ಒಬ್ಬ ಹಿರಿಯ ಸಚಿವರಾಗಿ ಈ ರೀತಿ ಚಿಲ್ಲರೆ ಹೇಳಿಕೆ ಕೊಡಬಾರದು: ರಾಜಣ್ಣ ಹೇಳಿಕೆಗೆ ಬಾಲಕೃಷ್ಣ ಕಿಡಿ

0
Spread the love

ರಾಮನಗರ: ಒಬ್ಬ ಹಿರಿಯ ಸಚಿವರಾಗಿ ಈ ರೀತಿ ಚಿಲ್ಲರೆ ಹೇಳಿಕೆ ಕೊಡಬಾರದು ಎಂದು ಸಚಿವ ರಾಜಣ್ಣ ಹೇಳಿಕೆಗೆ ಮಾಗಡಿ ಶಾಸಕ ಬಾಲಕೃಷ್ಣ ಕಿಡಿಕಾರಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ತುಮಕೂರು ಹಾಲು ಉತ್ಪನ್ನ ಬೆಂಗಳೂರಿನಲ್ಲಿ ಅರ್ಧ ಭಾಗ, ನಮ್ಮ ಕುದೂರಿನಲ್ಲಿ ಅರ್ಧ ಭಾಗ ಮಾರಾಟ ಆಗುತ್ತಿದೆ.

Advertisement

ನಾವು ಅದನ್ನು ಏನಾದರೂ ತಡೆದು ನಿಲ್ಲಿಸಿದ್ರೆ ಹೇಗೆ? ನಿಮ್ಮ ಹಾಲು ಬೇಡ, ನಿಮ್ಮ ನೀರು ಬೇಡ ಅಂತಾ ತಡೆದು ನಿಲ್ಲಿಸಿದ್ರೆ ಅದರಿಂದ ಹಾನಿ ಆಗೋದು ತುಮಕೂರಿನ ರೈತರಿಗೆ. ಅದನ್ನು ನಾವು ಮಾಡಬೇಕಾ ಎಂದು ಕಿಡಿಕಾರಿದ್ದಾರೆ.

ಇನ್ನೂ ರಾಜಣ್ಣ ಅವರು ವಿವೇಚನೆಯಿಂದ ಮಾತನಾಡಬೇಕು. ಅವರು ಹಿರಿಯ ಮಂತ್ರಿಗಳು, ಈ ರೀತಿ ಬಾಲಿಷ ಹೇಳಿಕೆಯನ್ನ ನೀಡಬಾರದು. ಅದೇನೇ ಹೇಳೊದು ಇದ್ದರೂ ಸರ್ಕಾರದ ಹಂತದಲ್ಲಿ ಹೇಳಬೇಕು. ಕೋಡೋದೆ ಇಲ್ಲ,

ಬಿಡೋದೆ ಇಲ್ಲ ಅಂದರೆ ಹೇಗೆ? ತುಮಕೂರಿನಿಂದ ಬರುವ ಹಾಲು ನಾವು ನಿಲ್ಲಿಸಿದ್ರೆ ಹೇಗೆ? ಇದು ಒಕ್ಕೂಟದ ವ್ಯವಸ್ಥೆ, ಒಂದೇ ದೇಶ, ಒಂದೇ ರಾಜ್ಯದಲ್ಲಿ ಬದುಕುತ್ತಿದ್ದೇವೆ. ಒಬ್ಬ ಹಿರಿಯ ಸಚಿವರಾಗಿ ಈ ರೀತಿ ಚಿಲ್ಲರೆ ಹೇಳಿಕೆ ಕೊಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here