ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಕೆ.ಆರ್ ಮಾರುಕಟ್ಟೆಯಲ್ಲಿ ನೀಚ ಕೃತ್ಯ ಒಂದು ನಡೆದಿದ್ದು, ಬಸ್ ಗಾಗಿ ಕಾಯುತ್ತಿದ್ದ ನೆರೆ ರಾಜ್ಯದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಜರುಗಿದೆ.
ಭಾನುವಾರ ರಾತ್ರಿ 11:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆ ತಮಿಳುನಾಡಿನಿಂದ ಬೆಂಗಳೂರಿನ ಅಣ್ಣನ ಮನೆಗೆ ಮಹಿಳೆ ಬಂದಿದ್ದರು.
ಕೆ.ಆರ್ ಮಾರುಕಟ್ಟೆಯಲ್ಲಿ ಯಲಹಂಕ ಬಸ್ಗಾಗಿ ಮಹಿಳೆ ಕಾಯುತ್ತಿದ್ದರು. ಈ ವೇಳೆ, ಯಲಹಂಕ ಬಸ್ಗಾಗಿ ಆರೋಪಿಗಳನ್ನ ಮಹಿಳೆ ವಿಚಾರಿಸಿದ್ದಾರೆ. ಬಸ್ ತೋರಿಸುತ್ತೇವೆಂದು ಗೋಡೌನ್ ಸ್ಟ್ರೀಟ್ಗೆ ಕರೆದೊಯ್ದು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ.
ಅತ್ಯಾಚಾರ ಬಳಿಕ ಮಹಿಳೆಯ ಮೊಬೈಲ್, ಹಣ, ತಾಳಿ, ಚಿನ್ನ ಕದ್ದು ಪರಾರಿಯಾಗಿದ್ದಾರೆ. ಸಂತ್ರಸ್ತ ಮಹಿಳೆಯು ಬೆಂಗಳೂರು ಕೇಂದ್ರ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.