ರಸ್ತೆ ಅಪಘಾತದಲ್ಲಿ ಬೈಕ್ ನಜ್ಜುಗುಜ್ಜಾದ ಪ್ರಕರಣ: ಚಿಕಿತ್ಸೆ ಫಲಿಸದೇ ಇಬ್ಬರು ದುರ್ಮರಣ!

0
Spread the love

ನೆಲಮಂಗಲ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಜ್ಜುಗುಜ್ಜಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೇ ಇಬ್ಬರು ಯುವಕರು ಆಸ್ಪತ್ರೆಯಲ್ಲೇ ದುರ್ಮರಣ ಹೊಂದಿದ ಘಟನೆ ನೆಲಮಂಗಲ ಸಮೀಪದ ಮಲ್ಲರಬಾಣವಾಡಿ ಕ್ರಾಸ್ ಬಳಿ ಜರುಗಿದೆ.

Advertisement

ವೇಗವಾಗಿ ಬೈಕ್ ಚಲಾಯಿಸಿ, ಯುವಕನೋರ್ವ ಬೃಹತ್ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಲಾರಿಯ ಕೆಳಭಾಗ ಬೈಕ್ ಸೇರಿದೆ. ಬೈಕ್ ನಲ್ಲಿದ್ದ ಇಬ್ಬರು ಯುವಕರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನೆಲಮಂಗಲ ಸಮೀಪದ ಶ್ರೀನಿವಾಸಪುರ ಗ್ರಾಮದವವರಾದ ಜೀವನ್ ಮತ್ತು ಆದಿತ್ಯ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


Spread the love

LEAVE A REPLY

Please enter your comment!
Please enter your name here