ಮಂಡ್ಯ:- ಅನ್ಯಕೋಮಿನ ವ್ಯಕ್ತಿಯೋರ್ವ ತನ್ನ ಹೋಟೆಲ್ ಗೆ ಬರುವ ಜನರಿಗೆ ಬಿರಿಯಾನಿಗೆ ನಾಯಿಮಾಂಸ ಬೆರೆಸಿ ತಿನಿಸುತ್ತಿರುವ ಆಘಾತಕಾರಿ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಅಜಾದ್ ಎಂಬ ಅನ್ಯಕೋಮಿನ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Advertisement
ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಆರೋಪಿ ಅಜಾದ್, ಮದೀನಾ ಹೆಸರಿನ ಹೋಟೇಲ್ ನಡೆಸುತ್ತಿದ್ದ. ಇದೇ ಹೋಟೆಲ್ ಗೆ ಬರುವ ಗ್ರಾಹಕರಿಗೆ ಈತ ಬಿರಿಯಾನಿಗೆ ನಾಯಿ ಮಾಂಸ ಮಿಕ್ಸ್ ಮಾಡಿ ಮಾರಾಟ ಮಾಡುತ್ತಿದ್ದ. ಇದೀಗ ಜನರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು, ಹೋಟೆಲ್ ಮಾಲೀಕನಿಗೆ ಗ್ರಾಮಸ್ಥರು ಧರ್ಮದೇಟು ಕೊಟ್ಟಿದ್ದಾರೆ.
ಕೂಡಲೇ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಘಟನೆ ಸಂಬಂಧ ಪಾಂಡವಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.