ಕ್ಷೌರ ಮಾಡುವ ವಿಚಾರಕ್ಕೆ ಶುರುವಾದ ಜಗಳ ದಲಿತ ಯುವಕನ ಕೊಲೆಯಲ್ಲಿ ಅಂತ್ಯ.!

0
Spread the love

ಕೊಪ್ಪಳ: ದಲಿತರಿಗೆ‌ ಕ್ಷೌರ ಮಾಡಲು ನಿರಾಕರಿಸಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.  ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಳ ಗ್ರಾಮದಲ್ಲಿ ಕ್ಷೌರಿಕ ದಲಿತ ಯುವಕನ ಕೊಲೆ ಮಾಡಿದ ಘಟನೆ ಜರುಗಿದೆ. 27 ವರ್ಷದ ಯಮನೂರಸ್ವಾಮಿ ಬಂಡಿಹಾಳ ಕೊಲೆಯಾದ ಯುವಕ ಎನ್ನಲಾಗಿದೆ. ಕಟಿಂಗ್ ಮಾಡುವ ಕತ್ತರಿಯಿಂದ ಚುಚ್ಚಿ ಕೊಲೆ ಮಾಡಲಾಗಿದೆ.

Advertisement

ನಿನ್ನೆ ಕಟಿಂಗ್ ಮಾಡಿಸಿಕೊಳ್ಳಲು ಯಮನೂರಸ್ವಾಮಿ ಬಂಡಿಹಾಳ ಕಟಿಂಗ್ ಶಾಪ್​ಗೆ ಬಂದಿದ್ದರು. ಈ ವೇಳೆ ಕ್ಷೌರಿಕ ಮುದಕಪ್ಪ ಹಡಪದ ಹಾಗೂ ಯಮನೂರಸ್ವಾಮಿ ಬಂಡಿಹಾಳ ನಡುವೆ ಜಗಳ ಶುರುವಾಗಿತ್ತು. ಆಗ ಮುದಕಪ್ಪ ತನ್ನ ಕೈಯಲ್ಲಿದ್ದ ಕತ್ತರಿಯಿಂದ ಚುಚ್ಚಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಆರೋಪಿ ಕ್ಷೌರಿಕ ಮುದಕಪ್ಪ ಹಡಪದನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಲಿತರಿಗೆ‌ ಕ್ಷೌರ ಮಾಡಲು ನಿರಾಕರಿಸಿದ್ದಕ್ಕೆ ಜಗಳ ನಡೆದು ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಜೊತೆಗೆ ಕ್ಷೌರಿಕನಿಂದ‌ ಜಾತಿ ನಿಂದನೆ ಆರೋಪ ಕೇಳಿ ಬಂದಿದೆ.


Spread the love

LEAVE A REPLY

Please enter your comment!
Please enter your name here