ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಗೋವಿಂದರಾಜ ನಗರ ಪೊಲೀಸರು ಬಂಧಿಸಿದ್ದಾರೆ. ತುರುವೆಕೆರೆ ರೌಡಿಶೀಟರ್ ನಾಗರಾಜ್ @ ರಾಕಿ ಬಂಧಿತ ಆರೋಪಿಯಾಗಿದ್ದು, ಬೈಕ್ ಕಳ್ಳತನ ಕೇಸ್ ನ ತನಿಖೆ ವೇಳೆ ಮೊಬೈಲ್ ಕಳ್ಳತನ ಪ್ರಕರಣ ಬಯಲಾಗಿದೆ.
Advertisement
ಮೆಜೆಸ್ಟಿಕ್ ಬಸ್ ನಿಲ್ದಾಣ & ರೇಲ್ವೆ ನಿಲ್ದಾಣದಲ್ಲಿ ಮಲಗಿದ್ದವರ ಮೊಬೈಲ್ ಕಳ್ಳತನ ಮಾಡ್ತಿದ್ದನು. ತುರುವೆಕೆರೆ ರೌಡಿಶೀಟರ್ ನಾಗರಾಜ್ ಅಲಿಯಾಸ್ ರಾಕಿ ಮೇಲೆ 6 ಕೇಸ್ ಪ್ರಕರಣಗಳಿವೆ. ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.