Home Blog

ಜುಲೈ 13ರಂದು ರಾಷ್ಟ್ರೀಯ ಲೋಕ ಅದಾಲತ್

0

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ 2024ರ ಜುಲೈ 13ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಬಸವರಾಜ ತಿಳಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ಭೂ ಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಎಮ್‌ಎಮ್‌ಆರ್‌ಡಿ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ಗುರುತಿಸಲಾಗಿದೆ.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂದಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನವೊಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಪ್ರಕರಣಗಳಿಗೆ ಸಂಬಂದಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂದಪಟ್ಟ ಅಧಿಕಾರಿಗಳು, ಇಲಾಖೆಗಳವರು ಜುಲೈ 13ರಂದು ಜರಗುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಗುರುಪ್ರಸಾದ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಪಂಚ ಗ್ಯಾರಂಟಿಯಿಂದ ಮಹಿಳೆಯರಿಗೆ ಬಲ:ಎಚ್.ಕೆ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ರಾಜ್ಯದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಮಹಿಳೆಯರಿಗೆ ಬಲ ಬಂದಿದ್ದು, ಲಕ್ಷ್ಮಿಯರನ್ನು ಮಹಾಲಕ್ಷ್ಮಿಯರನ್ನಾಗಿ ಮಾಡಲು ಕೇಂದ್ರದಿಂದ ವರ್ಷಕ್ಕೆ 1 ಲಕ್ಷ ರೂ. ನೀಡುವುದಾಗಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನೀಡಿ ಮತ್ತಷ್ಟು ಬಲ ತುಂಬಲಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಭರವಸೆ ನೀಡಿದರು.

ಇಲ್ಲಿಯ ಬಜಾರ ರಸ್ತೆಯಲ್ಲಿ ಬಾಗಲಕೋಟ ಲೋಕಸಭಾ ಮತ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರ ಪರ ಹಮ್ಮಿಕೊಂಡಿದ್ದ ಬಹಿರಂಗ ಪ್ರಚಾರ ಸಭೆಯನ್ನು ಉದ್ದೇಶಿಸಿ ಸಚಿವರು ಮಾತನಾಡಿದರು.

ಸಿದ್ಧರಾಮಯ್ಯ ಅವರು ರಾಜ್ಯದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ತಿಂಗಳು 2000 ರೂ. ಜಮಾ ಮಾಡುತ್ತಿದ್ದೇವೆ. ಪ್ರತಿ ಬಡ ಕುಟುಂಬದ ಮಹಿಳೆಯರನ್ನು ಪ್ರಾಮಾಣಿಕವಾಗಿ ತಲುಪಲು ಅನುಷ್ಠಾನ ಸಮಿತಿ ರಚಿಸಲಾಗಿದ್ದು, ಜಿಲ್ಲೆಯ ಶೇ 99.16 ಮಹಿಳೆಯರಿಗೆ ಈವರೆಗೆ ಯೋಜನೆ ತಲುಪಿದೆ. ಲಕ್ಷ್ಮಿಯರನ್ನು ಮಹಾಲಕ್ಷ್ಮಿಯರನ್ನಾಗಿಸಲು ರಾಹುಲ್ ಗಾಂಧಿ ಕೇಂದ್ರದಿಂದ ಪ್ರತಿ ವರ್ಷ 1 ಲಕ್ಷ ರೂ ನೀಡುವುದಾಗಿ ಗ್ಯಾರಂಟಿ ಘೋಷಿಸಿದ್ದಾರೆ. ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯು ಮಹಿಳೆಯರಲ್ಲಿ ಬಲ ತುಂಬಿದೆ ಎಂದರು.

ಅಭ್ಯರ್ಥಿ ಸಂಯುಕ್ತಾ ಪಾಟೀಲ ಮಾತನಾಡಿ, ಇದು ರಾಜ್ಯದ ರೈತರ, ಮಹಿಳೆಯರ ಪ್ರತಿಷ್ಠೆಯ ಚುನಾವಣೆಯಾಗಿದ್ದು, 2 ಬರಗಾಲದ ಸನ್ನಿವೇಶದಲ್ಲಿ ಸುಮಾರು 35 ಸಾವಿರ ಕೋಟಿ ರೂ ಹಾನಿಯಾಗಿದೆ.

ಇದರಲ್ಲಿ 18 ಸಾವಿರ ಕೋಟಿ ರೂ ಕೊಡಬೇಕು ಎಂದು ಮನವಿ ಮಾಡಿದರೂ ಸಹ ಕೇಂದ್ರ ಸರಕಾರ ಯಾವುದೇ ಅನುದಾನ ನೀಡದೇ ರೈತ ವಿರೋಧಿ ನೀತಿಯನ್ನು ಅನುಸರಿಸಿದೆ. 2014ರಿಂದ 2024ರವರೆಗೆ ದೇಶದ ಉದ್ದಿಮೆಗಳ 14 ಲಕ್ಷ ಕೋಟಿ ರೂ ಸಾಲವನ್ನು ಮನ್ನಾ ಮಾಡಿದ್ದರೂ, ಈ ದೇಶದ ಬೆನ್ನೆಲುಬಾಗಿರುವ ರೈತರ ಸಾಲ ಮನ್ನಾ ಮಾಡಲಿಲ್ಲ. 4 ವರ್ಗದ ಬಗ್ಗೆ ಮಾತನಾಡುವ ಕೇಂದ್ರ ಸರಕಾರ ರೈತ, ಯುವಕ, ಮಹಿಳೆ ಮತ್ತು ಬಡವರ ಬಗ್ಗೆ ನಿಷ್ಕಾಳಜಿ ವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

pancha

ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ಜಿ.ಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ ಕೇಂದ್ರ ಸರಕಾರದ ಬಡವರ ವಿರೋಧಿ ನೀತಿಯನ್ನು ಖಂಡಿಸಿದರು. ಬಿಜೆಪಿ ಮುಖಂಡರಾದ ಅಜ್ಜಪ್ಪಗೌಡ ಪಾಟೀಲ, ಗ್ರಾ.ಪಂ ಮಾಜಿ ಸದಸ್ಯ ಶಿವನಗೌಡ ಗೌಡ್ರ, ಶ್ರೀಶೈಲಪ್ಪ ಹಗರಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಲಕ್ಕುಂಡಿ ಯುವ ಕಾಂಗ್ರೆಸ್ ವತಿಯಿಂದ ಸಂಯುಕ್ತಾ ಪಾಟೀಲರನ್ನು ಸನ್ಮಾನಿಸಲಾಯಿತು. ಹಾಲುಮತ ಸಮಾಜದಿಂದ ಕಂಬಳಿಯನ್ನು ಹೊದೆಸಿ ಗೌರವಿಸಿದರು.

ಇದಕ್ಕೂ ಮುನ್ನ ಅತ್ತಿಮಬ್ಬೆ ಮಹಾದ್ವಾರದಿಂದ ಅಭ್ಯರ್ಥಿ ಸಂಯುಕ್ತಾ ಪಾಟೀಲ, ಸಚಿವ ಎಚ್.ಕೆ. ಪಾಟೀಲ, ಸಿದ್ದು ಪಾಟೀಲ ಅವರು ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಗ್ರಾ.ಪಂ ಅಧ್ಯಕ್ಷ ಕೆ.ಎಸ್. ಪೂಜಾರ, ಉಪಾಧ್ಯಕ್ಷೆ ಪುಷ್ಪಾ ಪಾಟೀಲ, ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ವಿವೇಕ ಯಾವಗಲ್, ವಿಧ್ಯಾಧರ ದೊಡ್ಡಮನಿ, ಪ್ರಕಾಶ ಕರಿ, ನೀಲಮ್ಮ ಬೋಳನವರ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು. ಜಿ.ಪಂ ಮಾಜಿ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಸ್ವಾಗತಿಸಿದರು. ನಜೀರಅಹ್ಮದ ಕಿರೀಟಗೇರಿ ನಿರೂಪಿಸಿ ವಂದಿಸಿದರು.

ಪಂಚ ಉಚಿತ ಯೋಜನೆಗಳು ಅನುಷ್ಠಾನಗೊಂಡರೆ ದೇಶ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿಯವರು ಹೇಳಿದ್ದರು. ಆದರೆ ಶ್ರೀಮಂತರ ಸಾಲ ಮನ್ನಾ ಮಾಡಿದರೆ ದೇಶ ದಿವಾಳಿಯಾಗುತ್ತದೆ ಎಂದ ಸಚಿವರು, ಎನ್‌ಡಿಎ ಸರಕಾರ 10 ವರ್ಷ ಸುಳ್ಳು ಹೇಳಿ ಅಧಿಕಾರ ನಡೆಸಿದೆ. ಇದೆಲ್ಲವನ್ನೂ ಮತದಾರರು ಅರಿತು, ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಅವರಿಗೆ ಮತ ನೀಡಬೇಕು ಎಂದು ಸಚಿವ ಎಚ್.ಕೆ. ಪಾಟೀಲ ವಿನಂತಿಸಿಕೊಂಡರು.

 

ನಗರಸಭೆ ಉಪಾಧ್ಯಕ್ಷರ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು..!

0

ವಿಜಯಸಾಕ್ಷಿ ಸುದ್ದಿ, ಗದಗ

ಗದಗ-ಬೆಟಗೇರಿ ನಗರಸಭೆಯ ಉಪಾಧ್ಯಕ್ಷರ ಪುತ್ರ ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಧಾರುಣ ಘಟನೆ ಗುರುವಾರ ಮಧ್ಯರಾತ್ರಿ ನಡೆದಿದೆ.

ಗದಗ ನಗರದ ದಾಸರ ಓಣಿಯಲ್ಲಿ ಇರುವ ನಗರಸಭೆ ಉಪಾಧ್ಯಕ್ಷೆ ಸುನಂದಾ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ (27) ಕೊಪ್ಪಳ ಮೂಲದ ಪರಶುರಾಮ (55) ಲಕ್ಷ್ಮೀ (45) ಪುತ್ರಿ ಆಕಾಂಕ್ಷ(17) ಹತ್ಯೆಗೊಳಗಾದವರು.

ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದಲ್ಲೆ ಹತ್ಯೆ ಮಾಡಲಾಗಿದ್ದು, ತೀವ್ರ ರಕ್ತಸ್ರಾವದಿಂದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಎಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು.

https://youtu.be/fERzRYa8rMQ

ಸದ್ದು ಕೇಳುತ್ತಿದ್ದಂತೆಯೇ ಅನುಮಾನಗೊಂಡ ಸಂಬಂಧಿಕರು ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಘಟನೆ ಕುರಿತು ಪ್ರಕಾಶ್ ಬಾಕಳೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು, ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ‌ ಎಮ್. ಬಿ. ಸಂಕದ, ಡಿವೈಎಸ್ಪಿ ಜೆ.ಎಚ್. ಇನಾಮದಾರ, ನಗರಠಾಣೆಯ ಇನ್ಸ್‌ಪೆಕ್ಟರ್ ಡಿ.ಬಿ.ಪಾಟೀಲ, ಪಿಎಸ್ ಐ ಎಚ್.ಕೆ. ಪಾಟೀಲ ಸೇರಿದಂತೆ ಶ್ವಾನದಳ, ಫಾರಿನ್ ಸಿಕ್ ತಂಡಗಳು ಆಗಮಿಸಿದ್ದು, ಇಂಚಿಂಚೂ ಪರಿಶೀಲನೆ ನಡೆಸಿದೆ.

ಈ ಘಟನೆಯಿಂದ ಸ್ಥಳೀಯ ಜನರು ಬೆಚ್ಚಿಬಿದ್ದಿದ್ದಾರೆ.

ಮನೆಯ ಹಿಂಬಾಗದ ಚರಂಡಿಯಲ್ಲಿ ಜಂಬೆ, ಚಿನ್ನದ ಬಳೆ ಪತ್ತೆಯಾಗಿದೆ, ಒಂದು ಜೊತೆ ಶೋ ಕೂಡ ಪತ್ತೆಯಾಗಿದ್ದು, ಈ ಕೊಲೆ ಯಾವ ಕಾರಣಕ್ಕಾಗಿ ನಡೆದಿದೆ ಎಂಬುದು ಸಧ್ಯಕ್ಕೆ ಗೊತ್ತಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮತದಾನ ನಮ್ಮೆಲ್ಲರ ಆದ್ಯ ಕರ್ತವ್ಯ : ಸಿದ್ದರಾಯ ಕಟ್ಟಿಮನಿ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : 18 ವರ್ಷ ಮೇಲ್ಪಟ್ಟ, ಮತದಾರರ ಪಟ್ಟಿಯಲ್ಲಿರುವ ಎಲ್ಲ ಅರ್ಹ ಮತದಾರರು ಮತದಾನದಿಂದ ಹೊರಗುಳಿಯಬಾರದೆನ್ನುವ ಉದ್ದೇಶದಿಂದ ಅವರಲ್ಲಿ ಮತದಾನದ ಮಹತ್ವವನ್ನು ತಿಳಿಸುವುದಕ್ಕಾಗಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಿಮನಿ ಹೇಳಿದರು.

ಅವರು ಗುರುವಾರ ಪ.ಪಂ ವತಿಯಿಂದ ಎಲ್ಲ ಸಿಬ್ಬಂದಿಗಳೊಂದಿಗೆ ಕಚೇರಿಯ ಪ್ರಚಾರ ವಾಹನದ ಮೂಲಕ ಜನದಟ್ಟಣೆಯಿರುವ ಪ್ರದೇಶ ಹಾಗೂ ಪ್ರಮುಖ ಬೀದಿಗಳಲ್ಲಿ ಜಾಗೃತಿಯನ್ನು ಮೂಡಿಸಿ ಮಾತನಾಡಿದರು.

ಇಡೀ ಜಗತ್ತಿನಲ್ಲಿಯೇ ಬೃಹತ್ ಲಿಖಿತ ಸಂವಿಧಾನ ನಮ್ಮದಾಗಿದ್ದು, ಈ ಸಂವಿಧಾನವು ನಮಗೆ ನೀಡಿದ ಮತದಾನದ ಅಧಿಕಾರವನ್ನು ಚಲಾಯಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಒಂದೊಂದು ಮತವು ಕೂಡಾ ಬಲಿಷ್ಠ ರಾಷ್ಟç ನಿರ್ಮಾಣಕ್ಕೆ ಸಾಕ್ಷಿಯಾಗಲಿದೆ. ಆದ್ದರಿಂದ ಯಾವುದೇ ಆಮಿಷಗಳಿಗೆ ಒಳಪಡದೇ ನಿರ್ಭಯವಾಗಿ ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲ ಅರ್ಹರೂ ಮತದಾನ ಮಾಡಬೇಕು. ಈ ಬಗ್ಗೆ ಜಿಲ್ಲಾ ಹಾಗೂ ತಾಲೂಕಾಡಳಿತದ ಹಂತದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಮುಖ್ಯೋಪಾಧ್ಯಾಯ ಜಿ.ಡಿ. ಈರಕ್ಕನವರ ಮತ್ತು ಪ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಇಂದು

0

ವಿಜಯಸಾಕ್ಷಿ ಸುದ್ದಿ, ಗದಗ : ಭಾರತೀಯ ಜನತಾ ಪಾರ್ಟಿಯ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಏ.19ರಂದು ಬೆಳಿಗ್ಗೆ 11 ಗಂಟೆಗೆ ಹಾವೇರಿ ನಗರದ ಐತಿಹಾಸಿಕ ಹುಕ್ಕೇರಿ ಮಠದಿಂದ ಜೆಪಿ ಸರ್ಕಲ್‌ವರೆಗೆ ಬೃಹತ್ ಮೆರವಣಿಗೆಯ ಮೂಲಕ ತೆರಳಿ ಹಾವೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಾಸಕರಾದ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ಮಾಜಿ ಸಚಿವ ಕಳಕಪ್ಪ ಬಂಡಿ, ವಿ.ಪ ಸದಸ್ಯ ಎಸ್.ವಿ. ಸಂಕನೂರ, ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ತೋಟಪ್ಪ(ರಾಜು) ಕುರುಡಗಿ, ಯುವ ನಾಯಕ ಅನಿಲ ಮೆಣಸಿನಕಾಯಿ ಸೇರಿದಂತೆ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.

ಗದಗ ಜಿಲ್ಲೆಯಿಂದ ಪಕ್ಷದ ಕಾರ್ಯಕರ್ತರು, ಹಿರಿಯರು, ಹಿತೈಷಿಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧ್ಯಕ್ಷ ರಾಜು ಕುರಡಗಿ, ವಕ್ತಾರರಾದ ಎಂ.ಎಂ. ಹಿರೇಮಠ ವಿನಂತಿಸಿದ್ದಾರೆ.

ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿ ನಂತರ ಕರ್ನಾಟಕದಲ್ಲಿ ಪ್ರವಾಸ ಮಾಡಿ

0

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದಲ್ಲಿ ಸುಳ್ಳು ಗ್ಯಾರಂಟಿಗಳನ್ನು ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದ ಆಡಳಿತ ನಡೆಸುವಲ್ಲಿ ಸಂಪೂರ್ಣ ಕುಸಿದಿದ್ದು, ನಾವು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರಡಗಿ ಹಾಗೂ ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ ರಾಹುಲ್ ಗಾಂಧಿಯವರಿಗೆ ಒತ್ತಾಯಿಸಿದ್ದಾರೆ.

ಅವರು ಪಕ್ಷದ ಕಾರ್ಯಾಲಯದಲ್ಲಿ ಗುರುವಾರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ 11 ತಿಂಗಳು ಕಳೆದರೂ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಆರ್ಥಿಕವಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ. ವರ್ಗಾವಣೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ರಾಜ್ಯದಲ್ಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಇದರ ಹೊಣೆ ಹೊರುತ್ತೀರಾ ಎಂದು ರಾಹುಲ್ ಗಾಂಧಿಯವರನ್ನು ಪ್ರಶ್ನಿಸಿದ್ದಾರೆ.

ಗ್ಯಾರಂಟಿ ಹೆಸರಿನಲ್ಲಿ ಬೆಲೆ ಏರಿಕೆ, ವಿದ್ಯುತ್ ದರ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ದರ ಹೆಚ್ಚಳ ಮಾಡಲಾಗಿದೆ. ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿ ನಂತರ ಕರ್ನಾಟಕದಲ್ಲಿ ಪ್ರವಾಸ ಮಾಡಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ, ಪ್ರಧಾನ ಕಾರ್ಯದರ್ಶಿ ಪಕ್ಕಿರೇಶ ರಟ್ಟಿಹಳ್ಳಿ, ನಗರ ಅಧ್ಯಕ್ಷ ಅನಿಲ ಅಬ್ಬಿಗೇರಿ, ಮಾಧ್ಯಮ ಪ್ರಮುಖ ರಾಜು ಹೊಂಗಲ ಒತ್ತಾಯಿಸಿದ್ದಾರೆ.

ಕೋಟೆ ವೀರಭದ್ರೇಶ್ವರ ರಥೋತ್ಸವ ನಾಳೆ

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಇಲ್ಲಿಯ ಐತಿಹಾಸಿಕ ಕೋಟೆ ವೀರಭದ್ರೇಶ್ವರ ರಥೋತ್ಸವವು ಎಪ್ರಿಲ್ 20ರ ಸಂಜೆ ಸಂಭ್ರಮದಿಂದ ಜರುಗಲಿದೆ. 46ನೇ ವರ್ಷದ ರಥೋತ್ಸವಕ್ಕೆ ಸಂಜೆ 4 ಗಂಟೆಗೆ ಡೋಣಿ ನಂದಿವೇರಿಮಠದ ಶಿವಕುಮಾರ ಸ್ವಾಮೀಜಿಗಳು, ಹರ್ಲಾಪೂರ ಡಾ. ಕೊಟ್ಟೂರೇಶ್ವರ ಶ್ರೀಗಳು, ಲಕ್ಕುಂಡಿ ಅಲ್ಲಮಪ್ರಭುದೇವರ ಮಠದ ಸಿದ್ಧಲಿಂಗೇಶ್ವರ ಶ್ರೀಗಳು ಚಾಲನೆ ನೀಡುವರು.

ರಥೋತ್ಸವದಲ್ಲಿ ನಂದಿಕೋಲ ಮೇಳ, ಡೊಳ್ಳು ಮೇಳ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸುವವು. ಇದಕ್ಕೂ ಪೂರ್ವ ಮುಂಜಾನೆ 10ರಿಂದ 1ರವರೆಗೆ ಉಚಿತ ಆರೋಗ್ಯ ತಪಾಸಣೆ, ಚರ್ಮರೋಗ ತಪಾಸಣೆ, ಹೃದಯ ರೋಗ ತಪಾಸಣೆ ಹಾಗೂ ಉಚಿತ ರಕ್ತದಾನ ಶಿಬಿರ ಜರುಗಲಿದೆ.

ಏ.21ರಂದು ಗುಗ್ಗಳೋತ್ಸವ ಕಾರ್ಯಕ್ರಮ ನಡೆಯಲಿದ್ದು, ಪ್ಯಾಟಿ ಹನುಮಂತ ದೇವರ ದೇವಸ್ಥಾನದಿಂದ ಆರಂಭವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ನಂತರ ದೇವಸ್ಥಾನದ ಮುಂದೆ ಅಗ್ನಿ ಕುಂಡದಲ್ಲಿ ಹಾಯುವ ಕಾರ್ಯಕ್ರಮ ಜರುಗಲಿದೆ. ಸಂಜೆ 5ಕ್ಕೆ ಪಲ್ಲಕ್ಕಿ ಉತ್ಸವ ಜರುಗಲಿದ್ದು, ರಥೋತ್ಸವದ ಅಂಗವಾಗಿ ಪ್ರತಿದಿನ ಪ್ರಾತಃಕಾಲ ರುದ್ರಾಭಿಷೇಕ ಜರುಗಲಿದೆ ಎಂದು ಜಾತ್ರಾ ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ.

ಮಾನವ ಜೀವನಕ್ಕೆ ಧರ್ಮವೇ ದಿಕ್ಸೂಚಿ : ಶ್ರೀ ರಂಭಾಪುರಿ ಜಗದ್ಗುರುಗಳು

0

ವಿಜಯಸಾಕ್ಷಿ ಸುದ್ದಿ, ಅಫಜಲಪುರ : ಭಗವಂತನ ಸೃಷ್ಟಿಯಲ್ಲಿ ಮಾನವ ಜನ್ಮಕ್ಕೆ ಬಹಳಷ್ಟು ಪ್ರಾಮುಖ್ಯತೆಯನ್ನು ಕೊಟ್ಟಿದ್ದಾರೆ. ಮನುಷ್ಯನಿಗೆ ಇರುವ ತಿಳುವಳಿಕೆ ಇತರ ಪ್ರಾಣಿ-ಪಕ್ಷಿಗಳಿಗೆ ಇಲ್ಲದೆ ಇರುವುದು ವಿಶೇಷ. ಮನುಷ್ಯನಾಗಿ ಅರಿತು ಬಾಳುವುದರಲ್ಲಿ ಜೀವನದ ಶ್ರೇಯಸ್ಸು ಇದೆ ಎಂದು ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಗುರುವಾರ ತಾಲೂಕಿನ ಕರಜಿಗಿ ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಗೋಪುರ ಕಳಸಾರೋಹಣದ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಮನುಷ್ಯ ಜೀವನದಲ್ಲಿ ಧರ್ಮ, ಅರ್ಥ, ಕಾಮ, ಮೋಕ್ಷ ಎಂಬ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿಕೊಳ್ಳದೆ ಹೋದರೆ ಮಾನವ ಜೀವನ ವ್ಯರ್ಥವಾಗುತ್ತದೆ. ಅರಿವುಳ್ಳ ಮಾನವ ಜನ್ಮದಲ್ಲಿ ಬಂದ ಬಳಿಕ ಒಂದಿಷ್ಟಾದರೂ ಶಿವಜ್ಞಾನ ಮತ್ತು ಗುರು ಕಾರುಣ್ಯ ಪಡೆದು ಬಾಳಿದರೆ ಜೀವನ ಸಾರ್ಥಕವಾಗುತ್ತದೆ.

ಶ್ರೀ ಜಗದ್ಗುರು ರೇಣುಕಾಚಾರ್ಯರು ಮೌಲ್ಯಾಧಾರಿತ ಬದುಕಿಗೆ ಧರ್ಮದ ದಶವಿಧ ಸೂತ್ರಗಳನ್ನು ಬೋಧಿಸಿ ಉದ್ಧರಿಸಿದ್ದಾರೆ. ವೀರಶೈವ ಧರ್ಮದಲ್ಲಿ ಜಾತಿ, ಮತ, ಪಂಥಗಳೆನ್ನದೆ ಎಲ್ಲ ವರ್ಗದ ಜನತೆಗೆ ನೀತಿ ಬೋಧನಾತ್ಮಕವಾದ ಆದರ್ಶ ಮೌಲ್ಯಗಳನ್ನು ಬೋಧಿಸಿದ್ದನ್ನು ಎಂದಿಗೂ ಮರೆಯುವಂತಿಲ್ಲ. ಗ್ರಾಮದ ಜನತೆ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ನಿರ್ಮಿಸಿ ಗೋಪುರ ಕಳಸಾರೋಹಣ ಮಾಡಿರುವುದು ಶ್ರೀ ರಂಭಾಪುರಿ ಜಗದ್ಗುರುಗಳಿಗೆ ಅತ್ಯಂತ ಸಂತೋಷವನ್ನು ತಂದಿದೆ ಎಚಿದರಲ್ಲದೆ, ಗ್ರಾಮದ ಎಲ್ಲ ಜನತೆ ಶಾಚಿತಿ-ಸೌಹಾರ್ದತೆಯಿಂದ ಬದುಕಿ ಬಾಳಲು ಶ್ರೀ ರಂಭಾಪುರಿ ಜಗದ್ಗುರು ಕರೆ ನೀಡಿದರು.

ಸಮಾರಂಭದಲ್ಲಿ ಹಲವಾರು ಮಠಾಧೀಶರು ಮತ್ತು ಗಣ್ಯರು ಪಾಲ್ಗೊಂಡು ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದರು. ಸಮಾರಂಭಕ್ಕೂ ಮುನ್ನ ಗ್ರಾಮದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳ ಸಂಭ್ರಮದ ಅಡ್ಡ ಪಲ್ಲಕ್ಕಿ ಮಹೋತ್ಸವ ಜರುಗಿತು. ಸಹಸ್ರಾರು ಭಕ್ತರು ಪಾಲ್ಗೊಂಡು ಜಗದ್ಗುರುಗಳ ದರ್ಶನ-ಆಶೀರ್ವಾದ ಪಡೆದರು.

ಸಮಾರಂಭದ ನೇತೃತ್ವವನ್ನು ವಹಿಸಿದ್ದ ಅಫಜಲಪುರ ಸಂಸ್ಥಾನ ಹಿರೇಮಠದ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಬದುಕಿ ಬಾಳುವ ಮನುಷ್ಯನಿಗೆ ಧರ್ಮವೊಂದೇ ಆಶಾಕಿರಣ. ಶ್ರೀ ರಂಭಾಪುರಿ ಪೀಠದ `ಮಾನವ ಧರ್ಮಕ್ಕೆ ಜಯವಾಗಲಿ’ ಅನ್ನುವ ಉದ್ಘೋಷಣೆ ಸಾಮರಸ್ಯ, ಸೌಹಾರ್ದತೆಗೆ ಸಾಕ್ಷಿಯಾಗಿದೆ. ಶ್ರೀ ರಂಭಾಪುರಿ ಜಗದ್ಗುರುಗಳ ಶುಭಾಗಮನ ಈ ಭಾಗದ ಎಲ್ಲ ಭಕ್ತರಿಗೆ ಶಾಂತಿ, ಸುಖ, ಸಮೃದ್ಧಿಯನ್ನು ಉಂಟು ಮಾಡಲೆಂದು ಹಾರೈಸಿದರು.

ಶೇಕಡಾವಾರು ಮತದಾನ ಹೆಚ್ಚಳಕ್ಕೆ ಶ್ರಮಿಸಿ : ಭರತ್.ಎಸ್

0

ವಿಜಯಸಾಕ್ಷಿ ಸುದ್ದಿ, ಗದಗ : ಮತದಾನದ ಮಹತ್ವ, ಮತದಾನದ ಮೌಲ್ಯ ಹಾಗೂ ನೈತಿಕ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಗದಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆ ದಿಸೆಯಲ್ಲಿ ಏಪ್ರಿಲ್ 28ರಂದು `ನಮ್ಮ ನಡೆ-ಮತಗಟ್ಟೆ ಕಡೆಗೆ’ ಕಾರ್ಯಕ್ರಮವನ್ನು ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಹಮ್ಮಿಕೊಳ್ಳಲು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಭರತ್ ಸೂಚಿಸಿದ್ದಾರೆ.

ನಗರದ ಕೇಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸ್ವೀಪ್ ಸಮಿತಿಯ ಅಧಿಕಾರಿಗಳ ಜೊತೆ ಸಂವಾದ ನಡೆಸಿ, ಏಪ್ರಿಲ್ 28ರಂದು `ನಮ್ಮ ನಡೆ-ಮತಗಟ್ಟೆ ಕಡೆಗೆ’ ಕಾರ್ಯಕ್ರಮದ ಸಂದರ್ಭದಲ್ಲಿ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮತಗಟ್ಟೆಗಳನ್ನು ಪರಿಚಯಿಸುವ ಕೆಲಸ ಆಗಬೇಕು ಎಂದು ಎಸ್. ಭರತ್ ಅವರು ಸಲಹೆ ನೀಡಿದರು.

ಜಿಲ್ಲೆಯಲ್ಲಿ 961 ಮತಗಟ್ಟೆ ಕೇಂದ್ರಗಳಿದ್ದು, ಅಗತ್ಯ ಮೂಲಸೌಲಭ್ಯಗಳ ಬಗ್ಗೆ ಮತ್ತೊಮ್ಮೆ ಖಾತರಿಪಡಿಸಿಕೊಳ್ಳಬೇಕು. ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರವಾರು ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸವಾಗಬೇಕು.

ನಗರ/ಗ್ರಾಮೀಣ ಮತಗಟ್ಟೆ ಮತದಾನದ ಅರಿವು ಮೂಡಿಸುವ ಕಾರ್ಯಕ್ರಮಗಳ ಆಯೋಜನೆ ಮಾಡುವಂತೆ ಭರತ್.ಎಸ್ ಅವರು ಹೇಳಿದರು.

ತಾಲೂಕು ಮಟ್ಟದ ಕಾರ್ಯಕ್ರಮ ಆಯೋಜನೆ ಸಂಬಂಧ ಕೂಡಲೇ ಪಟ್ಟಿ ವಿವರ ನೀಡುವಂತೆ ತಾಲೂಕು ಪಂಚಾಯತ್ ಇಒಗಳಿಗೆ ಸೂಚಿಸಿದ ಅವರು, ಕಾರ್ಯಕ್ರಮ ಆಯೋಜನೆ ಸಂಬಂಧ ಹತ್ತಿರದ ಪೊಲೀಸ್ ಠಾಣೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಬೇಕು. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ, ಎಲ್ಲ ಇಲಾಖೆಗಳ ಸಹಕಾರ ಪಡೆದು ಕಾರ್ಯಕ್ರಮ ಆಯೋಜನೆಗೆ ಮುಂದಾಗಬೇಕು ಎಂದರು.

ಜಿ.ಪಂ ಉಪಕಾರ್ಯದರ್ಶಿ ಹಾಗೂ ಸ್ವೀಪ್ ಸಮಿತಿ ಜಿಲ್ಲಾ ನೋಡಲ್ ಅಧಿಕಾರಿ ಸಿ.ಬಿ. ದೇವರಮನಿ ಅವರು ಸ್ವೀಪ್ ಸಮಿತಿ ವತಿಯಿಂದ ಏರ್ಪಡಿಸಲಾಗಿರುವ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಅಮಿನಸಾಬ್ ಅತ್ತಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಎನ್. ಕುರ್ತಕೋಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಗುಂಜೀಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಪಿ.ವೈ. ಶೆಟ್ಟೆಪ್ಪನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸ್ಥಳೀಯ ಸಂಸ್ಥೆಗಳು ಹೀಗೆ ಎಲ್ಲರೂ ಕೈಜೋಡಿಸಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಶ್ರಮಿಸಬೇಕು ಎಂದು ಭರತ್.ಎಸ್ ಅವರು ಸೂಚಿಸಿದರು.

ಹೆಚ್ಚಿನ ಮುನ್ನಡೆಯೊಂದಿಗೆ ಗೆಲ್ಲುವ ವಿಶ್ವಾಸ : ಆನಂದಸ್ವಾಮಿ

0

ವಿಜಯಸಾಕ್ಷಿ ಸುದ್ದಿ, ಹಾವೇರಿ : ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಬುಧವಾರ ಬೃಹತ್ ಮೆರವಣಿಗೆಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳು ಪಾಲ್ಗೊಂಡಿದ್ದರು. ಬಿಸಿಲಿನ ಝಳವನ್ನೂ ಲೆಕ್ಕಿಸದೇ ಹಾವೇರಿ-ಗದಗ ಕ್ಷೇತ್ರ ವ್ಯಾಪ್ತಿಯ ಎಂಟೂ ಕ್ಷೇತ್ರಗಳಿಂದ ಪಕ್ಷದ ಕಾರ್ಯಕರ್ತರು, ಮಹಿಳೆಯರು, ಯುವಕರು, ಅಭಿಮಾನಿಗಳು ಪಾಲ್ಗೊಂಡಿದ್ದರಲ್ಲದೇ ಎಲ್ಲೆಡೆ ಪಕ್ಷದ ಧ್ವಜ, ನಾಯಕರ ಕಟೌಟ್‌ಗಳು, `ನಾನು ಶ್ರಮಿಕ-ನನ್ನ ಮತ ಕಾಂಗ್ರೆಸ್ಸಿಗೆ’ ಇತ್ಯಾದಿ ಘೋಷಣೆಗಳು ಮೊಳಗಿದವು.

gaddadevaramat

ಟಿಕೆಟ್ ಘೋಷಣೆಯಾದಾಗಿನಿಂದ ಅವಿರತವಾಗಿ ಕ್ಷೇತ್ರದಾದ್ಯಂತ ಸಂಚರಿಸುತ್ತ ಈಗಾಗಲೇ ಒಂದು ಸುತ್ತಿನ ಪ್ರಚಾರ ಪೂರೈಸಿರುವ ಆನಂದಸ್ವಾಮಿ ಗಡ್ಡದೇವರಮಠ, ಬುಧವಾರ ಬೆಳಿಗ್ಗೆ ಹುಕ್ಕೇರಿಮಠದ ಶ್ರೀ ಸದಾಶಿವ ಸ್ವಾಮೀಜಿಗಳ ಆಶೀರ್ವಾದ ಪಡೆದರಲ್ಲದೆ, ನಗರದ ಶ್ರೀ ವೀರಭದ್ರೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಚಿವರಾದ ಡಾ. ಎಚ್.ಕೆ. ಪಾಟೀಲ, ಶಿವಾನಂದ ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ಕೆಪಿಸಿಸಿ ಕಾರ್ಯದರ್ಶಿ ಸಲೀಂ ಅಹಮದ್, ಶಾಸಕರಾದ ಜೆ.ಎಸ್. ಪಟೇಲ್, ಪ್ರಕಾಶ್ ಕೋಳಿವಾಡ, ಯು.ಬಿ. ಬಣಕಾರ್, ಶ್ರೀನಿವಾಸ ಮಾನೆ, ಬಸವರಾಜ ಶಿವಣ್ಣ ಸೇರಿದಂತೆ ಮುಖಂಡರೊಂದಿಗೆ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆನಂದಸ್ವಾಮಿ ಗಡ್ಡದೇವರಮಠ, ಎಲ್ಲ ಸಚಿವರು, ಶಾಸಕರು, ಪಕ್ಷದ ಮುಖಂಡರು, ಉತ್ಸಾಹಿ ಕಾರ್ಯಕರ್ತರು, ಮುಖ್ಯವಾಗಿ ಕ್ಷೇತ್ರದ ಮಹಾಜನತೆ ನನ್ನ ಮೇಲೆ ವಿಶ್ವಾಸ, ಪ್ರೀತಿಯಿಟ್ಟು ಸುಡುಬಿಸಿಲಿನಲ್ಲೂ ನನ್ನೊಂದಿಗೆ ನಡೆದಿದ್ದನ್ನು ನಾನೆಂದೂ ಮರೆಯಲಾರೆ. ನಿಮ್ಮೆಲ್ಲರ ಅಭಿಮಾನಕ್ಕೆ ಧನ್ಯವಾದ ಎಂದು ಹೇಳಿದರು.

ದೇಶದ ಹಿತವನ್ನು ಗಮನದಲ್ಲಿಟ್ಟುಕೊಂಡು, ಎಲ್ಲರೂ ನಮ್ಮ ಪಕ್ಷದ ಮೇಲೆ ನಂಬಿಕೆ ಇಟ್ಟು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಬೆಂಬಲ ನೀಡಿದ್ದಾರೆ. ಸಚಿವರಾದ ಎಚ್.ಕೆ. ಪಾಟೀಲ, ಸಲೀಂ ಅಹ್ಮದ್ ಸೇರಿದಂತೆ ಹಿರಿಯ ನಾಯಕರು ಪಾಲ್ಗೊಂಡು ನನಗೆ ಸ್ಪೂರ್ತಿ ತುಂಬಿದ್ದಾರೆ. ಕ್ಷೇತ್ರದ ಮೂಲೆ ಮೂಲೆಯಿಂದ ಕಾರ್ಯಕರ್ತರು ಬಂದಿದ್ದು, ಅವರ ಅಪರಿಮಿತ ಉತ್ಸಾಹದಿಂದ ಮನ ತುಂಬಿ ಬಂದಿದೆ. ಎಲ್ಲರ ಆಶೀರ್ವಾದದಿಂದ ಅತ್ಯಂತ ಹೆಚ್ಚಿನ ಮುನ್ನಡೆಯೊಂದಿಗೆ ಗೆಲುವು ಸಾಧಿಸುವ ವಿಶ್ವಾಸವಿದೆ.
– ಆನಂದಸ್ವಾಮಿ ಗಡ್ಡದೇವರಮಠ.
ಹಾವೇರಿ-ಗದಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ.

error: Content is protected !!