ಬಳ್ಳಾರಿ: ಜಿಲ್ಲೆಯ ನಾಗಲಾಪುರ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಜರುಗಿದೆ. ಇನ್ನೂ ಘಟನೆಯಲ್ಲಿ 8 ಮಂದಿಗೆ ಗಾಯವಾಗಿದೆ.
Advertisement
35 ವರ್ಷದ ಜ್ಯೋತಿಲಾಲ್ ತುಡು ಮೃತ ಕಾರ್ಮಿಕ. ವಿಂಡ್ ಫ್ಯಾನ್ ಕೆಲಸಕ್ಕೆಂದು ಬಂದಿದ್ದ ಬಿಹಾರ ಹಾಗೂ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕರು ಟ್ರಾಕ್ಟರ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ.
ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಕೈ, ಕಾಲು ಮುರಿದಿದ್ದು, ಗಂಭೀರ ಗಾಯಗಳಾಗಿವೆ. ಇವರುಗಳನ್ನು ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ. ಸ್ಥಳೀಯ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.