ಕೇಂದ್ರದ ಬಜೆಟ್ ನಿರಾಸೆ ಮೂಡಿಸಿದೆ : ಎಚ್.ಕೆ. ಪಾಟೀಲ

0
A budget that exposed the bogus idea of ​​'developed India'
Spread the love

ವಿಜಯಸಾಕ್ಷಿ ಸುದ್ದಿ, ಗದಗ : ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಆದ್ಯತಾ ವಲಯಗಳ ಕಡೆಗೆ ಗಮನ ನೀಡದ ಕೇಂದ್ರ ಸರ್ಕಾರದ ಬಜೆಟ್ ಭಾರತೀಯ ಮಾನವ ಸಂಪನ್ಮೂಲದ ಸದ್ಬಳಕೆಗೆ ಯಾವುದೇ ಕಾರ್ಯಕ್ರಮ ರೂಪಿಸದೇ ಕೇವಲ ಅಂಕಿ-ಸಂಖ್ಯೆಗಳ ಮೂಲಕ ಗೊಂದಲ ಸೃಷ್ಟಿಸಿ, ನಿರಾಸೆ ಮೂಡಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ವಿಕಸಿತ ಭಾರತ’ ಎಂಬ ಹುಸಿ ಕಲ್ಪನೆಯನ್ನು ಅನಾವರಣಗೊಳಿಸಿರುವ ಕೇಂದ್ರದ ಬಜೆಟ್ ಐದು ವರ್ಷಗಳ ಅವಧಿಯಲ್ಲಿ 135 ಕೋಟಿ ಭಾರತೀಯ ಜನಸಂಖ್ಯೆಯ ಪೈಕಿ 20 ಲಕ್ಷ ಯುವಕರಿಗೆ ಕೌಶಲ್ಯ ತರಬೇತಿಯನ್ನು ನೀಡುವ ಬಗ್ಗೆ ಪ್ರಸ್ತಾಪಿಸಿರುವುದು ಹಾಸ್ಯಾಸ್ಪದವಾಗಿದೆ. 7.50 ಲಕ್ಷ ರೂ. ಸಾಲ ನೀಡುವ ಕಲ್ಪನೆ ಕೇವಲ ಕಲ್ಪನೆಯಾಗಿಯೇ ಉಳಿಯಲಿದೆ.

ಏಕೆಂದರೆ ಇಲ್ಲಿಯವರೆಗೂ ಬ್ಯಾಂಕ್‌ಗಳು ನಿರುದ್ಯೋಗಿಗಳಿಗೆ ಭದ್ರತೆ ರಹಿತ ಸಾಲವನ್ನೇ ನೀಡಿಲ್ಲ. ಇದರಿಂದಾಗಿ ಇಂತಹ ಯೋಜನೆಗಳು ಕೇವಲ ಕಣ್ಣೊರೆಸುವ ತಂತ್ರಗಳಾಗಿವೆ.

ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ಇತರ ರಾಜ್ಯಗಳನ್ನು ಕಡೆಗಣಿಸಿದೆ. ರಾಷ್ಟ್ರೀಯ ಸಹಕಾರ ನೀತಿಯನ್ನು ಜಾರಿಗೆ ತರುವ ಬಗ್ಗೆ ಪ್ರಸ್ತಾಪಿಸಿರುವ ಹಣಕಾಸು ಸಚಿವರು ಸಹಕಾರಿ ರಂಗದ ಬ್ಯಾಂಕ್‌ಗಳು ಮತ್ತು ಇತರ ಪತ್ತಿನ ಸಹಕಾರಿ ಸಂಘಗಳ ಕಾರ್ಯನಿರ್ವಹಣೆಗೆ ಅಡೆತಡೆ ತರುವ ಕೆಲವು ಕೇಂದ್ರದ ನೀತಿಗಳ ಕುರಿತು ಯಾವುದೇ ಪ್ರಸ್ತಾಪ ಮಾಡಿಲ್ಲ.

‘ಪ್ರಧಾನ ಮಂತ್ರಿ ನಗರ ಆವಾಸ್ ಯೋಜನೆ-2’ 1 ಕೋಟಿ ನಗರ ಪ್ರದೇಶದ ಬಡವರು ಮತ್ತು ಮಧ್ಯಮ ವರ್ಗದ ಕುಟುಂಬದವರಿಗೆ ವಸತಿ ಯೋಜನೆ ಒದಗಿಸುವ ಉದ್ದೇಶಕ್ಕಾಗಿ ೧೦ ಲಕ್ಷ ಕೋಟಿ ರೂಪಾಯಿಗಳನ್ನು ಒದಗಿಸಿರುವುದಾಗಿ ಹೇಳಿದೆ. ಆದರೆ ಪ್ರಧಾನ ಮಂತ್ರಿ ನಗರ ಆವಾಸ್ ಯೋಜನೆ-1ರ 2 ಕೋಟಿ ಮನೆಗಳನ್ನು ಒದಗಿಸುವ ಯೋಜನೆ ಕಾರ್ಯಗತಗೊಂಡಿಲ್ಲ.

ಕೇಂದ್ರ ಸರ್ಕಾರದ ಈ ಮುಂಗಡ ಪತ್ರವು ಕೇವಲ ಶ್ರೀಮಂತರು, ಮೇಲ್ಮಧ್ಯಮ ವರ್ಗದವರ ಅವಶ್ಯಕತೆಗಳನ್ನು ಪೂರೈಸುವತ್ತ ಹೆಚ್ಚು ಗಮನಹರಿಸಿದ್ದು, ಬಡವರು, ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ ಮತ್ತು ಜನಾಂಗದ ಹಾಗೂ ಬುಡಕಟ್ಟು ಜನಾಂಗ, ಅಲ್ಪಸಂಖ್ಯಾತರ, ಅವಕಾಶ ವಂಚಿತ ಜನರ ಕಲ್ಯಾಣಕ್ಕಾಗಿ ಪರಿಣಾಮಕಾರಿಯಾದ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ.

ನಿರುದ್ಯೋಗಿಗಳಿಗೆ ಅಪ್ರೆಂಟಿಶಿಪ್ ಭತ್ಯೆಯೊಂದಿಗೆ ಯಥಾವತ್ತಾಗಿ ಕಾಂಗ್ರೆಸ್ ಕಾರ್ಯಕ್ರಮವನ್ನು ಜಾರಿಗೆ ತಂದಿರುವುದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಭರವಸೆಯ ಪರಿಣಾಮಕಾರಿ ಯೋಜನೆಯನ್ನು ಅತ್ಯಂತ ವ್ಯಾಪಕವಾಗಿ ಬಿಂಬಿಸಿರುವುದಕ್ಕೆ ಅಭಿನಂದಿಸುವೆ ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದ್ದಾರೆ.

ಯಾವುದೇ ದೂರದೃಷ್ಟಿಯಿಲ್ಲದ ಪುರೋಗಾಮಿಯಾಗಿರದ ಈ ಮುಂಗಡ ಪತ್ರ ರಾಷ್ಟçದ ಜನತೆಗೆ ಸಂಪೂರ್ಣವಾಗಿ ಮೋಸಗೊಳಿಸಿದೆ. ಆದರೆ, ಈ ಮುಂಗಡ ಪತ್ರದ ಭಾಷಣದಲ್ಲಿ ಅರ್ಥ ಸಚಿವೆ ನಿರ್ವ್ಮಲಾ ಸೀತಾರಾಮನ್‌ರವರು ಲೋಕಸಭೆ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಪುಟ 30ರಲ್ಲಿ ವಿವರಿಸಿರುವ ಉದ್ಯೋಗಕ್ಕೆ ಉತ್ತೇಜನ ನೀಡುವ ವಿಷಯವನ್ನು ಬಜೆಟ್‌ನಲ್ಲಿ ಅಳವಡಿಸಿಕೊಂಡಿರುವುದಕ್ಕೆ ನನಗೆ ಸಂತಸವಾಗಿದೆ ಎಚಿದು ಸಚಿವ ಎಚ್.ಕೆ. ಪಾಟೀಲ ತಿಳಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here