ಬೈಕ್ ರಿಪೇರಿ ಹಣ ಕೊಡದೆ ಸತಾಯಿಸಿದ್ದಕ್ಕೆ ವ್ಯಕ್ತಿಯ ಕೊಲೆ..! ನಾಲ್ವರು ಅರೆಸ್ಟ್

0
Spread the love

ಚಿಕ್ಕಬಳ್ಳಾಪುರ: ಬೈಕ್ ರಿಪೇರಿ ಹಣದ ವಿಚಾರದಲ್ಲಿ ನಡೆದ ಗಲಾಟೆ ಬೈಕ್ ಮಾಲೀಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಗೌರಿಬಿದನೂರಿನ ಚನ್ನಬೈರನಹಳ್ಳಿಯಲ್ಲಿ ನಡೆದಿದೆ.

Advertisement

ಚನ್ನಬೈರನಹಳ್ಳಿಯ ಸತ್ಯನಾರಾಯಣ (45) ಹತ್ಯೆಯಾದ ವ್ಯಕ್ತಿ. ಮೆಕ್ಯಾನಿಕ್ ಚೇತನ್ ಆತನ ಸ್ನೇಹಿತ ಜ್ವಾಲೇಂದ್ರ, ಓರ್ವ ಅಪ್ರಾಪ್ತ ಸೇರಿದಂತೆ ನಾಲ್ವರು ಸೇರಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಆತ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಕಲ್ಲೋಡಿ ಎಂಬಲ್ಲಿ ಚೇತನ್ ಗ್ಯಾರೆಜ್ ನಡೆಸುತ್ತಿದ್ದ. ಈತನ ಬಳಿ ಹತ್ಯೆಗೀಡಾದ ಸತ್ಯನಾರಾಯಣ ಬೈಕ್ ರಿಪೇರಿ ಮಾಡಿಸಿ ಹಣ ಕೊಟ್ಟಿರಲಿಲ್ಲ. ತನಗೆ ಬರಬೇಕಿದ್ದ ಹಣದ ವಸೂಲಿಗೆ ಚೇತನ್ ಹಾಗೂ ಸ್ನೇಹಿತರು ಆತನ ಮನೆಯ ಬಳಿಗೆ ಹೋಗಿದ್ದಾಗ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಸತ್ಯನಾರಾಯಣ ದೊಣ್ಣೆಯಿಂದ ಚೇತನ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾನೆ.

ಅದೇ ದೊಣ್ಣೆಯನ್ನು ಚೇತನ್‍‌ನ ಸ್ನೇಹಿತ ಜ್ವಾಲೇಂದ್ರ ಎಂಬಾತ ಕಸಿದುಕೊಂಡು ಆತನ ಮೇಲೆ ಹಲ್ಲೆ ನಡೆಸಿದ್ದಾನೆ. ಇದರಿಂದ ಸತ್ಯನಾರಾಯಣ ತೀವ್ರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಆತ ಸಾವಿಗೀಡಾಗಿದ್ದಾನೆ.

ಗೌರಿಬಿದನೂರು ಗ್ರಾಮಾಂತರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕ್ ರಿಪೇರಿ ಹಣ ವಿಚಾರಕ್ಕೆ ‌ನಡೆದ ಗಲಾಟೆ ಸಾವಿನಲ್ಲಿ ಅತ್ಯವಾಗಿದೆ. ಈ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತ ಬಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ..


Spread the love

LEAVE A REPLY

Please enter your comment!
Please enter your name here