ಬಂಡೆ ಛಿದ್ರಗೊಳಿಸುವ ಸ್ಫೋಟಕ ಸಿಡಿದು ಬಾಲಕನಿಗೆ ಗಂಭೀರ ಗಾಯ!

0
Spread the love

ತುಮಕೂರು: ಬಂಡೆ ಛಿದ್ರಗೊಳಿಸುವ ಸ್ಫೋಟಕ ಸಿಡಿದು ಬಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಇಡಗೂರಿನಲ್ಲಿ ನಡೆದಿದೆ. ಮೋನಿಷ್ ಗಾಯಗೊಂಡ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯಾಗಿದ್ದು, ಶಾಲೆಯ ಬಂಡೆ  ಬಳಿಯಿದ್ದ ಸ್ಪೋಟಕವನ್ನು ಆಟದ ವಸ್ತು ಇರಬಹುದು ಎಂದು ಬಾಲಕ ಮುಟ್ಟಿದ್ದಾನೆ.

Advertisement

ಈ ವೇಳೆ ಸ್ಫೋಟಕ ಸಿಡಿದು ಬಾಲಕನ ಮೂರು ಬೆರಳು ಛಿದ್ರವಾಗಿದೆ. ಇನ್ನೂ ಗಾಯಗೊಂಡ ಬಾಲಕನನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಿಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here