ಯಾದಗಿರಿ:- ಯಾದಗಿರಿಯ ವೀರಭದ್ರೇಶ್ವರ ಕಾಲೋನಿಯಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಗೆ 10 ಲಕ್ಷ ರೂ.ಗೂ ಅಧಿಕ ಮೌಲ್ಯದ ಪೈಪ್ಗಳು ಸುಟ್ಟು ಭಸ್ಮವಾಗಿರುವ ಘಟನೆ ಜರುಗಿದೆ.
ಎಸ್, ಸದಾಶಿವರಡ್ಡಿ ರೊಟ್ನಡಗಿ ಅವರಿಗೆ ಸೇರಿದ ಶರಣಬಸವೇಶ್ವರ ಟ್ರೇಡಿಂಗ್ ಶಾಪ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಏಕಾಏಕಿ ಹೊತ್ತಿಕೊಂಡ ಬೆಂಕಿಗೆ ಪೈಪ್ಗಳು ಬೆಂಕಿಗೆ ಸುಟ್ಟು ಕರಕಲಾಗಿವೆ. ಅವಘಡದಿಂದ ಸುಮಾರು 10 ಲಕ್ಷ ರೂ.ಗೂ ಅಧಿಕ ವೆಚ್ಚದ ಪೈಪ್ಗಳು ಭಸ್ಮವಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.



