Bangalore: ಕಾರಿನ ಮೇಲೆ ಮಳೆ ನೀರು ಹಾರಿದ್ದಕ್ಕೆ ಬೆರಳು ಕಚ್ಚಿ ವಿಕೃತಿ!

0
Spread the love

ಬೆಂಗಳೂರು: ಕಾರಿಗೆ ಮಳೆ ನೀರು ಹಾರಿದ್ದಕ್ಕೆ ಚಾಲಕನ ಬೆರಳು ಕಚ್ಚಿ ವಿಕೃತಿ ಮೆರೆದ ಘಟನೆ ಬೆಂಗಳೂರಿನ ಲುಲು ಮಾಲ್ ಅಂಡರ್ ಪಾಸ್ ಬಳಿ ನಡೆದಿದೆ. ಮೆಜೆಸ್ಟಿಕ್​ನಿಂದ ಲುಲು ಮಾಲ್ ಕಡೆ ಜಯಂತ್ ದಂಪತಿಗಳು ತೆರಳುತ್ತಿದ್ದರು. ಈ ವೇಳೆ ಓಕುಳಿಪುರಂ ಅಂಡರ್ ಪಾಸ್​ನಲ್ಲಿ ನಿಂತಿದ್ದ ನೀರು ಪಕ್ಕದ ಕಾರಿಗೆ ಹಾರಿದೆ.

Advertisement

ಕೂಡಲೇ ಕಾರು ನಿಲ್ಲಿಸಿದ ಚಾಲಕ ಅವಾಚ್ಯ  ಪದಗಳಿಂದ ಜಯಂತ್​ರನ್ನು ನಿಂದಿಸಿದ್ದಾನೆ. ಈ ಬಗ್ಗೆ ವ್ಯಕ್ತಿ ಕ್ಷಮೆ ಕೇಳಿದ್ದರೂ ಬಿಟ್ಟಿಲ್ಲ. KA02 MT0512 I20 ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿ, ಮೆಜೆಸ್ಟಿಕ್ ಅಂಡರ್ ಪಾಸ್ ಬಳಿಯಿಂದ ಲುಲು ಮಾಲ್ ಅಂಡರ್ ಪಾಸ್​ವರೆಗೂ ಜಯಂತ್​​​ ಕಾರು ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿದ್ದಾನೆ.

ಬಳಿಕ ಕಾರ್​ ನಲ್ಲಿದ್ದ ಜಯಂತ್​ರನ್ನು ಎಳೆದಾಡಿ ಮುಖಕ್ಕೆ ಗುದ್ದಿ ಹಲ್ಲೆ ಮಾಡುವ ಮೂಲಕ ರೌಡಿಸಂ ಮಾಡಿದ್ದಾನೆ. ಅಷ್ಟೇ ಅಲ್ಲದೆ ಬಲಗೈನ ಉಂಗುರದ ಬೆರಳನ್ನ ಕಚ್ಚಿ ಮಾಂಸ ಕಾಣುವಂತೆ ಗಾಯ ಮಾಡಿದ್ದಾನೆ. ಬಲಗೈ ಬೆರಳಿನ ಮಾಂಸ ಹೊರಬಂದಿದ್ದರಿಂದ ಜಯಂತ್​​ ಸರ್ಜರಿಗೊಳಗಾಗಿದ್ದು,

ವೈದ್ಯರು ಐದು ಸ್ಟಿಚ್ ಹಾಕಿದ್ದಾರೆ. ಜೊತೆಗೆ 6 ತಿಂಗಳು ವಿಶ್ರಾಂತಿ ಮಾಡುವಂತೆ ಸಲಹೆ ನೀಡಿದ್ದಾರೆ. ಆದರೆ ತನ್ನದಲ್ಲದ ತಪ್ಪಿಗೆ ಜಯಂತ್ 2 ಲಕ್ಷ ರೂ ಆಸ್ಪತ್ರೆ ಬಿಲ್ ಕಟ್ಟಿದ್ದಾರೆ.  ಸದ್ಯ ಘಟನೆ ಸಂಬಂಧ ಮಾಗಡಿ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರಿನಲ್ಲಿದ್ದ ಚಾಲಕ ಮತ್ತು ಮಹಿಳೆ ವಿರುದ್ದ ಎಫ್​ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here