Home Blog

ರಾಜ್ಯ ಕಾಂಗ್ರೆಸ್​​ʼನಲ್ಲಿ ‘ಪವರ್ ಫೈಟ್’: ಸಿಎಂ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮೊದಲ ರಿಯಾಕ್ಷನ್

0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ಇದೀಗ ಇನ್ನಷ್ಟು ಹೆಚ್ಚಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2.5 ವರ್ಷ ಪೂರ್ಣಗೊಳಿಸುತ್ತಿದ್ದ ಹಾಗೆಯೇ ಅಧಿಕಾರ ಹಂಚಿಕೆಯ ಒಳಸುಳಿ ಹೊರಚಿಮ್ಮುವ ಲಕ್ಷಣ ಕಾಣುತ್ತಿದೆ. ಡಿ.ಕೆ.ಶಿವಕುಮಾರ್ ಬಣದ ಕೆಲವರು ದೆಹಲಿ ಯಾತ್ರೆ ನಡೆಸಿದ್ದರೆ, ಇತ್ತ ಸಿಎಂ ಆಪ್ತ ಬಣದ ಸಚಿವರು ಡಿನ್ನರ್ ಮೀಟಿಂಗ್ ಆರಂಭಿಸಿದ್ದಾರೆ.

ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೂರು ದಿನದಿಂದ ಇಲ್ಲೇ ಇದ್ದೇನೆ. ನನಗೆ ತುಂಬಾ ಬೇಜಾರ್ ಆಗಿದೆ. ನನ್ನ ಹತ್ತಿರ ಹೇಳಲು ಏನು ಇಲ್ಲ.ಸಧ್ಯದ ಬೆಳವಣಿಗೆ ಬಗ್ಗೆ ನಾನು ಏನು ಹೇಳಲ್ಲ.

ನಡೆದ ವಿದ್ಯಮಾನದ ಬಗ್ಗೆ ನನಗೆ ಹೇಳಲು ಏನೂ ಇಲ್ಲ. ದಯವಿಟ್ಟು ನೀವೂ ಇಲ್ಲಿ ಕಾಯುವುದು ಬೇಡ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ತಗೆದುಕೊಳ್ಳುತ್ತೆ ಎಂದು ಕರ್ನಾಟಕ ಕಾಂಗ್ರೆಸ್​​​ನಲ್ಲಿ ನಡೆಯುತ್ತಿರುವ ಗುಂಪುಗಾರಿಕೆ ಬಗ್ಗೆ ಬಹಿರಂಗವಾಗಿಯೇ ಬೇಸರ ಹೊರಹಾಕಿದರು.

ಅಧಿಕಾರ ಹಂಚಿಕೆ ಚರ್ಚೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಸಿದ್ದರಾಮಯ್ಯ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಮುಂದಿನ ಬಜೆಟ್ ಮಂಡಿಸುತ್ತೇನೆ ಎನ್ನುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಇತ್ತ ಡಿ.ಕೆ.ಬ್ರದರ್ಸ್ ಮನೆಯಲ್ಲೇ ಕೂತು ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದು, ಕೆಲ ಶಾಸಕರ ಜೊತೆಗೂ ಚರ್ಚಿಸಿದ್ದಾರೆ.

ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲಾ, 2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಹೆಚ್.ಸಿ ಮಹದೇವಪ್ಪ

0

ಬೆಂಗಳೂರು: ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲಾ, 2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈಗ ಸಿಎಂ ಕುರ್ಚಿ ಖಾಲಿ ಇಲ್ಲಾ. 2028ರವರೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸಿಎಂ ಇರ್ತಾರೆ.

2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ರೇಸ್ ಶುರುವಾದಾಗ ಪ್ಲೇಯರ್ ಆಯ್ಕೆ ಮಾಡ್ತಾರೆ. ಆ ರೀತಿಯ ಸನ್ನಿವೇಶ ಬಂದಾಗ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಅಧ್ಯಕ್ಷರು ನೀವೆಲ್ಲಾ ಆಕ್ಟೀವ್ ಆಗಿ, ಪಕ್ಷ ಕಟ್ಟಿ ಎಂದಿದ್ದಾರೆ ಎಂದು ಹೇಳಿದ್ದಾರೆ.

ಸಿಎಂ ಆಕಾಂಕ್ಷಿ ಎಂದು ಪರಮೇಶ್ವರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ಯಾವುದು ಕೂಡ ಚರ್ಚೆ ಆಗಿಲ್ಲ. ದಲಿತ ಸಿಎಂ ರೇಸ್ ಬಗ್ಗೆಯೂ ಚರ್ಚೆ ಆಗಿಲ್ಲ. ಡಿನ್ನರ್ ಮೀಟಿಂಗ್ ವಿಚಾರ ಮಾತನಾಡಿಲ್ಲ. ಪಕ್ಷ ಸಂಘಟನೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಸೌಹಾರ್ದಯುತವಾಗಿ ಚರ್ಚೆ ಮಾಡಿದ್ದೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ನೀತಿಗೆ ಜನ ಬೆಂಬಲ ನೀಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇವೆ ಎಂದಿದ್ದಾರೆ.

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್! ತೀವ್ರ ಕುತೂಹಲ

0

ಬೆಂಗಳೂರು: ನವೆಂಬರ್ 28 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಹ್ವಾನ ನೀಡಿದರು.

ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು, ಅಂದಿನ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಆಹ್ವಾನ ಪತ್ರಿಕೆ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರು ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆಗಳಿದ್ದು, ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದರು.

ಹೈ ಕಮಾಂಡ್‌ ಸೂಚನೆ ಕೊಟ್ಟರೂ ಸಹ ಸಿದ್ದರಾಮಯ್ಯ ರಾಜೀನಾಮೆ ಕೊಡೋದಿಲ್ಲ: ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ: ಹೈ ಕಮಾಂಡ್‌ ಸೂಚನೆ ಕೊಟ್ಟರೂ ಸಹ ಸಿದ್ದರಾಮಯ್ಯ ರಾಜೀನಾಮೆ ಕೊಡೋದಿಲ್ಲ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,

ಅವರೇ ಹೈಕಮಾಂಡ್ ಅಲ್ಲ. ಅವರ ಅಸ್ತಿತ್ವ ಸಹ ಇಲ್ಲ. ಹೀಗಾಗಿ, ಸರ್ಕಾರ ಪತನದ ಅಂಚಿನಲ್ಲಿದೆ. ಅಧಿಕಾರದಲ್ಲಿರಿ ಅಂತ ಸಂಗೀತ ನುಡಿಸುತ್ತಿರುತ್ತಾರೆ. ಡಿಕೆ ಮುಖ್ಯಮಂತ್ರಿ ಆಗಬೇಕು ಅನ್ನೋ ಹಠವನ್ನ ಬಿಡೋದಿಲ್ಲ. ಇವರ ಗುದ್ದಾಟಕ್ಕೆ ಸರ್ಕಾರ ಪತನ ಆಗುತ್ತೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳಲು ಸಿದ್ದರಾಮಯ್ಯ ಕಾರಣ ಎಂಬ ದೇವೇಗೌಡರ ಹೇಳಿಕೆ ಕುರಿತು ಮಾತನಾಡಿ, ಅವರು ಅನುಭವ ಇದ್ದ ವ್ಯಕ್ತಿ. ಜೆಡಿಎಸ್‌ನಲ್ಲಿ ಸಿದ್ದರಾಮಯ್ಯ ಇದ್ದಾಗ ಅವರನ್ನ ನೋಡಿದವರು. ಆ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಡಬೇಕು ಎಂದು ಟಾಂಗ್‌ ಕೊಟ್ಟಿದ್ದಾರೆ.

 ಸಂಭ್ರಮದಲ್ಲಿದ್ದ ಜೋಡಿಗೆ ಬಿಗ್ ಶಾಕ್..! ಸ್ಮೃತಿ ಮಂಧನಾ – ಪಲಾಶ್ ಮದುವೆ ಮುಂದೂಡಿಕೆ

0

ಮುಂಬೈ: ಟೀಂ ಇಂಡಿಯಾದ ಪ್ರಮುಖ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನಾ ವಿವಾಹ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮಂಧಾನಾ ಅವರ ಹುಟ್ಟೂರಾದ ಸಾಂಗ್ಲಿಯಲ್ಲಿ ಇಂದು ಮದುವೆ ಸಮಾರಂಭ ನಡೆಯುತ್ತಿತ್ತು.

ಕಾರ್ಯಕ್ರಮ ನಡೆಯುತ್ತಿರುವ ವೇಳೆ ಸ್ಮೃತಿ ಮಂಧಾನಾ  ತಂದೆ ಶ್ರೀನಿವಾಸ್ ಅರಿಗೆ ಲಘು ಹೃದಯಾಘಾತ ಉಂಟಾಗಿದ್ದು, ತಕ್ಷಣವೇ ಕಾರ್ಯಕ್ರಮ ಸ್ಥಳಕ್ಕೆ ಆಂಬುಲೆನ್ಸ್‌ ಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯಕ್ಕೆ ಒಳಗಾದ ಬೆನ್ನಲ್ಲೇ ಕಾರ್ಯಕ್ರಮ ನಡೆಯುತ್ತಿದ್ದ ಜಾಗಕ್ಕೆ ಅಂಬುಲೆನ್ಸ್‌ ಬಂದು ಶ್ರೀನಿವಾಸ್‌ ಅವರನ್ನು ಕರೆದುಕೊಂಡು ಹೋಗಿದೆ.

ಸ್ಮೃತಿ ಮಂಧಾನಾ ಮತ್ತು ಸಂಗೀತ ಸಂಯೋಜಕ, ಚಲನಚಿತ್ರ ನಿರ್ಮಾಪಕ ಪಲಾಶ್ ಮುಚ್ಚಲ್ ಅವರ ವಿವಾಹ ಕಾರ್ಯಕ್ರಮ ಭರ್ಜರಿಯಾಗಿ ನಡೆದಿತ್ತು. ಇವರ ವಿವಾಹ ಸಂಭ್ರಮದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು ಜನ ಪ್ರತ್ಯಕ್ಷ, ಪರೋಕ್ಷವಾಗಿ ದುಡಿದಿದ್ದಾರೆ: ಸತೀಶ್ ಜಾರಕಿಹೊಳಿ

0

ಬೆಳಗಾವಿ: ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು ಜನ ಪ್ರತ್ಯಕ್ಷ, ಪರೋಕ್ಷವಾಗಿ ದುಡಿದಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಕ್ಷ ಅಧಿಕಾರಕ್ಕೆ ಬರಲು ಎಲ್ಲರ ಸಹಕಾರವಿದೆ.

ಮೊದಲ‌ ಬಾರಿ ಆರಿಸಿ ಬಂದವರೂ ಸೇರಿ ಬಹಳಷ್ಟು ಶಾಸಕರು ಸಂಕಷ್ಟದಲ್ಲಿದ್ದಾರೆ. ಪಕ್ಷ, ಶಾಸಕರು ಮತ್ತು ಕಾರ್ಯಕರ್ತರ ಶ್ರಮದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎನ್ನುವುದನ್ನು ಗಮನಿಸಬೇಕು‌. ಎಲ್ಲರಿಗೂ ಅಷ್ಟೇ ಪ್ರಾಮುಖ್ಯತೆ ಸಿಗಬೇಕು. ಎಲ್ಲರ ಸಹಕಾರವಿದೆ ಎಂದರು.

ಅಧಿಕಾರಕ್ಕೆ ಬರಲು ಅವರದೇ ಸ್ವಂತ ಎಫರ್ಟ್ ಇದೆ. ಹಾಗಾಗಿ, ಸ್ವಾಭಾವಿಕವಾಗಿ ಎಲ್ಲರೂ ಕ್ಲೈಮ್ ಮಾಡುತ್ತಾರೆ. ಆದರೆ, ಅದರ ಶ್ರೇಯಸ್ಸನ್ನು ಕೆಲವೇ ಜನರು ತೆಗೆದುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ. ಎಲ್ಲರಿಗೂ ಅಧಿಕಾರ ಸಿಗಬೇಕು. ಡಾ.ಜಿ.ಪರಮೇಶ್ವರ್​ ಅವರು 7 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಅವರು ಬಹಳಷ್ಟು ಕಾರ್ಯಕ್ರಮ‌ ಮಾಡಿದ್ದರು ಎಂದು ಹೇಳಿದರು.

ಲೈಂಗಿಕ ಸಮಸ್ಯೆಗೆ ಪರಿಹಾರ ನೀಡ್ತೀವಿ ಅಂತಾ ಟೆಕ್ಕಿಗೆ 48 ಲಕ್ಷ ವಂಚನೆ: ನಕಲಿ ಗುರೂಜಿ ವಿರುದ್ಧ ದೂರು

0

ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡ್ತೀವಿ ಅಂತಾ ಟೆಕ್ಕಿಗೆ 48 ಲಕ್ಷ ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ತೇಜಸ್ ಎಂಬ ಟೆಕ್ಕಿಗೆ 48 ಲಕ್ಷ ವಂಚನೆ ಮಾಡಲಾಗಿದ್ದು, ಟೆಂಟ್ ನ ಗುರೂಜಿ ನಂಬಿ ಕಿಡ್ನಿ ಸಮಸ್ಯೆ ತಂದುಕೊಳ್ಳೋದಲ್ದೆ 48 ಲಕ್ಷ ಕಳೆದುಕೊಂಡಿದ್ದಾರೆ. ಜ್ಞಾನ ಭಾರತೀ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಲೈಂಗಿಕ ಸಮಸ್ಯೆಯಿಂದ ಬಳಲುತ್ತಿದ್ದ ಟೆಕ್ಕಿ ತೇಜಸ್​​ ಎಂಬವರು ಕೆಂಗೇರಿ ಸನೈರಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆಸ್ಪತ್ರೆಗೆ ಹೋಗಿ ಬರುವಾಗ ರಸ್ತೆಯ ಪಕ್ಕದ ಟೆಂಟ್ ಬಳಿ ಹಾಕಲಾಗಿದ್ದ ಲೈಂಗಿಕ ಸಮಸ್ಯೆಗೆ ಚಿಕಿತ್ಸೆ ಬೋರ್ಡ್​ ಗಮನಿಸಿದ್ದ ತೇಜಸ್​ ಅಲ್ಲಿಗೂ ಭೇಟಿ ನೀಡಿದ್ದರು. ಆ ವೇಳೆ ಅಲ್ಲಿದ್ದಾತ ವಿಜಯ್ ಗುರೂಜಿಗೆ ಹೇಳಿ ಚಿಕಿತ್ಸೆ ಕೊಡಿಸುತ್ತೇನೆಂದು ಟೆಕ್ಕಿಗೆ ಭರವಸೆ ನೀಡಿದ್ದಾನೆ. 1 ಗ್ರಾಂ ಔಷಧಿಗೆ 1,60,000 ರೂ. ಬೆಲೆ ಇರುವ ದೇವರಾಜ್ ಬೂಟಿ ಹೆಸರಿನ ಔಷಧವನ್ನು ಯಶವಂತಪುರದ ವಿಜಯಲಕ್ಷ್ಮೀ ಆಯುರ್ವೇದಿಕ್​​ ಶಾಪ್​ನಲ್ಲಿ ಮಾತ್ರ ಖರೀದಿಸಬೇಕೆಂದು ಒತ್ತಾಯ ಮಾಡಿದ್ದಾನೆ.

ಅಲ್ಲದೆ ಆನ್‌ಲೈನ್ ಪೇಮೆಂಟ್ ಬೇಡ, ಯಾರ ಜೊತೆಗೆ ಬರಬಾರದೆಂದು ಷರತ್ತು ವಿಧಿಸಿದ್ದ ಎನ್ನಲಾಗಿದೆ. ಆತ ನೀಡಿದ್ದ ಸಲಹೆಯಂತೆ ತೇಜಸ್​​ ಹಲವು ಬಾರಿ ದೇವರಾಜ್ ಬೂಟಿ & ಭವನ ಬೂಟಿ ತೈಲ ಖರೀದಿಸಿದ್ದರು. ಒಟ್ಟು 17 ಲಕ್ಷ ರೂ.ಗಳನ್ನು ಔಷಧಕ್ಕಾಗಿ ಖರ್ಚು ಮಾಡಿದ್ದರು. ಆ ಬಳಿಕ ಹಣದ ಕೊರತೆಯಿಂದ HDFC ಬ್ಯಾಂಕ್ ಖಾತೆಯಲ್ಲಿ 20 ಲಕ್ಷ ರೂ. ಲೋನ್ ಪಡೆದು ಒಟ್ಟು 18 ಗ್ರಾಂ ಔಷಧ ಖರೀದಿಸಿದ್ದರು.

ಸಮಸ್ಯೆ ಇದ್ದಾಗ ಬರದಿದ್ದರೆ ಮತ್ತಷ್ಟು ಸಮಸ್ಯೆ ಆಗುವುದಾಗಿ ಆರೋಪಿಗಳು ತೇಜಸ್​​ಗೆ ಬೆದರಿಕೆ ಹಾಕಿದ್ದು, ಕೊನೆಗೆ ಆರೋಗ್ಯ ಸಮಸ್ಯೆಯಿಂದ ರಕ್ತ ಪರೀಕ್ಷೆ ಮಾಡಿಸಿದಾಗ ಕಿಡ್ನಿಗೆ ಸಮಸ್ಯೆ ಆಗಿರುವುದು ಪತ್ತೆಯಾಗಿದೆ. ಆಯುರ್ವೇದ ಚಿಕಿತ್ಸೆಯಿಂದ ಕಿಡ್ನಿಗೆ ಸಮಸ್ಯೆ ಆಗಿರುವುದು ಗೊತ್ತಾದ ಬಳಿಕ ಎಚ್ಚೆತ್ತ ಅವರು, ಪೊಲೀಸರ ಮೊರೆ ಹೋಗಿದ್ದಾರೆ. ಘಟನೆ ಸಂಬಂಧ ವಿಜಯ್ ಗೂರೂಜಿ ಎಂಬವರು ಸೇರಿ ವಿಜಯಲಕ್ಷ್ಮೀ ಆಯುರ್ವೇದಿಕ್ ಶಾಪ್​​ ವಿರುದ್ಧ ಪ್ರಕರಣ ದಾಖಲಾಗಿದೆ.

ನಾನು ಯಾವಾಗಲೂ CM ರೇಸ್‌ನಲ್ಲಿ ಇರ್ತೀನಿ: ಪರೋಕ್ಷವಾಗಿ ಸಿಎಂ ಆಸೆ ಬಿಚ್ಚಿಟ್ಟ ಪರಮೇಶ್ವರ್

0

ಬೆಂಗಳೂರು: ನಾನು ಯಾವಾಗಲೂ ಮುಖ್ಯಮಂತ್ರಿ ರೇಸ್‌ನಲ್ಲಿ ಇರ್ತೀನಿ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪರೋಕ್ಷವಾಗಿ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 2013ರಲ್ಲಿ ನಾನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿದ್ದಾಗ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದೇವೆ.

ಆ ಸಂದರ್ಭದಲ್ಲಿ ನಾನು ಚುನಾವಣೆಯಲ್ಲಿ ಪರಾಭವಗೊಂಡಿದ್ದರಿಂದ ಸಿಎಂ ಆಗುವ ಅವಕಾಶ ತಪ್ಪಿತ್ತು. ಸಿಎಂ ಕುರ್ಚಿ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ.

ಖರ್ಗೆಯವರು ಕರ್ನಾಟಕದ ರಾಜಕಾರಣವನ್ನು 50 ವರ್ಷಗಳ ಸುದೀರ್ಘ ಅನುಭವದೊಂದಿಗೆ ಚೆನ್ನಾಗಿ ಬಲ್ಲವರಾಗಿರುವುದರಿಂದ, ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಹಿಂದಿರುಗಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

SMAT 2025-26: ಸಯ್ಯದ್​ ಮುಷ್ತಾಕ್​ ಅಲಿ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ

0

ನವೆಂಬರ್ 26ರಿಂದ ಆರಂಭವಾಗಲಿರುವ ದೇಶೀಯ ಟಿ20 ಕ್ರಿಕೆಟ್ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಈ ತಂಡಕ್ಕೆ ಮಯಾಂಕ್ ಅಗರ್ವಾಲ್ ನಾಯಕತ್ವ ವಹಿಸಲಿದ್ದಾರೆ. ಈ ಬಾರಿ ತಂಡದಲ್ಲಿ ಎರಡು ಹೊಸ ಮುಖಗಳು ಅವಕಾಶ ಪಡೆದಿವೆ.

ಶ್ರೀಕರ್ ಶೆಟ್ಟಿ ಮತ್ತು ಶ್ರೀವತ್ಸ ಆಚಾರ್ಯ ಮೊದಲ ಬಾರಿಗೆ ಕರ್ನಾಟಕ ಟಿ20 ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಇದೇ ವೇಳೆ ಅನುಭವಿ ಬ್ಯಾಟರ್ ಕರುಣ್ ನಾಯರ್ ಮರು ಪ್ರವೇಶ ಮಾಡಿದ್ದು, ತಂಡದ ಬಲವನ್ನು ಹೆಚ್ಚಿಸಿದೆ.

ಕರ್ನಾಟಕ ಟಿ20 ತಂಡ: ಮಯಾಂಕ್ ಅಗರ್ವಾಲ್ (ನಾಯಕ), ಮ್ಯಾಕ್ನೀಲ್ ನೊರೊನ್ಹಾ, ಶ್ರೀಜಿತ್ ಕೆಎಲ್ (ವಿಕೆಟ್ ಕೀಪರ್), ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಅಭಿನವ್ ಮನೋಹರ್, ಶ್ರೇಯಸ್ ಗೋಪಾಲ್, ಶಿಖರ್ ಶೆಟ್ಟಿ, ವೈಶಾಕ್ ವಿಜಯಕುಮಾರ್, ವಿದ್ವತ್ ಕಾವೇರಪ್ಪ, ವಿದ್ಯಾಧರ್ ಪಾಟೀಲ್, ಶ್ರೀವತ್ಸ ಆರ್ ಆಚಾರ್ಯ, ಶುಭಾಂಗ್ ಹೆಗ್ಡೆ, ಪ್ರವೀಣ್ ದುಬೆ, ಶರತ್ ಬಿಆರ್​, ದೇವದತ್ ಪಡಿಕ್ಕಲ್.

ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಮೊದಲ ಸುತ್ತಿನಲ್ಲಿ ಕರ್ನಾಟಕ ತಂಡವು ಉತ್ತರಾಖಂಡ್ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಜಾರ್ಖಂಡ್ ಹಾಗೂ ರಾಜಸ್ಥಾನ್ ತಂಡಗಳ ವಿರುದ್ಧ ಸೆಣಸಲಿದೆ. ಹಾಗೆಯೇ ಕರ್ನಾಟಕ ತಂಡದ ನಾಲ್ಕನೇ ಎದುರಾಳಿ ತಮಿಳುನಾಡು.  ಈ ಪಂದ್ಯಗಳ ಬಳಿಕ ಕರ್ನಾಟಕ ತಂಡವು ದೆಹಲಿ, ಸೌರಾಷ್ಟ್ರ ಹಾಗೂ ತ್ರಿಪುರ ತಂಡಗಳನ್ನು ಎದುರಿಸಲಿದೆ.

ರಹಸ್ಯವಾಗಿ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿಯಾದ ಯತೀಂದ್ರ ಸಿದ್ದರಾಮಯ್ಯ!

0

ಹುಬ್ಬಳ್ಳಿ: ಡಿ.ಕೆ. ಶಿವಕುಮಾರ್ ಜೈಲಿನಲ್ಲಿ ವೀರೇಂದ್ರ ಪಪ್ಪಿ ಮತ್ತು ವಿನಯ್ ಕುಲಕರ್ಣಿ ರನ್ನು ಭೇಟಿ ಮಾಡಿದ್ದರು. ಈ ಭೇಟಿ ರಾಜಕೀಯದಲ್ಲಿ ಹೊಸ ತಿರುವು ಸೃಷ್ಟಿಸಿತ್ತು. ಇದಕ್ಕೆ ಪ್ರತಿಯಾಗಿ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೂಡ ರಾಜಕೀಯ ಅಖಾಡಕ್ಕೆ ಇಳಿದಿರುವುದು ಗಮನ ಸೆಳೆದಿದೆ.

ಹುಬ್ಬಳ್ಳಿ ಶಾಸಕ ಪ್ರಸಾದ್ ಅಬ್ಬಯ್ಯರನ್ನು ಯತೀಂದ್ರ ಸಿದ್ದರಾಮಯ್ಯ ರಹಸ್ಯವಾಗಿ ಭೇಟಿಯಾದ ವಿಚಾರ ಇದೀಗ ಕುತೂಹಲ ಮೂಡಿಸಿದೆ. ಈ ಭೇಟಿ ನಂಬರ್ ಗೇಮ್ನ ಭಾಗವೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಹುಬ್ಬಳ್ಳಿಯ ಸಂತೋಷ ನಗರದಲ್ಲಿರುವ ಪ್ರಸಾದ್‌ ಅಬ್ಬಯ್ಯ ನಿವಾಸಕ್ಕೆ ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಅಬ್ಯಯ್ಯ, ಸಹಿ ಸಂಗ್ರಹಕ್ಕೆ ನನಗೆ ಯಾವುದೇ ಕರೆ ಬಂದಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ. ಮುಖ್ಯಮಂತ್ರಿ ಬದಲಾವಣೆಗೆ ಹೈಕಮಾಂಡ್ ಚಿಂತಿಸಿಲ್ಲ ಎಂದು ತಿಳಿಸಿದ್ದಾರೆ.

 

error: Content is protected !!