Home Blog

ಅಪರಾಧ ತಡೆಗೆ ಇಲಾಖೆಯೊಂದಿಗೆ ಸಹಕರಿಸಿ:ಸುಮಾ ಎಮ್.ಗೊರಬಾಳ

0

ವಿಜಯಸಾಕ್ಷಿ ಸುದ್ದಿ, ಡಂಬಳ : ಗ್ರಾಮೀಣ ಪ್ರದೇಶಗಳಲ್ಲಿಯೂ ಬೈಕ್ ಕಳ್ಳತನ, ಮನೆ, ಅಂಗಡಿಗಳ ಕಳ್ಳತನ, ಸರಗಳ್ಳತನ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳ ಮೂಲಕ ಸಾರ್ವಜನಿಕರು ವಂಚನೆಗೆ ಒಳಗಾಗುತ್ತಿರುವುದು ಗಣನೀಯವಾಗಿ ಹೆಚ್ಚಳವಾಗುತ್ತಿವೆ. ಇವುಗಳನ್ನು ತಡೆಯಲು ಇಲಾಖೆ ಈಗಾಗಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸಿಗ್ನಲ್ ಜಂಪ್, ವಾಹನ ಚಾಲಕರಿಂದ ದುಡುಕಿನ ಚಾಲನೆ ಪ್ರಕರಣಗಳು ನಡೆಯುತ್ತಿವೆ. ಸಾರ್ವಜನಿಕರು ಸಿಸಿಟಿವಿ ಕ್ಯಾಮರಾ ಅಳವಡಿಸಿಕೊಂಡು ಸುರಕ್ಷಿತವಾಗಿರಬೇಕೆಂದು ಮುಂಡರಗಿ ಪಿಎಸ್‌ಐ ಸುಮಾ ಎಮ್.ಗೊರಬಾಳ ಹೇಳಿದರು.

ಡಂಬಳ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ ನಗರದಲ್ಲಿ ಗುರುವಾರ `ಅಪರಾಧ ತಡೆ ಮಾಸಾಚರಣೆ’ಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಚಾಲಕರ ಪಕ್ಕದಲ್ಲಿ ಪ್ರಯಾಣಿಕರನ್ನು ಕೂರಿಸಿಕೊಳ್ಳುವುದು, ನಿರ್ಲಕ್ಷ್ಯದಿಂದ ಚಾಲನೆ ಮಾಡುವುದು, ಹೆಲ್ಮೆಟ್ ಧರಿಸದೇ ಇರುವುದು, ಸಿಗ್ನಲ್ ಬ್ರೇಕ್ ಮಾಡುವುದು ಸೇರಿದಂತೆ ಸಂಚಾರ ನಿಯಮಗಳನ್ನು ಪಾಲನೆಯಾಗುತ್ತಿಲ್ಲ. ಮನೆ ಕಳ್ಳತನ ತಡೆಗಟ್ಟುವ ಬಗ್ಗೆ ಪಾಲಿಸಬೇಕಾದ ಕ್ರಮಗಳು, ಮನೆ ಬಾಡಿಗೆ ನೀಡುವಾಗ ಪಾಲಿಸಬೇಕಾದ ಕ್ರಮಗಳು, ವಾಹನ ಕಳ್ಳತನ ತಡೆಗಟ್ಟಲು ಪಾಲಿಸಬೇಕಾದ ಕ್ರಮಗಳನ್ನು ಗಮನದಲ್ಲಿರಿಸಿಕೊಂಡು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು.

ಯಾವುದೇ ತುರ್ತು ಪರಿಸ್ಥಿತಿಗಳಲ್ಲಿ 112ಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬೇಕು. ನಿತ್ಯ ನಡೆಯುವ ಅಪರಾಧಗಳ ನಿಯಂತ್ರಣಕ್ಕೆ ನಮ್ಮ ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು. ತಮ್ಮ ಬಡಾವಣೆಯಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಜಾಗೃತೆ ವಹಿಸಬೇಕು. ಪಾಲಕರು ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಜಾಗೃತೆ ವಹಿಸಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಎಎಸ್‌ಐ ವೀರಭದ್ರಪ್ಪ ತಂಟ್ರೆ, ಮುಖಂಡ ನಿಂಗಪ್ಪ ಮಾದರ, ಸೋಮಪ್ಪ ತಳಗೇರಿ, ಕೆಂಚಪ್ಪ ಹಳ್ಳಿಕೇರಿ, ಮರಿಯಪ್ಪ ದೊಡ್ಡಮನಿ, ಸುರೇಶ ದೊಡ್ಡಮನಿ, ಶ್ರೀಕಾಂತ ಪೂಜಾರ, ಕೆಂಚಪ್ಪ ಪೂಜಾರ, ಕೆಂಚಪ್ಪ ದೊಡ್ಡಮನಿ, ದುರಗಮ್ಮ ತಳಗೇರಿ, ಮರಿಯಪ್ಪ ದೊಡ್ಡಮನಿ, ದೇವಪ್ಪ ಬೆನ್ನಹಳ್ಳಿ, ಗೋವಿಂದಪ್ಪ ಘಟ್ಟರಡ್ಡಿಹಾಳ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಇದ್ದರು.

ಜ.ತೋಂಟದಾರ್ಯ ಮಠದ ಜಾತ್ರೆಯಲ್ಲಿ ಭಾವೈಕ್ಯತೆಯ ಭಾವಸಂಭ್ರಮ

ತೋಂಟದ ಸಿದ್ಧಲಿಂಗನ ಜಾತ್ರೆ ಅಂದರೆ, ಗ್ರಾಮ ಮತ್ತು ಪಟ್ಟಣಗಳ ಒಂದು ಪ್ರಮುಖ ಪರಂಪರೆ.
ಸಾಮಾನ್ಯವಾಗಿ ಒಂದು ಸಾರ್ವಜನಿಕ ಉದ್ದೇಶಕ್ಕಾಗಿ ಒಂದುಗೂಡಿಸುವಿಕೆಯೇ ಜ. ತೋಂಟದಾರ್ಯ ಮಠದ ಜಾತ್ರಾ ವಿಶೇಷತೆ ಎಂದು ಪರಿಗಣಿಸಲಾಗುತ್ತಿದೆ. ಪ್ರತಿ ವರ್ಷಕ್ಕೊಮ್ಮೆ ಸರ್ವತ್ರ ಸುಭಿಕ್ಷಾರ್ಥವಾಗಿ ಧಾರ್ಮಿಕ ಪರಂಪರೆಯಂತೆ ಪೂಜಾ ಉತ್ಸವಗಳೊಂದೊಡಗೂಡಿದ ಜ. ತೋಂಟದಾರ್ಯ ಮಠದ ರಥೋತ್ಸವವನ್ನು ಅತೀ ವಿಜೃಂಭಣೆಯಿಂದ ನಡೆಸಲಾಗುತ್ತಿದೆ.
ಇದು ನಮ್ಮ ದಕ್ಷಿಣ ಭಾಗದ ಕರ್ನಾಟಕದಲ್ಲಿ ನಡೆಯುವ ಅತಿ ದೊಡ್ಡ ಜಾತ್ರೆ. ಈ ಜಾತ್ರೆಗೆ ನಾಡಿನ ಮೂಲೆ ಮೂಲೆಗಳಿಂದ ಭಕ್ತಸಾಗರ ಹರಿದು ಬರುತ್ತದೆ. ಜಾತ್ರೆ ಅಂದಾಗ ಬರೀ ಉತ್ತತ್ತಿ-ಬಾಳೆಹಣ್ಣು ಎಸೆದು ಮೋಜು ಮಾಡುವಂತ ಜಾತ್ರೆಯಲ್ಲ. ಈ ಜಾತ್ರೆಯ ವಿಶೇಷತೆಯೇ ವಿಭಿನ್ನ. ಅನೇಕಾನೇಕ ಮನರಂಜನಾ ಕಾರ್ಯಕ್ರಮ, ಆರೋಗ್ಯ ಶಿಬಿರ, ಹೈನುಗಾರಿಕೆ, ಕೃಷಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಜೊತೆಗೆ ಜಾನಪದ ಕಲೆಗಳ ಪ್ರದರ್ಶನ ನಾಡಿನಲ್ಲಿ ಸಮಾಜಕ್ಕಾಗಿ, ದೇಶಕ್ಕಾಗಿ, ಸ್ವಾರ್ಥ ರಹಿತ ಸೇವೆಯನ್ನು ಸಲ್ಲಿಸಿದಂತ ನಾಡಿನ ಗಣ್ಯರ ಮಹಾತ್ಮರ ಕುರಿತು ಪುಸ್ತಕ ಬಿಡುಗಡೆ ಕಾರ್ಯಕ್ರಮ, ದಾಸೋಹ ಸೇವೆ ಜನಮನಕ್ಕೆ ಜ್ಞಾನವನ್ನು ಹಂಚುವಂತ ಜಾತ್ರೆಯಂದರೆ ಅದು ಜ. ತೋಂಟದಾರ್ಯ ಮಠದ ಜಾತ್ರೆ.
ಜಾತ್ರೆ ಎಂದರೆ ಜನ ಸೇರಿ ಉತ್ತತ್ತಿ ಬಾಳೆಹಣ್ಣು ಎಸೆದರೆ ಸಾಲದು. ಅದು ಜ್ಞಾನವನ್ನು ಹಂಚಿ ಮೌಢ್ಯತೆಯನ್ನು ತೊಲಗಿಸಿ, ವೈಚಾರಿಕತೆಯನ್ನು ಮೂಡಿಸುವುದೇ ಜಾತ್ರೆಯ ಉದ್ದೇಶವೆಂದು ಜಾತ್ರೆಗಳು ಜನಮಾನಸಕ್ಕೆ ಸಾರಿ ಹೇಳುವದೇ ನಿಜವಾದ ಜಾತ್ರೆ. ಜಾತ್ರೆ ಆಚರಿಸುವ ಉದ್ದೇಶ ಜಾತಿ-ಲಿಂಗ, ವರ್ಣಭೇದವಿಲ್ಲದೆ ಬಡವ, ಶ್ರೀಮಂತ ಎಂದು ಪರಿಗಣಿಸದೆ ಎಲ್ಲ ಧರ್ಮದ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ನೋವು-ನಲಿವು ತಮ್ಮೆಲ್ಲಾ ಚಿಂತೆಗಳನ್ನು ಬದಿಗೊತ್ತಿ ಅಜ್ಜನ ಜಾತ್ರೆಯಲ್ಲಿ ಪಾಲ್ಗೊಂಡು ಪಾವನರಾಗುತ್ತಾರೆ.
math
ಜಗದ್ಗುರು ತೋಂಟದಾರ್ಯ ಸಿದ್ಧಲಿಂಗೇಶ್ವರ ಜಾತ್ರೆ ಸಡಗರ ಸಂಭ್ರಮದಿಂದ ಗರಿಗೆದರಿದೆ. ತ್ರಿವಿಧ ದಾಸೋಹಿ ಪೂಜ್ಯ ಶ್ರೀ ಜಗದ್ಗುರು ಲಿಂ. ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ದಿವ್ಯ ಪ್ರಕಾಶದಲ್ಲಿ ಶ್ರೀ ಮನ್ನಿರಂಜನ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಇವರ ಸನ್ನಿಧಿಯಲ್ಲಿ 2024ರ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಜರುಗುತ್ತವೆ.
ಏಪ್ರಿಲ್ 22ರಂದು ಪ್ರಾರಂಭೋತ್ಸವ, ಏ.23ರಂದು ಮಹಾರಥೋತ್ಸವ, ಏ.24ರಂದು ಲಘು ರಥೋತ್ಸವ,
ಏ.25ರಂದು ಮಂಗಲೋತ್ಸವ ಅಷ್ಟೇ ಅಲ್ಲದೆ, ಅಲ್ಲದೆ ಸಾಯಂಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತವೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಜನರು ದೊಡ್ಡ ಸಂಖ್ಯೆಯಲ್ಲಿ ಬರುತ್ತಾರೆ. ಹೊರ ರಾಜ್ಯದಲ್ಲಿ ನೆಲೆಸಿರುವ ಬಸವ ಭಕ್ತರು ತೋಂಟದ ಸಿದ್ಧಲಿಂಗನ ಭಕ್ತರು ಇದ್ದಾರೆ. ಉದ್ಯೋಗ ಅರಸಿ ಹೊರ ಊರುಗಳಲ್ಲಿ ಇರುವವರು ಸಹ ವರ್ಷಕ್ಕೊಮ್ಮೆ ನಡೆಯುವ ಜಾತ್ರೆ ಬಂತು ಎಂದರೆ ಏನೋ ಸಡಗರ ಯಾವಾಗ ಜಾತ್ರೆಯಲ್ಲಿ ತೊಡಗಿ ಕರ್ತೃ ಗದ್ದುಗಿ ದರ್ಶನ ಮಾಡಿ ಪಾವನರಾಗುತ್ತೇವೋ ಎಂಬ ತವಕ.
jatra
ಮಾನವತೆಯ ಮಂಗಳದ ವಿಶ್ವ ಸಂಸ್ಕೃತಿಯ ಉಜ್ವಲ ಇತಿಹಾಸದಲ್ಲಿ 12ನೇ ಶತಮಾನದ ಶಿವಾಬ್ದಿ ಸ್ವರೋಣದಯವಾಗಿತ್ತು. ಮಾನವತೆ ಮಂಗಳದ ಮುಂಬೆಳಗಾಗಿ ಮೂಡಿ ಬಂದ ಬಸವಾದಿ ಪ್ರಮಥರನ್ನು ಕನ್ನಡದ ಬಂಗಾರದ ಭಾಂದಳದಲ್ಲಿ ವಚನ ಓಂಕಾರದ ಸುನಾದವನ್ನು ಮೊಳಗಿಸಿದವರು ಪೂಜ್ಯ ಲಿಂ. ಸಿದ್ಧಲಿಂಗ ಶ್ರೀಗಳು.
ಸದ್ಯದ ಪೂಜ್ಯ ಡಾ. ಸಿದ್ಧರಾಮ ಮಹಾಸ್ವಾಮಿಗಳು ಸಹ ಗುರುಗಳ ಮಾರ್ಗದಲ್ಲಿ ನಡೆದು ಶ್ರೀ ಮಠವನ್ನು ಉತ್ತುಂಗಕ್ಕೆ ಏರಿಸಿದ್ದಾರೆ. ಈ ಕಾರಣಕ್ಕಾಗಿಯೇ ಸರಕಾರ ಕೂಡಾ ನಿತ್ಯ ಶಿವಾನುಭವ ಮೂಲಕ 12ನೇ ಶತಮಾನ ಬಸವಾದಿ ಶರಣ ಚಿಂತಕರ ಕುರಿತು ಉಪನ್ಯಾಸ ಏರ್ಪಡಿಸುವುದರ ಮೂಲಕ ಪೂಜ್ಯ ಜಗದ್ಗುರು ಡಾ. ಸಿದ್ಧಲಿಂಗ ಮಹಾಸ್ವಾಮಿಗಳ ಜನ್ಮದಿನವನ್ನು `ಭಾವೈಕ್ಯತೆಯ ದಿನ’ವನ್ನಾಗಿ ಘೋಷಿಸಿ ಪೂಜ್ಯರ ಜಯಂತಿಯನ್ನು ಆಚರಿಸುವಂತಾಯಿತು.
ಕೋಮು ಸೌಹಾರ್ದತೆಗೆ, ವೈಚಾರಿಕತೆಗೆ ಹೆಸರಾದ ಶ್ರೀಮಠವು, ಇಂದಿನ ಆಧುನಿಕ ಯುಗದಲ್ಲಿ ಮಠಗಳು ಕೇವಲ ದೈವಭಕ್ತಿ ಕೇಂದ್ರಗಳಾಗಿದ್ದರೆ ಸಾಲದು, ಜಾತ್ರೆಗಳು ಮೂಢನಂಬಿಕೆಗಳ ಪ್ರತೀಕವಾಗಬಾರದು ಎನ್ನುವ ಸದುದ್ದೇಶದಿಂದ ರಥೋತ್ಸವವನ್ನು ಕಾರಣವಾಗಿಟ್ಟುಕೊಂಡು ಬಸವಾದಿ ಪ್ರಮಥರ, ಶರಣರ, ಸಂತರ ಮಹಾಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸಲಾಗುತ್ತಿದೆ. ಜಾತ್ರೆಗಳು ಸಾಂಸ್ಕೃತಿಕ ಸಂದೇಶಗಳನ್ನು ಸಾರುವ ಸಮ್ಮೇಳನವಾಗಬೇಕು. ಈ ದಿಶೆಯಲ್ಲಿ ಗದುಗಿನ ತೋಂಟದ ಸಿದ್ಧಲಿಂಗ ಯತಿಗೆ ರಥೋತ್ಸವವು ಜನ ಸಾಮಾನ್ಯರ ಜಾತ್ರೆಯಾಗಿ ಸಾಂಸ್ಕೃತಿಕ ಚಟುವಟಿಕೆಗಳ ಸಮ್ಮೇಳನವಾಗಿ ನಡೆಯುತ್ತಿರುವುದು ಈ ಭಾಗದ ಜನರಿಗೆ ಹೆಮ್ಮೆಯ ವಿಷಯ.
ಧರ್ಮಗುರು ಬಸವಣ್ಣನವರು ವಚನದಾಶಯದಂತೆ ಧೀರ ಜಂಗಮರಾಗಿ ಬದುಕಿದವರು ಮರಣವನ್ನು ಮಹಾನವಮಿ ಹಬ್ಬವಾಗಿ ಸ್ವೀಕರಿಸಿದರು. ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಹೋರಾಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಲ್ಲಿ ಯಶಸ್ವಿಯೂ ಆದರೂ ಹೀಗೆ ಜನಮಾನಸಕ್ಕೆ ಜ್ಞಾನ ಮೂಲಕ ಹೊಸ ನಾಂದಿಯನ್ನು ಹಾಡಿದವರು ಲಿಂ. ಡಾ. ಸಿದ್ಧಲಿಂಗ ಮಹಾಸ್ವಾಮಿಗಳು ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲ ಜೀವನದಲ್ಲಿ ನಡೆದು ಕರಿಬಸಯ್ಯಜ್ಜನ ಕೃಪೆಗೆ ಹಾಗೂ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಗುರುಕೃಪೆಗೆ ಪಾತ್ರರಾಗೋಣ.
– ಚಿದಾನಂದಯ್ಯ ಶ್ರೀಶಾಂತಯ್ಯನಮಠ.
ಗದಗ.

ನಗರಸಭೆ ಉಪಾಧ್ಯಕ್ಷರ ಪುತ್ರ ಸೇರಿ ನಾಲ್ವರ ಹತ್ಯೆ ಪ್ರಕರಣ, ಶೀಘ್ರದಲ್ಲೇ ಹಂತಕರ ಬಂಧನ, ಎಸ್ಪಿ ಬಿ. ಎಸ್. ನೇಮಗೌಡ ನೇತೃತ್ವದಲ್ಲಿ ತಂಡ ರಚನೆ: ಐಜಿಪಿ ಮಾಹಿತಿ

0

ವಿಜಯಸಾಕ್ಷಿ ಸುದ್ದಿ, ಗದಗ

ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ ಸೇರಿದಂತೆ ನಾಲ್ವರ ಹತ್ಯೆ ಪ್ರಕರಣದಲ್ಲಿ ಬಾಗಿಯಾದ ಹಂತಕರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಉತ್ತರ ವಲಯ ಐಜಿಪಿ ವಿಕಾಸಕುಮಾರ್ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಐಜಿಪಿ, ಮಾಧ್ಯಮದವರ ಜೊತೆಗೆ ಮಾತನಾಡಿ ಈ ವಿಚಯ ತಿಳಿಸಿದರು.

https://youtu.be/MbuBYXYBD_A

ಕೊಲೆ ಪ್ರಕರಣ ತುಂಬಾ ಗಂಭೀರವಾಗಿದ್ದು, ತನಿಖೆ ಆರಂಭಿಸಿಲಾಗಿದೆ. ಕೊಲೆ ಮಾಡಿದವರು ದರೋಡೆಕೋರರು ಅಲ್ಲ, ಆಗಿದ್ದರೆ ಚಿನ್ನಾಭರಣ ಲೂಟಿ ಮಾಡುತ್ತಿದ್ದರು. ಮೃತ ದೇಹಗಳ ಮೇಲೆ ಆಭರಣಗಳು ಹಾಗೆಯೇ ಇವೆ. ಕೊಲೆಗಾರರ ಪತ್ತೆಗೆ ಎಸ್ಪಿ ಬಿ.ಎಸ್
‌ನೇಮಗೌಡ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿದೆ. ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆದಿದೆ. ಸಾರ್ವಜನಿಕರ ಬಳಿ ಏನಾದರೂ ಮಾಹಿತಿ ಇದ್ದರೆ ಪೊಲೀಸರಿಗೆ ನೀಡಲು ವಿನಂತಿಸಿದರು.

ಇಂದು ನಸುಕಿನ 2 ಗಂಟೆಗಳ ಸುಮಾರಿಗೆ ಈ ಘಟನೆ ನಡೆದಿರಬಹುದು ಎಂದು ಐಜಿಪಿ ವಿಕಾಸ್‌ಕುಮಾರ್ ಮಾಹಿತಿ ನೀಡಿದರು. ಶಹರ ಪೊಲೀಸ್ ಠಾಣೆಯಲ್ಲಿ 396 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದರು.

‘ಪುಲಿಗೆರೆ ಉತ್ಸವ’ದ ಮೊದಲ ದಿನದ ಕಾರ್ಯಕ್ರಮಗಳು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಕಮಿಟಿ, ಇನ್ಫೋಸಿಸ್ ಪ್ರತಿಷ್ಠಾನ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಹಾಗೂ ಭಾರತೀಯ ವಿಧ್ಯಾಭವನ ಬೆಂಗಳೂರು ಇವರ ಸಹಕಾರದಲ್ಲಿ ಏಪ್ರಿಲ್ 19, 20 ಮತ್ತು 21ರಂದು ಪುಲಿಗೆರೆ ಉತ್ಸವ ನಡೆಯಲಿದೆ.

utsava

ದಿ.19ರಂದು ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಉದಯ ರಾಗ-1ರಲ್ಲಿ ಖ್ಯಾತ ಕಲಾವಿದ ಸರ್ಪರಾಜ್ ಖಾನ್ ಇವರಿಂದ ಸಾರಂಗಿ ವಾದನದೊಂದಿಗೆ ಕಾರ್ಯಕ್ರಮ ಆರಂಭವಾಗುವುದು. 7 ಗಂಟೆಗೆ ಖ್ಯಾತ ಹಿಂದುಸ್ಥಾನಿ ಸಂಗೀತ ಕಲಾವಿದೆ ಕುಮಟಾದ ರೇಷ್ಮಾಭಟ್ ಅವರಿಂದ ಹಿಂದೂಸ್ಥಾನಿ ಗಾಯನ ಜರುಗುವುದು.

ಸಂಜೆ 4 ಗಂಟೆಗೆ ವಿವಿಧ ವಾದ್ಯ ವೈಭವ, ಭಕ್ತರ ಸಮ್ಮಿಲನದೊಂದಿಗೆ ಅಲಂಕೃತ ಶ್ರೀ ಸೋಮೇಶ್ವರ ದೇವರ ಪಲ್ಲಕ್ಕಿ ಉತ್ಸವ ಜರುಗಲಿದೆ. ಸಂಜೆ 6 ಗಂಟೆಗೆ ಸಿದ್ದಾಪುರದ ಕೊಳಗಿ ಕೇಶವ ಹೆಗಡೆ ಮತ್ತು ತಂಡದವರಿಂದ ಯಕ್ಷಗಾನ ಜರುಗಲಿದೆ. ಸಂಜೆ 7 ಗಂಟೆಗೆ ಹಿರಿಯ ಸಂಗೀತ ಕಲಾವಿದ ಗಾಯಕ ಡಾ.ಅಶೋಕ ಹುಗ್ಗಣ್ಣವರ ಅವರಿಂದ ಹಿಂದೂಸ್ಥಾನಿ ಗಾಯನ ನಡೆಯಲಿದೆ. ಬಳಿಕ 8.30ಕ್ಕೆ ಬೆಂಗಳೂರಿನ ವಿ.ಕಾವ್ಯಾ ಕಾಶಿನಾಥನ್ ಮತ್ತು ಶಶಾಂಕ್ ಕಿರೋಣ ನಾಯರ್ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ ಎಂದು ವಿದ್ಯಾಭವನದ ಜಂಟಿ ನಿರ್ದೇಶಕಿ ನಾಗಲಕ್ಷ್ಮಿ ಕೆ.ರಾವ್ ತಿಳಿಸಿದ್ದಾರೆ.

ಅಕ್ಕನ ವಚನಗಳಿಂದ ಜೀವನೋನ್ನತಿ : ತೋಂಟದ ಮಹಾಸ್ವಾಮಿಗಳು

0
ವಿಜಯಸಾಕ್ಷಿ ಸುದ್ದಿ, ಗದಗ : ಮನುಷ್ಯನ ದುಃಖಕ್ಕೆ ಮನಸ್ಸೇ ಕಾರಣ. ಎಲ್ಲಾ ಇಂದ್ರಿಯಗಳಿಗೂ ಚೇತನ ನೀಡುವುದರ ಮೂಲಕ ಮನಸ್ಸೇ ಇಂದ್ರಿಯಗಳಿಗೆ ಮೂಲವಾಗಿದೆ. ನಮ್ಮಲ್ಲಿರುವ ಮನಸ್ಸನ್ನು ಭಗವಂತನಲ್ಲಿ ನೆಲೆಗೊಳಿಸಬೇಕು. ಭಗವಂತನ ಚಿಂತನೆಯನ್ನು ಮಾಡುತ್ತ, ಶರಣಾಗತಿ ಭಾವವನ್ನು ಹೊಂದಿದಾಗ ಮಾತ್ರ ಮೋಕ್ಷವನ್ನು ಸಂಪಾದಿಸಬಹುದು. ಅಕ್ಕನ ವಚನಗಳನ್ನು ಮತ್ತೆ ಮತ್ತೆ ಓದುವುದರ ಜೊತೆಯಲ್ಲಿ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಜೀವನ ಉನ್ನತಿ ಪಡೆಯಬಹುದೆಂದು ಶ್ರೀ ಮ.ನಿ.ಪ್ರ. ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ನುಡಿದರು.
ಅಕ್ಕನ ಬಳಗದಲ್ಲಿ ಅಕ್ಕನ ಜಯಂತಿ ಉತ್ಸವದ ನಿಮಿತ್ತ ನಡೆಯುತ್ತಿರುವ ಮೊದಲನೇ ದಿನದ ಕಾರ್ಯಕ್ರಮದಲ್ಲಿ ಷಟ್‌ಸ್ಥಲ್ ಧ್ವಜಾರೋಹಣ ನೆರವೇರಿಸಿ ಶ್ರೀಗಳು ಆಶೀರ್ವಚನದಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಶೀವಲೀಲಾ ಹಿರೇಮಠ ಪ್ರಾರ್ಥಿಸಿದರು. ಅಕ್ಕನ ಬಳಗದ ಅಧ್ಯಕ್ಷೆ ಲಲಿತಾ ವಿ.ಬಾಳಿಹಳ್ಳಿಮಠ ಸ್ವಾಗತಸಿದರು.
ಕಾರ್ಯದರ್ಶಿ ರೇಣುಕಾ ಎಲ್.ಅಮಾತ್ಯ ವಂದಿಸಿದರು. ಜಯಲಕ್ಷ್ಮಿ ವಿ.ಬಳ್ಳಾರಿ ಕಾರ್ಯಕ್ರಮ ಸಂಯೋಜಿಸಿದರು. ಪ್ರೇಮಾ ಬಿ.ಮೇಟಿ ನಿರೂಪಿಸಿದರು. ಖ್ಯಾತ ಹಿಂದೂಸ್ತಾನಿ ಗಾಯಕಿ ಪಾರ್ವತಿ ವಿ.ಮಾಳೆಕೊಪ್ಪಮಠ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಅನ್ನಪೂರ್ಣ ಮಾಳೆಕೊಪ್ಪಮಠ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪವಿತ್ರಾ ಬಿರಾದಾರ ಪ್ರಸಾದದ ಭಕ್ತಿ ಸೇವೆಯನ್ನು ವಹಿಸಿಕೊಂಡಿದ್ದರು.
ಶಿವಲೀಲಾ ಕುರುಡಗಿ, ಕಸ್ತೂರಿ ಹಿರೇಗೌಡರ, ಸುಜಾತಾ ಮಾನ್ವಿ, ಶಾರದಾ ಹಿರೇಮಠ, ರೇಖಾ ಶಿಗ್ಲಿಮಠ, ದೀಪಾ ಪಟ್ಟಣಶೆಟ್ಟಿ, ಶ್ರೇಯಾ ಪವಾಡಶೆಟ್ಟರ್, ಸರೋಜಕ್ಕ ಮಾನ್ವಿ, ಜಯಶ್ರೀ ಬಾಳಿಹಳ್ಳಿಮಠ, ವಿದ್ಯಾ ಧಡಿ, ಸುಜಾತಾ ಹಿರೇಮಠ, ಶಶಿಕಲಾ ಹಿರೇಮಠ, ಸುವರ್ಣ ಮದರಿಮಠ ಮುಂತಾದವರು ಪಾಲ್ಗೊಂಡಿದ್ದರು.
12ನೇ ಶತಮಾನದಲ್ಲಿ ದೊರೆತ ಸ್ವಾತಂತ್ರ್ಯವನ್ನು ಅನುಭವಿಸಿದ ಮಹಿಳಾ ಶ್ರೇಷ್ಠ ಶಿವಶರಣೆ ಅಕ್ಕಮಹಾದೇವಿ, ಮಹಿಳಾ ಸಾಧಕರಲ್ಲಿ ಶ್ರೇಷ್ಠ ಸ್ಥಾನವನ್ನು ಪಡೆದ ಮಹಿಳೆ ತನ್ನ ಬದುಕನ್ನು ಮಾತ್ರ ಸಾರ್ಥಕಪಡಿಸಿಕೊಳ್ಳದೇ ಆತ್ಮಕಲ್ಯಾಣದ ಜೊತೆಗೆ ಸಮಾಜದ ಕಲ್ಯಾಣ ಸಾಧಿಸಿರುವ ಮಹಾಜ್ಞಾನಿ, ಚಿಕ್ಕವಯಸ್ಸಿನಲ್ಲಿಯೇ ಹೆಚ್ಚಿನ ಜ್ಞಾನವನ್ನು ಪಡೆದ ಮಹಿಳೆ, ಅದ್ಭುತವಾದ ಕವಿತಾ ಶಕ್ತಿ ಇರುವ, ಭಾರತ ಭೂಮಿಯ ಮೊಟ್ಟ ಮೊದಲ ಮಹಿಳಾ ಕವಿಯತ್ರಿಯೂ ಹೌದು. ಅಕ್ಕನ ವಚನಗಳಲ್ಲಿ ಮೌಲ್ಯ ತುಂಬಿರುತ್ತಿತ್ತು ಎಂದು ಶ್ರೀಗಳು ತಿಳಿಸಿದರು.

ಶ್ರೀ ಭೀಮಾಂಬಿಕಾ ತಾಯಿ ನಾಡಿನ ಶ್ರೇಷ್ಠ ಶಿವಶರಣೆ

0

ವಿಜಯಸಾಕ್ಷಿ ಸುದ್ದಿ, ಗದಗ : ಈ ನಾಡಿನ ಶ್ರೇಷ್ಠ ಶಿವಶರಣೆ ಇಟಗಿಯ ಶ್ರೀ ಭೀಮಾಂಬಿಕಾ ತಾಯಿಯ ಪವಾಡಗಳು ಇಂದಿಗೂ ಭಕ್ತರ ಮನದಲ್ಲಿ ಅಚ್ಚಳಿಯದೆ ಉಳಿದಿವೆ. ಶ್ರೀ ಭೀಮಾಂಬಿಕಾ ತಾಯಿಯ ಆಶೀರ್ವಾದ ಭಕ್ತರ ಮೇಲೆ ಸದಾ ಇರುತ್ತದೆ ಎಂದು ಸುಕ್ಷೇತ್ರ ಬಳಗಾನೂರಿನ ಪೂಜ್ಯ ಶ್ರೀ ಶಿವಶಾಂತವೀರ ಶರಣರು ಹೇಳಿದರು.

ತಾಲೂಕಿನ ಸುಕ್ಷೇತ್ರ ಬಳಗಾನೂರಿನಲ್ಲಿ ಮೌನ ತಪಸ್ವಿ, ಘನ ಮೌನಿ ಲಿಂ.ಶ್ರೀ ಚನ್ನವೀರ ಶರಣರ ಕೃಪಾಶೀರ್ವಾದಿಂದ ಶ್ರೀ ಶಿವಶರಣೆ ಇಟಗಿ ಭೀಮಾಂಬಿಕಾ ತಾಯಿಯ ಮೂರ್ತಿ ಪ್ರತಿಷ್ಠಾಪನೆ, ದೇವಸ್ಥಾನ ಉದ್ಘಾಟನೆ, ಕಳಸಾರೋಹಣ, ನವಗ್ರಹ ಮೂರ್ತಿಗಳ ಪ್ರತಿಷ್ಠಾಪನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀ ಶಿವಕುಮಾರ ಸ್ವಾಮಿಜಿ, ಕರ್ಜಗಿಯ ಶಂಕರ ಕಾರಡಗಿ, ವೇ.ಮೂ. ಚನ್ನಯ್ಯ ಶಾಂತಯ್ಯನಮಠ, ನಿವೃತ್ತ ಶಿಕ್ಷಕ ಕೆ.ಬಿ. ಕಂಬಳಿ, ಕುರಡಗಿಯ ರುದ್ರಮುನಿ ಶಾಸ್ತ್ರೀಗಳು, ಮಲ್ಲಾಪುರ ಗ್ರಾಮದ ಬಸಯ್ಯ ಶಾಸ್ತಿçÃಗಳು, ಡಾ.ಹನುಮಂತಗೌಡ ಆರ್.ಕಲ್ಮನಿ, ಶ್ರೀ ಭೀಮಾಂಬಿಕಾ ತಾಯಿ ಸೇವಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಶಿಕ್ಷಕ ಎಸ್.ಎಸ್. ಚಟ್ರಿ ಸ್ವಾಗತಿಸಿದರು. ವಿ.ಬಿ. ಕರಮುಡಿ ಪ್ರಸ್ತಾವಿಕವಾಗಿ ಮಾತನಾಡಿದರು. ಶಿವಲಿಂಗಯ್ಯ ಶಾಸ್ತ್ರೀ ಕಾರ್ಯಕ್ರಮ ನಿರೂಪಿಸಿದರು. ಗ್ರಾಮದ ನಾಗರಿಕರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸದ್ಭಕ್ತರು ಉಪಸ್ಥಿತರಿದ್ದರು.

ಕಡ್ಡಾಯ ಮತದಾನ ನಮ್ಮೆಲ್ಲರ ಜವಾಬ್ದಾರಿ : ವಿಶ್ವನಾಥ ಹೊಸಮನಿ

0

ವಿಜಯಸಾಕ್ಷಿ ಸುದ್ದಿ, ಡಂಬಳ : ಮತದಾನ ಸಂವಿಧಾನ ನಮಗೆ ನೀಡಿದ ವರದಾನ. ಅಂತಹ ಅತ್ಯಮೂಲ್ಯ ಹಕ್ಕನ್ನು ತಪ್ಪದೇ ಚಲಾಯಿಸುವುದು ಎಲ್ಲರ ಜವಾಬ್ದಾರಿ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ವಿಶ್ವನಾಥ ಹೊಸಮನಿ ಹೇಳಿದರು.

ಡಂಬಳ ಗ್ರಾಮದ ಹೊರವಲಯದಲ್ಲಿನ ನರೇಗಾ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದ ನಂತರ ಮತದಾನ ಜಾಗೃತಿ ಮೂಡಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ಗಟ್ಟಿಗೊಳ್ಳಬೇಕಾದರೆ ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು. ಸ್ವಯಂ ಪ್ರೇರಣೆಯಿಂದ ಎಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರಲ್ಲೂ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ನರೇಗಾ ಕೂಲಿ ಮೊತ್ತ ಈಗ 349 ರೂ.ಗೆ ಹೆಚ್ಚಳವಾಗಿದೆ. ಅಳತೆಗೆ ತಕ್ಕಂತೆ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಎಲ್ಲರೂ ಶ್ರಮಿಸಬೇಕು. ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯಿಂದ ಮಣ್ಣಿನ ಫಲವತ್ತತೆ ಹೆಚ್ಚಳವಾಗಿ, ಮಣ್ಣಿನ ಸವಕಳಿ ತಡೆಗಟ್ಟಲು ನೆರವಾಗುತ್ತದೆ.

ಇದರಿಂದ ರೈತರಿಗೆ ಅನುಕೂಲ ಎಂದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಮೋದ ತುಂಬಳ, ಪಿಡಿಓ ಶಶಿಧರ ಹೊಂಬಳ, ಟಿಸಿ ಹರೀಶ ಸೊಬರದ ಹಾಗೂ ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.

ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ ಲಕ್ಷ್ಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಹಾಗೂ ಕಿರಿಯ ಆರೋಗ್ಯ ನಿರೀಕ್ಷಕರ ಮೇಲೆ ಶಿಸ್ತು ಕ್ರಮ ಜರುಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಶೆಟ್ಟಿ ಬಣದ ತಾಲೂಕಾಧ್ಯಕ್ಷ ಮಹೇಶ ಕಲಘಟಗಿ ಹೇಳಿದರು.

ಈ ಬಗ್ಗೆ ತಹಸೀಲ್ದಾರ ಕಚೇರಿಯಲ್ಲಿ ಗ್ರೇಡ್-2 ತಹಸೀಲ್ದಾರ ಮಂಜುನಾಥ ಅಮಾಸಿ ಅವರಿಗೆ ಮನವಿ ಸಲ್ಲಿಸಿ ಮಾತನಾಡುತ್ತ, ಏಪ್ರಿಲ್ 17ರ ಸಂಜೆ ಮಾರುಕಟ್ಟೆಯಲ್ಲಿ ಲಕ್ಷ್ಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಸಂಚಾರಿದಳ ಅಧಿಕಾರಿ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರು ಜೊತೆಯಾಗಿ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ ನಡೆಸಿದ್ದಾರೆ. ಈ ಇಬ್ಬರೂ ಜಿಲ್ಲೆಯ ಅಧಿಕಾರಿಗಳಾಗಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರದ ಯಾವುದೇ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಅಪರಾಧವಾಗಿರುತ್ತದೆ. ಈ ಇಬ್ಬರೂ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಶ್ರೇಯಾಂಕ ಹಿರೇಮಠ, ನವೀನ ಗುರಿಕಾರ, ಪ್ರವೀಣ ದಶಮನಿ, ಮಂಜುನಾಥ ಗಾಂಜಿ, ಅಂಬರೀಶ ಗಾಂಜಿ, ಮಹಾಂತೇಶ ಗುರಿಕಾರ, ಚಂದ್ರು ಪಾಣಿಗಟ್ಟಿ, ಈಶ್ವರಗೌಡ ಪಾಣಿಗಟ್ಟಿ, ಬಸನಗೌಡ ಮನ್ನಂಗಿ, ತೇಜು ರವಿ ಗುರಿಕಾರ, ಮಲ್ಲನಗೌಡ ಪಾಟೀಲ, ಶಿವರಾಜ್ ಬಾಳಿಹಳ್ಳಿಮಠ, ವೀರೇಶ ಹಗ್ಗರದ, ಬಸನಗೌಡ ಅಡರಕಟ್ಟಿ ಮುಂತಾದವರಿದ್ದರು.

ತರಬೇತಿಯೊಂದಿಗೆ ಭವಿಷ್ಯವನ್ನು ರೂಪಿಸಿಕೊಳ್ಳಿ : ಅರುಣ ಬಿ.ಕುಲಕರ್ಣಿ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಬೆಂಗಳೂರಿನ ಬಿಡದಿಯ ಟೊಯೋಟಾ ಕಂಪನಿಯವರು ಧಾರವಾಡದ ಕನೆಕ್ಟ್ ಸಂಸ್ಥೆಯ ಮೂಲಕ ನಿಮಗೆ ಕೌಶಲ್ಯ ಪರಿಣಿತಿಯನ್ನು ನೀಡಲು ಬಂದಿದ್ದಾರೆ. ಮನೆ ಬಾಗಿಲಿಗೆ ಬಂದಿರುವ ಈ ಅವಕಾಶವನ್ನು ನೀವು ಸದುಪಯೋಗಪಡಿಸಿಕೊಂಡು ನಿಮ್ಮ ಜೀವನವನ್ನು ಉತ್ತಮಗೊಳಿಸಿಕೊಳ್ಳಿ ಎಂದು ಪಟ್ಟಣದ ಶ್ರೀ ಕೊಟ್ಟೂರುಸ್ವಾಮಿ ಐಟಿಐ ಕಾಲೇಜಿನ ಚೇರಮನ್ ವಿ.ಬಿ. ಸೋಮನಕಟ್ಟಿಮಠ ಹೇಳಿದರು.

ಗುರುವಾರ ಕಾಲೇಜಿನಲ್ಲಿ ಧಾರವಾಡದ ಕನೆಕ್ಟ್ ಸಂಸ್ಥೆಯವರು ನಡೆಸಿದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಹಿಂದೆ ಇಂತಹ ಸೌಲಭ್ಯಗಳು ಇರಲಿಲ್ಲ. ಈಗ ಅನೇಕ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ನಿಮ್ಮ ಮನೆ ಬಾಗಿಲಿಗೆ ಬರುತ್ತಿವೆ. ನಮ್ಮ ಶ್ರೀ ಕೊಟ್ಟೂರು ಸ್ವಾಮಿ ಐಟಿಐನ ಪ್ರಾಚಾರ್ಯರು ಮತ್ತು ಸಿಬ್ಬಂದಿಯವರು ನಿಮಗೆ ಇಂಥದ್ದೊಂದು ಅವಕಾಶವನ್ನು ಒದಗಿಸಿಕೊಟ್ಟಿದ್ದು, ಈ ಮೂಲಕ ನಿಮ್ಮ ಜೀವನದ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಹೇಳಿದರು.

ಬರುವ ಜೂನ್ ತಿಂಗಳಲ್ಲಿ ಇನ್ನಷ್ಟು ಹೆಚ್ಚಿನ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವಂತೆ ಮಾಡಿ, ಸಹಸ್ರಾರು ಜನರಿಗೆ ಉದ್ಯೋಗ ದೊರಕುವಂತೆ ಮಾಡುವುದು ನಮ್ಮ ಗುರಿಯಾಗಿದೆ. ಇದಕ್ಕೆ ನಮ್ಮ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳವರ ಆಶೀರ್ವಾದವೂ ಇದೆ ಎಂದು ಸೋಮನಕಟ್ಟಿ ತಿಳಿಸಿದರು.

ನಿವೃತ್ತ ಮುಖ್ಯ ಶಿಕ್ಷಕ ಅರುಣ ಬಿ.ಕುಲಕರ್ಣಿ ಮಾತನಾಡಿ, ನೀವು ಪಡೆದ ತರಬೇತಿ ಫಲಪ್ರದವಾಗಬೇಕಾದರೆ ಇಂತಹ ಕೌಶಲ್ಯಾಧಾರಿತ ಪ್ರಾಯೋಗಿಕ ತರಬೇತಿನಿಮಗೆ ಅವಶ್ಯಕ. ನಿಮ್ಮ ಮನೆತನವನ್ನು ಆರ್ಥಿಕವಾಗಿ ಸಬಲಪಡಿಸಲು ನೀವು ಈ ತರಬೇತಿಯನ್ನು ಪಡೆದುಕೊಳ್ಳಿ. ಸಿಕ್ಕ ಅವಕಾಶವನ್ನು ಬಳಸಿಕೊಂಡು ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದರು.

ಪ್ರಾಚಾರ್ಯ ಬಸವರಾಜ ಜೋಳದ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಐಟಿಐನಲ್ಲಿ ಒಟ್ಟು ಫಿಟ್ಟರ್, ಇಲೆಕ್ರ್ಟಿಶಿಯನ್, ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ಸ್, ಹೊಲಿಗೆ, ವೈರ್‌ಮನ್ ಹಾಗೂ ಪ್ಲಂಬರ್ ಹೀಗೆ ಆರು ಟ್ರೇಡ್‌ಗಳಿದ್ದು, ನಿಮಗೆ ಇಷ್ಟವಾಗುವ ಟ್ರೇಡ್‌ನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದರು.
ಎಸ್.ಎಂ. ಕಮ್ಮಾರ ಸ್ವಾಗತಿಸಿದರು. ಸುಮಾ ಸೋಮನಕಟ್ಟಿಮಠ ನಿರೂಪಿಸಿದರು. ನಾಗರಾಜ ಗುಡದಾರಿ ವಂದಿಸಿದರು.

ಕನೆಕ್ಟ್ ಸಂಸ್ಥೆಯ ಎಚ್.ಆರ್ ಮಲ್ಲಿಕಾರ್ಜುನ ಗೊಂಡಬಾಳ ಮಾತನಾಡಿ, ಈ ಅಪ್ರೆಂಟಿಸ್ ತರಬೇತಿಯು ಒಂದು ವರ್ಷದ್ದಾಗಿದ್ದು, ಈ ಸಮಯದಲ್ಲಿ ಕಂಪನಿಯ ವತಿಯಿಂದ ನೀವು 16875 ರೂ.ಗಳ ಸ್ಟೆöಪೆಂಡ್‌ನ್ನು ಪಡೆಯುತ್ತೀರಿ. ನೀವು ನಿಗದಿತ ಸಮಯಕ್ಕಿಂತ ಹೆಚ್ಚಿನ ಅವಧಿ ದುಡಿದರೆ ನಿಮಗೆ ಬೋನಸ್ ರೂಪದಲ್ಲಿ ಹೆಚ್ಚಿನ ವೇತನ ದೊರೆಯಲಿದೆ. ತರಬೇತಿ ಸಮಯದಲ್ಲಿ ಉಚಿತ ಸಾರಿಗೆ, ಊಟ, ಸಮವಸ್ತç ಮುಂತಾದವುಗಳನ್ನು ನೀಡಲಾಗುತ್ತಿದೆ ಎಂದರು.

ಜುಲೈ 13ರಂದು ರಾಷ್ಟ್ರೀಯ ಲೋಕ ಅದಾಲತ್

0

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ 2024ರ ಜುಲೈ 13ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಬಸವರಾಜ ತಿಳಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ಭೂ ಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಎಮ್‌ಎಮ್‌ಆರ್‌ಡಿ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ಗುರುತಿಸಲಾಗಿದೆ.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂದಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನವೊಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಪ್ರಕರಣಗಳಿಗೆ ಸಂಬಂದಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂದಪಟ್ಟ ಅಧಿಕಾರಿಗಳು, ಇಲಾಖೆಗಳವರು ಜುಲೈ 13ರಂದು ಜರಗುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಗುರುಪ್ರಸಾದ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!