ಗೆಳೆಯರೊಂದಿಗೆ ಕೆರೆಗೆ ಈಜಲು ತೆರಳಿದ್ದ 10ರ ಬಾಲಕ ನೀರಲ್ಲಿ ಮುಳುಗಿ ಸಾವು!

0
Spread the love

ಬಳ್ಳಾರಿ:- ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲ್ಲೂಕಿನ ಬಂಡಿಹಳ್ಳಿಯಲ್ಲಿ ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ಜರುಗಿದೆ.

Advertisement

10 ವರ್ಷದ ಪೃಥ್ವಿ ಮೃತ ಬಾಲಕ. ಶಿಕ್ಷಕ ಯು.ಗೋಣಿಬಸಪ್ಪ ಎಂಬುವವರ ಪುತ್ರನಾಗಿದ್ದು, ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಿಬಿಎಸ್‌ಇ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ಎಂದು ತಿಳಿದುಬಂದಿದೆ.

ತರಗತಿಯ ಐದು ಜನ ಸ್ನೇಹಿತರೊಂದಿಗೆ ಸೇರಿ ಬಂಡಿಹಳ್ಳಿಯ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ಪೃಥ್ವಿ ಹಾಗೂ ಇನ್ನೋರ್ವ ಬಾಲಕ ಆಕಾಶ್ ನೀರಿನಲ್ಲಿ ಮುಳುಗುತ್ತಿದ್ದರು. ಇದನ್ನು ಗಮನಿಸಿದ ಕುರಿಗಾಹಿಗಳು ಆಕಾಶ್ ಅನ್ನು ರಕ್ಷಿಸಿದ್ದು, ಪೃಥ್ವಿ ಮೃತಪಟ್ಟಿದ್ದಾನೆ. ಈ ಸಂಬಂಧ ಹಗರಿಬೊಮ್ಮನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

LEAVE A REPLY

Please enter your comment!
Please enter your name here