ಕಳ್ಳನನ್ನು ಹಿಡಿಯಲು ಹೋದ ಪೊಲೀಸರ ಕಾರು ಅಪಘಾತ: ಸಿಬ್ಬಂದಿಗಳಿಗೆ ಗಾಯ

0
Spread the love

ತುಮಕೂರು: ಕಳ್ಳನನ್ನು ಹಿಡಿಯಲು ಹೋದ ಪೊಲೀಸರ ಕಾರು ಅಪಘಾತಕ್ಕೀಡಾದ ಘಟನೆ ಆಂಧ್ರಪ್ರದೇಶದ ಮಣೂರು ಬಳಿ ನಡೆಡಿದೆ. ತುಮಕೂರಿನ ಮಧುಗಿರಿ ಠಾಣೆಯ ಕ್ರೈಂ ಸಿಬ್ಬಂದಿ ಪ್ರಕಾಶ್, ಮುದ್ದರಾಜು ಹಾಗೂ ರಮೇಶ್‌ಗೆ ಗಂಭೀರ ಗಾಯಗಳಾಗಿದ್ದು, ನಿನ್ನೆ ಮಧುಗಿರಿ ಪಟ್ಟಣದಲ್ಲಿ ಮಹಿಳೆಯನ್ನ ಯಮಾರಿಸಿ 70 ಗ್ರಾಂ ಚಿನ್ನದ ಸರ ಕದ್ದು ಖದೀಮನೊಬ್ಬ ಎಸ್ಕೇಪ್ ಆಗಿದ್ದ. ಪ್ರಕರಣ ಸಂಬಂಧ ಮಧುಗಿರಿ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದ‌‌ರು.

Advertisement

ಕಳ್ಳನ ಜಾಡು ಹಿಡಿದು ಹೊರಟಿದ್ದ ಮಧುಗಿರಿ ಪೊಲೀಸರು ಕಳ್ಳನನ್ನು ಹಿಡಿಯುವ ಭರದಲ್ಲಿ ವೇಗವಾಗಿ ಕಾರಿನಲ್ಲಿ ತೆರಳುತ್ತಿದ್ದಾಗ, ಸ್ಟೇರಿಂಗ್ ಲಾಕ್ ಆಗಿ ಪಲ್ಟಿ ಹೊಡೆದಿದೆ. ಪರಿಣಾಮ ಪೊಲೀಸ್‌ ಸಿಬ್ಬಂದಿಯ ಕಣ್ಣು, ತಲೆ, ಕೈ, ಕಾಲುಗಳಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಪೊಲೀಸ್ ಸಿಬ್ಬಂದಿಗೆ ಆಂಧ್ರದ ಧರ್ಮವರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಧರ್ಮವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here