ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಇಲ್ಲಿಯ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವದರೊಂದಿಗೆ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಗ್ರಾ.ಪಂ ಅಧ್ಯಕ್ಷ ಕೆ.ಎಸ್. ಪೂಜಾರ, ಉಪಾಧ್ಯಕ್ಷೆ ಪುಷ್ಪಾ ಪಾಟೀಲ, ಗ್ರಾ.ಪಂ ಸದಸ್ಯರು, ಎಸ್.ಡಿ.ಇ.ಎ. ಸಿ.ಎ. ಜಾನೋಪಂಥರ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.
ಸರಕಾರಿ ಪ್ರಾಥಮಿಕ ದ್ವಿಭಾಷಾ ಶಾಲೆ, ಬಾಲಕಿಯರ ಸರಕಾರಿ ಪ್ರೌಢಶಾಲೆ, ಸ್ವಾಮಿ ವಿವೇಕಾನಂದ ಪ್ರಾಥಮಿಕ ಹಿರಿಯ ಕನ್ನಡ ಶಾಲೆ, ಸರಕಾರಿ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ, ಸರಕಾರಿ ಪ್ರಾಥಮಿಕ ಉರ್ದು ಶಾಲೆ, ಸರಕಾರಿ ಕಿರಿಯ ಕನ್ನಡ ಪ್ರಾಥಮಿಕ ಶಾಲೆ, ಸರಕಾರಿ ಹಿರಿಯ ಡಿ.ಪಿ.ಇ.ಪಿ ಪ್ರಾಥಮಿಕ ಶಾಲೆ ಮಾರುತಿ ನಗರ, ಬಿ.ಎಚ್. ಪಾಟೀಲ ಪ್ರೌಢಶಾಲೆಯಲ್ಲಿ ಕನ್ನಡ ನುಡಿ, ನಾಡು, ಜಲ ಮತ್ತು ಭಾಷೆಯ ಕುರಿತಾದ ನೃತ್ಯ, ಭಾಷಣ, ನಾಟಕ ಜರುಗಿದವು.
ಶಾಲೆಯ ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು ಪಾಲ್ಗೊಂಡು ಸಡಗರ ಸಂಭ್ರಮದಿಂದ ರಾಜ್ಯೋತ್ಸವವನ್ನು ಆಚರಿಸಿದರು.


