ಮೈಸೂರು ಜಿಲ್ಲೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ವಿಶೇಷಚೇತನ ಮಗು ಸಾವು..!

0
Spread the love

ಮೈಸೂರು: ಮೈಸೂರು ಜಿಲ್ಲೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ವಿಶೇಷಚೇತನ ಮಗು ಮೃತಪಟ್ಟಿರುವ ಆರೋಪ ಕೇಳಿ ಬಂದಿದ್ದು ಮೈಸೂರಿನ ಚೆಲುವಾಂಬ ಆಸ್ಪತ್ರೆ ವಿರುದ್ಧ ಎಫ್​ಐಆರ್ ದಾಖಲಾಗಿದೆ. ವಿಪರ್ಯಾಸವೆಂದರೆ ಖುದ್ದು ನ್ಯಾಯಾಧೀಶರೇ ಬಂದು ಮಗುವನ್ನು ದಾಖಲಿಸಿ ಚಿಕಿತ್ಸೆ ನೀಡಿ ಎಂದರೂ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ.

Advertisement

ವಿಶೇಷಚೇತನ ಮಗುವಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆ ಮಗು ಪ್ರಾಣ ಬಿಟ್ಟಿದೆ ಎಂದು ಪೋಷಕರು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಆಸ್ಪತ್ರೆ ವೈದ್ಯರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here