ವಿಜಯಸಾಕ್ಷಿ ಸುದ್ದಿ, ಗದಗ : ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಆದ್ಯತಾ ವಲಯಗಳ ಕಡೆಗೆ ಸ್ವಲ್ಪವೂ ಗಮನ ಕೊಡದೆ ಕೇಂದ್ರ ಸರ್ಕಾರದ ಬಜೆಟ್ ನಿರಾಶೆ ಮೂಡಿಸಿದೆ. ದೇಶದ ಮಾನವ ಸಂಪನ್ಮೂಲದ ಸದ್ಬಳಕೆಗೆ ಯಾವುದೇ ರೀತಿಯ ಯೋಜನೆ ರೂಪಿಸದೆ ಕೇವಲ ಅಂಕಿ ಅಂಶಗಳ ಮೂಲಕ ಗೊಂದಲದ ನಿರಾಶೆ ಮೂಡಿಸಿದ ಬಜೆಟ್ ಇದಾಗಿದೆ ಎಂದು ಯುವ ಕಾಂಗ್ರೆಸ್ ಸಮಿತಿಯ ಗದಗ-ಬೆಟಗೇರಿ ಶಹರ ಉಪಾಧ್ಯಕ್ಷ ಅನ್ವರಬಾಷಾ ಕೆ. ನದಾಫ್ ಅಭಿಪ್ರಾಯಪಟ್ಟಿದ್ದಾರೆ.
Advertisement