2026ರ ಜನವರಿ ಒಳಗೆ ಕರ್ನಾಟಕಕ್ಕೆ ದೊಡ್ಡ ಗಂಡಾಂತರ ಬರಲಿದೆ: ಕೋಡಿಶ್ರೀ ಸ್ಫೋಟಕ ಭವಿಷ್ಯ!

0
Spread the love

ಹಾಸನ: 2026ರ ಜನವರಿ ಒಳಗೆ ರಾಜ್ಯಕ್ಕೆ ದೊಡ್ಡ ಗಂಡಾಂತರ ಬರಲಿದೆ ಎಂದು ಕೋಡಿಶ್ರೀ ಭಯಾನಕ ಭವಿಷ್ಯ ನುಡಿದಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಕರ್ನಾಟಕ ಹಾಗೂ ಭಾರತಕ್ಕೆ ಜನವರಿ ಒಳಗೆ ಭಾರಿ ದೊಡ್ಡ ಗಂಡಾಂತರ ಇದೆ.

Advertisement

ಯಾರೂ ಊಹಿಸಿರದ ದುಃಖ ಬರಲಿದೆ. ಮೇಘಸ್ಫೋಟ, ಜಲಪ್ರಳಯ ಹಾಗೂ ವಾಯುವಿನಿಂದ ಆಪತ್ತು ಬರುವ ಬಗ್ಗೆ ಮೊದಲೇ ಹೇಳಿದ್ದೆ. ವಿಮಾನ ಅಪಘಾತ ಸೇರಿದಂತೆ ಕೆಲವು ಆಪತ್ತುಗಳು ಸಂಭವಿಸಿವೆ. ಮುಂದೆ ಇನ್ನೊಂದು ದೊಡ್ಡ ಮೇಘಸ್ಫೋಟ ಸಂಭವಿಸಲಿದೆ. ನಿರೀಕ್ಷೆಗೂ ಮೀರಿದ ದುಃಖ ಬರಲಿದೆ ಎಂದು ಮುನ್ಸೂಚನೆ ನೀಡಿದರು.

ಮನುಷ್ಯ ಓಡಾಡುತ್ತಲೇ ಸಾಯುತ್ತಾನೆ. ಜನಜೀವನ ಅಸ್ತಿರಗೊಳ್ಳಲಿದೆ ಎಂದು ಹೇಳಿದ್ದೆ. ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಈಗ ಕಂಡುಬರುತ್ತಿದೆ. ಈ ಅಸ್ಥಿರತೆ ಹೆಚ್ಚಾಗಲಿದೆ ಎಂದು ಸ್ವಾಮೀಜಿ ಹೇಳಿದರು.


Spread the love

LEAVE A REPLY

Please enter your comment!
Please enter your name here