ಸಿಗರೇಟ್ ವಿಚಾರಕ್ಕೆ ಕಿರಿಕ್: ಮನೆಗೆ ನುಗ್ಗಿ RSS ಮುಖಂಡನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ!

0
Spread the love

ಧಾರವಾಡ:- ಕ್ಷುಲ್ಲಕ ವಿಚಾರಕ್ಕೆ ಕಿರಿಕ್ ನಡೆಸಿದ ಮುಸ್ಲಿಂ ಯುವಕರು, RSS ಮುಖಂಡನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಗರದ ಹಳೆ ತಹಸೀಲ್ದಾರ್ ಕಚೇರಿ ಓಣಿಯಲ್ಲಿ ಜರುಗಿದೆ.

Advertisement

ಹಲ್ಲೆಗೊಳಗಾದ ಆರ್​ಎಸ್​ಎಸ್​ ಮುಖಂಡನನ್ನು ಸಿರೀಶ್ ಬಳ್ಳಾರಿ ಎಂದು ಗುರುತಿಸಲಾಗಿದೆ. ಮನೆಯ ಮುಂದೆ ಮುಸ್ಲಿಂ ಯುವಕರು ಸಿಗರೇಟ್ ಸೇದುತ್ತಾ ನಿಂತಿದ್ದರು. ಈ ವೇಳೆ, ಸಿರೀಶ್​ ಬಳ್ಳಾರಿಯವರು ದೂರಕ್ಕೆ ಹೋಗಿ ಸಿಗರೇಟು ಸೇದುವಂತೆ ಯುವಕರಿಗೆ ಹೇಳಿದ್ದಾರೆ. ಇಷ್ಟಕ್ಕೆ ಆಕ್ರೋಶಗೊಂಡ ನಾಲ್ವರು ಮುಸ್ಲಿಂ ಯುವಕರು, ಸಿರೀಶ್​ ಬಳ್ಳಾರಿಯವರ ಮನೆಯೊಳಗೆ ಹೊಕ್ಕು ಹಲ್ಲೆ ಮಾಡಿದ್ದಾರೆ. ಇದರಿಂದ, ಸಿರೀಶ್​ ಬಳ್ಳಾರಿಯವರ ಕೈ ಹಾಗೂ ಮುಖಕ್ಕೆ ತೀವ್ರ ಗಾಯವಾಗಿದೆ.

ಸಿರೀಶ್​ ಬಳ್ಳಾರಿಯವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here