ಬರೋಬ್ಬರಿ 11 ಪ್ರಕರಣದಲ್ಲಿ ಆರೋಪಿಯಾಗಿದ್ದ ರೌಡಿಶೀಟರ್ ಕಾಲಿಗೆ ಗುಂಡೇಟು!

0
Spread the love

ಮಂಡ್ಯ: ಬರೋಬ್ಬರಿ 11 ಪ್ರಕರಣದಲ್ಲಿ ಆರೋಪಿಯಾಗಿದ್ದ ರೌಡಿಶೀಟರ್​​ ಮುತ್ತುರಾಜು ಅಲಿಯಾಸ್ ‌ಡಕ್ಕ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಚಿಕ್ಕಮಲಗೂಡು ಗ್ರಾಮದಲ್ಲಿ ನಡೆದಿದೆ. ಆರೋಪಿ ಮುತ್ತುರಾಜನನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸ್ ಪೇದೆ ಸಿದ್ದರಾಜು ಮೇಲೆ ಚಾಕುವಿನಿಂದ ‌ಹಲ್ಲೆ ಮಾಡಿದ್ದಾನೆ.

Advertisement

ಈ ವೇಳೆ ಆತ್ಮರಕ್ಷಣೆಗೆ ಹಲಗೂರು ಸರ್ಕಲ್ ಇನ್ಸ್​​ಪೆಕ್ಟರ್​​​​ ಶ್ರೀಧರ್, ಮುತ್ತುರಾಜ್​ನ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಗಾಯಾಳು ರೌಡಿಶೀಟರ್​​ ಮುತ್ತುರಾಜು ಅನ್ನು ಮಿಮ್ಸ್​​ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಮಂಡ್ಯ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here