Sucide: ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ದಂಪತಿ! ಅನಾಥವಾದ ಮೂರು ವರ್ಷದ ಕಂದಮ್ಮ..!

0
Spread the love

ರಾಮನಗರ:- ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದ ದನದ ಕೊಟ್ಟಿಗೆಯೊಂದರಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜರುಗಿದೆ.

Advertisement

34 ವರ್ಷದ ರಾಜು, 30 ವರ್ಷದ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡ ದಂಪತಿ ಎನ್ನಲಾಗಿದೆ. ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ರಾಜು ಹಾಗೂ ಲಕ್ಷ್ಮೀ ಕಳೆದ ಐದು ವರ್ಷದ ಹಿಂದೆ ಮದುವೆಯಾಗಿದ್ದರು. ಸದ್ಯ ದಂಪತಿ ಆತ್ಮಹತ್ಯೆಯಿಂದ ಮೂರು ವರ್ಷದ ಹೆಣ್ಣು ಮಗು ಅನಾಥವಾಗಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯ ತಂದೆ, ತಾಯಿ ಧರ್ಮಸ್ಥಳಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.

ಸ್ಥಳಕ್ಕೆ ಅಕ್ಕೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here