Bengaluru Breaking: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿ ಸೂಸೈಡ್ !

0
Spread the love

ಬೆಂಗಳೂರು:- ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬರು ಸೂಸೈಡ್ ಮಾಡಿಕೊಂಡ ಘಟನೆ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಜರುಗಿದೆ.

Advertisement

ಉದ್ಯೋಗಿ ಸುಶಾಂತ್ ಆತ್ಮಹತ್ಯೆ ಶರಣಾದವರು. ಮೃತ ಸುಶಾಂತ್, ಕೆಲಸದ ನಿಮಿತ್ತ ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಹೀಗೆ ಬಂದಿದ್ದವ ಸಂಜೆ ಮೈಸೂರಿಗೆ ಹಿಂದಿರುಗಲು ಸುಶಾಂತ್ ರೈಲು ನಿಲ್ದಾಣಕ್ಕೆ ಬಂದಿದ್ದ. ಆತ್ಮಹತ್ಯೆಗೂ ಮುನ್ನ ಒಡೆಯರ್ ಎಕ್ಸ್ ಪ್ರೆಸ್ ರೈಲು ಹತ್ತಿದ್ದಾನೆ. ಅದೇನಾಯಿತೋ ಏನೋ, ಹೊರಡುವ ಸಂದರ್ಭದಲ್ಲಿ ಕೆಳಗಿಳಿದು ರೈಲಿಗೆ ತಲೆಕೊಟ್ಟಿದ್ದಾನೆ.

ಘಟನೆ ಬಗ್ಗೆ ರೈಲ್ವೆ ಪೊಲೀಸರು ಆತನ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮೃತನ ಕುಟುಂಬ ಬಂಗಾಳದಿಂದ ಬೆಂಗಳೂರಿಗೆ ಬರುತ್ತಿದ್ದಾರೆ. ಈ ಕುರಿತು ಮೆಜೆಸ್ಟಿಕ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.


Spread the love

LEAVE A REPLY

Please enter your comment!
Please enter your name here