ಮೊಣಕಾಲಿನಲ್ಲಿ ತಿರುಪತಿ ಮೆಟ್ಟಿಲುಗಳನ್ನು ಹತ್ತಿ ಹರಕೆ ತೀರಿಸಿದ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ!

0
Spread the love

ಇನ್ನು ಇತ್ತೀಚೆಗೆ ಮುಕ್ತಾಯವಾದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ21 ವರ್ಷದ ನಿತೀಶ್ ಕುಮಾರ್ ರೆಡ್ಡಿ ಅವರು ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ತಮ್ಮ ಚೊಚ್ಚಲ ಟೆಸ್ಟ್ ಶತಕ ಸಿಡಿಸಿ ಕ್ರಿಕೆಟ್ ಜಗತ್ತನ್ನು ಅಚ್ಚರಿಗೊಳಿಸಿದ್ದರು. ವಾಷಿಂಗ್ಟನ್ ಸುಂದರ್ ಜೊತೆಗಿನ ಅದ್ಭುತ ಜೊತೆಯಾಟದಿಂದ ಭಾರತವನ್ನು ಸಂಕಷ್ಟದಿಂದ ಪಾರು ಮಾಡಿದ ಅವರಿಗೆ ಅಭಿಮಾನದ ಮಹಾಪೂರವೇ ಹರಿದುಬಂದಿತ್ತು. ಇದೀಗ ನಿತೀಶ್ ಕುಮಾರ್ ರೆಡ್ಡಿ ಅವರ ವಿಡಿಯೋವೊಂದು ವೈರಲ್ ಆಗಿದೆ.

Advertisement

ಹೌದು ಟೀಮ್‌ ಇ೦ಡಿಯಾ ಯುವ ಕ್ರಿಕೆಟಿಗ ನಿತೀಶ್‌ ಕುಮಾರ್‌ ರೆಡ್ಡಿ ತಿರುಮಲಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನವನ್ನು ಪಡೆದಿದ್ದು, ಮಾತ್ರವಲ್ಲದೇ ತಿಮ್ಮಪ್ಪನಿಗೆ ಕಠಿಣ ಹರಕೆ ಕೂಡ ತೀರಿಸಿದ್ದಾರೆ. ನಿತೀಶ್‌ ಕುಮಾರ್‌ ಅವರು ಕಾಲ್ನಡಿಗೆಯಲ್ಲಿ ತಿರುಮಲ ಬೆಟ್ಟಕ್ಕೆ ಹೋಗಿದ್ದು, ಮೊಣಕಾಲುಗಳಲ್ಲೇ ಮೆಟ್ಟಿಲುಗಳನ್ನು ಹತ್ತಿ ತಮ್ಮ ಹರಕೆ ತೀರಿದ್ದಾರೆ.

https://x.com/BluntIndianGal/status/1878857782298132525?ref_src=twsrc%5Etfw%7Ctwcamp%5Etweetembed%7Ctwterm%5E1878857782298132525%7Ctwgr%5E6c1becfbc4b35afd756638f1af63e57c0ab06539%7Ctwcon%5Es1_&ref_url=https%3A%2F%2Ftv9kannada.com%2Fsports%2Fcricket-news%2Fnitish-kumar-reddy-climbs-tirupati-stairs-on-knees-watch-video-kannada-news-zp-963754.html

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಶ್ರೀ ವೆಂಕಟೇಶ್ವರನ ಸನ್ನಿಧಿಗೆ ಆಗಮಿಸಿದ ಟೀಮ್ ಇಂಡಿಯಾ ಆಟಗಾರನಿಗೆ ಟಿಟಿಡಿ ಆಡಳಿತ ಮಂಡಳಿ ಶ್ರೀಗಳ ನಾಮಸ್ಮರಣೆಯೊಂದಿಗೆ ಅದ್ಧೂರಿ ಸ್ವಾಗತ ಕೋರಿದೆ. ಅಲ್ಲದೆ ನಿತೀಶ್ ಕುಟುಂಬಕ್ಕೆ ದೇವರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.

 


Spread the love

LEAVE A REPLY

Please enter your comment!
Please enter your name here