BREAKING: ಬೆಳ್ಳಂಬೆಳಗ್ಗೆ ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿ ಅಪಹರಣ

0
Spread the love

ಹಾಸನಮದುವೆಯಾಗಲು ನಿರಾಕರಿಸಿದಳೆಂದು ದುರುಳರು ಶಾಲಾ ಶಿಕ್ಷಕಿಯನ್ನೇ ಅಪಹರಿಸಿರುವ ಘಟನೆ ಹಾಸನ ಜಿಲ್ಲೆಯ ಬಿಟ್ಟಗೌಡನಹಳ್ಳಿಯ ಬಳಿ ಇಂದು ಬೆಳಗ್ಗೆ ನಡೆದಿದೆ. ಅರ್ಪಿತಾ, ಅಪಹರಣಕ್ಕೊಳಗಾದ ಶಿಕ್ಷಕಿ.

Advertisement

ಶಿಕ್ಷಕಿ ಕೆಲಸ ಮಾಡುತ್ತಿದ್ದ ಶಾಲೆ ಮುಂಭಾಗ ದುರುಳರು ಅಪಹರಿಸಿದ್ದಾರೆ.ಇನ್ನೋವಾ ಕಾರಿನಲ್ಲಿ ಬಂದು ಅಪಹರಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶಿಕ್ಷಕಿ ಪ್ರತಿರೋಧ ತೋರಿದರೂ ಕಿರಾತಕರು ಬಿಟ್ಟಿಲ್ಲ. ಕಳೆದ 15 ದಿನಗಳ ಹಿಂದೆ ಅರ್ಪಿತಾಳ ಮದುವೆ ಮಾಡಿಕೊಳ್ಳುವ ಪ್ರಸ್ತಾಪ ಮಾಡಲು ಮನೆಗೆ ಬಂದಿದ್ದ ರಾಮು ಎಂಬ ವ್ಯಕ್ತಿ ಮತ್ತವನ ಪೋಷಕರು ಅಪಹರಣ ಮಾಡಿರುವ ಶಂಕೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇವರು ಅರ್ಪಿತಾ ಸಂಬಂಧಿ ಎಂದು ಹೇಳಲಾಗಿದೆ. ಮದುವೆ ಪ್ರಸ್ತಾಪ ಮಾಡಿದಾಗ, ಅರ್ಪಿತಾ ಹಾಗೂ ಮನೆಯವರು ಒಪ್ಪಿಗೆ ನೀಡಿಲ್ಲ. ಮದುವೆಗೆ ಒಪ್ಪಲಿಲ್ಲವೆಂದು ಅಪಹರಣಕ್ಕೆ ಸಂಚು ರೂಪಿಸಿದ್ದ ಕಿರಾತಕರು, ಇಂದು ಬೆಳಗ್ಗೆ ಎಂದಿನಂತೆ ಶಿಕ್ಷಕಿ ಅರ್ಪಿತಾ ಶಾಲೆಗೆ ಹೊರಟ ಸಂದರ್ಭದಲ್ಲಿ ಇನ್ನೋವಾ ಕಾರಿನಲ್ಲಿ ಬಂದ ದುರುಳರು ಅಪಹರಿಸಿದ್ದಾರೆ.

ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here