ಪಡಿತರ ಚೀಟಿಯ ಸರ್ವರ್ ಸಮಸ್ಯೆ ಬಗೆಹರಿಸಲು ಮನವಿ

0
A request to resolve the ration card server issue
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿಯಲ್ಲಿ ಪಡಿತರ ಚೀಟಿಯ ಸರ್ವರ್ ಸಮಸ್ಯೆಯನ್ನು ಬಗೆಹರಿಸಿ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ಪಡಿತರ ಚೀಟಿಯನ್ನು ಪೂರೈಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಜಾಪರ ವೇದಿಕೆ ವತಿಯಿಂದ ಬುಧವಾರ ತಹಸೀಲ್ದಾರ ಅನಿಲ ಬಡಿಗೇರ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆಯ ತಾಲೂಕಾಧ್ಯಕ್ಷ ಹಸನ ತಹಸೀಲ್ದಾರ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಹಸಿವು ನೀಗಿಸಲು ಪಡಿತರ ಚೀಟಿಗಳು ಅವಶ್ಯವಿದ್ದು, 2017ರಿಂದ 2021ರವರೆಗೆ ರಾಜ್ಯಾದ್ಯಂತ ಹೊಸದಾಗಿ ಬಿಪಿಎಲ್ ಕಾರ್ಡ್, ಕುಟುಬ ಸದಸ್ಯರ ಸೇರ್ಪಡೆ, ತಿದ್ದುಪಡಿ ಕೋರಿ ಲಕ್ಷಾಂತರ ಅರ್ಜಿಗಳು ಆಹಾರ ಇಲಾಖೆಗೆ ಸಲ್ಲಿಕೆಯಾಗಿದೆ. ಈ ಹಂತದಲ್ಲಿ ಅರ್ಜಿ ಹಾಕಲು ಅಲ್ಪ ಸ್ವಲ್ಪ ಸಮಯ ನೀಡುತ್ತಿರುವುದು ಸಾರ್ವಜನಿಕರಿಗೆ ಸಾಕಾಗುತ್ತಿಲ್ಲ. ಇದನ್ನು ವಿಸ್ತರಣೆ ಮಾಡಿ ಸರ್ವರ್ ಸಮಸ್ಯೆಯನ್ನು ಸರಿಪಡಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶರೀಫ ಗುಡಿಮನಿ, ಸತೀಶ ನರಗುಂದ, ಸಾಧಿಕ್ ಮುಳಗುಂದ, ಶಿವಾನಂದ ಸುಲ್ತಾನಪೂರ, ಹನುಮಂತಪ್ಪ ಎಚ್, ವಸೀಂ ಬೈರಕದಾರ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here