ಚಿಕ್ಕಬಳ್ಳಾಪುರ:– ಶಿಡ್ಲಘಟ್ಟ ನಗರದಲ್ಲಿ 30ಕ್ಕೂ ಹೆಚ್ಚು ಬೀದಿನಾಯಿಗಳು ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ ಜರುಗಿದೆ.
Advertisement
ಬೀದಿನಾಯಿಗಳ ದಾಳಿಗೆ ಒಳಗಾಗಿದ್ದ ಬಾಲಕನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ನಾಯಿ ಕಚ್ಚಿದ ಕೂಡಲೇ ಸ್ಥಳದಲ್ಲಿದ್ದ ಕ್ರೀಡಾಪಟುಗಳು ಬಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಈಗ ನಾಯಿಗಳ ದಾಳಿಗೆ ಒಳಗಾದ ಬಾಲಕನ ಸ್ಥಿತಿ ಗಂಭೀರವಾಗಿದೆ.
ಇತ್ತೀಚೆಗೆ ನಗರದಲ್ಲಿ ಬೀದಿ ನಾಯಿಗಳ ದಾಳಿ ಹೆಚ್ಚಾಗಿದೆ. ಕಂಡ ಕಂಡಲ್ಲಿ, ಸಿಕ್ಕ ಸಿಕ್ಕವರ ಮೇಲೆ ನಾಯಿಗಳು ಅಟ್ಯಾಕ್ ಮಾಡುತ್ತಿವೆ. ನಾಯಿ ದಾಳಿಗೆ ಒಳಗಾದವರು ರೇಬಿಸ್ಗೆ ಬಲಿ ಆಗುತ್ತಿದ್ದಾರೆ.