ಬೆಂಗಳೂರು:- ರಾಜಾಜಿನಗರದ ಮಂಜುನಾಥ ನಗರದಲ್ಲಿ ಮನೆ ಮುಂದೆ ಕೂತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ 2 ಕಾಲುಗಳು ತುಂಡಾದ ಘಟನೆ ಜರುಗಿದೆ.
Advertisement
ಗಾಯಗೊಂಡ ವ್ಯಕ್ತಿಯನ್ನು ಮಂಜು ಎಂದು ಗುರುತಿಸಲಾಗಿದೆ. ಮಂಜು ಅವರು, ಮನೆ ಮುಂದೆ ಮೊಬೈಲ್ ನೋಡುತ್ತಾ ಕುಳಿತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಸದ್ಯ ಗಾಯಾಳು ಮಂಜುವನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.