ವಿಜಯನಗರ: ಬಹಿರ್ದೆಸೆಗೆ ಹೋದ 10 ವರ್ಷದ ಬಾಲಕಿ ಅನುಮಾನಾಸ್ಪವಾಗಿ ಮೃತಪಟ್ಟಿರುವ ಘಟನೆ ಹಡಗಲಿ ತಾಲೂಕಿನ ದುಂಗಾವತಿ ತಾಂಡದಲ್ಲಿ ನಡೆದಿದೆ. ಶನಿವಾರ ಸಂಜೆ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಹಿರ್ದೆಸೆಗೆ ಹೋಗಿದ್ದ ಬಾಲಕಿ ತುಂಬ ಹೊತ್ತಾದರೂ ಮರಳಿರಲಿಲ್ಲ. ಇದರಿಂದ ಆಕೆಯನ್ನು ಹುಡುಕಿಕೊಂಡು ಹೋದಾಗ ಮೃತದೇಹ ಪತ್ತೆಯಾಗಿತ್ತು.
Advertisement
ಬಾಲಕಿಯ ಮೃತದೇಹ ಹೊಂಡದ ಪಕ್ಕದಲ್ಲಿ ಮತ್ತು ತಂಬಿಕೆ ಮತ್ತೊಂದು ಕಡೆ ಬಿದ್ದಿತ್ತುʼʼ ಎಂದು ಆಕೆಯ ತಂದೆ ತಿಳಿಸಿದ್ದಾರೆ. ಕೂಡಲೇ ಬಾಲಕಿಯನ್ನು ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ತರಲಾಗಿತ್ತು. ಆದರೆ ಅಷ್ಟೊತ್ತಿಗಾಗಲೇ ಬಾಲಕಿ ಮೃತಪಟ್ಟಿದ್ದಾಳೆ ತಂಬ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.