ಎಳೆ ಕಂದ ಹಾಗೂ ಗಂಡನನ್ನು ತ್ಯಜಿಸಿ ನೇಣಿಗೆ ಶರಣಾದ ಬಾಣಂತಿ!

0
Spread the love

ಮಡಿಕೇರಿ:- ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.

Advertisement

24 ವರ್ಷದ ಕಾವೇರಮ್ಮ ನೇಣಿಗೆ ಶರಣಾದ ಮಹಿಳೆ. ದಿನೇಶ್-ಕಾವೇರಮ್ಮ ಮದುವೆಯಾಗಿ ಸುಮಾರು 4 ವರ್ಷಗಳು ಕಳೆದಿದೆ. ಫೆ.12 ರಂದು ಪತಿ ದಿನೇಶ್ ತಮ್ಮ ಮನೆಯ ಸನೀಹದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮನೆಯಲ್ಲಿ ಮಗುವಿನ ಕೂಗಾಟ ಕೇಳಿ ಬಂದು ನೋಡಿದ್ದಾರೆ. ಕಾವೇರಮ್ಮ ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೃತಳ ಅಣ್ಣ ಎಂ.ಎ ತಿಮ್ಮಯ್ಯ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here