ಮಂಡ್ಯ:- ಹಬ್ಬದ ಸಂಭ್ರಮದಲ್ಲಿದ್ದ 17 ವರ್ಷದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಜರುಗಿದೆ.
Advertisement
ಡಿ.ಮಲ್ಲಿಗೆರೆ ಗ್ರಾಮದ ಚಿರಾಗ್ (17) ಮೃತ ವಿದ್ಯಾರ್ಥಿ. ಬೆಂಗಳೂರು ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ. ಸೋಮವಾರ ಸಂಜೆ ಚಿರಾಗ್ ಹಬ್ಬಕ್ಕೆ ಬಟ್ಟೆ ಖರೀದಿಸಲು ತಂದೆ-ತಾಯಿ ಜೊತೆ ಹೋಗಿದ್ದ. ಈ ವೇಳೆ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ.
ಸೋಮವಾರ ಸಂಜೆ ಚಿರಾಗ್ ಹಬ್ಬಕ್ಕೆ ಬಟ್ಟೆ ಖರೀದಿಸಲು ತಂದೆ-ತಾಯಿ ಜೊತೆ ಹೋಗಿದ್ದ. ಈ ವೇಳೆ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ.