಹೆಸರಿಗೆ ಬರೆದುಕೊಳ್ಳಲಿದ್ದಾರೆ.

ಈ ಮೂಲಕ ಈಗಾಗಲೇ ಟಿ20 ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿರುವ ಕೀರನ್ ಪೊಲ್ಲಾರ್ಡ್, ಮತ್ತೊಂದು ಐತಿಹಾಸಿಕ ಸಾಧನೆಯ ಹೊಸ್ತಿಲಲ್ಲಿದ್ದಾರೆ.

KPSC ನೇಮಕಾತಿ ಅಕ್ರಮ: ನಾಪತ್ತೆಯಾಗಿದ್ದ ಗ್ಯಾನೇಂದ್ರ ಕುಮಾರ್ ಇಂದು ವಿಚಾರಣೆಗೆ ಹಾಜರು!

0

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಇಂದು ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಗ್ಯಾನೇಂದ್ರ ಕುಮಾರ್ ನಿನ್ನೆಯೇ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ನಿನ್ನೆ ವಿಚಾರಣೆಗೆ ಗೈರಾಗಿದ್ದ ಅವರು, ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ.

ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪರೀಕ್ಷಾ ನಿಯಂತ್ರಕರಾಗಿದ್ದ ಗ್ಯಾನೇಂದ್ರ ಕುಮಾರ್ ಅವಧಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ ನಡೆದಿತ್ತು. ಈ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪವಿದ್ದು, ಈ ಸಂಬಂಧ ಸಿಐಡಿ ತನಿಖಾ ತಂಡ ಗ್ಯಾನೇಂದ್ರ ಕುಮಾರ್ ಅವರನ್ನು ವಿಚಾರಣೆ ನಡೆಸಲಿದೆ.

KRSಗೆ ಮಳೆ ಕೈಕೊಟ್ಟ ಬೆನ್ನಲ್ಲೇ ಒಳಹರಿವು ಕುಸಿತ: 17,427ರಿಂದ 10,028 ಕ್ಯೂಸೆಕ್‌ಗೆ ಇಳಿಕೆ, 31.923 ಟಿಎಂಸಿ ನೀರು ಸಂಗ್ರಹ

0

ಮಂಡ್ಯ: ಕಾವೇರಿ ಕೊಳ್ಳದಲ್ಲಿ ಮಳೆ ಅಬ್ಬರ ತಗ್ಗುತ್ತಿದ್ದಂತೆ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯಕ್ಕೂ ಅದರ ನೇರ ಪರಿಣಾಮ ತಟ್ಟಿದೆ. ಕೆಲವೇ ದಿನಗಳ ಹಿಂದೆ ಭಾರೀ ಏರಿಕೆ ಕಂಡಿದ್ದ ಕೆಆರ್‌ಎಸ್‌ನ ಒಳಹರಿವು ಇದೀಗ ಗಣನೀಯವಾಗಿ ಕುಸಿದಿದೆ.

ಗುರುವಾರ ಜಲಾಶಯಕ್ಕೆ 17,427 ಕ್ಯೂಸೆಕ್ ನೀರು ಹರಿದುಬರುತ್ತಿದ್ದರೆ, ಇದೀಗ ಈ ಪ್ರಮಾಣ 10,028 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಅಂದರೆ ಒಂದೇ ದಿನದಲ್ಲಿ ಒಳಹರಿವು 7,399 ಕ್ಯೂಸೆಕ್‌ನಷ್ಟು ಕಡಿಮೆಯಾಗಿದೆ. ಬುಧವಾರ ಬೆಳಗ್ಗೆ 9,438 ಕ್ಯೂಸೆಕ್ ಇದ್ದ ಒಳಹರಿವು ಗುರುವಾರ 17,427 ಕ್ಯೂಸೆಕ್‌ಗೆ ಏರಿಕೆಯಾಗಿದ್ದ ಹಿನ್ನೆಲೆಯಲ್ಲೇ ಇದೀಗ ಮತ್ತೆ ಇಳಿಕೆ ದಾಖಲಾಗಿದೆ.

ಪ್ರಸ್ತುತ 124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್‌ನಲ್ಲಿ 110.20 ಅಡಿ ನೀರು ಇದೆ. 49.452 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 31.923 ಟಿಎಂಸಿ ನೀರು ಸಂಗ್ರಹವಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಉತ್ತಮ ಮಳೆಯಿಂದಾಗಿ ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಾಗಿತ್ತು. ವಿಶೇಷವಾಗಿ ವಾರದ ಆರಂಭದಲ್ಲಿ ಕೊಡಗಿನಲ್ಲಿ ಸುರಿದ ಭಾರೀ ಮಳೆ ಜಲಾಶಯದ ಒಳಹರಿವಿನ ಏರಿಕೆಗೆ ಕಾರಣವಾಗಿತ್ತು. ಇದೀಗ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ನೀರಿನ ಹರಿವಿನಲ್ಲೂ ಇಳಿಕೆಯಾಗಿದೆ.

ಒಳಹರಿವು ಕಡಿಮೆಯಾಗಿದ್ದರೂ ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ 110 ಅಡಿ ದಾಟಿರುವುದು ಸದ್ಯ ರೈತರು ಹಾಗೂ ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳ ಕುಡಿಯುವ ನೀರಿನ ಅಗತ್ಯತೆಗೆ ನೆಮ್ಮದಿ ನೀಡಿದೆ. ಮುಂದಿನ ಮಳೆ ಹಾಗೂ ಒಳಹರಿವಿನ ಪ್ರಮಾಣದ ಮೇಲೆ ಜಲಾಶಯದ ಮುಂದಿನ ಸ್ಥಿತಿ ನಿರ್ಧಾರವಾಗಲಿದೆ.

ಜಲಪ್ರಳಯಕ್ಕೆ ತತ್ತರಿಸಿದ ನೇಪಾಳ: ಭೀಕರ ಪ್ರವಾಹದಲ್ಲಿ ಸಾವಿನ ಸಂಖ್ಯೆ 469ಕ್ಕೆ ಏರಿಕೆ, 1,500ಕ್ಕೂ ಅಧಿಕ ನಾಪತ್ತೆ!

0

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಜಲಪ್ರಳಯ ಹಾಗೂ ಭೂಕುಸಿತದಲ್ಲಿ ಬಲಿಯಾದವರ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ಈವರೆಗೂ 469 ಜನರು ಸಾವನ್ನಪ್ಪಿದ್ದು, 1,500ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ನೇಪಾಳ ಪೊಲೀಸರ ಮಾಹಿತಿ ಪ್ರಕಾರ, ಪ್ರವಾಹದಲ್ಲಿ ಕೊಚ್ಚಿಹೋದ 1,500ಕ್ಕೂ ಅಧಿಕ ಜನರು ಇನ್ನೂ ಪತ್ತೆಯಾಗಿಲ್ಲ. ನಾಪತ್ತೆಯಾದವರಲ್ಲಿ 30ಕ್ಕೂ ಹೆಚ್ಚು ದೇಶಗಳ ವಿದೇಶಿ ಪ್ರಜೆಗಳಿದ್ದು, ಅದರಲ್ಲಿ 288 ಮಂದಿ ಭಾರತೀಯರಾಗಿದ್ದಾರೆ. ಈ ಪೈಕಿ ಪವರ್ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 73 ಮಂದಿ ಭಾರತೀಯರೂ ಕಣ್ಮರೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ನವದೆಹಲಿ ಮತ್ತು ಕಠ್ಮಂಡು ಪರಸ್ಪರ ಸಮನ್ವಯದೊಂದಿಗೆ ನಾಪತ್ತೆಯಾದವರ ಪತ್ತೆ ಕಾರ್ಯ ಹಾಗೂ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ನಿರತವಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ನೇಪಾಳದಲ್ಲಿ ಪ್ರವಾಹದಿಂದಾಗಿ 469 ಮಂದಿ ಸಾವನ್ನಪ್ಪಿದ್ದರೆ, ಟಿಬೆಟ್‌ನಲ್ಲಿ ಮೂವರು ಸಾವನ್ನಪ್ಪಿರುವುದಾಗಿ ಚೀನಾದ ಅಧಿಕೃತ ಮಾಧ್ಯಮಗಳು ದೃಢಪಡಿಸಿವೆ. ಜೊತೆಗೆ, ವಿಪತ್ತು ಪೀಡಿತ ಪ್ರದೇಶದಿಂದ 499 ಸ್ಥಳೀಯ ನಿವಾಸಿಗಳು ಹಾಗೂ 555 ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಗೃಹಲಕ್ಷ್ಮಿ ಫಲಾನುಭವಿಗಳ ಮರುನೋಂದಣಿ: ಬಯೋಮೆಟ್ರಿಕ್ ದೃಢೀಕರಣಕ್ಕೆ ಹೊಸ ಆ್ಯಪ್ ಸಿದ್ಧ

0

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ನವೀಕರಣಕ್ಕಾಗಿ ಬಹುವಿಧದ ಮೊಬೈಲ್ ಆ್ಯಪ್/ವೆಬ್ ಆ್ಯಪ್‌ಗಳು ಸಿದ್ಧಗೊಳ್ಳುತ್ತಿದ್ದು, ಶೀಘ್ರದಲ್ಲೇ ಗೃಹಲಕ್ಷ್ಮಿ ಫಲಾನುಭವಿಗಳ ನವೀಕರಣ ಪ್ರಕ್ರಿಯೆಗಳು ನಡೆಯಲಿವೆ.

ಗ್ಯಾರಂಟಿ ಯೋಜನೆಗಳ ಪೈಕಿ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ, ರಾಜ್ಯದ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ಆರ್ಥಿಕ ನೆರವು ನೀಡುವ ಯೋಜನೆಯಾಗಿದೆ. ಆದರೆ ಈ ಯೋಜನೆಯಡಿ ಅರ್ಹರಲ್ಲದವರೂ ಹಣ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ, ಇಂತಹ ಸದಸ್ಯರನ್ನು ರದ್ದುಪಡಿಸುವ ಉದ್ದೇಶದಿಂದ ಮರುನವೀಕರಣಕ್ಕೆ ಸರ್ಕಾರ ಮುಂದಾಗಿದೆ. ನವೀಕರಣದ ವೇಳೆ ಫಲಾನುಭವಿಗಳ ಕೆಲವು ವೈಯಕ್ತಿಕ ವಿವರಗಳನ್ನೂ ಸಂಗ್ರಹಿಸಲು ನಿರ್ಧರಿಸಲಾಗಿದೆ.

ರಾಜ್ಯಾದ್ಯಂತ 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಮರುಪರಿಶೀಲನೆ ಹಂತದಲ್ಲಿ ಫಲಾನುಭವಿಗಳ ಬಯೋಮೆಟ್ರಿಕ್ ಮತ್ತು ಮುಖಚಹರೆ ದೃಢೀಕರಣ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದೂ, ಇದೇ ಉದ್ದೇಶಕ್ಕಾಗಿ ಮೊಬೈಲ್ ಆ್ಯಪ್ ಮತ್ತು ವೆಬ್ ಪೋರ್ಟಲ್ ಅಭಿವೃದ್ಧಿಪಡಿಸಲಾಗಿದ್ದು, ಅಂತಿಮ ಹಂತದ ಪರಿಶೀಲನೆ ನಡೆಯುತ್ತಿದೆ ಎಂದೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸರ್ಕಾರದ ನಿಯೋಜಿತ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ನವೀಕರಣ ಕಾರ್ಯ ಕೈಗೊಳ್ಳಲಿದ್ದು, ಇದರಿಂದ ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ದಟ್ಟಣೆ ತಪ್ಪಿಸಬಹುದು. ಫಲಾನುಭವಿಗಳು ಸರ್ಕಾರದ ಅಧಿಕೃತ ಕೇಂದ್ರಗಳಲ್ಲೂ ದಾಖಲೆ ಸಲ್ಲಿಸಿ ನೋಂದಣಿ ಮಾಡಿಸಬಹುದು.

ಯೋಜನೆಯಡಿ ಒಟ್ಟು 1.24 ಕೋಟಿ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ಅರ್ಹ ಫಲಾನುಭವಿಗಳ ಖಾತೆಗೆ 32 ಕಂತುಗಳಲ್ಲಿ ತಲಾ 2,000 ರೂ.ನಂತೆ ಒಟ್ಟು 76,951 ಕೋಟಿ ರೂ. ಜಮೆ ಮಾಡಲಾಗಿದೆ. ನೋಂದಾಯಿತರ ಪೈಕಿ 3.13 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದು, ಇದರಲ್ಲಿ 1.10 ಲಕ್ಷ ಮಂದಿಯ ಖಾತೆಗೆ 117.31 ಕೋಟಿ ರೂ. ಜಮೆಯಾಗಿದ್ದು, ಇದನ್ನು ಹಿಂಪಡೆಯಲು ಸರ್ಕಾರ ಕ್ರಮ ಕೈಗೊಂಡಿದೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೊಸದಾಗಿ ಅರ್ಜಿ ತಯಾರಿಸಿದ್ದು, ಸರ್ಕಾರ ಮತ್ತು ಹಣಕಾಸು ಇಲಾಖೆಗೆ ಸಲ್ಲಿಸಿದೆ. ಮನೆ ಯಜಮಾನಿಯ ವಿವರ, ಮತದಾರರ ಗುರುತಿನ ವಿವರ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ, ಈ ಹಿಂದೆ ಮನೆಯಲ್ಲಿ ಎಷ್ಟು ಸದಸ್ಯರಿಗೆ ಹಣ ಬರುತ್ತಿತ್ತು, ಜಾತಿಯ ವಿವರ, ಪತಿಯ ಹೆಸರು-ಆಧಾರ್ ಸಂಖ್ಯೆ ಸೇರಿದಂತೆ ಹಲವು ಮಾಹಿತಿಗಳನ್ನು ಒಳಗೊಂಡ ಹೊಸ ಅರ್ಜಿ ನಮೂನೆ ತಯಾರಾಗುತ್ತಿದೆ.

ಈಗಾಗಲೇ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಯಿಂದಾಗಿ ನಕಲಿ ಹಾಗೂ ನಿಧನರಾದವರು ಸೇರಿದಂತೆ ಲಕ್ಷಾಂತರ ಹೆಸರುಗಳನ್ನು ಕೈಬಿಡಲಾಗಿದ್ದು, ಗೃಹಲಕ್ಷ್ಮಿ ಯೋಜನೆಯ ಮರುನೋಂದಣಿಯಿಂದಲೂ ಸಾಕಷ್ಟು ಮಂದಿ ಅನರ್ಹರು ಯೋಜನೆಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಸೆಪ್ಟೆಂಬರ್ ನಂತರ ಈ ನವೀಕರಣ ಪ್ರಕ್ರಿಯೆ ನಡೆಯಲಿದೆ.

ಗೃಹಲಕ್ಷ್ಮಿ ಫಲಾನುಭವಿಗಳ ಮರುನೋಂದಣಿ: ಬಯೋಮೆಟ್ರಿಕ್ ದೃಢೀಕರಣಕ್ಕೆ ಹೊಸ ಆ್ಯಪ್ ಸಿದ್ಧ

0

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ನವೀಕರಣಕ್ಕಾಗಿ ಬಹುವಿಧದ ಮೊಬೈಲ್ ಆ್ಯಪ್/ವೆಬ್ ಆ್ಯಪ್‌ಗಳು ಸಿದ್ಧಗೊಳ್ಳುತ್ತಿದ್ದು, ಶೀಘ್ರದಲ್ಲೇ ಗೃಹಲಕ್ಷ್ಮಿ ಫಲಾನುಭವಿಗಳ ನವೀಕರಣ ಪ್ರಕ್ರಿಯೆಗಳು ನಡೆಯಲಿವೆ.

ಗ್ಯಾರಂಟಿ ಯೋಜನೆಗಳ ಪೈಕಿ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ, ರಾಜ್ಯದ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ಆರ್ಥಿಕ ನೆರವು ನೀಡುವ ಯೋಜನೆಯಾಗಿದೆ. ಆದರೆ ಈ ಯೋಜನೆಯಡಿ ಅರ್ಹರಲ್ಲದವರೂ ಹಣ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ, ಇಂತಹ ಸದಸ್ಯರನ್ನು ರದ್ದುಪಡಿಸುವ ಉದ್ದೇಶದಿಂದ ಮರುನವೀಕರಣಕ್ಕೆ ಸರ್ಕಾರ ಮುಂದಾಗಿದೆ. ನವೀಕರಣದ ವೇಳೆ ಫಲಾನುಭವಿಗಳ ಕೆಲವು ವೈಯಕ್ತಿಕ ವಿವರಗಳನ್ನೂ ಸಂಗ್ರಹಿಸಲು ನಿರ್ಧರಿಸಲಾಗಿದೆ.

ರಾಜ್ಯಾದ್ಯಂತ 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಮರುಪರಿಶೀಲನೆ ಹಂತದಲ್ಲಿ ಫಲಾನುಭವಿಗಳ ಬಯೋಮೆಟ್ರಿಕ್ ಮತ್ತು ಮುಖಚಹರೆ ದೃಢೀಕರಣ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದೂ, ಇದೇ ಉದ್ದೇಶಕ್ಕಾಗಿ ಮೊಬೈಲ್ ಆ್ಯಪ್ ಮತ್ತು ವೆಬ್ ಪೋರ್ಟಲ್ ಅಭಿವೃದ್ಧಿಪಡಿಸಲಾಗಿದ್ದು, ಅಂತಿಮ ಹಂತದ ಪರಿಶೀಲನೆ ನಡೆಯುತ್ತಿದೆ ಎಂದೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸರ್ಕಾರದ ನಿಯೋಜಿತ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ನವೀಕರಣ ಕಾರ್ಯ ಕೈಗೊಳ್ಳಲಿದ್ದು, ಇದರಿಂದ ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ದಟ್ಟಣೆ ತಪ್ಪಿಸಬಹುದು. ಫಲಾನುಭವಿಗಳು ಸರ್ಕಾರದ ಅಧಿಕೃತ ಕೇಂದ್ರಗಳಲ್ಲೂ ದಾಖಲೆ ಸಲ್ಲಿಸಿ ನೋಂದಣಿ ಮಾಡಿಸಬಹುದು.

ಯೋಜನೆಯಡಿ ಒಟ್ಟು 1.24 ಕೋಟಿ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ಅರ್ಹ ಫಲಾನುಭವಿಗಳ ಖಾತೆಗೆ 32 ಕಂತುಗಳಲ್ಲಿ ತಲಾ 2,000 ರೂ.ನಂತೆ ಒಟ್ಟು 76,951 ಕೋಟಿ ರೂ. ಜಮೆ ಮಾಡಲಾಗಿದೆ. ನೋಂದಾಯಿತರ ಪೈಕಿ 3.13 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದು, ಇದರಲ್ಲಿ 1.10 ಲಕ್ಷ ಮಂದಿಯ ಖಾತೆಗೆ 117.31 ಕೋಟಿ ರೂ. ಜಮೆಯಾಗಿದ್ದು, ಇದನ್ನು ಹಿಂಪಡೆಯಲು ಸರ್ಕಾರ ಕ್ರಮ ಕೈಗೊಂಡಿದೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೊಸದಾಗಿ ಅರ್ಜಿ ತಯಾರಿಸಿದ್ದು, ಸರ್ಕಾರ ಮತ್ತು ಹಣಕಾಸು ಇಲಾಖೆಗೆ ಸಲ್ಲಿಸಿದೆ. ಮನೆ ಯಜಮಾನಿಯ ವಿವರ, ಮತದಾರರ ಗುರುತಿನ ವಿವರ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ, ಈ ಹಿಂದೆ ಮನೆಯಲ್ಲಿ ಎಷ್ಟು ಸದಸ್ಯರಿಗೆ ಹಣ ಬರುತ್ತಿತ್ತು, ಜಾತಿಯ ವಿವರ, ಪತಿಯ ಹೆಸರು-ಆಧಾರ್ ಸಂಖ್ಯೆ ಸೇರಿದಂತೆ ಹಲವು ಮಾಹಿತಿಗಳನ್ನು ಒಳಗೊಂಡ ಹೊಸ ಅರ್ಜಿ ನಮೂನೆ ತಯಾರಾಗುತ್ತಿದೆ.

ಈಗಾಗಲೇ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಯಿಂದಾಗಿ ನಕಲಿ ಹಾಗೂ ನಿಧನರಾದವರು ಸೇರಿದಂತೆ ಲಕ್ಷಾಂತರ ಹೆಸರುಗಳನ್ನು ಕೈಬಿಡಲಾಗಿದ್ದು, ಗೃಹಲಕ್ಷ್ಮಿ ಯೋಜನೆಯ ಮರುನೋಂದಣಿಯಿಂದಲೂ ಸಾಕಷ್ಟು ಮಂದಿ ಅನರ್ಹರು ಯೋಜನೆಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಸೆಪ್ಟೆಂಬರ್ ನಂತರ ಈ ನವೀಕರಣ ಪ್ರಕ್ರಿಯೆ ನಡೆಯಲಿದೆ.

BREAKING.. ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ: ಅಂಗೀಕಾರ ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಗುರುವಾರವೇ ನಾಗೇಂದ್ರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲುಪಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ರಾಜೀನಾಮೆಯನ್ನು ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಿ ಮುಂದುವರಿಯಬೇಕೇ ಎಂಬ ಗೊಂದಲದಲ್ಲಿ ಪಕ್ಷದ ವರಿಷ್ಠರು ಹಾಗೂ ನಾಯಕತ್ವವಿದ್ದು, ಈವರೆಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ನಾಗೇಂದ್ರ ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ನಾಯಕತ್ವದ ಮುಂದಿಟ್ಟಿದ್ದು, ಸರ್ಕಾರಕ್ಕೆ ಮುಜುಗರವಾಗದಂತೆ ಹೆಜ್ಜೆಯಿಡಲು ಮುಂದಾಗಿದ್ದಾರೆ. ರಾಜೀನಾಮೆ ಅಂಗೀಕಾರದ ಕುರಿತು ಪಕ್ಷದ ಹೈಕಮಾಂಡ್ ಹಾಗೂ ನಾಯಕತ್ವದ ಮಟ್ಟದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿದ್ದು, ರಾಜಕೀಯ ಲಾಭ-ನಷ್ಟಗಳ ಲೆಕ್ಕಾಚಾರದ ನಂತರವೇ ಅಂತಿಮ ಘೋಷಣೆ ಹೊರಬೀಳುವ ಸಾಧ್ಯತೆಯಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೆಪ್ಟೆಂಬರ್ 1ರಿಂದ 10 ದಿನಗಳ ಕಾಲ ಬಳ್ಳಾರಿ ಚಲೋ ಪಾದಯಾತ್ರೆ ಘೋಷಿಸಿದೆ. ಬಿಜೆಪಿ ಪಾದಯಾತ್ರೆಗೆ ಮುನ್ನವೇ ನಾಗೇಂದ್ರ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ, ಸಿಎಂ ಮತ್ತು ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ.

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ ಪ್ರಕರಣ: ಸೆಕ್ಷನ್ 79 ರಕ್ಷಣೆ ಕೋರಿದ ಅಮೆಜಾನ್

0

ಬೆಂಗಳೂರು: ದಿವಂಗತ ಪತ್ರಕರ್ತ ರವಿ ಬೆಳಗೆರೆ ಅವರ ‘ಹೇಳಿ ಹೋಗು ಕಾರಣ’ ಕಾದಂಬರಿಯ ನಕಲಿ ಪ್ರತಿಗಳ ಮಾರಾಟ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ಮಧ್ಯವರ್ತಿಯಾಗಿರುವ ಅಮೆಜಾನ್ ಕಂಪೆನಿ ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಸೆಕ್ಷನ್ 79ರಡಿ ರಕ್ಷಣೆ ಒದಗಿಸಬೇಕು ಎಂದು ಹೈಕೋರ್ಟ್‌ಗೆ ಮನವಿ ಮಾಡಿದೆ.

ಇ-ಕಾಮರ್ಸ್ ವೇದಿಕೆಗಳಲ್ಲಿ ನಕಲಿ ಪುಸ್ತಕಗಳ ಮಾರಾಟಕ್ಕೆ ಸಂಬಂಧಿಸಿದಂತೆ ಪುಸ್ತಕದ ಹಕ್ಕುಸ್ವಾಮ್ಯ ಹೊಂದಿರುವ ಭಾವನಾ ಬೆಳಗೆರೆ ದಾಖಲಿಸಿರುವ ಪ್ರಕರಣ ರದ್ದು ಕೋರಿ ಅಮೆಜಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠಕ್ಕೆ ಅಮೆಜಾನ್ ಈ ಮಾಹಿತಿ ನೀಡಿದೆ.

ವಿಚಾರಣೆ ವೇಳೆ ಅಮೆಜಾನ್ ಪರ ವಕೀಲರು, ಅರ್ಜಿದಾರ ಕಂಪನಿ ಕೇವಲ ಮಾರಾಟಗಾರರು ಮತ್ತು ಖರೀದಿದಾರರನ್ನು ಸಂಪರ್ಕಿಸುವ ಒಂದು ವೇದಿಕೆಯನ್ನಷ್ಟೇ ಒದಗಿಸುತ್ತದೆ ಎಂದೂ, ಮೂರನೇ ವ್ಯಕ್ತಿಯ ಮಾರಾಟಗಾರರು ಎಸಗುವ ಹಕ್ಕುಸ್ವಾಮ್ಯ ಉಲ್ಲಂಘನೆಗೆ ಕಂಪನಿಯನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದೂ ವಾದಿಸಿದರು. ತಮ್ಮ ವೇದಿಕೆಯಲ್ಲಿ ಕಾರ್ಯಾಚರಣೆ ನಡೆಸುವ ಮಾರಾಟಗಾರರ ವಿಚಾರದಲ್ಲಿ ಕಂಪನಿ ಅಗತ್ಯ ನಿಗಾ ಮತ್ತು ತನಿಖಾ ಕ್ರಮಗಳನ್ನು ಪಾಲಿಸಿದೆ ಎಂದು ಸ್ಪಷ್ಟಪಡಿಸಿದರು.

ಇನ್ವೆಂಟರಿ ಆಧಾರಿತ ಮಾದರಿಯಲ್ಲಿ ಕಂಪನಿಗಳೇ ಖುದ್ದಾಗಿ ಉತ್ಪನ್ನ ಖರೀದಿಸಿ, ಸಂಗ್ರಹಿಸಿ, ಬೆಲೆ ನಿಗದಿಪಡಿಸಿ ಮಾರಾಟ ಮಾಡುತ್ತವೆ, ಆದರೆ ಅಮೆಜಾನ್ ಅಂತಹ ಮಾದರಿ ಹೊಂದಿಲ್ಲದೆ ಕೇವಲ ಮೂರನೇ ವ್ಯಕ್ತಿಯ ಮಾರಾಟಗಾರರಿಗೆ ಮುಕ್ತ ಮಾರುಕಟ್ಟೆ ವೇದಿಕೆಯನ್ನಷ್ಟೇ ಕಲ್ಪಿಸುತ್ತದೆ ಎಂದ ವಕೀಲರು, ಈ ಹಿನ್ನೆಲೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79(2) ಮತ್ತು (3)ರ ಪ್ರಕಾರ ಮಧ್ಯವರ್ತಿಯಾಗಿರುವ ಕಂಪನಿ ನಾಗರಿಕ ಅಥವಾ ಕ್ರಿಮಿನಲ್ ಹೊಣೆಗಾರಿಕೆಯಿಂದ ವಿನಾಯಿತಿ ಪಡೆಯಲು ಅರ್ಹವಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಸೆಕ್ಷನ್ 79(3)(b) ಅಡಿ ನ್ಯಾಯಾಲಯದಿಂದ ಆದೇಶ ಬರುವುದಕ್ಕೂ ಮುನ್ನ ದೂರು ಬಂದ ತಕ್ಷಣವೇ ಅಮೆಜಾನ್ ಸ್ವಯಂಪ್ರೇರಿತವಾಗಿ ಎಲ್ಲಾ 12 ಮಾರಾಟಗಾರರ ಉತ್ಪನ್ನಗಳ ಪಟ್ಟಿಯನ್ನು ತೆಗೆದುಹಾಕಿದ್ದು, ತನಿಖಾಧಿಕಾರಿಗೆ ಸಂಬಂಧಪಟ್ಟ ಮಾರಾಟಗಾರರ ಸಂಪೂರ್ಣ ವಿವರಗಳನ್ನೂ ಒದಗಿಸಲಾಗಿದೆ ಎಂದು ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

ಪ್ರಕರಣದ ಹಿನ್ನೆಲೆ: ದಿವಂಗತ ಪತ್ರಕರ್ತ ರವಿ ಬೆಳಗೆರೆ ಅವರ ‘ಹೇಳಿ ಹೋಗು ಕಾರಣ’ ಕಾದಂಬರಿಯ ಹಕ್ಕುಸ್ವಾಮ್ಯ ಹೊಂದಿರುವ ಭಾವನಾ ಬೆಳಗೆರೆ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕೃತಿಸ್ವಾಮ್ಯ ಕಾಯ್ದೆ-1957ರ ಸೆಕ್ಷನ್ 51(1)(b) ಮತ್ತು 63ರಡಿ ದಾಖಲಾಗಿರುವ ಈ ಪ್ರಕರಣದ ಮುಂದಿನ ವಿಚಾರಣೆ ಹಾಗೂ ಪ್ರಕ್ರಿಯೆಗಳಿಗೆ ಮೇ 19ರಂದು ಹೈಕೋರ್ಟ್ ತಡೆ ನೀಡಿತ್ತು.

ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಭಾರೀ ಕುಸಿತ: ಸದ್ಯ ಡ್ಯಾಂನಲ್ಲಿ ಎಷ್ಟು ನೀರಿದೆ?

0

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಒಳಹರಿವಿನಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ.

ಕಳೆದ ಕೆಲವು ದಿನಗಳಿಂದ ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದರಿಂದ ಕೆಆರ್‌ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗಿತ್ತು. ನಿನ್ನೆ 17,427 ಕ್ಯೂಸೆಕ್ ಇದ್ದ ಒಳಹರಿವು ಇದೀಗ 10,028 ಕ್ಯೂಸೆಕ್‌ಗೆ ಇಳಿಕೆಯಾಗಿದೆ.

ಈ ವಾರದ ಆರಂಭದಲ್ಲಿ ಕೊಡಗು ಭಾಗದಲ್ಲಿ ಭಾರೀ ಮಳೆಯಾಗಿದ್ದ ಪರಿಣಾಮ ಕೆಆರ್‌ಎಸ್‌ಗೆ ನೀರಿನ ಹರಿವು ಹೆಚ್ಚಾಗಿತ್ತು. ಬುಧವಾರ ಬೆಳಗ್ಗೆ 9,438 ಕ್ಯೂಸೆಕ್ ಇದ್ದ ಒಳಹರಿವು, ನಿರಂತರ ಮಳೆಯ ಹಿನ್ನೆಲೆಯಲ್ಲಿ ಗುರುವಾರ 17,427 ಕ್ಯೂಸೆಕ್‌ಗೆ ಏರಿಕೆಯಾಗಿತ್ತು. ಇದೀಗ ಮಳೆ ಪ್ರಮಾಣ ತಗ್ಗಿರುವುದರಿಂದ ಒಳಹರಿವು ಮತ್ತೆ ಇಳಿಕೆಯಾಗಿದೆ.

KRS ಡ್ಯಾಂನ ಇಂದಿನ ನೀರಿನ ಮಟ್ಟ:

  • ಗರಿಷ್ಠ ನೀರಿನ ಮಟ್ಟ: 124.80 ಅಡಿ
  • ಇಂದಿನ ನೀರಿನ ಮಟ್ಟ: 110.20 ಅಡಿ
  • ಇಂದಿನ ಒಳಹರಿವು: 10,028 ಕ್ಯೂಸೆಕ್
  • ಗರಿಷ್ಠ ಸಂಗ್ರಹ ಸಾಮರ್ಥ್ಯ: 49.452 ಟಿಎಂಸಿ
  • ಪ್ರಸ್ತುತ ನೀರಿನ ಸಂಗ್ರಹ: 31.923 ಟಿಎಂಸಿ

ಒಳಹರಿವು ಕಡಿಮೆಯಾಗಿದ್ದರೂ ಜಲಾಶಯದಲ್ಲಿ ನೀರಿನ ಮಟ್ಟ 110 ಅಡಿ ದಾಟಿದೆ. ಹೀಗಾಗಿ ಸದ್ಯಕ್ಕೆ ರೈತರ ಕೃಷಿ ಚಟುವಟಿಕೆಗಳು ಹಾಗೂ ಕುಡಿಯುವ ನೀರಿನ ಅಗತ್ಯಗಳಿಗೆ ಜಲಾಶಯದಲ್ಲಿ ಸಾಕಷ್ಟು ನೀರು ಲಭ್ಯವಿದೆ.

ಮುಂದಿನ ದಿನಗಳಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೇಗಿರಲಿದೆ ಎಂಬುದರ ಮೇಲೆ ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣವೂ ಅವಲಂಬಿತವಾಗಿರಲಿದೆ.