ಕನ್ನಡಿಗನ ಮೇಲೆ ಯುಪಿ ಮೂಲದ ಮೂವರು ವ್ಯಕ್ತಿಗಳಿಂದ ಹಲ್ಲೆ ಕೇಸ್: ಆರೋಪಿಗಳು ಅರೆಸ್ಟ್!

0
Spread the love

ಬೆಂಗಳೂರು:- ಕನ್ನಡಿಗನ ಮೇಲೆ ಯುಪಿ ಮೂಲದ ಮೂವರು ವ್ಯಕ್ತಿಗಳಿಂದ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.

Advertisement

ಈ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ಸದ್ಯ ಹಲ್ಲೆ ಮಾಡಿದ ಯುಪಿ ಮೂಲದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಿಂದಿ ಮಾತನಾಡು ಎಂದು ಕಾರ್ಮಿಕ ಶಿವಲಿಂಗ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ಕಾರ್ಮಿಕ ಶಿವಲಿಂಗ ಕೃಷ್ಣಮೂರ್ತಿ ಕಾರ್ಖಾನೆಯಲ್ಲಿ ಮಗ್ಗದ ಕೆಲಸ ಮಾಡುತ್ತಿದ್ದ.

ಈ ಕಾರ್ಖಾನೆಯಲ್ಲೇ ಉತ್ತರ ಪ್ರದೇಶದ ಮೂವರು ಕೆಲಸ ಮಾಡುತ್ತಿದ್ದರು. ನಮ್ಮ ಜೊತೆ ಹಿಂದಿಯಲ್ಲಿ ಮಾತಾಡು, ಕನ್ನಡದಲ್ಲಿ ಮಾತನಾಡಬೇಡ ಎಂದು ಶಿವಲಿಂಗ ಜೊತೆ ಕಿರಿಕ್ ಮಾಡಿ ಹಲ್ಲೆ ಮಾಡಿದ್ದಾರೆ.

ಕಬ್ಬಿಣದ ರಾಡ್, ಮಗ್ಗದ ವಸ್ತುಗಳಿಂದ ಶಿವಲಿಂಗನ ಮೇಲೆ ಹಲ್ಲೆ ಮಾಡಲಾಗಿದ್ದು, ತಲೆ, ಕಿವಿಭಾಗಕ್ಕೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here