Home Blog

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ರೀತಿಯ ಆಟ ಆಡ್ತಾರೋ ಗೊತ್ತಿಲ್ಲ: ಶೋಭಾ ಕರಂದ್ಲಾಜೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತ ಚರ್ಚೆಗಳು ಜೋರಾಗಿರುವ ನಡುವೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಳೆಯ ಹುಲಿ. ಯಾವಾಗ ಯಾವ ರೀತಿಯ ರಾಜಕೀಯ ಆಟ ಆಡುತ್ತಾರೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೆ ಮುಖ್ಯಮಂತ್ರಿ ಬದಲಾವಣೆ ಕುರಿತ ಯಾವುದೇ ಚರ್ಚೆಗೆ ಖಚಿತತೆ ಇಲ್ಲ ಎಂದು ಅವರು ಹೇಳಿದರು. ಮೂರು ವರ್ಷದ ಸರ್ಕಾರದಲ್ಲಿ ಎರಡು ವರ್ಷಕ್ಕಿಂತ ಹೆಚ್ಚು ಕಾಲ ಮುಖ್ಯಮಂತ್ರಿ ಬದಲಾವಣೆ ವಿಚಾರವೇ ಕಾಂಗ್ರೆಸ್‌ನಲ್ಲಿ ಚರ್ಚೆಯಾಗುತ್ತಿದೆ. ಜನರ ಸಮಸ್ಯೆಗಳಿಗಿಂತ ಖುರ್ಚಿ ರಾಜಕೀಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಒಂದು ಕಡೆ ಬರಗಾಲ, ಮತ್ತೊಂದು ಕಡೆ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದ ಸಮಸ್ಯೆಗಳು ಉಂಟಾಗುತ್ತಿವೆ. ಗಾರ್ಬೇಜ್ ಹಗರಣದಂತಹ ವಿಚಾರಗಳು ಚರ್ಚೆಗೆ ಗ್ರಾಸವಾಗಿವೆ. ಆದರೆ ಇವೆಲ್ಲವನ್ನು ಬಿಟ್ಟು ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಪರಸ್ಪರ ಹೋರಾಟ ನಡೆಸುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಕಿಡಿಕಾರಿದರು.

ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಯತ್ನಿಸುತ್ತಿದ್ದರೆ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ರಾಜ್ಯದ ಜನರ ಸಮಸ್ಯೆಗಳು ಕಡೆಗಣನೆಯಾಗುತ್ತಿವೆ ಎಂದು ಅವರು ಆರೋಪಿಸಿದರು.

ಯಾವುದೇ ಸಚಿವರು ಜಿಲ್ಲೆಗಳ ಪ್ರವಾಸ ಮಾಡುತ್ತಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಕೆಲಸ ಮಾಡಲು ಕಾಂಗ್ರೆಸ್‌ಗೆ 135 ಸ್ಥಾನಗಳನ್ನು ನೀಡಿದ್ದಾರೆ. ಆದ್ದರಿಂದ ಅಧಿಕಾರದ ರಾಜಕೀಯ ಬಿಟ್ಟು ಜನರ ಪರ ಕೆಲಸ ಮಾಡಬೇಕು ಎಂದು ಶೋಭಾ ಕರಂದ್ಲಾಜೆ ಸರ್ಕಾರಕ್ಕೆ ತಿರುಗೇಟು ನೀಡಿದರು.

‘ಸಿದ್ದರಾಮಯ್ಯ ಬಳಿಕ ಕಾಂಗ್ರೆಸ್ ಸರ್ಕಾರ ಉಳಿಯಲ್ಲ’: ಅವಧಿಪೂರ್ವ ಚುನಾವಣೆಯ ಸುಳಿವು ಕೊಟ್ಟ ವಿಜಯೇಂದ್ರ!

ಶಿವಮೊಗ್ಗ: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಜೋರಾಗಿರುವ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ಭವಿಷ್ಯದ ಬಗ್ಗೆ ಭಾರೀ ಭವಿಷ್ಯ ನುಡಿದಿದ್ದಾರೆ. ಸಿದ್ದರಾಮಯ್ಯ ಬಿಟ್ಟು ಬೇರೆ ಯಾರೇ ಸಿಎಂ ಆದರೂ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ರಾಜ್ಯ ಸರ್ಕಾರದ ವೈಫಲ್ಯವನ್ನು ಒಪ್ಪಿಕೊಂಡಿದೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ವಿಚಾರ ಗಂಭೀರವಾಗಿ ಚರ್ಚೆಯಾಗಿದೆ ಎಂದು ವಿಜಯೇಂದ್ರ ಹೇಳಿದರು.

ಸಿದ್ದರಾಮಯ್ಯ ಅನುಭವಸಂಪನ್ನ ಮುಖ್ಯಮಂತ್ರಿ ಆದರೂ ಅವರ ಆಡಳಿತದಲ್ಲಿ ರಾಜ್ಯ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಾಲ್ಮೀಕಿ ನಿಗಮ, ಮೂಡಾ ಸೇರಿದಂತೆ ಹಲವು ಹಗರಣಗಳು ಸರ್ಕಾರದ ಇಮೇಜ್ ಹಾಳು ಮಾಡಿವೆ ಎಂದು ಆರೋಪಿಸಿದರು.

ಸಿಎಂ ಬದಲಾವಣೆ ನಂತರ ಕಾಂಗ್ರೆಸ್ ಒಳಜಗಳ ಮತ್ತಷ್ಟು ತೀವ್ರವಾಗಲಿದೆ. ಹೊಸ ಮುಖ್ಯಮಂತ್ರಿ ಆಯ್ಕೆ ಸುಲಭವಾಗುವುದಿಲ್ಲ. ಪರಿಣಾಮ ಸರ್ಕಾರದ ಸ್ಥಿರತೆ ಸಂಪೂರ್ಣ ಕುಸಿಯಲಿದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಆಡಳಿತ ಯಂತ್ರ ಕುಸಿದಿದೆ. ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್ ಸರ್ಕಾರದ ಪತನ ಖಚಿತ ಎಂದು ಹೇಳಿದ ಅವರು, ಬಿಜೆಪಿ ಮುಂದಿನ ಚುನಾವಣೆಗೆ ಸಂಘಟನೆ ಬಲಪಡಿಸಿ ಅಧಿಕಾರಕ್ಕೆ ಬರಲು ಸಜ್ಜಾಗಿದೆ ಎಂದರು.

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್ ಅಡ್ಡೆಯಾಗಿ ಮಾರ್ಪಡಿಸಿದ್ದ ಜೂಜಾಟ ಗ್ಯಾಂಗ್ ಮೇಲೆ ಗದಗ ಟೌನ್ ಪೊಲೀಸರು ಸಿನಿಮೀಯ ಶೈಲಿಯಲ್ಲಿ ದಾಳಿ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.

ನಗರದ ಕಲಾಮಂದಿರ ರಸ್ತೆಯ ಶ್ರೀ ತೋಂಟದಾರ್ಯ ವಾಣಿಜ್ಯ ಮಳಿಗೆ ಎದುರು ಐಪಿಎಲ್ ಟಿ-20 ಪಂದ್ಯಾವಳಿಯ ಟಾಸ್ ಹಾಗೂ ಗೆಲುವಿನ ಲೆಕ್ಕಾಚಾರ ಮೇಲೆ ಸಾರ್ವಜನಿಕರಿಂದ ಹಣ ಪಣಕ್ಕಿಟ್ಟು ಅಕ್ರಮ ಬೆಟ್ಟಿಂಗ್ ನಡೆಸಲಾಗುತ್ತಿತ್ತು. “100 ರೂ. ಹಾಕಿ 200 ರೂ. ಗೆಲ್ಲಿ” ಎಂಬ ಆಮಿಷವೊಡ್ಡಿ ಯುವಕರನ್ನು ಸೆಳೆಯಲಾಗುತ್ತಿತ್ತು ಎಂದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.

ಬಂಧಿತ ಆರೋಪಿಯನ್ನು ಪ್ರಶಾಂತಗೌಡ ಬಾಪುಗೌಡ ಪಾಟೀಲ್ ಎಂದು ಗುರುತಿಸಲಾಗಿದ್ದು, ಅಮಿತ್ ಪರಶುರಾಮ ಪೂಜಾರ್ ಎಂಬಾತ ಪರಾರಿಯಾಗಿದ್ದಾನೆ. ಆರೋಪಿಗಳು ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯವನ್ನು ನೆಪ ಮಾಡಿಕೊಂಡು ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಜೂಜಾಟ ಆಡಿಸುತ್ತಿದ್ದರು ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗದಗ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಆರ್.ಆರ್. ಮುಂಡೇವಾಡಗಿ ನೇತೃತ್ವದ ತಂಡ, ಸ್ಥಳದಿಂದ ಬೆಟ್ಟಿಂಗ್ ಚೀಟಿ, ಬಾಲ್ ಪೆನ್ ಹಾಗೂ 500 ರೂ. ನಗದು ವಶಪಡಿಸಿಕೊಂಡಿದೆ.

ಈ ಕುರಿತು ಗದಗ ಟೌನ್ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 82/2026 ಅಡಿಯಲ್ಲಿ ಕರ್ನಾಟಕ ಪೊಲೀಸ್ (ತಿದ್ದುಪಡಿ) ಕಾಯ್ದೆ 2021ರ ಕಲಂ 78(1)(a)(vi) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 112 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

CM ಬದಲಾವಣೆ ವಿಚಾರ: ಭಗವಂತನ ದಯೆಯಿಂದ ಒಳ್ಳೆ ಕಾಲ ಕೂಡಿ ಬಂದಿದೆ ಎಂದ ಇಕ್ಬಾಲ್ ಹುಸೇನ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಶಾಸಕ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಹೊಸ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಗುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಭಗವಂತನ ದಯೆಯಿಂದ ಒಳ್ಳೆಯ ಕಾಲ ಬಂದಿದೆ ಎಂದು ಭಾವುಕರಾಗಿ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ನಮ್ಮ ನಾಯಕನಿಗೆ ಇಡೀ ರಾಜ್ಯದ ಜನರು ಬಯಸಿದ್ದನ್ನು ಭಗವಂತ ನೆರವೇರಿಸಿದ್ದಾನೆ. ದೇವರಿಗೆ ಕೋಟಿ ಕೋಟಿ ನಮಸ್ಕಾರಗಳು ಎಂದು ಹೇಳಿದರು.

ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಪಕ್ಷದ ಹೈಕಮಾಂಡ್ ಇದುವರೆಗೆ ಶಿಸ್ತಿನಿಂದ ಇರಲು ಸೂಚಿಸಿತ್ತು. ಸಮಯ ಬಂದಾಗ ಮಾತನಾಡಿ ಎಂದು ಹೇಳಲಾಗಿತ್ತು. ಈಗ ಆ ಸಮಯ ಬಂದಿದೆ. ಹೈಕಮಾಂಡ್ ಅವಕಾಶ ನೀಡಿದೆ. ನಾಯಕರು ಬೆಂಗಳೂರಿಗೆ ಬಂದ ಬಳಿಕ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.

ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ನಾವೆಲ್ಲರೂ ಪಕ್ಷದ ಶಿಸ್ತನ್ನು ಕಾಪಾಡಿಕೊಳ್ಳಬೇಕು. ನಿನ್ನೆ ರಾತ್ರಿ ನನಗೆ ನಿದ್ದೆಯೇ ಬರಲಿಲ್ಲ. ದೆಹಲಿಯಲ್ಲಿ ಯಾರ ಜೊತೆ ಮಾತನಾಡಬೇಕಿತ್ತೋ ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೆ. ಕ್ಷಣ ಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದೆ ಎಂದು ಹೇಳಿದರು.

ನನ್ನ ಆಸೆಯನ್ನು ಈಡೇರಿಸುವ ಕೆಲಸವನ್ನು ಭಗವಂತ ಮಾಡಿದ್ದಾರೆ. ಅವರಿಗೆ ಕೋಟಿ ಕೋಟಿ ಧನ್ಯವಾದಗಳು ಎಂದು ಇಕ್ಬಾಲ್ ಹುಸೇನ್ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.

ನಾನು ಹಿರಿಯ ಶಾಸಕ; ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ – ಮಾಗಡಿ ಬಾಲಕೃಷ್ಣ

ಬೆಂಗಳೂರು: ಮುಂದಿನ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ತಾವು ಪಕ್ಷದ ಹಿರಿಯ ಶಾಸಕರಾಗಿರುವ ಹಿನ್ನೆಲೆ ಕ್ಯಾಬಿನೆಟ್‌ನಲ್ಲಿ ಅವಕಾಶ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಾಗಿ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯದ ಬಗ್ಗೆ ತಮಗೆ ಮಾಧ್ಯಮಗಳ ಮೂಲಕವೇ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದರು.

“ಸಿದ್ದರಾಮಯ್ಯ ಅವರು ಎಷ್ಟು ವರ್ಷ ಮುಖ್ಯಮಂತ್ರಿಯಾಗಿರುತ್ತಾರೋ ಅಷ್ಟು ವರ್ಷ ಮುಂದುವರಿಯಲಿ. ಅದಕ್ಕೆ ನಮ್ಮ ಯಾವುದೇ ಅಭ್ಯಂತರವಿಲ್ಲ. ಆದರೆ ಸಿದ್ದರಾಮಯ್ಯ ಅವರ ಬಳಿಕ ರಾಜ್ಯ ಕಾಂಗ್ರೆಸ್‌ನ ಮುಂದಿನ ನಾಯಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಬೇಕು ಎಂಬುದು ನಮ್ಮ ಅಭಿಪ್ರಾಯ,” ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯ ರಾಜಕೀಯದಲ್ಲಿ ಸದ್ಯ ಉತ್ತಮ ವಾತಾವರಣ ನಿರ್ಮಾಣವಾಗುತ್ತಿದೆ. ಹೈಕಮಾಂಡ್ ನಾಯಕರು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಚರ್ಚೆ ನಡೆಸಿದ್ದಾರೆ ಎಂದು ಬಾಲಕೃಷ್ಣ ತಿಳಿಸಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರ ಮಹತ್ವದ್ದಾಗಿತ್ತು ಎಂದು ಅವರು ಹೇಳಿದರು. ಪಕ್ಷದ ಪರವಾಗಿ ಡಿಕೆಶಿ ಅನೇಕ ಬಾರಿ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ. ಅವರು ಪಕ್ಷದ ಶಿಸ್ತಿನ ಸಿಪಾಯಿ ಎಂದು ಬಾಲಕೃಷ್ಣ ಪ್ರಶಂಸೆ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲ ಸಮುದಾಯಗಳ ನಾಯಕರಿಗೂ ಅವಕಾಶವಿದ್ದು, ಮುಂದಿನ ದಿನಗಳಲ್ಲಿ ಉಪಮುಖ್ಯಮಂತ್ರಿ ಅಥವಾ ನಾಯಕತ್ವದ ಬಗ್ಗೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದರು.

ಕಣ್ಣೀರಿನ ನಡುವೆ ಹಂಪಿಗೆ ವಿದಾಯ ಹೇಳಿದ ‘ಲಕ್ಷ್ಮೀ’: ತಡರಾತ್ರಿ ಕೊನೆಗೂ ಕೋಲಾರಕ್ಕೆ ಸ್ಥಳಾಂತರ

0

ಬಳ್ಳಾರಿ: ಹಂಪಿಯ ವಿರೂಪಾಕ್ಷ ದೇವಸ್ಥಾನದ ಆನೆ ‘ಲಕ್ಷ್ಮೀ’ ಕೊನೆಗೂ ಹಂಪಿಗೆ ವಿದಾಯ ಹೇಳಿದೆ. ಸ್ಥಳೀಯರ ತೀವ್ರ ವಿರೋಧ, ಸಾಮಾಜಿಕ ಜಾಲತಾಣಗಳ ಆಕ್ರೋಶ ಹಾಗೂ ಭಾವನಾತ್ಮಕ ಪ್ರತಿಭಟನೆಗಳ ನಡುವೆಯೂ ತಡರಾತ್ರಿ ರಹಸ್ಯ ಕಾರ್ಯಾಚರಣೆ ಮೂಲಕ ಆನೆಯನ್ನು ಕೋಲಾರಕ್ಕೆ ಸ್ಥಳಾಂತರಿಸಲಾಗಿದೆ.

ಮುಜರಾಯಿ ಇಲಾಖೆ ಮತ್ತು ವಿಜಯನಗರ ಜಿಲ್ಲಾಡಳಿತ ಸಂಯುಕ್ತವಾಗಿ ಈ ಕಾರ್ಯಾಚರಣೆ ನಡೆಸಿದ್ದು, ರಾತ್ರಿ 1 ಗಂಟೆಯ ನಂತರ ಯಾವುದೇ ಗೊಂದಲ ಸೃಷ್ಟಿಯಾಗದಂತೆ ಅತ್ಯಂತ ಗೌಪ್ಯವಾಗಿ ಆನೆಯನ್ನು ಲಾರಿಗೆ ಹತ್ತಿಸಿ ಕರೆದೊಯ್ಯಲಾಗಿದೆ.

ಈ ವೇಳೆ ವರ್ಷಗಳಿಂದ ಲಕ್ಷ್ಮಿಯನ್ನು ಸಾಕಿ ಬೆಳೆಸಿದ್ದ ಮಾವುತರ ಕುಟುಂಬ ಭಾವುಕರಾಯಿತು. ಆನೆಯನ್ನು ಅಪ್ಪಿಕೊಂಡು ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತ ದೃಶ್ಯ ಅಲ್ಲಿದ್ದವರ ಮನಕಲಕಿತು. ಸ್ಥಳೀಯರು ಸಹ ಆಡಳಿತದ ಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಆದರೆ ಅಧಿಕಾರಿಗಳ ಪ್ರಕಾರ, ಲಕ್ಷ್ಮಿಯ ಆರೋಗ್ಯ ಸ್ಥಿತಿ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಹೆಚ್ಚಿನ ವೈದ್ಯಕೀಯ ಚಿಕಿತ್ಸೆ ಮತ್ತು ಆರೈಕೆಗೆ ಅನುಕೂಲವಾಗುವಂತೆ ಕೋಲಾರಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹಂಪಿಯ ಜನರೊಂದಿಗೆ ಭಾವನಾತ್ಮಕ ನಂಟು ಹೊಂದಿದ್ದ ‘ಲಕ್ಷ್ಮೀ’ಯ ಸ್ಥಳಾಂತರ ಇದೀಗ ರಾಜ್ಯಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಉಪೇಂದ್ರ ಫ್ಯಾಮಿಲಿ ಫೋಟೋ ವೈರಲ್: ನಿರಂಜನ್ ನಿಶ್ಚಿತಾರ್ಥದಲ್ಲಿ ಎಲ್ಲರ ಗಮನ ಸೆಳೆದ ಐಶ್ವರ್ಯಾ, ಆಯುಷ್!

ಯುವ ನಟ ನಿರಂಜನ್ ಸುಧೀಂದ್ರ ಅವರ ನಿಶ್ಚಿತಾರ್ಥ ಸಮಾರಂಭ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬ ಈ ಸಂಭ್ರಮದಲ್ಲಿ ಭಾಗಿಯಾಗಿದ್ದು, ಕುಟುಂಬದ ಅಪರೂಪದ ಫೋಟೋಗಳು ವೈರಲ್ ಆಗಿವೆ.

ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಪುತ್ರ ಆಯುಷ್ ಹಾಗೂ ಪುತ್ರಿ ಐಶ್ವರ್ಯಾ ಎಲ್ಲರೂ ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ್ದು, ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದರು. ವಿಶೇಷವಾಗಿ ಆಯುಷ್ ಲುಕ್ ಮತ್ತು ಸ್ಟೈಲ್ ಅಭಿಮಾನಿಗಳ ಗಮನ ಸೆಳೆದಿದೆ.

ನಿರಂಜನ್ ಸುಧೀಂದ್ರ ಅವರ ನಿಶ್ಚಿತಾರ್ಥ ಸಮಾರಂಭ ಅದ್ಧೂರಿಯಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಸಿನಿ ಗಣ್ಯರು ಪಾಲ್ಗೊಂಡು ಶುಭ ಹಾರೈಸಿದರು. ಈ ವೇಳೆ ಉಪೇಂದ್ರ ಕುಟುಂಬ ಒಟ್ಟಾಗಿ ಪೋಸ್ ನೀಡಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಉಪೇಂದ್ರ ಪುತ್ರ ಆಯುಷ್ ಈಗಾಗಲೇ ಚಿತ್ರರಂಗದತ್ತ ಆಸಕ್ತಿ ತೋರಿಸುತ್ತಿದ್ದು, ಸೋಶಿಯಲ್ ಮೀಡಿಯಾದಲ್ಲೂ ಸಕ್ರಿಯರಾಗಿದ್ದಾರೆ. ಇನ್ನು ಐಶ್ವರ್ಯಾ ಬಾಲನಟಿಯಾಗಿ ಗುರುತಿಸಿಕೊಂಡಿದ್ದು, ಸದ್ಯ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.

ಒಟ್ಟಾರೆ, ಉಪ್ಪಿ ಕುಟುಂಬದ ಈ ಸಂಭ್ರಮದ ಕ್ಷಣ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮತ್ತು ಸಂತಸ ಮೂಡಿಸಿದೆ.

CMRL money laundering case: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ!

ತಿರುವನಂತಪುರಂ: ಸಿಎಂಆರ್‌ಎಲ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದೆ. ಪ್ರಕರಣದ ತನಿಖೆಯ ಭಾಗವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತಿರುವನಂತಪುರಂನಲ್ಲಿರುವ ಪಿಣರಾಯಿ ವಿಜಯನ್ ಅವರ ಬಾಡಿಗೆ ಮನೆ ಸೇರಿ ಒಟ್ಟು 10 ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ

ಕೊಚ್ಚಿನ್ ಮಿನರಲ್ಸ್ ಆ್ಯಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಸಂಸ್ಥೆಯು 2018ರಿಂದ 2019ರ ಅವಧಿಯಲ್ಲಿ ಪಿಣರಾಯಿ ವಿಜಯನ್ ಅವರ ಪುತ್ರಿ ಟಿ. ವೀಣಾ ಒಡೆತನದ ಎಕ್ಸಲಾಜಿಕ್ ಸೊಲ್ಯೂಷನ್ಸ್ ಕಂಪನಿಗೆ ಸುಮಾರು 1.72 ಕೋಟಿ ರೂಪಾಯಿ ಪಾವತಿಸಿದೆ ಎಂಬ ಆರೋಪ ಕೇಳಿಬಂದಿದೆ. ಆದರೆ ಈ ಹಣಕ್ಕೆ ತಕ್ಕ ಯಾವುದೇ ಸೇವೆಯನ್ನು ಕಂಪನಿ ನೀಡಿಲ್ಲ ಎಂಬುದು ತನಿಖೆಯ ಪ್ರಮುಖ ಅಂಶವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ಕ್ರಮಗಳನ್ನು ರದ್ದುಪಡಿಸುವಂತೆ ಕೋರಿ ಸಿಎಂಆರ್‌ಎಲ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ನ್ಯಾಯಾಲಯದ ತೀರ್ಪಿನ ಬಳಿಕ ಇದೀಗ ಇ.ಡಿ ದಾಳಿ ನಡೆಸಿರುವುದು ಮಹತ್ವ ಪಡೆದಿದೆ.

ಟಿ. ವೀಣಾ ಅವರ ಎಕ್ಸಲಾಜಿಕ್ ಕಂಪನಿಗೆ ಮಾಸಿಕ ಪಾವತಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವರ್ಗಾವಣೆ ನಡೆದಿರುವ ಆರೋಪಗಳು ಹೊರಬಿದ್ದ ನಂತರ, ಕೇಂದ್ರ ಸರ್ಕಾರ 2024ರಲ್ಲಿ ವಿಸ್ತೃತ ತನಿಖೆಗೆ ಆದೇಶಿಸಿತ್ತು. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವೂ ಕಂಪನಿಯ ವ್ಯವಹಾರಗಳ ಕುರಿತು ತನಿಖೆ ಆರಂಭಿಸಿತ್ತು.

ಪ್ರಕರಣದ ತನಿಖೆಗೆ ಉನ್ನತ ಮಟ್ಟದ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು, ಸಿಎಂಆರ್‌ಎಲ್ ಹಾಗೂ ಕೆಎಸ್‌ಐಡಿಸಿ ಸಂಸ್ಥೆಗಳಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಲಾಗಿತ್ತು. ಆರೋಪಗಳಿಗೆ ಸಂಬಂಧಿಸಿದಂತೆ ಸಿಎಂಆರ್‌ಎಲ್ ಸ್ಪಷ್ಟ ಉತ್ತರ ನೀಡಿಲ್ಲ ಎನ್ನಲಾಗಿದ್ದು, ಕೆಎಸ್‌ಐಡಿಸಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಎಕ್ಸಲಾಜಿಕ್, ಸಿಎಂಆರ್‌ಎಲ್ ಹಾಗೂ ಕೆಎಸ್‌ಐಡಿಸಿ ಸಂಸ್ಥೆಗಳ ಹಣಕಾಸು ವ್ಯವಹಾರಗಳ ಕುರಿತು ಸಮಗ್ರ ತನಿಖೆ ಮುಂದುವರಿಸಲಾಗಿದೆ.

ಇನ್ನೊಂದೆಡೆ, ಪುತ್ರಿಯ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ಪಿಣರಾಯಿ ವಿಜಯನ್ ಸಂಪೂರ್ಣ ತಳ್ಳಿಹಾಕಿದ್ದಾರೆ. ತಮ್ಮ ರಾಜಕೀಯ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಉದ್ದೇಶದಿಂದ ಈ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚೆಗೆ ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ ಬಂದಿದ್ದು, ಅದರೊಂದಿಗೆ ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನದಿಂದ ಹೊರಬಂದಿದ್ದರು. 2016ರಿಂದ 2026ರವರೆಗೆ ಎರಡು ಅವಧಿಗೆ ಮುಖ್ಯಮಂತ್ರಿಯಾಗಿದ್ದ ಅವರು ಪ್ರಸ್ತುತ ವಿಧಾನಸಭೆಯಲ್ಲಿ ವಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಧರ್ಮಶಾಲಾದಲ್ಲಿ RCBಗೆ 92 ರನ್ ಭರ್ಜರಿ ಜಯ: ತಂಡದ ತಂತ್ರಗಾರಿಕೆ ಬಿಚ್ಚಿಟ್ಟ ರಜತ್

ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ 92 ರನ್ ಅಂತರದ ಗೆಲುವು ದಾಖಲಿಸಿದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್ ತಮ್ಮ ತಂತ್ರಗಾರಿಕೆಯ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಪಾಟಿದರ್ ಅವರು, ಪ್ರಶಸ್ತಿ ಸ್ವೀಕರಿಸಿದ ನಂತರ ಮಾಜಿ ಕ್ರಿಕೆಟಿಗ ಮುರಳಿ ಕಾರ್ತಿಕ್ ಅವರೊಂದಿಗೆ ಮಾತನಾಡಿ ತಂಡ ತೆಗೆದುಕೊಂಡ ಕೆಲ ತಂತ್ರಾತ್ಮಕ ನಿರ್ಧಾರಗಳನ್ನು ವಿವರಿಸಿದರು.

ವೇಗಿ ಜೇಕಬ್ ಡಫಿ ಅವರ ಬದಲಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ವೆಸ್ಟ್ ಇಂಡೀಸ್ ಆಲ್‌ರೌಂಡರ್ ರೊಮಾರಿಯೊ ಶೆಪಾರ್ಡ್ ಅವರನ್ನು ಕಣಕ್ಕಿಳಿಸಿದ ನಿರ್ಧಾರದ ಬಗ್ಗೆ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಪಾಟಿದರ್, ಮುಂಬರುವ ಫೈನಲ್ ಪಂದ್ಯವನ್ನು ಗಮನದಲ್ಲಿಟ್ಟುಕೊಂಡು ಈ ಪ್ರಯೋಗ ಮಾಡಲಾಗಿದೆ ಎಂದು ತಿಳಿಸಿದರು.

ಫೈನಲ್ ಪಂದ್ಯದಲ್ಲಿ ಬೌಲಿಂಗ್ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಹಾಗೂ ಮಧ್ಯಮ ಓವರ್‌ಗಳಲ್ಲಿ ಶೆಪಾರ್ಡ್ ಅವರ ಬೌಲಿಂಗ್ ಸಾಮರ್ಥ್ಯವನ್ನು ಪರೀಕ್ಷಿಸಲು ಈ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.

ಶೆಪಾರ್ಡ್ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕೇವಲ ಒಂದು ಓವರ್ ಬೌಲಿಂಗ್ ಮಾಡಿದ್ದು, ಆ ಓವರ್‌ನಲ್ಲಿ 15 ರನ್ ನೀಡಿದರು. ಆದಾಗ್ಯೂ, ಮಹತ್ವದ ಪಂದ್ಯಕ್ಕೂ ಮುನ್ನ ತಂಡದ ಬೌಲಿಂಗ್ ಆಯ್ಕೆಗಳನ್ನು ಪರಿಶೀಲಿಸಲು ಇದು ಸಹಾಯಕವಾಯಿತು ಎಂದು ಪಾಟಿದರ್ ತಿಳಿಸಿದರು.

ಗುಜರಾತ್ ಇನ್ನಿಂಗ್ಸ್‌ನ 11ನೇ ಓವರ್ ನಂತರ ಡಫಿ ಅವರ ಸ್ಥಾನದಲ್ಲಿ ಶೆಪಾರ್ಡ್ ಮೈದಾನ ಪ್ರವೇಶಿಸಿದರು. ಡಫಿ ತಮ್ಮ 4 ಓವರ್ ಕೋಟಾವನ್ನು ಪೂರ್ಣಗೊಳಿಸಿ 39 ರನ್ ನೀಡಿ 3 ವಿಕೆಟ್ ಪಡೆದಿದ್ದರು.

ಐಪಿಎಲ್ ನಿಯಮಗಳ ಪ್ರಕಾರ, ಇಂಪ್ಯಾಕ್ಟ್ ಪ್ಲೇಯರ್ ವ್ಯವಸ್ಥೆಯಲ್ಲಿ ಟಾಸ್ ನಂತರ ಪ್ರತಿಯೊಂದು ತಂಡವು 5 ಬದಲಿ ಆಟಗಾರರ ಹೆಸರನ್ನು ನೀಡುತ್ತದೆ. ಅವುಗಳಲ್ಲಿ ಒಬ್ಬರನ್ನು ಮಾತ್ರ ಪಂದ್ಯದ ಮಧ್ಯದಲ್ಲಿ ಬಳಸಲು ಅವಕಾಶವಿದೆ. ಬದಲಾಯಿಸಲಾದ ಆಟಗಾರ ಮತ್ತೆ ಫೀಲ್ಡಿಂಗ್‌ಗೆ ಮರಳಲು ಸಾಧ್ಯವಿಲ್ಲ.

ಪ್ಲೇಯಿಂಗ್ XIನಲ್ಲಿ ವಿದೇಶಿ ಆಟಗಾರರ ಸಂಖ್ಯೆಯ ಆಧಾರದ ಮೇಲೆ ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆ ನಿಯಮವೂ ಅನ್ವಯಿಸುತ್ತದೆ. ಈ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಿಯಮದಂತೆ RCB ತಂಡವು ರೊಮಾರಿಯೊ ಶೆಪಾರ್ಡ್ ಅವರನ್ನು ಬಳಸಿತು.

ಜೋಶ್ ಹ್ಯಾಜಲ್ವುಡ್, ಟಿಮ್ ಡೇವಿಡ್ ಮತ್ತು ಜೇಕಬ್ ಡಫಿ ಅವರಿಗೆ ಪ್ಲೇಯಿಂಗ್ XIನಲ್ಲಿ ಅವಕಾಶ ನೀಡಿದ್ದರಿಂದ ಶೆಪಾರ್ಡ್ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಳಸಲಾಯಿತು.

‘ದೃಶ್ಯಂ 3’ಗೆ ಬಾಕ್ಸ್ ಆಫೀಸ್‌ ಉಡೀಸ್‌: 6 ದಿನಕ್ಕೆ 170 ಕೋಟಿ ದಾಟಿದ ಜಾರ್ಜ್‌ಕುಟ್ಟಿ ಮ್ಯಾಜಿಕ್!

ಮಾಲಿವುಡ್ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅಭಿನಯದ ಬಹುನಿರೀಕ್ಷಿತ ‘ದೃಶ್ಯಂ 3’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರ ಮುಂದುವರಿಸಿದೆ. ಬಿಡುಗಡೆಯಾದ ಆರನೇ ದಿನವೂ ಚಿತ್ರ ಭರ್ಜರಿ ಕಲೆಕ್ಷನ್ ದಾಖಲಿಸಿದ್ದು, ಜಾಗತಿಕ ಮಟ್ಟದಲ್ಲಿ 170 ಕೋಟಿ ರೂಪಾಯಿ ಕ್ಲಬ್‌ಗೆ ಎಂಟ್ರಿ ಕೊಟ್ಟಿದೆ.

ವಾರದ ದಿನಗಳಲ್ಲೂ ಪ್ರೇಕ್ಷಕರ ಸೆಳೆತ ಕಡಿಮೆಯಾಗದಿರುವುದು ಚಿತ್ರದ ದೊಡ್ಡ ಪ್ಲಸ್ ಆಗಿದೆ. ಮಂಗಳವಾರ (ಮೇ 26) ಒಂದೇ ದಿನ ಭಾರತದಲ್ಲಿ 4,668 ಪ್ರದರ್ಶನಗಳನ್ನು ಕಂಡ ‘ದೃಶ್ಯಂ 3’, 6.45 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಇದರೊಂದಿಗೆ ಆರು ದಿನಗಳಲ್ಲಿ ಚಿತ್ರದ ಭಾರತದ ಒಟ್ಟು ನೆಟ್ ಕಲೆಕ್ಷನ್ 68.60 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಭಾರತದ ಗ್ರಾಸ್ ಕಲೆಕ್ಷನ್ 79.62 ಕೋಟಿ ರೂಪಾಯಿ ಆಗಿದೆ.

ವಿದೇಶಿ ಮಾರುಕಟ್ಟೆಯಲ್ಲೂ ಜಾರ್ಜ್‌ಕುಟ್ಟಿ ಕ್ರೇಜ್ ಭಾರೀ ಜೋರಾಗಿದೆ. ಆರನೇ ದಿನವೇ ಓವರ್‌ಸೀಸ್ ಮಾರುಕಟ್ಟೆಯಿಂದ 6 ಕೋಟಿ ರೂಪಾಯಿ ಕಲೆಕ್ಷನ್ ಆಗಿದ್ದು, ಒಟ್ಟು ವಿದೇಶಿ ಗ್ರಾಸ್ ಗಳಿಕೆ 90.70 ಕೋಟಿ ರೂಪಾಯಿಗೆ ತಲುಪಿದೆ.

ಭಾರತ ಮತ್ತು ವಿದೇಶಿ ಮಾರುಕಟ್ಟೆಯ ಕಲೆಕ್ಷನ್ ಒಟ್ಟುಗೂಡಿಸಿದರೆ, ‘ದೃಶ್ಯಂ 3’ ಚಿತ್ರದ ವಿಶ್ವವ್ಯಾಪಿ ಒಟ್ಟು ಗ್ರಾಸ್ ಕಲೆಕ್ಷನ್ 170.32 ಕೋಟಿ ರೂಪಾಯಿ ದಾಟಿದೆ. ಈ ವೇಗ ಮುಂದುವರಿದರೆ ಸಿನಿಮಾ ಶೀಘ್ರದಲ್ಲೇ 200 ಕೋಟಿ ಕ್ಲಬ್ ಸೇರುವುದು ಖಚಿತ ಎನ್ನಲಾಗುತ್ತಿದೆ.

ಜಾರ್ಜ್‌ಕುಟ್ಟಿ ಈ ಬಾರಿ ಪೊಲೀಸರ ಕೈಯಿಂದ ಹೇಗೆ ಪಾರಾಗುತ್ತಾನೆ ಎಂಬ ಸಸ್ಪೆನ್ಸ್ ಹಾಗೂ ಥ್ರಿಲ್ಲರ್ ಅಂಶವೇ ಪ್ರೇಕ್ಷಕರನ್ನು ಚಿತ್ರಮಂದಿರಗಳತ್ತ ಸೆಳೆಯುತ್ತಿದೆ.

error: Content is protected !!