ಹಾಸನ:- ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿಯಲ್ಲಿ ವಿದ್ಯಾರ್ಥಿಗಳು ರೀಲ್ಸ್ ಗಾಗಿ ಹುಚ್ಚಾಟ ಮೆರೆದಿದ್ದಾರೆ.
ಇದೀಗ ರೀಲ್ಸ್ಗಾಗಿ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಮೆರೆದ ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲಾಗಿದೆ.
ಹಾಸನ ನಗರದ ಇಬ್ಬರು, ಕುಣಿಗಲ್ ತಾಲ್ಲೂಕಿನ ಓರ್ವ ವಿದ್ಯಾರ್ಥಿ ರಾತ್ರಿ ವೇಳೆ ಕಾಲೇಜಿನ ಎದುರಿನ ರಸ್ತೆಯಲ್ಲಿ ಪ್ಲಾಸ್ಟಿಕ್ ಕವರ್ಗೆ ಪೆಟ್ರೋಲ್ ತುಂಬಿ, ಅದರ ಮೇಲೆ ಪಟಾಕಿ ಬಾಂಬ್ ಇಟ್ಟು ಬೆಂಕಿ ಹಚ್ಚಿದ್ದಾರೆ. ಪರಿಣಾಮ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ.
ಪೆಟ್ರೋಲ್ ಬಾಂಬ್ ಸ್ಪೋಟಗೊಂಡ ಅನತಿ ದೂರದಲ್ಲಿ ಪೆಟ್ರೋಲ್ ಟ್ಯಾಂಕರ್ ನಿಂತಿದ್ದು ಬಾರಿ ಅನಾಹುತವೊಂದು ತಪ್ಪಿದಂತಾಗಿದೆ.
ವಿದ್ಯಾರ್ಥಿಗಳ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಮೂವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.



