ಶಿವಮೊಗ್ಗ: ಶಿವಮೊಗ್ಗದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ ಕೆಲಸಕ್ಕೆ ಹೋದ ರೈತ ಕಾಲು ಜಾರಿ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ದೇವಂಗಿ ಬಳಿಯ ಉಂಟೂರು ಹಳ್ಳದಲ್ಲಿ ನಡೆದಿದೆ. ಕೃಷ್ಣಮೂರ್ತಿ ನಾಯಕ್(55) ಮೃತಪಟ್ಟ ದುರ್ದೈವಿಯಾಗಿದ್ದು,
Advertisement
ನಿನ್ನೆ ಸಂಜೆ ಕೆಲಸದ ನಿಮಿತ್ತ ಗದ್ದೆಗೆ ತೆರಳಿದ್ದ ಕೃಷ್ಣಮೂರ್ತಿ ಜಾರಿ ಬಿದ್ದು ಮೃತ ಪಟ್ಟಿದ್ದಾರೆ. ರಾತ್ರಿಯಿಡೀ ಕುಟುಂಬಸ್ಥರು ಕೃಷ್ಣಮೂರ್ತಿಗಾಗಿ ಶೋಧ ನಡೆಸಿದ್ದಾರೆ. ಹಳ್ಳದಿಂದ ಸುಮಾರು 3 ಕಿ.ಮೀ ಕೆಳಭಾಗದಲ್ಲಿ ಕೃಷ್ಣಮೂರ್ತಿ ಅವರ ಮೃತ ದೇಹ ಪತ್ತೆಯಾಗಿದೆ. ಇನ್ನೂ ಈ ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.