ಬೆಂಗಳೂರು:- ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ ವ್ಯಕ್ತಿ ಬರ್ಬರ ಹತ್ಯೆ ನಡೆದಿದೆ.
ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿ ಬೆಂಗಳೂರು ಏರ್ಪೋರ್ಟ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮಧುಗಿರಿ ತಾಲೂಕಿನ ನಿವಾಸಿ ರಮೇಶ್ ಕೊಲೆ ಆರೋಪಿ. 45 ವರ್ಷದ ರಾಮಕೃಷ್ಣ ಮೃತ ದುರ್ದೈವಿ. ಬೆಂಗಳೂರು ಏರ್ಪೋರ್ಟ್ನ ಟರ್ಮಿನಲ್ ಒಂದರಲ್ಲಿ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಬಿಎಂಟಿಸಿ ಬಸ್ನಲ್ಲಿ ಏರ್ಪೋರ್ಟ್ಗೆ ಆಗಮಿಸಿದ ಕೊಲೆ ಆರೋಪಿ, ವಿಮಾನ ನಿಲ್ದಾಣದಲ್ಲಿ ಟ್ರಾಲಿ ಎಳೆಯುವ ಕೆಲಸ ಮಾಡುತ್ತಿದ್ದ ರಾಮಕೃಷ್ಣನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ನನ್ನ ಸಂಸಾರ ಹಾಳು ಮಾಡಿದ್ದೀಯ ಎಂದು ಫೋನ್ನಲ್ಲಿ ಆರೋಪಿ ಜಗಳ ಮಾಡಿದ್ದ. ಅದರ ಬೆನ್ನಲ್ಲೇ ಕೊಲೆ ಮಾಡಿದ್ದಾನೆ.
ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪದಲ್ಲಿ ಕೊಲೆ ನಡೆದಿದೆ. ರಕ್ತದ ಮಡುವಿನಲ್ಲಿ ಏರ್ಪೋರ್ಟ್ನಲ್ಲಿ ಯುವಕ ಮಡಿದಿದ್ದಾನೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.