ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಭೀಕರ ಕೊಲೆ: ಹಳೇ ದ್ವೇಷಕ್ಕೆ ನಡೀತು ಹಲ್ಲೆ!

0
Spread the love

ಮಂಡ್ಯ :- ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸಮೀಪ ತಡರಾತ್ರಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ.

Advertisement

30 ವರ್ಷದ ಅರುಣ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ಶುಕ್ರವಾರ ರಾತ್ರಿ 9.30 ವೇಳೆ ಸುಮಾರಿಗೆ ಅರುಣ್ ಮತ್ತು ಆತನ ಸ್ನೇಹಿತರು ಎಂ.ಟಿ.ಆರ್ ಬಾರ್ ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವೇಳೆ ಹಳೇ ವಿಚಾರವೊಂದಕ್ಕೆ ಪರಸ್ಪರ ಜಗಳ ಉಂಟಾಗಿದೆ. ಬಳಿಕ ಬಾರ್ ನಿಂದ ಸಿಬ್ಬಂದಿಗಳು ಎಲ್ಲರನ್ನು ಹೊರಗಡೆ ಕಳುಹಿಸಿದ್ದಾರೆ.

ಬಳಿಕ ಅರುಣ್ ಸ್ವಗ್ರಾಮ ವಡ್ಡರದೊಡ್ಡಿಗೆ ತೆರಳುವ ವೇಳೆ ಸೋಮನಹಳ್ಳಿ ಬಳಿಯ ಸ್ಕಂದ ಲೇಔಟ್ ಬಳಿ ಎಂಟತ್ತು ಮಂದಿ ಅರುಣ್ ಮೇಲೆ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ನರಳಿ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಕೆಸ್ತೂರು ಪೋಲೀಸರು ಶವವನ್ನು ಮಂಡ್ಯ ಮಿಮ್ಸ್ ಗೆ ರವಾನಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here