ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗುವ ಭಕ್ತಾದಿಗಳು ನೋಡಲೇಬೇಕಾದ ಸ್ಟೋರಿ!

0
MSOMMER
Spread the love

ಮೈಸೂರು:- ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗುವ ಭಕ್ತಾದಿಗಳು ನೋಡಲೇಬೇಕಾದ ಸ್ಟೋರಿ ಇದು. ಆಷಾಢ ಬಂತೆಂದರೆ ಮೈಸೂರಿನಲ್ಲೆಡೆ ಹಬ್ಬದ ವಾತಾವರಣ. ಅದರಲ್ಲೂ ಆಷಾಢ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಗೊಂಡ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ, ಪೂಜೆ ನಡೆಯುತ್ತದೆ. ಲಕ್ಷಾಂತರ ಜನರು ದೇವಿಯ ದರ್ಶನ ಪಡೆಯಲು ದೂರದೂರುಗಳಿಂದ ಆಗಮಿಸುತ್ತಾರೆ.

Advertisement

ವಿಶೇಷವಾಗಿ ಆಷಾಢ ಶುಕ್ರವಾರ, ವರ್ಧಂತಿ ದಿನಗಳಂದು ಮತ್ತು ರವಿವಾರದಂದು ಅಪಾರ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ತೆರಳುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಮೈಸೂರು ಪೊಲೀಸರು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಚಾಮುಂಡಿ ಬೆಟ್ಟದ ಮೇಲೆ ಸಾರ್ವಜನಿಕರ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಈ ಕುರಿತು ಮೈಸೂರು ನಗರ ಪೊಲೀಸರು ಸಾಮಾಜಿಕ ಜಾಲತಾಣ ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿದ್ದು, ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದ ಆಷಾಧ ಶುಕ್ರವಾರದಂದು ಸಾರ್ವಜನಿಕರ ಅನುಕೂಲಕ್ಕಾಗಿ ಲಲಿತ ಮಹಲ್ ಹೋಟೆಲ್ ಬಳಿ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಅಲ್ಲಿ ತಮ್ಮ ವಾಹನಗಳ್ಳನ್ನು ಪಾರ್ಕ್​ ಮಾಡಿ ನಂತರ ಕೆಎಸ್​ಆರ್​ಟಿಸಿ ಬಸ್​ಗಳ ಮೂಲಕ ಬೆಟ್ಟಕ್ಕೆ ಹೋಗಬೇಕು ಎಂದು ಮನವಿ ಮಾಡಿದ್ದಾರೆ. ಮತ್ತು ಪಾರ್ಕಿಂಗ್ ಸ್ಥಳ ಪರಿಶೀಲನೆಗಾಗಿ ಕ್ಯೂರ್ ಕೋಡ್ ಬಳಸಿ ಎಂದಿದ್ದಾರೆ.

ಆಷಾಢ ಶುಕ್ರವಾರ ಹಾಗೂ ಆಷಾಢ ಮಾಸದ ಶನಿವಾರ ಹಾಗೂ ಭಾನುವಾರಗಳಂದು ಸಾಮಾನ್ಯ ದರ್ಶನ ಉಚಿತವಾಗಿರುತ್ತದೆ. ಪ್ರವೇಶ ದರ್ಶನಕ್ಕೆ 50 ರೂ. ಹಾಗೂ ವಿಶೇಷ ದರ್ಶನಕ್ಕೆ 300 ರೂ. ಟಿಕೆಟ್​ ನಿಗದಿ ಪಡಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here